Yuvavahini

ಸಮಾಜ ಸೇವೆ

ಬಪ್ಪನಾಡು ದೇವಸ್ಥಾನದಲ್ಲಿ ಸೇವೆ

ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 21.09.2017ರಂದು ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಥಮ ದಿನ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಯೋಗೀಶ್ ಕೋಟ್ಯಾನ್, ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ,ನಿಕಟ ಪೂರ್ವ ಅಧ್ಯಕ್ಷರಾದ ಚೇತನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

Read More

ನಗರಸಭಾ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಣೆ

ಯುವವಾಹಿನಿ (ರಿ) ಪುತ್ತೂರು ಘಟಕದ ಆಶ್ರಯದಲ್ಲಿ ದಿನಾಂಕ 06.09.2017 ರಂದು ಬ್ರಹ್ಮಶ್ರೀ ನಾರಾಯಣಗುರುಗಳ 163 ನೇ ಜನ್ಮದಿನಾಚರಣೆ ಪ್ರಯುಕ್ತ ಪುತ್ತೂರು ನಗರಸಭೆಯ 23 ಮಂದಿ ಪೌರಕಾರ್ಮಿಕರಿಗೆ ಒಟ್ಟು 23,000/- ರೂಪಾಯಿ ವೆಚ್ಚದಲ್ಲಿ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು, ಪುತ್ತೂರು ನಗರಸಭೆಯ ಅಧ್ಯಕ್ಷರಾದ ಜಯಂತಿ ಬಲ್ನಾಡ್, ಪೌರಾಯುಕ್ತರಾದ ರೂಪಾ ಶೆಟ್ಟಿ, ನಗರಸಭೆಯ ಆರೋಗ್ಯ ನಿರೀಕ್ಷಕರಾದ ಶ್ವೇತಾಕಿರಣ್, ರಾಮಚಂದ್ರ, ಚಂದ್ರಕಾಂತ್ ಶಾಂತಿವನ, ಕೇಶವ ಪೂಜಾರಿ […]

Read More

ಮನೆ ನಿರ್ಮಾಣಕ್ಕೆ ಮುಹೂರ್ತ

ಯುವವಾಹಿನಿ (ರಿ) ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಬಡ ಕುಟುಂಬದ ಶ್ರೀಮತಿ ಸುಂದರಿ ಇವರಿಗೆ ಸುಮಾರು ನಾಲ್ಕುವರೆ ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡುವ ಸಮಾಜಮುಖಿ ಯೋಜನೆಗೆ ದಿನಾಂಕ 03.09.2017 ರಂದು ಶುಭ ಮುಹೂರ್ತ ನಡೆಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಪುತ್ತೂರು ಘಟಕದ ಅಧ್ಯಕ್ಷರಾದ ಉದಯ ಕೊಲಾಡಿ, ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ, ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷರಾದ ಸೋಮಶೇಖರ್, […]

Read More

ಔಷದೀಯ ಸಸಿ ನೆಡುವ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 17.08.2017 ರಂದು ಪರಪಾದೆ ಸರಕಾರಿ ಶಾಲೆಯಲ್ಲಿ ಆವರಣದಲ್ಲಿ ಔಷಧೀಯ ಸಸ್ಯ ಹಾಗೂ ಇತರ ಉಪಯುಕ್ತ ಸಸ್ಯಗಳನ್ನು ನೀಡಲಾಯಿತು. ಅರಣ್ಯ ಇಲಾಖೆಯ ರೇಂಜರ್ ಶ್ರೀಧರ್ ಇವರು ಈ ಕಾರ್ಯಕ್ರಮಕ್ಜೆ ಸಹಕಾರ ನೀಡಿದರು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ, ಕಾರ್ಯದರ್ಶಿ ಸುನೀತಾ ಮತ್ತಿತರರು ಉಪಸ್ಥಿತರಿದ್ದರು.

Read More

ಶ್ರೀ ಧರಣೇಂದ್ರ ಕುಮಾರ್ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ -2017

    ಸಾಮಾಜಿಕ ಕ್ಷೇತ್ರದ ಸಾಧಕ ಶ್ರೀ ಧರಣೇಂದ್ರ ಕುಮಾರ್ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಬಜೆ ಮನೆತನದ ದಿ. ಬಾಬು ಪೂಜಾರಿ ಮತ್ತು ಶ್ರೀಮತಿ ಸಿರಿಯಮ್ಮ ದಂಪತಿಯರ ಸುಪುತ್ರನಾಗಿ ಜನನ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯಲ್ಲಿ ಹಾಗೂ ಪ್ರೌಢಶಿಕ್ಷಣ ಹಾಗೂ ಪದವಿ ಶಿಕ್ಷಣವನ್ನು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಕಾಲೇಜು ಸಿದ್ಧಕಟ್ಟೆಯಲ್ಲಿ ಮುಗಿಸಿ ವೃತ್ತಿ ಜೀವನವನ್ನು ಕೃಷಿಯಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿಯೇ ಸಮಾಜಸೇವೆಯನ್ನು ಮೈಗೂಡಿಸಿಕೊಂಡು ಫ್ರೆಂಡ್ಸ್ ಕ್ಲಬ್ (ರಿ.) ಹೊಸಂಗಡಿ […]

Read More

ಮೃತ ಯೋಗೀಶ್ ಪೂಜಾರಿ ಕುಟುಂಬಕ್ಕೆ ಸಾಂತ್ವನ

ಇತ್ತೀಚೆಗೆ ಬಡಗಬೆಳ್ಳೂರು ನಿವಾಸಿ ಯೋಗೀಶ್ ಪೂಜಾರಿ ವಿದ್ಯುತ್ ತಂತಿ ತಗುಲಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಈ ಸಾವಿನಿಂದಾಗಿ ಅವರ ಹೆಂಡತಿ ಹಾಗೂ ಸಣ್ಣ ನಾಲ್ಕು ಮಕ್ಕಳ ಬಡ ಸಂಸಾರ ಅನಾಥವಾಗಿದೆ.ಮೃತ ಯೋಗೀಶ್ ಪೂಜಾರಿಯವರ ಮನೆಗೆ ದಿನಾಂಕ 10.07/2017ರಂದು ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಬೇಟಿ ನೀಡಿ ರೂ 10,000/- ಸಾಂತ್ವನ ನಿಧಿ ನೀಡಲಾಯಿತು. ಹಾಗೂ ಮೂರು ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ನಿರ್ಧರಿಸಲಾಯಿತು ಈ ಸಂಧರ್ಭದಲ್ಲಿ ಯುವವಾಹಿನಿ ಅಧ್ಯಕ್ಷರಾದ ಅರುಣ್ ಕುಮಾರ್, ಮಾಜಿ ಅಧ್ಯಕ್ಷರಾದ […]

Read More

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 18.06.2017 ರಂದು ಅಮ್ರತಾನಂದಮಯಿ ಟ್ರಸ್ಟ್ ಇದರ ಸಹಯೋಗದೊಂದಿಗೆ ಮಂಗಳೂರಿನ ಉರ್ವಾಸ್ಟೊರ್, ಕೊಟ್ಟಾರ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ,ಕಾರ್ಯದರ್ಶಿ ಸುನೀತಾ,ಉಪಾಧ್ಯಕ್ಷರಾದ ರಶ್ಮಿ ಚಂದ್ರಶೇಖರ್,, ವಸಂತಿ, ಶರ್ಮಿಳಾ, ಕುಶಲಾ ಯಶವಂತ್, ಸುರೇಖಾ,ಶುಭಾ ರಾಜೇಂದ್ರ, ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ಉಮಾಶ್ರೀಕಾಂತ್ ಮತ್ತಿತರರು ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿದ್ದರು

Read More

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಯುವವಾಹಿನಿ(ರಿ) ಸುಳ್ಯ ಘಟಕದ ವತಿಯಿಂದ ದಿನಾಂಕ 10/06/2017ನೇ ಶನಿವಾರದಂದು ಸುಳ್ಯ ಶ್ರೀ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರಡಿ ಶೇಣಿ’ಯಲ್ಲಿ ಸಸಿ ನೆಡುವ ಕಾರ್ಯಕ್ರಮವು ನೆರವೇರಿತು. ಶೇಣಿ ಗರಡಿಯ ಅನುವಂಶಿಕ ಆಡಳಿತದಾರರಾದ  ಬಿ.ಕೆ.ಧರ್ಮಪಾಲ ಶೇಣಿ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಸುಳ್ಯ ಯುವವಾಹಿನಿಯ  ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು ಕಾರ್ಯದರ್ಶಿ ರವೀಂದ್ರ. ಎಚ್ ವಂದಿಸಿದರು ಈ ಸಂದರ್ಭದಲ್ಲಿ ಯುವವಾಹಿನಿ ಪದಾದಿಕಾರಿಗಳಾದ ರವಿಕುಮಾರ್, ರವಿಕಿರಣ್, ಲೋಹಿತ್,ಪ್ರವೀಣ್ ನೆಟ್ಟಾರ್,ಹೊನ್ನಪ್ಪ ಪೂಜಾರಿ ,ಸದಾನಂದ […]

Read More

ತಿಮ್ಮಪ್ಪ ಪೂಜಾರಿ ಕೊಲೆ ಪ್ರಕರಣ : ಸಮಗ್ರ ತನಿಖೆಗೆ ಯುವವಾಹಿನಿ ಒತ್ತಾಯ

ಜೂನ್ 2 ರಂದು ಬೆಳ್ತಂಗಡಿ ಸಂತೆಕಟ್ಟೆ ಸಮೀಪದ ತಿಮ್ಮಪ್ಪ ಪೂಜಾರಿಯನ್ನು ಸ್ಥಳೀಯ ನಿವಾಸಿ ಕಾಲೇಜು ವಿದ್ಯಾರ್ಥಿ ಚಂದ್ರಶೇಖರ ಬೀಕರವಾಗಿ ಕೊಲೆಗೈದಿದ್ದಾನೆ. ಯುವಜನರು ಗಾಂಜ ಸೇರಿದಂತೆ ಮಾದಕ ವ್ಯಸನಗಳಿಗೆ ಬಲಿಯಾಗಿ ಅಡ್ಡ ದಾರಿ ಹಿಡಿಯುತ್ತಿದ್ದಾರೆ. ಕೊಲೆ ಅತ್ಯಾಚಾರದಂತಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಸಣ್ಣ ಪುಟ್ಟ ವಿಚಾರಗಳಿಗೂ ಕೊಲೆ ಮಾಡುತ್ತಿರುವುದು ಅತ್ಯಂತ ಆತಂಕಕಾರಿ. ಕೊಲೆಯಾದ ತಿಮ್ಮಪ್ಪ ಪೂಜಾರಿಯವರ ಪತ್ನಿ ಮಕ್ಕಳಿಗೆ ಸೂಕ್ತ ರಕ್ಷಣೆ ನೀಡಬೇಕು.ಪತ್ನಿಗೆ ಸರಕಾರಿ ಉದ್ಯೋಗದ ಜತೆಗೆ ಮಕ್ಜಳ ಶಿಕ್ಷಣಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಬೆಳ್ತಂಗಡಿ […]

Read More

ನೊಂದ ಎಳೆ ಮನಸ್ಸುಗಳಿಗೆ ಯುವವಾಹಿನಿ ಮಾತೆಯರ ಸಾಂತ್ವನ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 03.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಹಾಗೂ ರೂ.2500/- ಮಹಿಳಾ ಘಟಕದ ವತಿಯಿಂದ ನೀಡಲಾಯಿತು. ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ಸುಪ್ರೀತ ಪೂಜಾರಿ, ಕಾರ್ಯದರ್ಶಿ ಸುನೀತಾ, ಉಪಾದ್ಯಕ್ಷೆ ರಶ್ಮಿ ಚಂದ್ರಶೇಖರ್ , ವಸಂತಿ ಬಿ,ಶುಭ ರಾಜೇಂದ್ರ, ಸುರೇಖ,ಕುಶಲಾಕ್ಷಿ ಯಶವಂತ್, ಶರ್ಮಿಳ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!