Yuvavahini

ಸಮಾಜ ಸೇವೆ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ : ಸ್ವಯಂಸೇವಕ ಸೇವೆ

ನಾರಾವಿ: ಇಲ್ಲಿನ ಪ್ರಸಿದ್ಧ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಜರಗುತ್ತಿರುವ ಬ್ರಹ್ಮಕಲಶ ಮಹೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವೇಣೂರು ಘಟಕದ ಸದಸ್ಯರು ದಿನಾಂಕ 05-03-2026, ಗುರುವಾರ ಸಂಜೆ ದೇವಾಲಯದಲ್ಲಿ ಸ್ವಯಂಸೇವಕರಾಗಿ ವಿಶೇಷ ಸೇವೆಯನ್ನು ಸಲ್ಲಿಸಿದರು. ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತಿಪೂರ್ವಕವಾಗಿ ಪಾಲ್ಗೊಂಡ ಸದಸ್ಯರು, ಬಳಿಕ ದೇವಾಲಯದ ಅನ್ನಪ್ರಸಾದ ವಿತರಣಾ ವಿಭಾಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಸಂಜೆ 7 ಗಂಟೆಯಿಂದ ಆರಂಭಗೊಂಡ ಈ ಸೇವಾ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ಅನ್ನಪ್ರಸಾದ ಬಡಿಸುವ ಮೂಲಕ ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರಮದಾನ ಮಾಡಿದರು.​ಈ ಸಂದರ್ಭದಲ್ಲಿ ಮಾತನಾಡಿದ […]

Read More

ಗೆಜ್ಜೆಗಿರಿ ಜಾತ್ರೋತ್ಸವದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಸದಸ್ಯರಿಂದ ಗಂಧ ಪ್ರಸಾದ ಸ್ವೀಕಾರ

ಸುರತ್ಕಲ್: ಸತ್ಯಧರ್ಮದ ತವರೂರು, ದೇಯಿ ಬೈದ್ಯೆತಿ ಹಾಗೂ ಕೋಟಿ-ಚೆನ್ನಯರ ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿನಾಂಕ 27-02-2026ರಂದು ನಡೆದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಸುರತ್ಕಲ್ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು. ಈ ಪುಣ್ಯ ಸಂದರ್ಭದಲ್ಲಿ ಸುರತ್ಕಲ್ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಘಟಕದ ಸದಸ್ಯರು ಒಟ್ಟಾಗಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೈವ-ದೇವರುಗಳ ದರ್ಶನ ಪಡೆದರು. ಕ್ಷೇತ್ರದ ವತಿಯಿಂದ ನೀಡಲಾದ ಬ್ರಹ್ಮ ಬೈದರುಗಳ ಗಂಧ ಪ್ರಸಾದವನ್ನು ಸ್ವೀಕರಿಸಿ ಧನ್ಯತೆ ಮೆರೆದರು. ವಾರ್ಷಿಕ ಜಾತ್ರೆಯ […]

Read More

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಸ್ವಯಂ ಸೇವೆ ಹಾಗೂ ಅನ್ನದಾನ ದೇಣಿಗೆ

ಮಂಗಳೂರು/ಗೆಜ್ಜೆಗಿರಿ: ಪರಮಪೂಜ್ಯ ದೇಯಿ ಬೈದ್ಯೆತಿ ಹಾಗೂ ಕೋಟಿ-ಚೆನ್ನಯರ ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಇತ್ತೀಚೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶೇಷ ಸ್ವಯಂ ಸೇವೆ ಮತ್ತು ಅನ್ನದಾನ ಸೇವಾ ಕಾರ್ಯಕ್ರಮ ಜರುಗಿತು. ​ಫೆಬ್ರವರಿ 27ರಂದು ನಡೆದ ಈ ಸಂಭ್ರಮದ ಜಾತ್ರಾ ಮಹೋತ್ಸವದಲ್ಲಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು ಹಾಗೂ ಘಟಕದ ಸಕ್ರಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದರು.​ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳ […]

Read More

ಬಳಂತಿಮೊಗರು ಬ್ರಹ್ಮಕಲಸೋತ್ಸವದಲ್ಲಿ ಯುವವಾಹಿನಿ ಮಂಗಳೂರು ಘಟಕದ ಸದಸ್ಯರ ಸಹಭಾಗಿತ್ವ

ಮಂಗಳೂರು/ಪುಣಚ: ಪುಣಚ ಸಮೀಪದ ಬಳಂತಿಮೊಗರು ಶ್ರೀ ಬ್ರಹ್ಮಬೈದರ್ಕಳ ಗರಡಿ (ರಿ.) ಇಲ್ಲಿ ಫೆಬ್ರವರಿ 26ರಂದು ಜರುಗಿದ ನೂತನ ಪ್ರತಿಷ್ಠಾ ಬ್ರಹ್ಮಕಲಸೋತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಪದಾಧಿಕಾರಿಗಳು ಭಾಗವಹಿಸಿದರು. ​ಶ್ರೀ ಕ್ಷೇತ್ರದಲ್ಲಿ ನಡೆದ ವೈಭವದ ಬ್ರಹ್ಮಕಲಸೋತ್ಸವ ಹಾಗೂ ಧಾರ್ಮಿಕ ಸಭೆಯಲ್ಲಿ ಮಂಗಳೂರು ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಬ್ರಹ್ಮ ಬೈದರುಗಳ ದರ್ಶನ ಪಡೆದರು. ಈ ಪವಿತ್ರ ಸಂದರ್ಭದಲ್ಲಿ ಕ್ಷೇತ್ರದ ಗಂಧ ಪ್ರಸಾದವನ್ನು ಸ್ವೀಕರಿಸಿ ಧನ್ಯತೆ ಅನುಭವಿಸಿದರು. ಈ ಸಂದರ್ಭದಲ್ಲಿ ಘಟಕದ ಸದಸ್ಯರು […]

Read More

ಪಣಂಬೂರು ಕುಳಾಯಿ ಘಟಕದಿಂದ ಪೋಡಿಯಂ ಕೊಡುಗೆ

ಕುಳಾಯಿ: ಭಜನಾ ಮಂಗಳೋತ್ಸವಗಳು ಸಮಾಜದಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ತುಂಬುತ್ತವೆ. ಗುರುಗಳ ತತ್ವಗಳನ್ನು ಪ್ರಸಾರ ಮಾಡುವ ಇಂತಹ ಧಾರ್ಮಿಕ ಕಾರ್ಯಕ್ರಮಗಳಿಗೆ ಯುವವಾಹಿನಿಯು ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಸದಸ್ಯರು ಅಭಿಪ್ರಾಯಪಟ್ಟರು. ಬ್ರಹ್ಮ ಶ್ರೀ ನಾರಾಯಣ ಗುರು ಸಂಘ ಕುಳಾಯಿ ಇದರ 43ನೇ ಭಜನಾ ಮಂಗಳೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಘಟಕದ ಪದಾಧಿಕಾರಿಗಳು ಭಾಗವಹಿಸಿ ಶುಭ ಹಾರೈಸಿದರು. ​ಬ್ರಹ್ಮ ಶ್ರೀ ನಾರಾಯಣ ಗುರು ಸಂಘ ಕುಳಾಯಿ ಇದರ 43ನೇ ವರ್ಷದ ಭಜನಾ ಮಂಗಳೋತ್ಸವದ ಪ್ರಯುಕ್ತ ಯುವವಾಹಿನಿ ಪಣಂಬೂರು-ಕುಳಾಯಿ ಘಟಕದ ವತಿಯಿಂದ […]

Read More

ಹೊರಕಾಣಿಕೆ ಸಮರ್ಪಣೆ

ವಿಟ್ಲ: ದೈವಸ್ಥಾನಗಳ ಪುನರುತ್ಥಾನ ಮತ್ತು ಬ್ರಹ್ಮಕಲಶೋತ್ಸವದಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುತ್ತವೆ. ಇಂತಹ ಪುಣ್ಯ ಕಾರ್ಯಗಳಲ್ಲಿ ಯುವಶಕ್ತಿ ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ ಎಂದು ಸದಸ್ಯರು ತಿಳಿಸಿದರು. ಪುಣಚ ಬೋಳಂತಿಮೊಗರು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ ಸದಸ್ಯರು ಭಕ್ತಿಯಿಂದ ಭಾಗವಹಿಸಿ ಸೇವೆಯಲ್ಲಿ ತೊಡಗಿಸಿಕೊಂಡರು. ದಿನಾಂಕ 24-02-2026 ಮಂಗಳವಾರದಂದು ನೂತನ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬೋಳಂತಿಮೊಗರು ಇಲ್ಲಿಯ ಬ್ರಹ್ಮಕಲಶೋತ್ಸವದ ಅಂಗವಾಗಿ ಯುವವಾಹಿನಿ ವಿಟ್ಲ ಘಟಕದ ವತಿಯಿಂದ ಶ್ರೀ ಕ್ಷೇತ್ರಕ್ಕೆ ಭಕ್ತಿಪೂರ್ವಕವಾಗಿ […]

Read More

ಯುವ ಸಂದೇಶ–2026 : ರಸ್ತೆ ಸುರಕ್ಷತಾ ಜಾಥಾ ಯಶಸ್ವಿ

ಉಪ್ಪಿನಂಗಡಿ : ಯುವಜನರ ನಿರ್ಲಕ್ಷ್ಯ ಮನೋಭಾವದಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ನಮ್ಮನ್ನು ಮಾತ್ರವಲ್ಲದೆ ನಮ್ಮನ್ನು ನಿರೀಕ್ಷಿಸುತ್ತಿರುವ ಮನೆಯವರನ್ನೂ ರಕ್ಷಿಸುತ್ತದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಯುವಜನತೆ ತಮ್ಮ ಹೆತ್ತವರಿಗೆ ನೀಡುವ ಅತಿ ದೊಡ್ಡ ಕೊಡುಗೆ ಎಂದು ಬಂಟ್ವಾಳ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಅಧಿಕಾರಿ ಚರಣ್ ಕೆ.ಎಸ್ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 15.02.2026 […]

Read More

ಗೋ ಸಂರಕ್ಷಣಾ ಕೇಂದ್ರಕ್ಕೆ ಧನ ಸಹಾಯ

ಕೊಣಾಜೆ, ಫೆ.10 : ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಯುವ ಸಂಜೀವಿನಿ ವತಿಯಿಂದ 5ನೇ ಸೇವಾ ಕಾರ್ಯವಾಗಿ ಫೆಬ್ರವರಿ 10, 2026ರಂದು ಮಂಗಳವಾರ ಪುಣ್ಯಕೋಟಿ ನಗರ, ಕೈರಂಗಳದಲ್ಲಿರುವ ಅಮೃತ ಧಾರ ಗೋಶಾಲೆಯ ಅನಾಥ ಹಸುಗಳ ಪಾಲನೆಗಾಗಿ ಧನ ಸಹಾಯ ಹಸ್ತಾಂತರಿಸಲಾಯಿತು. ಒಂದು ಹಸುವಿನ ವಾರ್ಷಿಕ ಪಾಲನೆಗಾಗಿ ರೂ. 15,000/- ಮೊತ್ತವನ್ನು ಗೋ ಸಂರಕ್ಷಣಾ ಕೇಂದ್ರಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಗೋಮಾತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಧನ ಸಹಾಯ […]

Read More

ಮಾನವೀಯತೆ ಮೆರೆದ ಯುವವಾಹಿನಿ: ಶಸ್ತ್ರಚಿಕಿತ್ಸೆಗೆ ಆರ್ಥಿಕ ಸಹಾಯ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ಮಾನವೀಯ ಸೇವಾ ಮನೋಭಾವಕ್ಕೆ ಸಾಕ್ಷಿಯಾಗಿ, ಕಾರ್ಕಳ ತಾಲೂಕು ಏರ್ಲಪಾಡಿ ಗ್ರಾಮದ ಚೈತ್ರ–ಸಂತೋಷ್ ದಂಪತಿಗಳ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ರೂ. 20,000 ಧನಸಹಾಯವನ್ನು ನೀಡಲಾಯಿತು. ಮಗುವಿಗೆ ಶ್ರವಣ ಯಂತ್ರ ಅಳವಡಿಕೆ ಹಾಗೂ ಅಗತ್ಯ ಶಸ್ತ್ರಚಿಕಿತ್ಸೆಗಾಗಿ ಈ ನೆರವು ಒದಗಿಸಲಾಗಿದ್ದು, ದಿನಾಂಕ 10/02/2026 ರಂದು ಘಟಕದ ಪದಾಧಿಕಾರಿಗಳು ಮಗುವಿನ ನಿವಾಸಕ್ಕೆ ತೆರಳಿ ಕುಟುಂಬದವರಿಗೆ ಧನಸಹಾಯವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯದರ್ಶಿ ರಾಕೇಶ್ ಅಮೀನ್ ಹಾಗೂ ಘಟಕದ […]

Read More

ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವೆ

ಪಡುಬಿದ್ರಿ : ದಿನಾಂಕ 08/02/2026 ರಂದು ಶ್ರೀ ಸಾರಂತಾಯ ಗರೋಡಿ ಉಲ್ಲಾಯ ದೈವಸ್ಥಾನ, ಸಸಿಹಿತ್ಲು ಇದರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸದಸ್ಯರು ಬೆಳಿಗ್ಗೆಯಿಂದ ಸಂಜೆಯವರೆಗೆ ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡರು. ನೆರೆದಿದ್ದ ಭಕ್ತಜನರಿಗೆ ಅನ್ನ ಬಡಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ದೈವಸ್ಥಾನದ ಆಡಳಿತ ಮಂಡಳಿಯ ಪ್ರಶಂಸೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ದೇಣಿಗೆಯನ್ನು ಸಂಗ್ರಹಿಸಿ ದೇವಸ್ಥಾನಕ್ಕೆ ಒಪ್ಪಿಸಲಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!