Yuvavahini

ಸಮಾಜ ಸೇವೆ

ಯುವವಾಹಿನಿಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣದ ಶಿಲಾನ್ಯಾಸ

ಮೂಡುಬಿದಿರೆ : ಸೇವೆಯೇ ಧರ್ಮ ಎಂಬ ತತ್ವವನ್ನು ಕಾರ್ಯರೂಪಕ್ಕೆ ತಂದು, ಯುವವಾಹಿನಿ (ರಿ.) ಮೂಡುಬಿದಿರೆ ಘಟಕವು ಮಾನವೀಯತೆಯ ಮೌಲ್ಯವನ್ನು ಮತ್ತೊಮ್ಮೆ ಪ್ರತಿಪಾದಿಸಿದೆ. ಮೂಡುಮಾರ್ನಾಡು ಗ್ರಾಮದ ಸುಮಿತ್ರಾ–ವಿಶ್ವನಾಥ್ ದಂಪತಿಯ ಶೋಚನೀಯ ಸ್ಥಿತಿಯಲ್ಲಿದ್ದ ಮನೆಯನ್ನು ಮರುನಿರ್ಮಿಸಲು ಸುಮಾರು 6 ಲಕ್ಷ ರೂ. ವೆಚ್ಚದ ಯೋಜನೆ ರೂಪಿಸಿ, ಮನೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಸುಮಾರು 600 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಾಣದ ಮೂಲಕ ಅಶಕ್ತ ಕುಟುಂಬಕ್ಕೆ ಭದ್ರ ಆಶ್ರಯ ಕಲ್ಪಿಸುವ ಸಂಕಲ್ಪವನ್ನು ಘಟಕ ಕೈಗೊಂಡಿದೆ. ಯುವವಾಹಿನಿಯ ಮಾಜಿ ಅಧ್ಯಕ್ಷರು […]

Read More

ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 31.01.2026 ಶನಿವಾರ ಸಂಭ್ರಮ–2 ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಪಣಕಜೆಯ ನವಸುಮ ನಿವಾಸದಲ್ಲಿ ಆತ್ಮೀಯವಾಗಿ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ “ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳು” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಜಿರೆ ಬೆನಕ ಹೆಲ್ತ್ ಸೆಂಟರ್‌ನ ತುರ್ತು ಚಿಕಿತ್ಸಾ ತಜ್ಞರಾದ ಡಾ. […]

Read More

ಕೋಟೆ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಕಟಪಾಡಿ : ಯುವವಾಹಿನಿ (ರಿ.) ಕಟಪಾಡಿ ಘಟಕದ ಆಶ್ರಯದಲ್ಲಿ ದಿನಾಂಕ 29/01/2026ರಂದು ಕೋಟೆ ಅಂಗನವಾಡಿ ಕೇಂದ್ರದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಸ್ಮರಣೆಯೊಂದಿಗೆ, ಘಟಕದ ಪೂರ್ವ ಅಧ್ಯಕ್ಷರಾದ ವಾಮನ್ ಪೂಜಾರಿ ಅವರು ಪ್ರಾರ್ಥನೆಯ ಮೂಲಕ ಸಮಾರಂಭಕ್ಕೆ ಭಕ್ತಿಭಾವದ ಮುನ್ನುಡಿ ನೀಡಿದರು. ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಮೀಳಾ ಜತ್ತನ್ ಹಾಗೂ ಕೋಟೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ದಯಾನಂದ ಬಂಗೇರ ಅವರು ಉದ್ಘಾಟಿಸಿದರು.ಯುವವಾಹಿನಿ (ರಿ.) ಕಟಪಾಡಿ ಘಟಕದ […]

Read More

ಅಂಚೆ ಜನ ಸಂಪರ್ಕ ಅಭಿಯಾನ‌ ಶಿಬಿರ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡೋತ್ಸವದ ಪ್ರಯುಕ್ತ ಭಾರತೀಯ ಅಂಚೆ ಇಲಾಖೆಯ ಜನ ಸಂಪರ್ಕ ಅಭಿಯಾನ‌ ಶಿಬಿರವನ್ನು ಬಂಟ್ವಾಳ ಎಸ್.ವಿ.ಎಸ್ ಕ್ರೀಡಾಂಗಣದಲ್ಲಿ 2026ನೇ ಜನವರಿ 28ರಂದು ಆಯೋಜಿಸಲಾಯಿತು ಯುವವಾಹಿನಿ ಬಂಟ್ವಾಳ ಘಟಕದ ಮಾದರಿ ಕಾರ್ಯ ಶ್ಲಾಘನೀಯ : ಅಶೋಕ್ ಕುಮಾರ್ ಪಡ್ಪುಯುವವಾಹಿನಿ ಬಂಟ್ವಾಳ ಘಟಕವು ಕೋಟಿ ಚೆನ್ನಯ ಕ್ರೀಡೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ಜನತೆಗೆ ಸ್ಪಂದಿಸುವ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿಯಂತಹ ಸಮಾಜಮುಖಿ ಕಾರ್ಯ ಶ್ಲಾಘನೀಯ […]

Read More

ಜಯದುರ್ಗ ದೇವಸ್ಥಾನದಲ್ಲಿ ಶ್ರಮದಾನ

ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 23-01-2026ರ ಶುಕ್ರವಾರ ಸಂಜೆ 5.00 ರಿಂದ 7.00 ಗಂಟೆಯವರೆಗೆ ಕಡಬದ ಜಯದುರ್ಗ ದೇವಸ್ಥಾನದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ದೇವಸ್ಥಾನದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣಾ ಕಾರ್ಯದಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದರು. ಸಮಾಜಮುಖಿ ಕಾರ್ಯಗಳ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಜಾಗೃತಿಗೆ ಯುವವಾಹಿನಿ ಸದಾ ಬದ್ಧವಾಗಿರುವುದಕ್ಕೆ ಈ ಶ್ರಮದಾನ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಶ್ರಮದಾನದಲ್ಲಿ […]

Read More

ಸ್ವಚ್ಛತಾ ಶ್ರಮದಾನ

ವೇಣೂರು :ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ದಿನಾಂಕ 18.01.2026ರ ಆದಿತ್ಯವಾರ ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವೇಣೂರು ಘಟಕದ ಅಧ್ಯಕ್ಷರಾದ ಪ್ರಕಾಶ್ ಕೋಟ್ಯಾನ್ ನಾರಾವಿ, ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷರಾದ ರಾಕೇಶ್ ಮೂಡುಕೋಡಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಘಟಕದ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸಂಘಟನಾ ಕಾರ್ಯದರ್ಶಿಗಳು ಉಪಸ್ಥಿತರಿದ್ದು ಶ್ರಮದಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಪರಿಸರ ಸ್ವಚ್ಛತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ […]

Read More

ಉಳ್ಳಾಲ್ತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ವಿಟ್ಲ : ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ಜನವರಿ 10, 2026ರ ಶನಿವಾರ ವಿಟ್ಲ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಯುವವಾಹಿನಿ ವಿಟ್ಲ ಘಟಕದ ಅಧ್ಯಕ್ಷರಾದ ಕೆ.ಟಿ. ಆನಂದ ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಈ ಸೇವಾ ಕಾರ್ಯದಲ್ಲಿ, ದೇವಸ್ಥಾನ ಪರಿಸರದ ಸ್ವಚ್ಛತೆ, ಆವರಣ ಶುದ್ಧೀಕರಣ ಸೇರಿದಂತೆ ವಿವಿಧ ಸ್ವಚ್ಛತಾ ಕಾರ್ಯಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಸೇವೆ ಎಂಬುದನ್ನೇ ಧ್ಯೇಯವಾಗಿಸಿಕೊಂಡು ಧಾರ್ಮಿಕ […]

Read More

ಯುವವಾಹಿನಿ ಸದಸ್ಯರ ಸ್ವಯಂ ಸೇವೆ

ಪಣಂಬೂರು ಕುಳಾಯಿ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿಯಲ್ಲಿ ನಡೆದ ವರ್ಷಾವಧಿ ಉತ್ಸವದ ಸಂದರ್ಭದಲ್ಲಿ ದಿನಾಂಕ 04.01.2026 ರಂದು ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಸದಸ್ಯರು ಸ್ವಯಂಸೇವೆಯ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಉತ್ಸವದ ಅವಧಿಯಲ್ಲಿ ಶಿಸ್ತು, ಸಹಕಾರ ಮತ್ತು ಸೇವಾಭಾವನೆಯೊಂದಿಗೆ ಯುವವಾಹಿನಿ ಸದಸ್ಯರು ಕಾರ್ಯ ನಿರ್ವಹಿಸಿದರು

Read More

ವಿಠೋಬ–ರುಕುಮಾಯಿ ಮಂದಿರ ಜೀರ್ಣೋದ್ಧಾರಕ್ಕೆ ಯುವವಾಹಿನಿ ನೆರವು

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಇಡ್ಯಾ ವಿಠೋಬ–ರುಕುಮಾಯಿ ಮಂದಿರದ ಜೀರ್ಣೋದ್ಧಾರದ ಸಂಧರ್ಭದಲ್ಲಿ ದಿನಾಂಕ 13.12.2025ರಂದು ರೂ. 10,000 ಮೊತ್ತದ ನೆರವನ್ನು ಮಂದಿರದ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮಾಜಿ ಅಧ್ಯಕ್ಷರುಗಳು ಉಪಸ್ಥಿತರಿದ್ದು, ಮಂದಿರದ ಆಡಳಿತ ಮಂಡಳಿ ಸದಸ್ಯರಿಗೆ ಸಹಾಯಧನವನ್ನು ಹಸ್ತಾಂತರಿಸಿದರು. ಸಮಾಜ ಸೇವೆಯ ಭಾಗವಾಗಿ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ಈ ನೆರವು ನೀಡಲಾಗಿದೆ ಎಂದು ತಿಳಿಸಲಾಯಿತು.

Read More

“ಜಾಯ್ ಆಫ್ ಲರ್ನಿಂಗ್ – 2025” ಯುವವಾಹಿನಿ ಸದಸ್ಯರ ಸ್ವಯಂಸೇವೆಯ ಮಹತ್ತರ ಕೊಡುಗೆ

ಬೆಂಗಳೂರು : ದೇವನಹಳ್ಳಿ ಮಕ್ಕಳಧಾಮ ಕ್ಯಾಂಪಸ್‌ನಲ್ಲಿ ಸ್ಪರ್ಶ ಟ್ರಸ್ಟ್ ಆಯೋಜಿಸಿದ್ದ “ಜಾಯ್ ಆಫ್ ಲರ್ನಿಂಗ್ – 2025” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ಸದಸ್ಯರು ನಿಸ್ವಾರ್ಥ ಸೇವೆಯ ಮೂಲಕ ಸಮಾಜಮುಖಿ ಬದ್ಧತೆಯನ್ನು ಮೆರೆದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವಕಾಶವಂಚಿತ ಮಕ್ಕಳಿಗೆ ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಆತ್ಮವಿಶ್ವಾಸ, ಉತ್ಸಾಹ ಮತ್ತು ಬದುಕಿನ ಹೊಸ ಆಶಯ ತುಂಬುವ ಮಹತ್ವದ ಪ್ರಯತ್ನ ನಡೆಯಿತು. ಡಿಸೆಂಬರ್ 13ರಂದು ಕಬಡ್ಡಿ, ವಾಲಿಬಾಲ್, ತ್ರೋಬಾಲ್, ರಿಲೇ, ಲಾಂಗ್ ಜಂಪ್ ಸೇರಿದಂತೆ ವಿವಿಧ ಕ್ರೀಡಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!