Yuvavahini

ಸಮಾಜ ಸೇವೆ

ಮೂಲ್ಕಿ ಯುವವಾಹಿನಿಯಿಂದ ಧಾರ್ಮಿಕ ಸೇವಾ ಕಾರ್ಯ

ದಿನಾಂಕ 30.04.2017 ರಿಂದ 05.05.2017 ರವರಗೆ ಮೂಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಲೋಕಕಲ್ಯಾಣರ್ಥವಾಗಿ ಜರುಗಿದ ಶ್ರೀ ಶತಚಂಡಿಕಾದ್ವರದಲ್ಲಿ ಹೊರೆ ಕಾಣಿಕೆಯನ್ನು ಮೂಲ್ಕಿ ಯುವವಾಹಿನಿ ವತಿಯಿಂದ ಸಮರ್ಪಿಸಲಾಯಿತು. ಹಾಗೂ ಆರು ದಿನಗಳ ಕಾಲ ಜರುಗಿದ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ವಿಯಾಗಲು ಯುವವಾಹಿನಿ ಸದಸ್ಯರು ಸಹಕಾರ ನೀಡಿದರು ಮೂಲ್ಕಿ ಯುವವಾಹಿನಿ ಅದ್ಯಕ್ಷ ಚೇತನ್ ಕುಮಾರ್, ಪದಾದಿಕಾರಿಗಳು,ಮಾಜಿ ಅಧ್ಯಕ್ಷರುಗಳು ಸದಸ್ಯರು ಉಪಸ್ಥಿತರಿದ್ದರು

Read More

ನಮ್ಮ ಮನೆ :- ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ತೀರಾ ಬಡ ಕುಟುಂಬ ಪೋಂಕ್ರ ಪೂಜಾರಿ  ಇವರಿಗೆ ಸುಮಾರು ರೂಪಾಯಿ ಮೂರುವರೆ ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಯಿತು. ಹೆಜಮಾಡಿ ಯುವವಾಹಿನಿಯ ಯಶಸ್ವೀ ಸಮಾಜಮುಖಿ ಕಾರ್ಯ ಮನೆ ನಿರ್ಮಾಣ ಯೋಜನೆ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಕೇವಲ ಮೂರು ತಿಂಗಳ ಅವಧಿಯಲ್ಲಿ ದಾನಿಗಳ ಸಹಾಯ ಹಾಗೂ ಹೆಜಮಾಡಿ ಯುವವಾಹಿನಿ ಸದಸ್ಯರ ಶ್ರಮದ ಫಲವಾಗಿ ನಮ್ಮ ಮನೆ ನಿರ್ಮಾಣ ಯೋಜನೆ ಯಶಸ್ವಿಯಾಗಿದೆ ಎಂದು ಹೆಜಮಾಡಿ ಯುವವಾಹಿನಿ ಅಧ್ಯಕ್ಷರಾದ ಲೋಕೇಶ್ ಅಮೀನ್ ತಿಳಿಸಿದರು. […]

Read More

ಉಡುಪಿ ಯುವವಾಹಿನಿಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ತಲೆಗೊಂದು ಸೂರು – ಇದು ಯುವವಾಹಿನಿ (ರಿ) ಉಡುಪಿ ಘಟಕದ ಶಾಶ್ವತ ಯಶಸ್ವೀ ಯೋಜನೆ – ವರುಷಕ್ಕೊಂದು ತೀರಾ ಬಡ ಕುಟುಂಬವನ್ನು ಆಯ್ಕೆ ಮಾಡಿ ಅವರಿಗೆ ಮನೆ ನಿರ್ಮಾಣ ಮಾಡಿ ಕೊಡುವುದು ಉಡುಪಿ ಯುವವಾಹಿನಿಯ ಜನಪ್ರಿಯ ಸಮಾಜಮುಖಿ ಕಾರ್ಯಕ್ರಮ. ಈ ವರ್ಷದ ತಲೆಗೊಂದು ಸೂರು ಕಾರ್ಯಕ್ರಮದಲ್ಲಿ ದಿನಾಂಕ 23.04.2017ನೇ ಆದಿತ್ಯವಾರ ಶ್ರೀಮತಿ ಇಂದಿರಾ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ. ರಾಜ್ಯ ಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸಾಂಕೇತಿಕವಾಗಿ  ಶ್ರೀಮತಿ ಇಂದಿರಾ ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು. ಮಾಜಿ ಸಚಿವ […]

Read More

ಪುತ್ತೂರು ಯುವವಾಹಿನಿ ಆಶ್ರಯದಲ್ಲಿ ರಕ್ತದಾನ ಶಿಬಿರ

ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಇದರ ಸಹಯೋಗದೊಂದಿಗೆ ದಿನಾಂಕ 22.04.2017 ನೇ ಶನಿವಾರ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಸಭಾಭವನದಲ್ಲಿ ರಕ್ತದಾನ ಶಿಬಿರ ಜರುಗಿತು. ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಶಿಬಿರ ಉದ್ಘಾಟಿಸಿ ಮಾತನಾಡಿ ಮನುಷ್ಯನ ಶರೀರದಲ್ಲಿ ಹರಿಯುವ ರಕ್ತ ಒಂದೇ, ಜಾತಿ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ ಎಂದು ತಿಳಿಸಿದರು. ಯುವವಾಹಿನಿ […]

Read More

ಮೂಲ್ಕಿ ಯುವವಾಹಿನಿಯಿಂದ ಸ್ವಚ್ಛತಾ ಅಭಿಯಾನ

ಮೂಲ್ಕಿ ಬಪ್ಪನಾಡು ದೇವಸ್ಥಾನದಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದವರೆಗೆ ವಿವಿಧ ಸಂಘ ಸಂಸ್ಥೆಗಳ ಜೊತೆ ಸೇರಿ ಯುವವಾಹಿನಿ ಮೂಲ್ಕಿ ಘಟಕವು ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಭಾಗವಹಿಸಿತು. ದಿನಾಂಕ 26.03.2017 ರಂದು ಜರುಗಿದ ಈ ಸ್ವಚ್ಚತಾ ಅಭಿಯಾನದಲ್ಲಿ ಮೂಲ್ಕಿ ಯುವವಾಹಿನಿ ಅದ್ಯಕ್ಷರಾದ ಚೇತನ್ ಕುಮಾರ್, ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು,ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Read More

ಬಜಪೆ ಯುವವಾಹಿನಿಯ ಸ್ವಚ್ಛತಾ ಕಾರ್ಯ

ಯುವವಾಹಿನಿ (ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 26-03-2017 ನೇ ಆದಿತ್ಯವಾರದಂದು ಬಜಪೆಯ ಸಮೀಪವಿರುವ ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಜಪೆ‌ ಘಟಕದ ಸುಮಾರು 20 ಕ್ಕೂ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ|| ಜಯರಾಮ ಶೆಟ್ಟಿ, ಇವರು ಬಜಪೆ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಜಪೆ ಯುವವಾಹಿನಿ ಪದಾಧಿಕಾರಿಗಳಾದ ಚಂದ್ರಶೇಖರ ಎಸ್ ಪೂಜಾರಿ ದೇವರಾಜ್‌ […]

Read More

ಮೂಲ್ಕಿ ಯುವವಾಹಿನಿಯ ಹೊರೆಕಾಣಿಕೆ ಸೇವೆ

ಕಾಂತಬಾರೆ ಬೂದಬಾರೆ ಜನ್ಮಕ್ಷೇತ್ರ ಕೊಲ್ಲೂರು ಇದರ ಚತುಷ್ಪವಿತ್ರ  ನಾಗಬ್ರಹ್ಮಮಂಡಲ ಸೇವೆಯ ಪ್ರಯುಕ್ತ  ಒಂಬತ್ತು ಮಾಗಣೆಯ ಭಕ್ತಾಧಿಗಳಿಂದ ದಿನಾಂಕ 15-03-2017ರಂದು ಹೊರೆಕಾಣಿಕೆ ಸಮರ್ಪಿಸಲಾಯಿತು. ಈ ಸಂಧರ್ಭದಲ್ಲಿ ಮೂಲ್ಕಿ ಯುವವಾಹಿನಿಯ ವತಿಯಿಂದ ಹೊರೆಕಾಣಿಕೆಯನ್ನು ಸಮರ್ಪಿಸಿ ಶ್ರೀ ಕ್ಷೇತ್ರದಲ್ಲಿ ಮೂಲ್ಕಿ ಯುವವಾಹಿನಿ ಸದಸ್ಯರು   ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Read More

ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವು

ಉಪ್ಪಿನಂಗಡಿ ಗ್ರಾಮದ ಬಡ ಕುಟುಂಬದ ನಾರಾಯಣ ಪೂಜಾರಿಯವರ ಮನೆ ನಿರ್ಮಾಣದ ಉದ್ದೇಶಕ್ಕಾಗಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ರೂ 10,000/- ಆರ್ಥಿಕ ನೆರವು ನೀಡಲಾಯಿತು. ನೆಕ್ಕಿಲಾಡಿ ಮಾಂಡೊವಿ ಮೋಟಾರ್ಸ್ ಇದರ ಸರ್ವಿಸ್ ಮೇನೇಜರ್ ಚಂದ್ರಶೇಖರ್ ಧನ ಸಹಾಯ ವಿತರಿಸಿದರು ಮತ್ತು ಉಪ್ಪಿನಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಹಾಗೂ ಮನೆ ನಿರ್ಮಾಣವು ಶೀಘ್ರವಾಗಿ ನೆರವೇರುವಂತಾಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಮನೋಜ್ ಸಾಲ್ಯಾನ್ ಸುಣ್ಣಾಜೆ, ಗೌರವ […]

Read More

ಉಡುಪಿ: ಸೌಂದರ್ಯವೃದ್ಧಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಗಾರ

ದಿನಾಂಕ 22-01-2017 ರಂದು ಯುವವಾಹಿನಿ(ರಿ) ಉಡುಪಿ ಘಟಕದ ನೇತೃತ್ವದಲ್ಲಿ ಮಹಿಳಾ ಸೌಂದರ್ಯವೃದ್ಧಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಎಂಬ ಮಹಿಳಾ ಕಾರ್ಯಕ್ರಮ ಶ್ರೀ ಜಗನ್ನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಮಲ್ಪೆ ಬಿಲ್ಲವ ಮಹಿಳಾ ಸಂಘ ಅಧ್ಯಕ್ಷೆ ಶ್ರೀಮತಿ ವಿಜಯ ಬಂಗೇರರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಸೌಂದರ್ಯ ತಜ್ಞೆಯಾದ ವೇದಾವತಿ ಸುವರ್ಣರವರು ಈ ಕಾರ್ಯಾಗಾರವನ್ನು ನಡೆಸಿಕೊಟ್ಟು ಉತ್ತಮ ಮಾಹಿತಿಯನ್ನು ನೀಡಿದರು. ಯುವವಾಹಿನಿ (ರಿ) ಮಂಗಳೂರು ಕೇಂದ್ರ ಸಮಿತಿಯ ಮಹಿಳಾ ಸಂಚಾಲಕಿ ಶ್ರೀಮತಿ ಗುಣವತಿ ರಮೇಶ್ ಅತಿಥಿಗಳಾಗಿ ಭಾಗವಹಿಸಿದರು. ಯುವವಾಹಿನಿ(ರಿ) ಉಡುಪಿ […]

Read More

ಉಡುಪಿ : ’ತಲೆಗೊಂದು ಸೂರು’ ಕಾರ್ಯಕ್ರಮದ ಶಿಲಾನ್ಯಾಸ

ಯುವವಾಹಿನಿ (ರಿ) ಉಡುಪಿ ಘಟಕದ ನೇತೃತ್ವದಲ್ಲಿ ತಾ. 14-01-2017 ರಂದು ಉದ್ಯಾವರದ ಈಂದ್ ಬೈಲಿನ ಶ್ರೀಮತಿ ಗಿರಿಜಾ ಇವರಿಗೆ, ಯುವವಾಹಿನಿಯ ಮಹತ್ವಾಕಾಂಕ್ಷೆಯ ತಲೆಗೊಂದು ಸೂರು ಕಾರ್ಯಕ್ರಮದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಮಾನ್ಯ ಶಾಸಕರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಕೋಟ ಶ್ರೀನಿವಾಸ್ ಪೂಜಾರಿಯವರು ಶಿಲಾನ್ಯಾಸದ ಕಾರ್ಯವನ್ನು ನೆರವೇರಿಸಿದರು. ಯುವವಾಹಿನಿಯ ಸದಸ್ಯರು, ಊರ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಾಂಗವಾಗಿ ನೆರೆವೇರಿತು. ಸುಮಾರು 3 ರಿಂದ 5 ಲಕ್ಷದ ಖರ್ಚಿನಲ್ಲಿ ಈ ಮನೆಯ ನಿರ್ಮಾಣ ಮಾಡಲಾಗುವುದು ಎಂದು ಉಡುಪಿ ಘಟಕದ ಅಧ್ಯಕ್ಷ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!