31-07-2016, 5:45 AM
ವೈಚಾರಿಕ – ಅಮಿತಾಂಜಲಿ ಕೆ., ಉಡುಪಿ ಬಾಲ್ಯವೆಲ್ಲಾ ಕ್ರಿಶ್ಚಿಯನ್ ಒಡನಾಡಿಗಳೊಂದಿಗೇ ಆಡಿ ಬೆಳೆದವಳು ನಾನು. ಮುಸ್ಲಿಂ ಬಾಂಧವರ ಜೊತೆ ಬಾಂಧವ್ಯದ ಸುಖವನ್ನು ಕಂಡವಳು ನಾನು. ಅಪ್ಪ ಸ್ವಂತ ಮನೆ ಕಟ್ಟುವವರೆಗೂ ಕ್ರಿಶ್ಚಿಯನ್ನರ ಒಕ್ಕಲು ಮನೆಗಳಲ್ಲೇ ಬಾಡಿಗೆಗಿದ್ದೆವು. ಅಜ್ಜಿ ಮನೆಗೆ ಹೋದಾಗಲೆಲ್ಲ ಅಜ್ಜಿಯ ಒಡಹುಟ್ಟಿದಂತಿದ್ದ ನೆರೆಮನೆಯ ನಮ್ಮ ’ಸಣ್ಣಜ್ಜಿ’ ಜಾಕಿಯಾಬಿ ನಮ್ಮ ಮೇಲೆ ಪ್ರೀತಿಯ ಮಳೆಯನ್ನೇ ಹರಿಸುತ್ತಿದ್ದರು. ಯಾವತ್ತೂ ಅವರಲ್ಲಿ ಯಾರೂ ನಮ್ಮನ್ನು ಹಿಂದೂಗಳೆಂದು ಹಂಗಿಸಿದ್ದಿಲ್ಲ. ಅವರು ಬೇರೆ ಧರ್ಮೀಯರೆಂಬ ಕಾರಣಕ್ಕೆ ನಾವವರನ್ನು ದ್ವೇಷಿಸಿದ್ದಿಲ್ಲ. ಆತ್ಮೀಯ ಬಾಂಧವ್ಯ ನಮ್ಮೊಳಗಿತ್ತು. […]
Read More
31-07-2016, 5:42 AM
ಆಶಯ ಕೆ. ರಾಜೀವ ಪೂಜಾರಿ ಈ ಸೃಷ್ಟಿಯ ಸೌಂದರ್ಯವೇ ಬದುಕಿನ ಆಂತರ್ಯ. ತೇಲುವ ಮೋಡಗಳಲ್ಲಿ, ಹರಿಯುವ ನದಿಯ ಜಲದಲ್ಲಿ. ಹಸುರಿನ ಸಿರಿಯಲ್ಲಿ, ಹೂಗಳ ವರ್ಣದಲ್ಲಿ…ಮಂದಹಾಸದಲ್ಲಿರುವುದು ಅನಂತ ಚೈತನ್ಯದ ಒಂದು ರೂಪವೇ ಎನ್ನುವುದು ಸನಾತನೀಯ ಸಚ್ಚಿಂತನೆ. ನಮ್ಮದು ಸನಾತನ ಚಿಂತನೆಯನ್ನು ಗೌರವಿಸುವ ದೇಶ. ಮಾನವೀಯ ಮೌಲ್ಯಗಳನ್ನು ಮಾನ್ಯ ಮಾಡುವ ಮಹನೀಯರುಗಳು ಈಗಲೂ ಈ ನೆಲದಲ್ಲಿರುವರು. ಇಲ್ಲಿನ ಮಣ್ಣಿನ ಗುಣವೇ ದೈವಿಕ ಭಾವದಿಂದ ಕೂಡಿರುವುದು. ಅನೇಕ ಸಂತ ಮಹಂತರುಗಳು ಈ ನೆಲದಲ್ಲಿ ಬಾಳಿ ಹೋಗಿದ್ದಾರೆ. ಅವರ ನುಡಿಗಳು ಮನುಕುಲಕ್ಕೆ ದಾರಿದೀಪಗಳಾಗಿವೆ. […]
Read More
10-08-2014, 5:14 AM
ಪಾರೂ ಮೌನವಾಗಿ ಮನೆಕೆಲಸ ಮಾಡುತ್ತಿದ್ದಳು. ಕೈಗಳು ಯಾಂತ್ರಿಕವಾಗಿ ಕೆಲಸ ಮಾಡುತ್ತಿದ್ದರೂ ಮನಸ್ಸಿನಲ್ಲಿ ನೂರೆಂಟು ಆಲೋಚನೆಗಳು. ’ದೇವರೇ ಏನು ಮಾಡಲಿ? ಯಾರನ್ನು ಕೇಳಲಿ…? ಈ ಮನೆಯೊಡತಿ ಊಟ, ತಿಂಡಿ, ಬಟ್ಟೆಬರೆ ಎಲ್ಲಾ ಕೊಟ್ಟೂ ಕೈ ತುಂಬಾ ಸಂಬಳ ನೀಡುತ್ತಿದ್ದುದರಿಂದ ಇಷ್ಟರವರೆಗೂ ತಾನು ಸುಖಿ. ಮನೆಯ ಯಜಮಾನಿ ಮಂಜುಳಾ ತನ್ನ ಕೆಲಸಕ್ಕೆ ಯಾವತ್ತೂ ಸಿಡಿಗುಟ್ಟಿದವರಲ್ಲ. ತಾನೂ ಅಷ್ಟೇ ಇಷ್ಟರವರೆಗೂ ಪ್ರಾಮಾಣಿಕವಾಗಿಯೇ ಕೆಲಸ ಮಾಡಿದವಳು. ಅಪರೂಪಕ್ಕೆ ರಜೆ ಮಾಡಿದಾಗ ಮಾತ್ರ ಸಿಟ್ಟಾಗುತ್ತಿದ್ದರೇ ವಿನಾಃ ಯಾವತ್ತೂ ತನ್ನ ಕೆಲಸದ ಮೇಲೆ ಕೋಪಿಸಿಕೊಂಡವರಲ್ಲ. ಆದರೂ […]
Read More
04-08-2013, 5:00 AM
ಮಾನವ ಜೀವನವನ್ನು ನಾಲ್ಕು ಭಾಗಗಳನ್ನಾಗಿ ನಮ್ಮ ಹಿರಿಯರು ಗುರುತಿಸಿದ್ದಾರೆ. ಅದೇ ಬಾಲ್ಯ, ಯೌವ್ವನ ಮತ್ತು ಗೃಹಸ್ಥಾಶ್ರಮ – ಆಯಾಯ ವಯಸ್ಸಿನಲ್ಲಿ ಮಾನವ ಮಾಡಬೇಕಾದ ಕೆಲಸವನ್ನು ಹೇಳಿದ್ದಾರೆ. ಬಾಲ್ಯದಲ್ಲಿ ಬ್ರಹ್ಮಚರ್ಯ, ಶಿಕ್ಷಣ, ಸಂಸ್ಕೃತಿ, ನಯ-ವಿನಯ ಮತ್ತು ಯಾವುದಾದರು ಒಂದು ವಿಚಾರದಲ್ಲಿ ಕುಶಲತೆ ಇರಲೇಬೇಕು. ಆಗ ಯೌವ್ವನ ಯಶಸ್ವಿಯಾಗುತ್ತದೆ. ಯೌವ್ವನದಲ್ಲಿ ಆತನು ಕಲಿತ ವಿದ್ಯೆಯಿಂದ ಕುಶಲತೆ ಹೊಂದಿರುವ ಒಂದು ಉದ್ಯೋಗ ಹೊಂದಿ ಗೃಹಸ್ಥಾಶ್ರಮ ಪಡೆದು, ಕುಟುಂಬದ ಹೊರೆಯನ್ನು ಹೊರಬೇಕಾಗಿದೆ. ಬಾಲ್ಯದ ಶಿಕ್ಷಣದ ತಯಾರಿ ಯೌವ್ವನದ ಕೆಲಸಕ್ಕೆ ಅನುಕೂಲ ಮಾಡಿ ಕೊಡುತ್ತದೆ. […]
Read More
04-08-2013, 4:58 AM
ಯಾವುದೇ ಒಂದು ವಿಷಯವನ್ನು ವ್ಯಷ್ಠಿಯಾಗಿ ಅಥವಾ ಸಮಷ್ಠಿಯಾಗಿ ಜನಮಾನಸಕ್ಕೆ ತಲುಪಿಸುವ ಸೇತುವೆಯೇ ಮಾಧ್ಯಮ. ಹಿಂದಣ ದಿನಗಳಲ್ಲಿ ಪುರಾಣ ಕತೆಗಳನ್ನೋ ಮಹಾಕಾವ್ಯಗಳನ್ನೋ ಜನರಿಗೆ ತಲುಪಿಸಲು ಗಮಕ, ಪ್ರವಚನ, ಹರಿಕಥೆ, ಯಕ್ಷಗಾನ, ಬಯಲು ನಾಟಕ ಇತ್ಯಾದಿ ಪ್ರಕಾರಗಳು ಮಾಧ್ಯಮವಾಗಿ ಬಳಕೆಯಾಗುತ್ತಿದ್ದರೆ, ಒಂದೂರಿಂದ ಇನ್ನೊಂದೂರಿಗೆ ಸುದ್ದಿಗಳು ತಲುಪಬೇಕಾದರೆ ಬಹು ನಿಧಾನವಾಗಿ, ಎಷ್ಟೋ ಕಾಲದ ತರುವಾಯ ಬಹು ವಿಳಂಬಿತ ವ್ಯವಸ್ಥೆಯಿತ್ತು. ಹಲವಾರು ಸುದ್ದಿಗಳು ಗತಕಾಲದ ಇತಿಹಾಸವಾದ ನಂತರ ಕೆಲವರಿಗೆ ತಲುಪುತಿತ್ತು. ಬ್ರಿಟಿಷರ ಆಗಮನದ ತರುವಾಯ ನಮ್ಮ ದೇಶದಲ್ಲಿ ಅಂಚೆ ವ್ಯವಸ್ಥೆ ವ್ಯಾಪಕವಾಗಿ ಹರಡಿತು. […]
Read More
04-11-2012, 7:05 AM
ಹದಿನೆಂಟು, ಹತ್ತೊಂಭತ್ತನೇ ಶತಮಾನಗಳಲ್ಲಿ ಕೇರಳದ ಸಮಾಜ ಅಜ್ಞಾನ, ಅಂಧಶ್ರದ್ಧೆಗಳ ಅಂಧಕಾರದಲ್ಲಿ ಮುಳುಗಿತ್ತು. ಕೆಳವರ್ಗದವರಿಗೆ ಮೇಲ್ವರ್ಗದವರ ಹಿಂಸೆ, ಕಿರುಕುಳಗಳಿಂದಾಗಿ ಬದುಕುವುದೇ ಕಷ್ಟವಾಗಿತ್ತು. ಆ ಕಾಲದ ಜಾತಿ ವ್ಯವಸ್ಥೆಯ ಕ್ರೂರತೆಯಿಂದ ಪಾರಾಗಲು ದಲಿತರು ಮತಾಂತರಕ್ಕೆ ಮುಂದಾಗುತ್ತಿದ್ದರು. ಅಂತಹ ವಿಲಕ್ಷಣ ಕಾಲಘಟ್ಟದಲ್ಲಿ ಜನ್ಮತಾಳಿದ ನಾರಾಯಣ ಗುರು ಎಳವೆಯಲ್ಲೇ ಸಮಾಜದಲ್ಲಿ ಬೇರೂರಿರುವ ಅಸ್ಪೃಶ್ಯತೆ, ಅಜ್ಞಾನ, ಮೂಢನಂಬಿಕೆಗಳನ್ನು ಕಂಡು ಮರುಗುತ್ತಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಅವರು ದೀನದಲಿತರ ಸೇವೆ, ಶುಶ್ರೂಷೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ತಮ್ಮ ತಾಯಿ-ತಂದೆ ನಿಧನರಾದ ಮೇಲೆ ಹುಟ್ಟಿದೂರಿಗೆ ವಿದಾಯ ಹೇಳಿ ಪರಿವ್ರಾಜಕರಾಗಿ ಸಂಚಾರಕ್ಕೆ ತೊಡಗುವ ಗುರು, […]
Read More
04-11-2012, 6:28 AM
ಕರಾವಳಿ ಕಂಡ ಧೀಮಂತ ಪ್ರತಿಭಾಶಾಲಿಗಳ ಸಾಲಿನ ಮಿನುಗು ನಕ್ಷತ್ರವಾದ ವಿಶುಕುಮಾರ್ ದಂತಕತೆಯಾದ ವ್ಯಕ್ತಿ. ತುಳುವಿನ ಉಸಿರು, ಕನ್ನಡದ ಶಕ್ತಿ, ಸಮಾಜದ ಸ್ಫೂರ್ತಿ, ಚೆಲುವಿನ ಮೂರ್ತಿಯಾಗಿದ್ದ ವಿಶುಕುಮಾರ್ ಒಂದು ಕಾಲದ ಪ್ರತಿಭಾವಂತ ನಟ, ನಿರ್ದೇಶಕ, ಕಾದಂಬರಿಕಾರ, ಪತ್ರಕರ್ತ, ಸಂಘಟಕ, ಸಿನಿಮಾ ನಿರ್ದೇಶಕರಾಗಿ, ಶ್ರೇಷ್ಠ ಸಾಧನೆಗಳನ್ನು ಮಾಡಿದವರು, ಇನ್ನೆಷ್ಟೋ ಉಪಯುಕ್ತ ಕೊಡುಗೆಗಳನ್ನು ನೀಡಲಿರುವ ಭರವಸೆಯ ಅಕಾಲದಲ್ಲೇ ಅಗಲಿ ಹೋದವರು. 1797 ರಲ್ಲಿ ಟಿಪ್ಪುಸುಲ್ತಾನ್ ಸಮರ ಕಾಲದಲ್ಲಿ ಮಂಗಳೂರು ಬೋಳೂರಿನ ಕಡಲತೀರದಲ್ಲಿ ಕಟ್ಟಿಸಿದ ಕೋಟೆ ಸುಲ್ತಾನ್ ಬತ್ತೇರಿ, ಇಂದು ಪ್ರವಾಸಿಗರ ರಮ್ಯ ತಾಣ, […]
Read More
04-11-2012, 6:25 AM
ಅಧ್ಯಯನ ವಿಶುಕುಮಾರ್ ಕಾಲವಾಗಿ (1989) ಇದೀಗ 26 ವರ್ಷಗಳು ಪೂರ್ಣವಾಗುತ್ತಿದೆ. ಆದರೆ ಅವರು ಬಿಟ್ಟು ಹೋದ ಸಾಹಿತ್ಯ ಕೃತಿಗಳು, ನಾಟಕ, ಸಿನೆಮಾಗಳು ಇಂದಿಗೂ ನಮ್ಮನ್ನು ಕಾಡಿಸುತ್ತವೆ; ಯೋಚನೆಗೆ ಹಚ್ಚುತ್ತವೆ. ವಿಶುಕುಮಾರ್ ತಮ್ಮ ಕೃತಿಗಳಲ್ಲಿ ಆಯ್ದುಕೊಂಡ ವಸ್ತುಗಳು, ಸಾಮಾಜಿಕ ಸಮಸ್ಯೆಗಳು, ಸಂಘರ್ಷಗಳು, ಇವತ್ತಿಗೂ ಪ್ರಸ್ತುತವೆನಿಸುತ್ತವೆ. ವಿಶುಕುಮಾರ್ ಭಿನ್ನವಾಗಿ ಆಲೋಚಿಸುವ ಮನೋಧರ್ಮದವರು. ಹಾಗಾಗಿ ಕೆಲವೊಮ್ಮೆ ಅವರು ವಿವಾದಾತ್ಮಕ ವ್ಯಕ್ತಿಯೂ ಆದರು. ಒಬ್ಬ ವ್ಯಕ್ತಿ ಸಾಮಾನ್ಯವಾಗಿ ಒಂದು ಕ್ಷೇತ್ರದಲ್ಲಿ ಯಶಸ್ಸನ್ನು, ಪ್ರಸಿದ್ಧಿಯನ್ನು ಪಡೆಯುವುದನ್ನು ನಾವು ಕಾಣುತ್ತೇವೆ. ಆದರೆ ವಿಶುಕುಮಾರ್ ತಾವು ಪ್ರವೇಶಿಸಿದ ಎಲ್ಲಾ […]
Read More
04-11-2012, 6:23 AM
ಸ್ಥಿತಿ-ಗತಿ – ವಿಶುಕುಮಾರ್ (1979 ರಲ್ಲಿ ಬೆಳ್ತಂಗಡಿ ಬಿಲ್ಲವ ಸಂಘವು ಹೊರತಂದ ’ಕೋಟಿ- ಚೆನ್ನಯ’ ಎಂಬ ಸ್ಮರಣ ಸಂಚಿಕೆಯಲ್ಲಿ ಪ್ರಕಟಗೊಂಡ ಖ್ಯಾತ ಸಾಹಿತಿ ದಿ| ವಿಶುಕುಮಾರ್ ಅವರ ಇಂದಿಗೂ ಪ್ರಸ್ತುತವೆನಿಸುವ ಒಂದು ಲೇಖನ…) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಜನಾಂಗಕ್ಕೆ ಬಿಲ್ಲವ, ಪೂಜಾರಿ, ಬೈದ, ಹಳೇಪೈಕ ಇತ್ಯಾದಿ ಹೆಸರುಗಳು. ಉತ್ತರ ಕನ್ನಡದಲ್ಲಿ ನಾಮಧಾರಿಗಳು. ಶಿವಮೊಗ್ಗ, ಸಾಗರ ಕಡೆ ದೀವರು. ಹಳೇ ಮೈಸೂರು ಕಡೆ ಈಡಿಗರು. ಗುಲ್ಬರ್ಗ, ಬೀದರ್ ಕಡೆ ಈಳಿಗರು, ಕೇರಳದಲ್ಲಿ ತೀಯಾ, ತಮಿಳ್ನಾಡಿನಲ್ಲಿ ನಾಡಾರ್ ಹೀಗೆ ಬೇರೆ […]
Read More
04-11-2012, 6:19 AM
ವಿಶ್ವಗುರು ಬಸವಣ್ಣನವರಿಗೂ ಸೇಂದಿ ಮಾರುವ ಕುಲಕಸುಬಿನವರಿಗೂ ಎತ್ತಣ ಸಂಬಂಧವಯ್ಯಾ? ಸಹಜ ಪ್ರಶ್ನೆಯೇ, ೧೨ನೆಯ ಶತಮಾನದಲ್ಲಿ ಜಗತ್ತೇ ಬೆರಗುಗೊಳ್ಳುವ ರೀತಿಯಲ್ಲಿ ಸಮಾಜೋ ಧಾರ್ಮಿಕ ಕ್ರಾಂತಿಗೆ ರೂವಾರಿಯಾದ ಬಸವಣ್ಣ ಸ್ಥಾಪಿತ ಅನುಭವ ಮಂಟಪದಲ್ಲಿ ಸೇಂದಿ ಮಾರುವ ಶರಣನೊಬ್ಬನಿದ್ದ. ಹೆಸರು ಹೆಂಡದ ಮಾರಯ್ಯ. ಬಸವಣ್ಣನವರ ಸತ್ಸಂಗದ ನಂತರ ಶರಣ ಪಟ್ಟವನ್ನಲಂಕರಿಸಿದ ಮಾರಯ್ಯ ನವರು ’ಶರಣ ಹೆಂಡದ ಮಾರಯ್ಯ’ ಎಂದು ನಾಮಾಂಕಿತರಾದರು. ಅಸಮಾನತೆ ಸಾರುವ, ಮನುಷ್ಯರನ್ನು ಉಚ್ಛ-ನೀಚ ಎಂಬುದಾಗಿ ವಿಭಜಿಸುವ ಅಂದಿನ ಸಮಾಜದಲ್ಲಿ ದೀನ ದಲಿತರು, ತುಳಿತಕ್ಕೊಳಗಾದವರು. ಶೋಷಣೆಯಲ್ಲಿ ಮುಳುಗಿದ ವರ ಅಂತಃಕರಣದಲ್ಲಿ […]
Read More