
15-05-2017, 2:44 PM
” ನೀವು ಬ್ರಾಹ್ಮಣ ಅಲ್ಲ …!” ” ವಿಶುಕುಮಾರ್ – ಅಷ್ಟು ಸುಲಭವಾಗಿ ನಮ್ಮನ್ನು ಒಪ್ಪಿಕೊಳ್ಳಲು ತಯಾರಿಲ್ಲ” ಎಂದು ಹೇಳಿದ್ದೆ. ಅಗಲ ಫ್ರೇಮಿನ ಕನ್ನಡಕದ ಒಳಗಡೆ ತೀಕ್ಷಣ ಕಣ್ಣುಗಳು ನಮ್ಮನ್ನು ಅಳೆಯುವಂತಿದ್ದವು. ” ರೂಂಗೆ ಬಾ ನಿಮ್ಮೊಡನೆ ಸ್ವಲ್ಪ ಮಾತಾಡಬೇಕು” ಎಂದು ನನ್ನನ್ನು ಅವರ ರೂಂಗೆ ಕರೆದೊಯ್ದರು. ನಾನು ಅವರನ್ನು ಹಿಂಬಾಲಿಸಿದೆ . ಆದರೆ ರೂಂನ ಒಳಗಡೆ ಮತ್ತೊಬ್ಬ ವ್ಯಕ್ತಿ ಕುಳಿತಿದ್ದರು. ಅವರನ್ನು ವಿಶುಕುಮಾರ್ ಪರಿಚಯಿಸಿದರು. ” ಇವರು ಆರ್. ನರಸಿಂಹ. ನಮ್ಮ ಸ್ನೇಹಿತರು. ನಾವು ” […]
Read More

15-05-2017, 7:07 AM
ಬಂಟ್ವಾಳ ತಾಲೂಕಿನ ಕಕ್ಯಪದವು LCR ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ರೋಹಿನಾಥ್ ಪಾದೆ ಹಾಗೂ ಬಬಿತಾ ದಂಪತಿಗಳ ಸುಪುತ್ರಿ ಜಯಾನಿ ರೋಹಿನಾಥ್ ಈ ಬಾರಿಯ SSLC ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. SSLC ಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಬಂದಿರುವುದಕ್ಕೆ ಖುಷಿಯಾಗಿದೆ. ಮುಂದೆ ಪದವಿಪೂರ್ವ ಶಿಕ್ಷಣ ಪಡೆಯಲು ಸಂತ ಎಲೋಷಿಯಸ್ ಕಾಲೇಜಿಗೆ ದಾಖಲಾಗಿದ್ದೇನೆ, ವೈದ್ಯೆಯಾಗಬೇಕೆಂಬ ಗುರಿ ಇದೆ. ನಿಗದಿತ ವೇಳಾಪಟ್ಟಿ ಕ್ರಮಬದ್ಧ ಓದಿನಿಂದ ಈ ಸಾಧನೆ ಸಾಧ್ಯವಾಗಿದೆ ಎಂದಿದ್ದಾರೆ. ಆತ್ಮವಿಶ್ವಾಸದಿಂದ ಓದಿದಾಗ […]
Read More

10-04-2017, 11:24 AM
ಪ್ರೀತಿಯ ವಾಚಕರೇ, ಸಮಯ ಸಂದರ್ಭಗಳು ಒಂದೇ ರೀತಿ ಇರುವುದಿಲ್ಲ. ಬದಲಾಗುತ್ತಿರುವ ಈ ಕಾಲದಲ್ಲಿ ಅದೆಷ್ಟೋ ಬಾರಿ ನಾವು ಮಾಡುವ ಕಾರ್ಯದಲ್ಲಿ ನಮಗೆ ವಿರುದ್ಧವಾಗಿ ನಡೆಯಬಹುದು. ಅಂತಹ ಪರಿಸ್ಥಿತಿ ಬಂದಾಗ ದುಃಖಿಸುತ್ತಾ ಇರುವ ಬದಲು, ಎದುರಾದ ಪರಿಸ್ಥಿತಿಯನ್ನು ತನ್ನ ಕಡೆ ಪರಿವರ್ತನೆ ಮಾಡಿಸಿಕೊಳ್ಳುವವನೆ ನಿಜವಾದ ಜಾಣ. ಎಷ್ಟೇ ಗಂಭೀರವಾದ ಸೋಲನ್ನು ಗೆಲುವಾಗಿ ದಕ್ಕಿಸಿಕೊಂಡಿರುವ ಅಗ್ರಗಣ್ಯರು ಈ ಪ್ರಪಂಚದಲ್ಲಿ ತುಂಬಾ ಜನ ಇದ್ದಾರೆ. ಅಂತಹವರನ್ನು ಅನುಕರಿಸಿಕೊಂಡು ತನ್ನ ಯಾವುದೇ ಪ್ರತಿಕೂಲ ಪರಿಸ್ಥಿತಿಗಳನ್ನು ಸಕಾರಾತ್ಮಕವಾಗಿ ಅರ್ಥಮಾಡಿಕೊಂಡು ಮನಸ್ಸಿನ ಮೇಲೆ ಒತ್ತಡ ಹಾಕಿಕೊಳ್ಳದೆ, […]
Read More

10-04-2017, 4:06 AM
ಮದರಾಸಿನ ’ಚಂದಮಾಮ’ ಪಬ್ಲಿಕೇಶನ್ರವರು ಕನ್ನಡದಲ್ಲಿ ’ವಿಜಯಚಿತ್ರ’ ಸಿನೀಮ ಮಾಸಿಕ ಮತ್ತು ವನಿತಾ ಮಹಿಳಾ ಪತ್ರಿಕೆಗಳನ್ನು ಪ್ರಕಟಿಸುತ್ತಿದ್ದರು. ರವಿರಾಜ ಅಜ್ರಿಯವರು 1978 ರಲ್ಲಿ ಈ ಪತ್ರಿಕೆಗಳಿಗೆ ಕೆಲಸಕ್ಕೆ ಸೇರಿ 1983 ರ ತನಕ ಅಲ್ಲಿ ಸೇವೆ ಸಲ್ಲಿಸಿದರು. 1983 ರಲ್ಲಿ ಖ್ಯಾತ ಪತ್ರಕರ್ತ ದಿ| ಎಸ್ ವಿಜಯಶೀಲ ರಾವ್ ಅವರ ’ಮುಂಜಾನೆ’ ಕನ್ನಡ ದಿನ ಪತ್ರಿಕೆಗೆ ಸೇರಿದರು. ಇದು ಸಿನೀಮ ಪತ್ರಿಕೆಯಾಗಿದ್ದು ಇಲ್ಲಿ ಸುಮಾರು ಮೂರು ವರ್ಷ ಕೆಲಸ ನಿರ್ವಹಿಸಿದರು. ಚಂದಮಾಮ ಪಬ್ಲಿಕೇಶನ್ನ ಮಾಲಕ ವಿಶ್ವನಾಥ ರೆಡ್ಡಿಯವರು ’ವಿಜಯಚಿತ್ರ’ ಪತ್ರಿಕೆಯ ಕಚೇರಿಯನ್ನು ಬೆಂಗಳೂರಿನ […]
Read More

10-04-2017, 4:04 AM
ಕಲಿಯುತ್ತಿರುವ ಮಕ್ಕಳೆಲ್ಲರೂ ವಾರ್ಷಿಕ ಪರೀಕ್ಷೆಗಳನ್ನು ಎದುರಿಸುತ್ತಿರುವಂತಹ ಸಮಯದಲ್ಲಿ ನಾವಿದ್ದೇವೆ. ಇಂತಹ ಸಮಯದಲ್ಲಿ ಹೆತ್ತವರ ಪಾತ್ರ ಬಹಳ ಮುಖ್ಯವಾದುದು. ನಾವು ಮಕ್ಕಳಿಗೆ ಓದು ಓದು ಎನ್ನುವುದನ್ನು ಬಿಟ್ಟರೆ ಬೇರೇನ್ನನ್ನೂ ಮಾಡುವುದಿಲ್ಲ. ಓದುವ ಮಕ್ಕಳಿರುವ ಮನೆಯವರು ಕೆಲವು ಶಿಷ್ಠಾಚಾರಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಇದೆ. * ಮಕ್ಕಳಿಗೆ ಓದಲು ಶಾಂತವಾದ ಪರಿಸರವನ್ನು ಒದಗಿಸಬೇಕು. * ಮಕ್ಕಳು ಓದುವ ಸಮಯದಲ್ಲಿ ಆದಷ್ಟು ಟಿ.ವಿ. ಬಂದ್ ಮಾಡಿದರೆ ಒಳ್ಳೆಯದು. * ಮಕ್ಕಳು ಓದುತ್ತಿರುವಾಗ ನಾವು ಕೂಡಾ ಯಾವುದಾದರು ಪುಸ್ತಕ ಅಥವಾ ಪೇಪರ್ ಹಿಡಿದುಕೊಂಡು ಅವರ […]
Read More

10-04-2017, 3:54 AM
ಆಶಯ ಪ್ರಸ್ತುತ ಕಾಲಘಟ್ಟದಲ್ಲಿ ಮನುಷ್ಯ ಹೆಚ್ಚು ಹೆಚ್ಚು ಬುದ್ಧಿವಂತನಾಗುತ್ತಿರುವಂತೆಯೇ ವ್ಯವಹಾರಿಕ ಪ್ರಪಂಚದಲ್ಲೂ ಲೀನನಾಗಿರುತ್ತಾನೆ. ಯಾಂತ್ರಿಕ ಬದುಕಿನ ಜೀವ-ಭಾವರಹಿತ ಮುಖವಾಡವೇ ಆಗುತ್ತಿದ್ದಾನೆ. ಮಹಾನ್ ಗುರು ಬುದ್ದನಂದಂತೆ ಒಬ್ಬ ಮನುಷ್ಯ ಇನ್ನೊಬ್ಬನಿಗೆ ಕೊಡುವ ಕೊಡುಗೆಯೆಂದರೆ-ಹಣ, ಒಡವೆ, ಆಸ್ತಿ, ಅಂತಸ್ಥಲ್ಲ. ಒಂದು ಪರಿಶುದ್ಧವಾದ ನಗೆ. ನೊಂದ ಹೃದಯಕ್ಕೆ ನುಡಿಯುವ ಸಾಂತ್ವನದ ಮಾತು ಆದರೆ ಮನುಷ್ಯ ಇಂದು ಇದನ್ನೇ ಮರೆತಿದ್ದಾನೆ. ಕಾರಣ ಇಂದಿನ ವಿದ್ಯೆ ಎಲ್ಲಾ ಕ್ಷೇತ್ರಗಳಲ್ಲೂ ಬಹುಬಗೆಯ ಅಗಾಧವಾದ ಜ್ಞಾನವನ್ನು ನೀಡಿದರೂ ನೈತಿಕ ಮತ್ತು ಸುಸಂಸ್ಕೃತಿಯ ಮೌಲ್ಯ ನೀಡುವಲ್ಲಿ ಮತ್ತು ಪರಸ್ಪರರ […]
Read More

10-04-2017, 3:50 AM
’ಆಚಾರವಿಲ್ಲದ ನಾಲಿಗೆ, ನೀ ನಿನ ನೀಚ ಬುದ್ಧಿಯ ಬಿಡು ನಾಲಿಗೆ’ ಪುರಂದರದಾಸರ ಆಗಿನ ಕಾಲದ ಚಿಂತನೆ ನಮ್ಮ ಇಂದಿನ ಗಾಯಕಿಯರ ಸುಶ್ರಾವ್ಯ ಕಂಠದಿಂದ ಹೊರ ಹೊಮ್ಮುವಾಗ ನಾವು ಮುಷ್ಠಿ ಬಿಗಿದು, ಹೌದು! ಈ ಮನುಷ್ಯರು ನಾಲಿಗೆಯನ್ನು ತಮ್ಮತಮ್ಮ ಹಿಡಿತದಲ್ಲಿಟ್ಟುಕೊಂಡರೆ ಎಷ್ಟು ಚೆನ್ನ ಎಂದು ಪರರ ಬಗ್ಗೆ ಭಾವಿಸುತ್ತಾ ನಮ್ಮ ನಮ್ಮ ಆತ್ಮವಿಮರ್ಶೆ ಮಾಡಲು ಖಂಡಿತ ತಯಾರಿರುವುದಿಲ್ಲ. ’ಮಾತುಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು’. ಆದರೆ ಎಲ್ಲಿಗೆ ಹೋಯಿತು? ಮಾನವತೆಯ ಭದ್ರಕೋಟೆಯನ್ನು ಛಿದ್ರ ಮಾಡುವ, ಸಂಘಟನೆಗಳನ್ನು, ಸಂಘಟಿತ ಮನಸ್ಸುಗಳನ್ನು […]
Read More

15-03-2017, 12:13 PM
ಸಂಪಾದಕರ ಮಾತು ಪ್ರೀತಿಯ ವಾಚಕರೇ, ನಮ್ಮ ಸಂಸ್ಕೃತಿಯನ್ನು ಉಳಿಸಲು ನಾವು ನಮ್ಮ ಮಕ್ಕಳಿಗೆ ಯಾವ ರೀತಿಯ ಶಿಕ್ಷಣವನ್ನು ನೀಡುತ್ತಿದ್ದೇವೆ. ಅವರು ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ನಮ್ಮ ಕರ್ತವ್ಯದ ಬಗ್ಗೆ ವಿಮರ್ಷಿಸೋಣ. ಮೌಲ್ಯಾಧಾರಿತ, ಸ್ವಾವಲಂಬನೆಯ, ಸರ್ವತೋಮುಖ ಅಭಿವೃದ್ಧಿಯ ಸಾಮಾಜಿಕ, ಪ್ರಾಕೃತಿಕ ಹಾಗೂ ಜೀವನ ಶಿಕ್ಷಣಗಳನ್ನು ಮಕ್ಕಳು ತಮ್ಮ ಪ್ರಾಥಮಿಕ ಶಿಕ್ಷಣದಲ್ಲೇ ಕಲಿಯಬೇಕು. ಮಕ್ಕಳು ವಾಸಿಸುವ ಮನೆ, ಮೇಲೆ ಹೇಳಿರುವ ಶಿಕ್ಷಣಗಳನ್ನು ಮನೆಗಳಲ್ಲಿ ನೋಡಿ, ಕಲಿಯುವ ಮನೆಯಾಗಬೇಕು. ತಾಯಿ-ತಂದೆ, ಹಿರಿಯರು ಮಕ್ಕಳಿಗೆ ಮೇಲೆ ಹೇಳಿರುವ ವಿವಿಧ ರೀತಿಯ ಶಿಕ್ಷಣದ ವಿಚಾರಗಳ […]
Read More

15-03-2017, 7:22 AM
ಜನಪದ ವೀರರು ಅಥವಾ ಸಾಂಸ್ಕೃತಿಕ ಸ್ತ್ರೀ, ಪುರುಷರನ್ನು ಕಾರಣಿಕ ಶಕ್ತಿಗಳಾಗಿ ಪರಿಭಾವಿಸಲಾಗಿರುವುದು ತುಳುವ ಸಂಸ್ಕೃತಿಯ ವೈಶಿಷ್ಟ್ಯವಾಗಿದೆ. ತಮ್ಮ ಕಾಲದ ವೀರರ ಧೈರ್ಯ ಸಾಹಸ ರೋಮಾಂಚಕ ಗಾಥೆಯನ್ನು ಅದರಿಂದ ರೋಮಾಂಚಿತರಾದ ಇಲ್ಲವೇ ಸ್ಫೂತಿ ಪಡೆದ ಜನಸಮುದಾಯ ಹಾಡುಕಟ್ಟಿ, ಕಥೆ ಪೋಣಿಸಿ, ಸಮಾಜದಲ್ಲಿ ಒಬ್ಬರಿಂದೊಬ್ಬರಿಗೆ, ತಿಳಿಸಿ ಅದು ತಲೆಮಾರಿನಿಂದ ತಲೆಮಾರಿಗೆ ಬಾಯ್ದೆರೆಯಾಗಿ ಹರಿದು ಬಂದ ಪರಂಪರೆ ನಮ್ಮ ಮುಂದಿದೆ. ಇಂತಹ ಪರಂಪರೆ ಭಾರತ ದೇಶದಲ್ಲಷ್ಟೇ ಅಲ್ಲದೆ ಮಧ್ಯ ಏಷಿಯಾ, ಚೈನಾ, ಆಫ್ರಿಕಾ, ಇಂಡೋನೇಶಿಯಾ, ಫಿನ್ಲೆಂಡ್ ಮತ್ತಿತರ ದೇಶಗಳಲ್ಲೂ ಕಂಡು ಬಂದಿದೆ. […]
Read More

15-03-2017, 7:19 AM
ಒಂದು ತುಂಡು ಉಪ್ಪಿನಕಾಯಿ ಇದ್ದರೂ ಸಾಕು ಮೃಷ್ಟಾನ್ನ ಎದುರಿಗೆದೆಯೆನ್ನುವಷ್ಟೇ ಖುಷಿಯಿಂದ ಗಂಜಿ ಅನ್ನವನ್ನುಂಡು ತಿಂದು ತೇಗುತ್ತಿದ್ದವರು ನಮ್ಮ ನಿಮ್ಮವರ ನಡುವೆ ಹಲವರಿರಬಹುದು. ಕಣಿವೆ, ಬೆಟ್ಟ ಗುಡ್ಡ, ನದಿ ಹಳ್ಳ, ಕಾಡುಬಯಲುಗಳೋ… ಆಯಾಸ ನೋವಿನರಿವಿಲ್ಲದೆ ಬರಿಗಾಲಿನ ನಡಿಗೆಯೋಡಾಟದಲ್ಲಿ ಕಲ್ಲು ಮುಳ್ಳುಗಳ ಗೊಡವೆ ಯಾರಿಗಾದರೂ ಇದ್ದಿತ್ತೆ?…..! ಎಡೆ ಬಿಡದ ದುಡಿಮೆಯಿದ್ದರೂ ನಿತ್ಯದ ಪಾಳಿಗೆ ಸಾಕಾಗದೆ, ಹೊಟೇಲು ಗೂಡಂಗಡಿ ದಿನಸಿ ಅಂಗಡಿಗಳಲ್ಲೆಲ್ಲಾ ಸಾಲ ಮಾಡದೆ ಇರುವವರು ಆ ದಿನಗಳಲ್ಲಿ ವಿರಳವೆನ್ನಬಹುದು. ಊರಿಗೂರೇ ಬದಲಾಗಿದೆ ಕಾಲ ಮಾತ್ರವಲ್ಲ ಊರಿಗೂರೇ ಬದಲಾಗಿದೆ. ಮೊದಲೆಲ್ಲಾ ಮುಂಬಯಿಂದ […]
Read More