Yuvavahini

ಸಿಂಚನ

ಯುವಜನತೆಯ ಮೇಲೆ ಮಾಧ್ಯಮದ ಪ್ರಭಾವ

ಯಾವುದೇ ಒಂದು ವಿಷಯವನ್ನು ವ್ಯಷ್ಠಿಯಾಗಿ ಅಥವಾ ಸಮಷ್ಠಿಯಾಗಿ ಜನಮಾನಸಕ್ಕೆ ತಲುಪಿಸುವ ಸೇತುವೆಯೇ ಮಾಧ್ಯಮ. ಹಿಂದಣ ದಿನಗಳಲ್ಲಿ ಪುರಾಣ ಕತೆಗಳನ್ನೋ ಮಹಾಕಾವ್ಯಗಳನ್ನೋ ಜನರಿಗೆ ತಲುಪಿಸಲು ಗಮಕ, ಪ್ರವಚನ, ಹರಿಕಥೆ, ಯಕ್ಷಗಾನ, ಬಯಲು ನಾಟಕ ಇತ್ಯಾದಿ ಪ್ರಕಾರಗಳು ಮಾಧ್ಯಮವಾಗಿ ಬಳಕೆಯಾಗುತ್ತಿದ್ದರೆ, ಒಂದೂರಿಂದ ಇನ್ನೊಂದೂರಿಗೆ ಸುದ್ದಿಗಳು ತಲುಪಬೇಕಾದರೆ ಬಹು ನಿಧಾನವಾಗಿ, ಎಷ್ಟೋ ಕಾಲದ ತರುವಾಯ ಬಹು ವಿಳಂಬಿತ ವ್ಯವಸ್ಥೆಯಿತ್ತು. ಹಲವಾರು ಸುದ್ದಿಗಳು ಗತಕಾಲದ ಇತಿಹಾಸವಾದ ನಂತರ ಕೆಲವರಿಗೆ ತಲುಪುತಿತ್ತು. ಬ್ರಿಟಿಷರ ಆಗಮನದ ತರುವಾಯ ನಮ್ಮ ದೇಶದಲ್ಲಿ ಅಂಚೆ ವ್ಯವಸ್ಥೆ ವ್ಯಾಪಕವಾಗಿ ಹರಡಿತು. […]

Read More

ಜಾತಿ ಒಂದು ಧರ್ಮ ಒಂದು ದೇವರು ಒಬ್ಬನೇ

ಹದಿನೆಂಟು, ಹತ್ತೊಂಭತ್ತನೇ ಶತಮಾನಗಳಲ್ಲಿ ಕೇರಳದ ಸಮಾಜ ಅಜ್ಞಾನ, ಅಂಧಶ್ರದ್ಧೆಗಳ ಅಂಧಕಾರದಲ್ಲಿ ಮುಳುಗಿತ್ತು. ಕೆಳವರ್ಗದವರಿಗೆ ಮೇಲ್ವರ್ಗದವರ ಹಿಂಸೆ, ಕಿರುಕುಳಗಳಿಂದಾಗಿ ಬದುಕುವುದೇ ಕಷ್ಟವಾಗಿತ್ತು. ಆ ಕಾಲದ ಜಾತಿ ವ್ಯವಸ್ಥೆಯ ಕ್ರೂರತೆಯಿಂದ ಪಾರಾಗಲು ದಲಿತರು ಮತಾಂತರಕ್ಕೆ ಮುಂದಾಗುತ್ತಿದ್ದರು. ಅಂತಹ ವಿಲಕ್ಷಣ ಕಾಲಘಟ್ಟದಲ್ಲಿ ಜನ್ಮತಾಳಿದ ನಾರಾಯಣ ಗುರು ಎಳವೆಯಲ್ಲೇ ಸಮಾಜದಲ್ಲಿ ಬೇರೂರಿರುವ ಅಸ್ಪೃಶ್ಯತೆ, ಅಜ್ಞಾನ, ಮೂಢನಂಬಿಕೆಗಳನ್ನು ಕಂಡು ಮರುಗುತ್ತಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಅವರು ದೀನದಲಿತರ ಸೇವೆ, ಶುಶ್ರೂಷೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ತಮ್ಮ ತಾಯಿ-ತಂದೆ ನಿಧನರಾದ ಮೇಲೆ ಹುಟ್ಟಿದೂರಿಗೆ ವಿದಾಯ ಹೇಳಿ ಪರಿವ್ರಾಜಕರಾಗಿ ಸಂಚಾರಕ್ಕೆ ತೊಡಗುವ ಗುರು, […]

Read More

ದಿ| ವಿಶುಕುಮಾರ್ : ಬದುಕು-ಸಾಧನೆ

ಕರಾವಳಿ ಕಂಡ ಧೀಮಂತ ಪ್ರತಿಭಾಶಾಲಿಗಳ ಸಾಲಿನ ಮಿನುಗು ನಕ್ಷತ್ರವಾದ ವಿಶುಕುಮಾರ್ ದಂತಕತೆಯಾದ ವ್ಯಕ್ತಿ. ತುಳುವಿನ ಉಸಿರು, ಕನ್ನಡದ ಶಕ್ತಿ, ಸಮಾಜದ ಸ್ಫೂರ್ತಿ, ಚೆಲುವಿನ ಮೂರ್ತಿಯಾಗಿದ್ದ ವಿಶುಕುಮಾರ್ ಒಂದು ಕಾಲದ ಪ್ರತಿಭಾವಂತ ನಟ, ನಿರ್ದೇಶಕ, ಕಾದಂಬರಿಕಾರ, ಪತ್ರಕರ್ತ, ಸಂಘಟಕ, ಸಿನಿಮಾ ನಿರ್ದೇಶಕರಾಗಿ, ಶ್ರೇಷ್ಠ ಸಾಧನೆಗಳನ್ನು ಮಾಡಿದವರು, ಇನ್ನೆಷ್ಟೋ ಉಪಯುಕ್ತ ಕೊಡುಗೆಗಳನ್ನು ನೀಡಲಿರುವ ಭರವಸೆಯ ಅಕಾಲದಲ್ಲೇ ಅಗಲಿ ಹೋದವರು. 1797 ರಲ್ಲಿ ಟಿಪ್ಪುಸುಲ್ತಾನ್ ಸಮರ ಕಾಲದಲ್ಲಿ ಮಂಗಳೂರು ಬೋಳೂರಿನ ಕಡಲತೀರದಲ್ಲಿ ಕಟ್ಟಿಸಿದ ಕೋಟೆ ಸುಲ್ತಾನ್ ಬತ್ತೇರಿ, ಇಂದು ಪ್ರವಾಸಿಗರ ರಮ್ಯ ತಾಣ, […]

Read More

ವಿಶುಕುಮಾರ್- ತಾತ್ವಿಕ ನಿಲುವುಗಳು

ಅಧ್ಯಯನ ವಿಶುಕುಮಾರ್ ಕಾಲವಾಗಿ (1989) ಇದೀಗ 26 ವರ್ಷಗಳು ಪೂರ್ಣವಾಗುತ್ತಿದೆ. ಆದರೆ ಅವರು ಬಿಟ್ಟು ಹೋದ ಸಾಹಿತ್ಯ ಕೃತಿಗಳು, ನಾಟಕ, ಸಿನೆಮಾಗಳು ಇಂದಿಗೂ ನಮ್ಮನ್ನು ಕಾಡಿಸುತ್ತವೆ; ಯೋಚನೆಗೆ ಹಚ್ಚುತ್ತವೆ. ವಿಶುಕುಮಾರ್ ತಮ್ಮ ಕೃತಿಗಳಲ್ಲಿ ಆಯ್ದುಕೊಂಡ ವಸ್ತುಗಳು, ಸಾಮಾಜಿಕ ಸಮಸ್ಯೆಗಳು, ಸಂಘರ್ಷಗಳು, ಇವತ್ತಿಗೂ ಪ್ರಸ್ತುತವೆನಿಸುತ್ತವೆ. ವಿಶುಕುಮಾರ್ ಭಿನ್ನವಾಗಿ ಆಲೋಚಿಸುವ ಮನೋಧರ್ಮದವರು. ಹಾಗಾಗಿ ಕೆಲವೊಮ್ಮೆ ಅವರು ವಿವಾದಾತ್ಮಕ ವ್ಯಕ್ತಿಯೂ ಆದರು. ಒಬ್ಬ ವ್ಯಕ್ತಿ ಸಾಮಾನ್ಯವಾಗಿ ಒಂದು ಕ್ಷೇತ್ರದಲ್ಲಿ ಯಶಸ್ಸನ್ನು, ಪ್ರಸಿದ್ಧಿಯನ್ನು ಪಡೆಯುವುದನ್ನು ನಾವು ಕಾಣುತ್ತೇವೆ. ಆದರೆ ವಿಶುಕುಮಾರ್ ತಾವು ಪ್ರವೇಶಿಸಿದ ಎಲ್ಲಾ […]

Read More

ಬಿಲ್ಲವರ ಎರಡು ಮುಖ

ಸ್ಥಿತಿ-ಗತಿ – ವಿಶುಕುಮಾರ್ (1979 ರಲ್ಲಿ ಬೆಳ್ತಂಗಡಿ ಬಿಲ್ಲವ ಸಂಘವು ಹೊರತಂದ  ’ಕೋಟಿ- ಚೆನ್ನಯ’ ಎಂಬ ಸ್ಮರಣ ಸಂಚಿಕೆಯಲ್ಲಿ ಪ್ರಕಟಗೊಂಡ  ಖ್ಯಾತ ಸಾಹಿತಿ ದಿ| ವಿಶುಕುಮಾರ್ ಅವರ ಇಂದಿಗೂ ಪ್ರಸ್ತುತವೆನಿಸುವ ಒಂದು ಲೇಖನ…) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಜನಾಂಗಕ್ಕೆ ಬಿಲ್ಲವ, ಪೂಜಾರಿ, ಬೈದ, ಹಳೇಪೈಕ ಇತ್ಯಾದಿ ಹೆಸರುಗಳು. ಉತ್ತರ ಕನ್ನಡದಲ್ಲಿ ನಾಮಧಾರಿಗಳು. ಶಿವಮೊಗ್ಗ, ಸಾಗರ ಕಡೆ ದೀವರು. ಹಳೇ ಮೈಸೂರು ಕಡೆ ಈಡಿಗರು. ಗುಲ್ಬರ್ಗ, ಬೀದರ್ ಕಡೆ ಈಳಿಗರು, ಕೇರಳದಲ್ಲಿ ತೀಯಾ, ತಮಿಳ್‌ನಾಡಿನಲ್ಲಿ ನಾಡಾರ್ ಹೀಗೆ ಬೇರೆ […]

Read More

ಅನುಭವ ಮಂಟಪದಲ್ಲೊಬ್ಬ ಕುಲಬಾಂಧವ ಶರಣ

ವಿಶ್ವಗುರು ಬಸವಣ್ಣನವರಿಗೂ ಸೇಂದಿ ಮಾರುವ ಕುಲಕಸುಬಿನವರಿಗೂ ಎತ್ತಣ ಸಂಬಂಧವಯ್ಯಾ? ಸಹಜ ಪ್ರಶ್ನೆಯೇ, ೧೨ನೆಯ ಶತಮಾನದಲ್ಲಿ ಜಗತ್ತೇ ಬೆರಗುಗೊಳ್ಳುವ ರೀತಿಯಲ್ಲಿ ಸಮಾಜೋ ಧಾರ್ಮಿಕ ಕ್ರಾಂತಿಗೆ ರೂವಾರಿಯಾದ ಬಸವಣ್ಣ ಸ್ಥಾಪಿತ ಅನುಭವ ಮಂಟಪದಲ್ಲಿ ಸೇಂದಿ ಮಾರುವ ಶರಣನೊಬ್ಬನಿದ್ದ. ಹೆಸರು ಹೆಂಡದ ಮಾರಯ್ಯ. ಬಸವಣ್ಣನವರ ಸತ್ಸಂಗದ ನಂತರ ಶರಣ ಪಟ್ಟವನ್ನಲಂಕರಿಸಿದ ಮಾರಯ್ಯ ನವರು ’ಶರಣ ಹೆಂಡದ ಮಾರಯ್ಯ’ ಎಂದು ನಾಮಾಂಕಿತರಾದರು. ಅಸಮಾನತೆ ಸಾರುವ, ಮನುಷ್ಯರನ್ನು ಉಚ್ಛ-ನೀಚ ಎಂಬುದಾಗಿ ವಿಭಜಿಸುವ ಅಂದಿನ ಸಮಾಜದಲ್ಲಿ ದೀನ ದಲಿತರು, ತುಳಿತಕ್ಕೊಳಗಾದವರು. ಶೋಷಣೆಯಲ್ಲಿ ಮುಳುಗಿದ ವರ ಅಂತಃಕರಣದಲ್ಲಿ […]

Read More

ವರ್ತಮಾನದಲ್ಲಿ ಬಿಲ್ಲವರ ಸಂಘಟನೆ

ಕರ್ನಾಟಕ ರಾಜ್ಯ ಭಾರತದ ಒಂದು ಅಂಗ. ಈ ರಾಜ್ಯದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ’ತುಳುನಾಡೆಂದೇ’ ಪ್ರಖ್ಯಾತಿ. ಅರಬ್ಬೀ ಸಮುದ್ರದ ತಡಿಯಿಂದ ಪಶ್ಚಿಮ ಘಟ್ಟಗಳ ತುದಿಯ ತನಕ ಹಬ್ಬಿಕೊಂಡಿರುವ ಕೃಷಿ ಪ್ರಧಾನವಾದ, ಪ್ರಾಕೃತಿಕ ಚೆಲುವಿನ ಹಸಿರನ್ನು ತುಂಬಿಸಿಕೊಂಡ ಶ್ರೀಮಂತ ಜಿಲ್ಲೆ. ತುಂಬಿ ಹರಿಯುತ್ತಿರುವ ನದಿಗಳು, ಜಗತ್ಪ್ರಸಿದ್ಧ ಪುಣ್ಯ ಕ್ಷೇತ್ರಗಳು, ಇಂತಹ ಸುಂದರ ನಾಡಿನಲ್ಲಿ ಗೇಣಿದಾರನಾಗಿ, ಒಕ್ಕಲಾಗಿ, ಮೂರ್ತೆದಾರನಾಗಿ, ಕಾರ್ಮಿಕನಾಗಿ, ದೈವಗಳ ಪೂಜಾರಿಯಾಗಿ ಬದುಕಿ ಬಾಳಿದ ಬಹು ದೊಡ್ಡ ಜನ ಸಮುದಾಯ ಬಿಲ್ಲವರದ್ದು. ಶೋಷಣೆ, ದಬ್ಬಾಳಿಕೆ, ಜೀತ ಪದ್ಧತಿಯ […]

Read More

ನಾ ಕಂಡ ಯುವವಾಹಿನಿ

ತುಳುನಾಡಿನ ಬಿಲ್ಲವ ಸಮಾಜ ಪ್ರಾಚೀನತೆಯಲ್ಲಿ, ಜನ ಸಂಖ್ಯೆಯಲ್ಲಿ, ಗುತ್ತು ಬರ್ಕೆ, ಭಾವ, ನಟ್ಟಿಲ್‌ಗಳ ಸ್ಥಾನಮಾನದೊಂದಿಗೆ ಆಳರಸರ ದಂಡನಾಯಕರಾಗಿ ಕ್ಷಾತ್ರ ತೇಜದಲ್ಲಿ ಮೆರೆದ ಸಮಾಜವಾಗಿತ್ತು. ಕಾಲಕ್ರಮೇಣ ಅಧೋಗತಿಗಿಳಿದು ಅಸ್ಪೃಶ್ಯತೆ ಶೋಷಣೆಗಳ ಹೊಡೆತದಿಂದ ಜರ್ಜರಿತವಾದ ಈ ಸಮಾಜ 1908 ರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ತುಳುನಾಡಿಗೆ ಪಾದಾರ್ಪಣೆ ಮಾಡಿ ಕುದ್ರೋಳಿ ಗೋಕರ್ಣನಾಥನ ಸ್ಥಾಪನೆ ಮಾಡಿದ ಮೇಲೆ ಸಮಾಜ ಅಭಿವೃದ್ಧಿಯ ಕಡೆ ಮುಖ ಮಾಡಿತು. ಅನಕ್ಷರಸ್ಥರಾಗಿ, ಇತರರ ಮೋಸದಿಂದ ಎಲ್ಲವನ್ನು ಕಳಕೊಂಡ ಈ ಸಮಾಜ ಶಿಕ್ಷಣದ ಮಹತ್ವವನ್ನು ತಿಳಿದು ಶಿಕ್ಷಣವನ್ನು ತಮ್ಮ […]

Read More

ಬಿಲ್ಲವರ ಗುತ್ತು,  ಗುರಿಕಾರ ಮನೆತನಗಳ ಇತಿಹಾಸ

ಬಿಲ್ಲವರ ಚರಿತ್ರೆಯ ಗುತ್ತು, ಬರ್ಕೆ, ಗುರಿಕಾರ ಮನೆತನಗಳ ಕುರಿತ ಅಧ್ಯಯನವು ಕಳೆದ 2-3 ವರ್ಷಗಳಿಂದ ಮುಂಬಯಿ ’ಗುರುತು’ ಮಾಸಿಕ ಸಂಪಾದಕ, ಸಂಶೋಧಕ ಶ್ರೀ ಬಾಬು ಶಿವ ಪೂಜಾರಿಯವರ ಮಾರ್ಗದರ್ಶನದಲ್ಲಿ ನಡೆಯುತ್ತಾ ಬಂದಿದೆ. ಬಿ.ಎಂ.ರೋಹಿಣಿ, ಮುದ್ದು ಮೂಡುಬೆಳ್ಳೆ ಹಾಗೂ ರಮಾನಾಥ್ ಕೋಟೆಕಾರ್‌ರ ತಂಡ ಕ್ಷೇತ್ರಾಧ್ಯಯನ ನಡೆಸುತ್ತಾ ಬಂದಿದೆ. ಅದರಲ್ಲಿ ಒಂದು ಗುತ್ತುಮನೆ ಅಧ್ಯಯನದ ಮಾದರಿ ಇಲ್ಲಿದೆ: ಸಾಂತ್ಯ ಗುತ್ತು ಸಾಂತ್ಯ ಬಂಟ್ವಾಳ ತಾಲೂಕಿನಲ್ಲಿದೆ. ಬಿ.ಸಿ.ರೋಡ್, ಪುತ್ತೂರು ಮಾರ್ಗದಲ್ಲಿ ಮಾಣಿ ಕಳೆದು, ಕರುವೇಲ್‌ಲ್ಲಿ ಶಾಲಾ ಬಳಿ ಉತ್ತರದ ಮಣ್ಣಿನ ರಸ್ತೆಯಲ್ಲಿ ಮುಂದುವರಿದು […]

Read More

ಯುವವಾಹಿನಿಗೆ ಅಭಿನಂದನೆಗಳು

ಯುವವಾಹಿನಿ ಸಂಘಟನೆಯು ಅಮೃತವಾಹಿನಿಯಾಗಿ ಹರಿಯುತ್ತಾ ಬಂದು ಇದೀಗ ರಜತ ಮಹೋತ್ಸವಕ್ಕೆ ಕಾಲಿರಿಸಿದ ಈ ಶುಭ ಸಮಯದಲ್ಲಿ ನನ್ನ ಮನದಾಳದ ಮಾತನ್ನು ಅಕ್ಷರ ರೂಪದಲ್ಲಿ ಬರೆಯುವಾಗ ಮನತುಂಬಿ ನಿಲ್ಲುತ್ತದೆ. ಉಕ್ಕೇರುವ ಸಂತಸದಿಂದ ಲೇಖನಿ ಒಂದು ಕ್ಷಣ ನಿಂತು ಮತ್ತೆ ಮುನ್ನಡೆಯುತ್ತಿದೆ. ಅಂದರೆ ಸಂಘಟನೆ ಒಂದು ಸಾಮಾಜಿಕ ಶಕ್ತಿ ಹೌದು. ಆದರೆ ಒಂದು ಸಂಘಟನೆ ಇಪ್ಪತ್ತೈದು ವರ್ಷದ ಯೌವನಕ್ಕೆ ಕಾಲಿರಿಸುವುದೆಂದರೆ ಅದು ಅಷ್ಟು ಸುಲಭದ ಮಾತೇನೂ ಅಲ್ಲ. ಅಷ್ಟೊಂದು ಸಾಮಾಜಿಕ ಚಿಂತನೆಯ ಮನಸ್ಸು, ನಿಷ್ಠೆ, ಒಗ್ಗಟ್ಟು, ಆತ್ಮಬಲ, ಮಾನವೀಯ ಗುಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!