Yuvavahini

ಸಿಂಚನ

ಬಿಲ್ಲವ ಮಹಿಳೆಯರು ಮತ್ತು ಸಂಘಟನೆ

ಬಹುಶಃ ಬಲು ತಡವಾಗಿ ಒಂದು ಪ್ರಶ್ನೆ ನನ್ನ ಮನದ ಮುಂದೆ ಸುಳಿದಾಡುತ್ತಿದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಾಮಾಜಿಕ ಅವಘಡಗಳಿಗೆ ಬಲಿಯಾಗುತ್ತಿರುವವರ ನಡುವೆ ಬಿಲ್ಲವ ಯುವ ಸಮುದಾಯದ ಪಾಲು ಅಧಿಕ ಎನ್ನುವುದನ್ನು ನಾವು ಒಪ್ಪಬೇಕಾದ ಸತ್ಯ. ನಾನಾ ಕಾರಣದಿಂದ ಮನೆ ತೊರೆಯುವುದರಿಂದ ಹಿಡಿದು ಜೈಲು ಸೇರುವವರೆಗೆ ನಮ್ಮವರ ಪಾಲು ಹಿರಿದು ಎನ್ನಬಹುದು. ಲೋಕಕ್ಕೆ ಶಾಂತಿ ಮಂತ್ರವನ್ನು ಪ್ರತಿಪಾದಿಸಿದ ಮಾನವತೆಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುವರ್ಯರ ಆದರ್ಶದಡಿಯಲ್ಲಿ ಜನಿಸಿದ ನಮಗೆ ಅವರ ತತ್ವಾದರ್ಶಗಳೇ ಅರ್ಥವಾಗದೇ ಇರುವುದು ದುರಂತವೇ ಸರಿ. ಲೋಕಕ್ಕೆ ಶಾಂತಿ ಮಂತ್ರ […]

Read More

ಬುದ್ಧ-ಬಸವ-ನಾರಾಯಣಗುರು

(ಬ್ರಹ್ಮಶ್ರೀ ನಾರಾಯಣ ಗುರುವರ್ಯರ 162ನೇ ಜಯಂತಿಯ ಸಂದರ್ಭದಲ್ಲಿ ಸಕಾಲಿಕವಾಗಿ ಈ ಲೇಖನ) ಮನುಕುಲದ ಉದ್ಧಾರಕ್ಕಾಗಿ ಜಗತ್ತಿನಲ್ಲಿ ಅನೇಕ ಸಂತರು, ಮಹಾಂತರು, ಶರಣರು, ದಾರ್ಶನಿಕರು, ತತ್ವಜ್ಞಾನಿಗಳು ಅವತರಿಸಿ ತಮ್ಮ ತಪಸ್ಸು, ಚಿಂತನೆ, ಸಾಧನೆಗಳ ಪ್ರಭಾವದಿಂದ ಜನರಲ್ಲಿ ಜಡ್ಡುಗಟ್ಟಿದ್ದ ಮೂಢನಂಬಿಕೆಗಳನ್ನು ನಿವಾರಣೆ ಮಾಡಿದರು. ವೇದ ಉಪನಿಷತ್ತುಗಳ ತವರೂರಾದ ನಮ್ಮ ಭಾರತ ದೇಶದಲ್ಲಿಯೂ ಬುದ್ಧ, ಶಂಕರ, ಚೈತನ್ಯ, ಮಾಧವ, ರಾಮಾನುಜ, ಜಿನ, ಬಸವಣ್ಣ ಮೊದಲಾದ ಮತ ಸ್ಥಾಪಕರೂ ನಾಮದೇವ, ಜ್ಞಾನದೇವ, ತುಕಾರಾಮ, ಕಬೀರ, ಪುರಂದರದಾಸ, ಕನಕದಾಸ ಮೊದಲಾದ ಸಾಧುಸಂತರೂ ಅವರವರ ಕಾಲದಲ್ಲಿ […]

Read More

ಏಷ್ಯನ್ ಪವರ್‌ಲಿಫ್ಟಿಂಗ್‌ನ 2016 ರ  ಚಾಂಪಿಯನ್‌ಶಿಪ್ ಸ್ಪರ್ಧೆಯ ಪದಕ ವಿಜೇತೆ ಕು| ಸುಪ್ರೀತಾ ಪೂಜಾರಿ

ಸಾಧಕಿ ಸಾಧಿಸುವ ಛಲ, ನಿರಂತರ ಪರಿಶ್ರಮ, ನಿರ್ದಿಷ್ಟ ಗುರಿ, ಆತ್ಮ ವಿಶ್ವಾಸದೊಂದಿಗೆ ಏನನ್ನಾದರೂ ಸಾಧಿಸಬಹುದೆನ್ನುವುದಕ್ಕೆ ಬಿಲ್ಲವ ಕುವರಿ ಸುಪ್ರೀತಾ ಪೂಜಾರಿ ಒಂದು ನಿದರ್ಶನ. ಪವರ್ ಲಿಫ್ಟಿಂಗ್‌ನಂತಹ ಕಠಿಣ ತರಬೇತಿ ಬೇಡುವ ಕ್ರೀಡೆಯಲ್ಲಿ ಸಾಧನೆಯ ಹಾದಿಯಲ್ಲಿದ್ದಾರೆ ನಮ್ಮ ಹೆಮ್ಮೆಯ ಸುಪ್ರೀತಾ ಪೂಜಾರಿ. ಒಂದೆಡೆ ಚಿಕ್ಕಂದಿನಿಂದಲೇ ಅಂಟಿಕೊಂಡು ಬಂದ ಬಡತನ, ಇನ್ನೊಂದೆಡೆ ಕ್ರೀಡೆಯ ಬಗ್ಗೆ ಆಸಕ್ತಿ, ಇವೆರಡನ್ನೂ ಜೊತೆ ಜೊತೆಯಾಗಿಯೇ ಅನುಭವಿಸಿ ಕೊನೆಗೂ ತಾನು ಅಂದುಕೊಂಡಿದ್ದನ್ನು ಸಾಧಿಸುವ ಹಾದಿಯಲ್ಲಿದ್ದಾರೆ ಈ ನಮ್ಮ ವಿಶಿಷ್ಟ ಸಾಧಕಿ. ಚಿಕ್ಕಂದಿನಲ್ಲೇ ತಂದೆಯನ್ನು ಕಳೆದುಕೊಂಡು ತಾಯಿಯ […]

Read More

ಹೊಸ ತಲೆಮಾರಿನ ಸವಾಲು, ಸಾಮರ್ಥ್ಯ

ದಿಕ್ಸೂಚಿ ಇತ್ತೀಚೆಗೆ ಪತ್ರಿಕೆಯಲ್ಲಿ ಒಂದು ಲೇಖನ ಪ್ರಕಟವಾಗಿತ್ತು. ಅದರಲ್ಲಿ ಕಾಣಿಸಲಾದ ತಲೆಮಾರುಗಳ ಅಂತರ ವಿಶ್ಲೇಷಣೆ: ’ಹಿಂದೆ ಮೂವತ್ತು ವರ್ಷಗಳ ಕಾಲಾವಧಿಯಲ್ಲಿ ತಲೆಮಾರುಗಳ ಭಿನ್ನತೆ-ವ್ಯತ್ಯಾಸ. ಆದರೆ ಈಗ? ಕೇವಲ ಒಂದು ವರ್ಷದ ಅಂತರದವರೊಳಗೂ ಜನರೇಶನ್ ಗ್ಯಾಪ್-ತಲೆಮಾರು ಅಂತರದ ಮಿಂಚು ಕಾಣಿಸುತ್ತಿದೆ ಎಂಬ ವಿಚಾರ. ಇದು ವಾಸ್ತವವೇ, ಅಸ್ವಾಭಾವಿಕವೇ ಎನ್ನುವುದು ತರ್ಕದ ಪ್ರಶ್ನೆ. ಇಂದಿನ ತಲೆಮಾರಿಗೂ ಹಿಂದಿನ ತಲೆಮಾರಿಗೂ ಸವಾಲುಗಳೇನು, ಇಂದಿನ ಸಾಮರ್ಥ್ಯಗಳೇನು? ನಮ್ಮ ಒಟ್ಟು ಬದುಕೇ ಆಧುನಿಕತೆಯ ಸ್ಥಿತ್ಯಂತರದೊಂದಿಗೆ ಸಾಗಿದೆ. ಬದುಕು ಸದಾ ಚಲಿಸುತ್ತಿರುವುದು ಸಹಜ ಪ್ರಕ್ರಿಯೆ. ಆದರೆ […]

Read More

ಸುಖದ ಪ್ರಸವ – ನಮ್ಮ ಪ್ರವಾಸ

ಪ್ರವಾಸಾನುಭವ ’ದೇಶ ಸುತ್ತಿ ನೋಡು, ಕೋಶ ಓದಿ ನೋಡು ಎಂಬ ತತ್ವವನ್ನಿರಿಸಿಕೊಂಡು ಹಲವು ಚಿಕ್ಕ-ದೊಡ್ಡ ಪ್ರವಾಸಗಳನ್ನು ಏರ್ಪಡಿಸುತ್ತ ಬಂದಿರುವ ಯುವವಾಹಿನಿ ಮಂಗಳೂರು ಘಟಕವು ಈ ಬಾರಿ ದಕ್ಷಿಣ ಭಾರತ ಪ್ರವಾಸವನ್ನು ಏರ್ಪಡಿಸಿತ್ತು. 2014 ರಲ್ಲಿ ಉತ್ತರ ಭಾರತ ಮತ್ತು ನೇಪಾಳದ 10 ದಿನಗಳ ಪ್ರವಾಸದಲ್ಲಿ ಭಾಗಿಯಾಗಿದ್ದ ನಾನು 2015 ರ ಉತ್ತರ ಭಾರತ ಪ್ರವಾಸ (ವಾರಣಾಸಿ, ಹೃಷಿಕೇಶ, ಹರಿದ್ವಾರ, ವೈಷ್ಣೋದೇವಿ, ದೆಹಲಿ, ಅಮೃತಸರ್, ವಾಘಾ ಬೋರ್ಡರ್ ಇತ್ಯಾದಿ ಸ್ಥಳಗಳಿಗೆ)ಕ್ಕೆ ಹೋಗಲಾಗಲಿಲ್ಲ. ಈ ಬಾರಿ ದಕ್ಷಿಣ ಭಾರತದ ತಮಿಳುನಾಡು ಮತ್ತು ಕೇರಳದ ಆಯ್ದ […]

Read More

ಚಿಂತನ

ಚಿಂತನ ಗುಣವತಿ ರಮೇಶ್, ಸುರತ್ಕಲ್ ಶ್ರೇಷ್ಠವಾದ ಮಾನವ ಜನ್ಮವನ್ನು ಪಡೆದಿರುವ ಎಲ್ಲರೂ ತಮ್ಮ ಜೀವನ ಸುಖಮಯವಾಗಿರಬೇಕೆಂದು ಹರಸಾಹಸ ಮಾಡುತ್ತಾರೆ. ಎಲ್ಲರೂ ಮಾಡುವುದು ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ ಎಂಬ ಗಾದೆ ಮಾತಿತ್ತು. ಆದರೆ ಇಂದು ಹುಟ್ಟು ಸಾವಿನ ನಡುವಿನ ಜೀವನದ ಸುಖಕ್ಕಾಗಿ ಪ್ರಪಂಚದಾದ್ಯಂತ ಎಂತೆಂತಹ ಘನಕಾರ್‍ಯಗಳು ನಡೆಯುತ್ತವೆ ಎಂದು ಆಲೋಚಿಸಿದರೆ ಅಬ್ಬಾ ಎಂಥಾ ಕಾಲವಪ್ಪ, ಎಂದೆನಿಸುತ್ತದೆ. ಆದರೆ ನಮ್ಮ ಪೂರ್ವಿಕರು ಹೊಲ, ಗದ್ದೆ, ಗುಡ್ಡ, ತೋಟ ಹೀಗೆ ಬೆವರು ಸುರಿಸಿ ದುಡಿದು, ಇದ್ದದ್ದನ್ನು ತುಂಬು ಕುಟುಂಬದಲ್ಲಿದ್ದ ಎಲ್ಲರೂ ಹಂಚಿಕೊಂಡರು […]

Read More

ಜಾತಿ-ಮತ-ಧರ್ಮದಿಂದಾಚೆ…

ವೈಚಾರಿಕ – ಅಮಿತಾಂಜಲಿ ಕೆ., ಉಡುಪಿ ಬಾಲ್ಯವೆಲ್ಲಾ ಕ್ರಿಶ್ಚಿಯನ್ ಒಡನಾಡಿಗಳೊಂದಿಗೇ ಆಡಿ ಬೆಳೆದವಳು ನಾನು. ಮುಸ್ಲಿಂ ಬಾಂಧವರ ಜೊತೆ ಬಾಂಧವ್ಯದ ಸುಖವನ್ನು ಕಂಡವಳು ನಾನು. ಅಪ್ಪ ಸ್ವಂತ ಮನೆ ಕಟ್ಟುವವರೆಗೂ ಕ್ರಿಶ್ಚಿಯನ್ನರ ಒಕ್ಕಲು ಮನೆಗಳಲ್ಲೇ ಬಾಡಿಗೆಗಿದ್ದೆವು. ಅಜ್ಜಿ ಮನೆಗೆ ಹೋದಾಗಲೆಲ್ಲ ಅಜ್ಜಿಯ ಒಡಹುಟ್ಟಿದಂತಿದ್ದ ನೆರೆಮನೆಯ ನಮ್ಮ ’ಸಣ್ಣಜ್ಜಿ’ ಜಾಕಿಯಾಬಿ ನಮ್ಮ ಮೇಲೆ ಪ್ರೀತಿಯ ಮಳೆಯನ್ನೇ ಹರಿಸುತ್ತಿದ್ದರು. ಯಾವತ್ತೂ ಅವರಲ್ಲಿ ಯಾರೂ ನಮ್ಮನ್ನು ಹಿಂದೂಗಳೆಂದು ಹಂಗಿಸಿದ್ದಿಲ್ಲ. ಅವರು ಬೇರೆ ಧರ್ಮೀಯರೆಂಬ ಕಾರಣಕ್ಕೆ ನಾವವರನ್ನು ದ್ವೇಷಿಸಿದ್ದಿಲ್ಲ. ಆತ್ಮೀಯ ಬಾಂಧವ್ಯ ನಮ್ಮೊಳಗಿತ್ತು. […]

Read More

ವಿಜ್ಞಾನ ಯುಗದ ಅಜ್ಞಾನಿಗಳು

ಆಶಯ ಕೆ. ರಾಜೀವ ಪೂಜಾರಿ ಈ ಸೃಷ್ಟಿಯ ಸೌಂದರ್ಯವೇ ಬದುಕಿನ ಆಂತರ್ಯ. ತೇಲುವ ಮೋಡಗಳಲ್ಲಿ, ಹರಿಯುವ ನದಿಯ ಜಲದಲ್ಲಿ. ಹಸುರಿನ ಸಿರಿಯಲ್ಲಿ, ಹೂಗಳ ವರ್ಣದಲ್ಲಿ…ಮಂದಹಾಸದಲ್ಲಿರುವುದು ಅನಂತ ಚೈತನ್ಯದ ಒಂದು ರೂಪವೇ ಎನ್ನುವುದು ಸನಾತನೀಯ ಸಚ್ಚಿಂತನೆ. ನಮ್ಮದು ಸನಾತನ ಚಿಂತನೆಯನ್ನು ಗೌರವಿಸುವ ದೇಶ. ಮಾನವೀಯ ಮೌಲ್ಯಗಳನ್ನು ಮಾನ್ಯ ಮಾಡುವ ಮಹನೀಯರುಗಳು ಈಗಲೂ ಈ ನೆಲದಲ್ಲಿರುವರು. ಇಲ್ಲಿನ ಮಣ್ಣಿನ ಗುಣವೇ ದೈವಿಕ ಭಾವದಿಂದ ಕೂಡಿರುವುದು. ಅನೇಕ ಸಂತ ಮಹಂತರುಗಳು ಈ ನೆಲದಲ್ಲಿ ಬಾಳಿ ಹೋಗಿದ್ದಾರೆ. ಅವರ ನುಡಿಗಳು ಮನುಕುಲಕ್ಕೆ ದಾರಿದೀಪಗಳಾಗಿವೆ. […]

Read More

ಬಾಳಬೆಳಕು

ಪಾರೂ ಮೌನವಾಗಿ ಮನೆಕೆಲಸ ಮಾಡುತ್ತಿದ್ದಳು. ಕೈಗಳು ಯಾಂತ್ರಿಕವಾಗಿ ಕೆಲಸ ಮಾಡುತ್ತಿದ್ದರೂ ಮನಸ್ಸಿನಲ್ಲಿ ನೂರೆಂಟು ಆಲೋಚನೆಗಳು. ’ದೇವರೇ ಏನು ಮಾಡಲಿ? ಯಾರನ್ನು ಕೇಳಲಿ…? ಈ ಮನೆಯೊಡತಿ ಊಟ, ತಿಂಡಿ, ಬಟ್ಟೆಬರೆ ಎಲ್ಲಾ ಕೊಟ್ಟೂ ಕೈ ತುಂಬಾ ಸಂಬಳ ನೀಡುತ್ತಿದ್ದುದರಿಂದ ಇಷ್ಟರವರೆಗೂ ತಾನು ಸುಖಿ. ಮನೆಯ ಯಜಮಾನಿ ಮಂಜುಳಾ ತನ್ನ ಕೆಲಸಕ್ಕೆ ಯಾವತ್ತೂ ಸಿಡಿಗುಟ್ಟಿದವರಲ್ಲ. ತಾನೂ ಅಷ್ಟೇ ಇಷ್ಟರವರೆಗೂ ಪ್ರಾಮಾಣಿಕವಾಗಿಯೇ ಕೆಲಸ ಮಾಡಿದವಳು. ಅಪರೂಪಕ್ಕೆ ರಜೆ ಮಾಡಿದಾಗ ಮಾತ್ರ ಸಿಟ್ಟಾಗುತ್ತಿದ್ದರೇ ವಿನಾಃ ಯಾವತ್ತೂ ತನ್ನ ಕೆಲಸದ ಮೇಲೆ ಕೋಪಿಸಿಕೊಂಡವರಲ್ಲ. ಆದರೂ […]

Read More

ಸಮಾಜದ ಶಕ್ತಿಯಾಗಿ ಯುವಜನತೆ -ಬಿ ತಮ್ಮಯ

ಮಾನವ ಜೀವನವನ್ನು ನಾಲ್ಕು ಭಾಗಗಳನ್ನಾಗಿ ನಮ್ಮ ಹಿರಿಯರು ಗುರುತಿಸಿದ್ದಾರೆ. ಅದೇ ಬಾಲ್ಯ, ಯೌವ್ವನ ಮತ್ತು ಗೃಹಸ್ಥಾಶ್ರಮ – ಆಯಾಯ ವಯಸ್ಸಿನಲ್ಲಿ ಮಾನವ ಮಾಡಬೇಕಾದ ಕೆಲಸವನ್ನು ಹೇಳಿದ್ದಾರೆ. ಬಾಲ್ಯದಲ್ಲಿ ಬ್ರಹ್ಮಚರ್ಯ, ಶಿಕ್ಷಣ, ಸಂಸ್ಕೃತಿ, ನಯ-ವಿನಯ ಮತ್ತು ಯಾವುದಾದರು ಒಂದು ವಿಚಾರದಲ್ಲಿ ಕುಶಲತೆ ಇರಲೇಬೇಕು. ಆಗ ಯೌವ್ವನ ಯಶಸ್ವಿಯಾಗುತ್ತದೆ. ಯೌವ್ವನದಲ್ಲಿ ಆತನು ಕಲಿತ ವಿದ್ಯೆಯಿಂದ ಕುಶಲತೆ ಹೊಂದಿರುವ ಒಂದು ಉದ್ಯೋಗ ಹೊಂದಿ ಗೃಹಸ್ಥಾಶ್ರಮ ಪಡೆದು, ಕುಟುಂಬದ ಹೊರೆಯನ್ನು ಹೊರಬೇಕಾಗಿದೆ. ಬಾಲ್ಯದ ಶಿಕ್ಷಣದ ತಯಾರಿ ಯೌವ್ವನದ ಕೆಲಸಕ್ಕೆ ಅನುಕೂಲ ಮಾಡಿ ಕೊಡುತ್ತದೆ. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!