Yuvavahini

ಸಿಂಚನ

ಗ್ರಾಮೀಣ ಸಂಸ್ಕೃತಿ ಮತ್ತು ಆಧುನಿಕತೆ

ಆಧುನಿಕತೆಯನ್ನು ನಾವು ಪರಿಭಾವಿಸುವ ಬಗೆಯೇ ಸಂಕೀರ್ಣವಾದುದು. ಆಧುನಿಕತೆ ಎಂದರೇನು ಎಂಬುದನ್ನು ವ್ಯಾಖ್ಯಾನದ ಚೌಕಟ್ಟಿನ ಒಳಗೆ ತರುವ ಪ್ರಯತ್ನ ಚಿಂತಕ ವಲಯದಲ್ಲಿ ಸಾಕಷ್ಟು ನಡೆದಿವೆ. ಸರಳವಾಗಿ ನಾವು ’ಆಧುನಿಕತೆ’ ಎಂಬ ಪರಿಕಲ್ಪನೆಯನ್ನು ಗ್ರಹಿಸುವಾಗ ವರ್ತಮಾನದಲ್ಲಿ ನಡೆಯುತ್ತಿರುವ ಸ್ಥಿತ್ಯಂತರಗಳು, ಪಲ್ಲಟಗಳು ನಮ್ಮ ಅರಿವಿಗೆ ಬರುತ್ತವೆ. ಆದರೆ ವಿಶಾಲವಾದ ಅರ್ಥದಲ್ಲಿ ’ಆಧುನಿಕತೆ’ ಎಂಬುದು ಎಲ್ಲಾ ಕಾಲಕ್ಕೂ ಸಂಬಂಧಿಸಿದ್ದು. ಕಲ್ಲಿನಿಂದ ಬೆಂಕಿಯ ಸೃಷ್ಠಿಯ ಸಾಧ್ಯತೆಯನ್ನು ಗುರುತಿಸಿದ್ದೂ ಒಂದು ಕಾಲದ ಆಧುನಿಕತೆಯಾಗಿದೆ. ಚಕ್ರದ ಸೃಷ್ಟಿಯಂತೂ ಆಧುನಿಕತೆಯ ಮೂಲ ಬೇರು. ಜೈವಿಕ ವಿಕಾಸದ ಜೊತೆಗೆ ಬೌದ್ಧಿಕ […]

Read More

ಮಾನವ ಹಕ್ಕುಗಳ ರಕ್ಷಣಾ ಕಾನೂನು-1993

ಕಾನೂನು ಮಾಹಿತಿ ಮಾನವ ಹಕ್ಕುಗಳ ರಕ್ಷಣಾ ಕಾನೂನು – 1993 (Protection of Human Rights Act) 1994 ರಲ್ಲಿ ಜಾರಿಗೆ ಬಂತು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗ ಅನುಷ್ಠಾನಕ್ಕೆ ಬಂದು ಮಾನವ ಹಕ್ಕುಗಳ ರಕ್ಷಣೆ ಹೊಣೆ ಹೊತ್ತು ಕೊಂಡಿತು. ಮಾನವ ಹಕ್ಕುಗಳು (Human Rights) ಒಬ್ಬ ಪ್ರಜೆಗೆ ಸಂವಿಧಾನದಲ್ಲಿ ಕೊಡ ಮಾಡಲ್ಪಟ್ಟ ಬದುಕುವ ಹಕ್ಕು, ಸ್ವಾತಂತ್ರ್ಯದ ಹಕ್ಕು, ಸಮಾನತೆಯ ಹಕ್ಕು ಹಾಗೂ ಘನತೆಯ ಹಕ್ಕು ಇದಕ್ಕೆ ಮಾನವ ಹಕ್ಕು ಎನ್ನುತ್ತಾರೆ. […]

Read More

ಸಂಸ್ಕಾರಗಳ ಮಹತ್ವ

ಚಿಂತನ ಈ ವಿಶಾಲ ಜಗತ್ತು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹವಾಗುಣ, ಪ್ರಾಕೃತಿಕ ಲಕ್ಷಣ, ಮಣ್ಣಿನ ಗುಣ ಹೊಂದಿದೆ. ಹಾಗೆಯೇ ಈ ಜಗತ್ತಿನ ಸೃಷ್ಟಿಯಲ್ಲಿ ಮಾನವನ ಸೃಷ್ಟಿಯು ಅತ್ಯಂತ ಶ್ರೇಷ್ಟವಾದುದು. ಮಾನವ ಕುಲದ ವಿಕಾಸವಾದಂತೆ ಕಾಲಕ್ರಮೇಣ ನಾಗರಿಕತೆ ಬೆಳೆಯಿತು. ಮಾನವ ಅನ್ಯನ್ಯ ಕಾರಣಗಳಿಗಾಗಿ ತಂಡ ತಂಡವಾಗಿ ಬದುಕಲು ಆರಂಭಿಸಿದ. ವಿಭಿನ್ನ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಜಗತ್ತಿನಲ್ಲಿ ಮಾನವರು ಅವರವರು ಬದುಕುವ ನೆಲ ಜಲದ ಗುಣಗಳಿಗೆ ಅನುಗುಣವಾಗಿ ಬದುಕಬೇಕಾಯಿತು. ಇದರಿಂದ ವಿಭಿನ್ನ ಜೀವನ ರೀತಿ ಬೆಳೆಯಿತು. ಒಂದು […]

Read More

ಅವಳಿ ಪ್ರಶಸ್ತಿಗಳ ಅಪೂರ್ವ ಸಾಧಕಿ ಶ್ರೀಮತಿ ಪ್ರಮೀಳಾ ದೀಪಕ್

ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ದ.ಕ.ಜಿಲ್ಲೆಯ ಪ್ರಪ್ರಥಮ ಮಹಿಳೆ ಹಾಗೂ ಬಸವ ರತ್ನ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಗೊಂಡ ಪ್ರಮೀಳಾ ಮೂಲತಃ ಬಂಟ್ವಾಳ ತಾಲೂಕು, ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲ್ ಕಾಪಿಕಾಡ್ ಕೃಷ್ಣಪ್ಪ ಪೂಜಾರಿ ಹಾಗೂ ದೇವಕಿ ಕೃಷ್ಣಪ್ಪ ಪೂಜಾರಿಯವರ ಸುಪುತ್ರಿ . ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಗಾದೆಗೆ ಒಪ್ಪುವ ವ್ಯಕ್ತಿತ್ವದ ಅಗಾಧ ಸಾಹಿತ್ಯ ಪ್ರತಿಭೆಯ ಪ್ರಮೀಳಾ ಎಳವೆಯಲ್ಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿದವರು. ಯುವ ಸಾಹಿತಿಯಾಗಿ ಬಿಡುಗಡೆಗೊಂಡ ಇವರ ಚೊಚ್ಚಲ ಕೃತಿ ’ಸುಪ್ತ’ […]

Read More

ತುಳುನಾಡಿನ ಸಾಂಸ್ಕೃತಿಕ ಸಮುಚ್ಚಯ ಕೋಟಿ-ಚೆನ್ನಯ ಥೀಂ ಪಾರ್ಕ್

ತುಳುನಾಡಿನ ಸಾಂಸ್ಕೃತಿಕ ಚರಿತ್ರೆಯಲ್ಲಿ ಕೋಟಿ- ಚೆನ್ನಯರ ಹೆಸರು ಅಮರವಾದುದು. ವ್ಯಕ್ತಿ ಸ್ವಾತಂತ್ರ್ಯ ಮತ್ತು ಸ್ವಾಭಿಮಾನಕ್ಕಾಗಿ ಹೋರಾಡಿದ ಅವರು ಇಂದು ಪೂಜ್ಯನೀಯರಾಗಿದ್ದಾರೆ. ಅವರ ನೆನಪನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಸುವ ಯತ್ನವಾಗಿ ಕೋಟಿ-ಚೆನ್ನಯ ಥೀಂ ಪಾರ್ಕನ್ನು ನಿರ್ಮಿಸಲಾಗಿದೆ. ಕೋಟಿ- ಚೆನ್ನಯರ ಸಂಕ್ಷಿಪ್ತ ಬದುಕು ಮತ್ತು ಸಾಧನೆಗಳನ್ನು ಹೀಗೆ ಸಂಗ್ರಹಿಸಬಹುದು. ಸುಮಾರು 450 ವರ್ಷಗಳ ಹಿಂದೆ ಪುತ್ತೂರು ತಾಲೂಕಿನ ಪಡುಮಲೆಯಲ್ಲಿ ಪವಿತ್ರವಾದ ದೇಯಿಬೈದೆತಿಯ ಗರ್ಭದಲ್ಲಿ ಜನ್ಮ ತಳೆದ ಕೋಟಿ- ಚೆನ್ನಯರು ಎಳೆಯ ಪ್ರಾಯದಲ್ಲೇ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ತಾವು ಕೂಡಾ ಬಲಿಷ್ಠರಾಗಬೇಕು ಎನ್ನುವಂತಹ […]

Read More

ಗರಡಿ-ಇತಿಹಾಸ-ಪರಂಪರೆ

ಪೀಠಿಕೆ: ನಾಗರೀಕತೆ ಬೆಳೆಯುವಲ್ಲಿ ಭೌಗೋಳಿಕ, ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಅಂಶಗಳ ಪಾತ್ರ ಗಮನೀಯ. ಅದರಲ್ಲೂ ರಾಜಕೀಯ ಅಂಶ ಅತೀ ಪ್ರಧಾನವಾದುದು. ಏಕೆಂದರೆ ಉಳಿದೆಲ್ಲವುಗಳು ಭದ್ರವಾದ ರಾಜಕೀಯ ರಕ್ಷಣೆಯ ತಳಹದಿಯ ಮೇಲೆಯೇ ಬೆಳೆಯತಕ್ಕಂತವುಗಳು. ಆದುದರಿಂದಲೇ ಪ್ರಾದೇಶಿಕ ಮಟ್ಟದಿಂದ ರಾಜ್ಯ ಸಾಮ್ರಾಜ್ಯದ ಮಟ್ಟದವರೆಗೆ ರಕ್ಷಣಾ ಕಲೆಗೆ ಮನುಷ್ಯ ವಿಶೇಷ ಆದ್ಯತೆ ನೀಡುತ್ತಾ ಬಂದಿರುವುದು. ಮನುಷ್ಯನನ್ನು ಶೂನ್ಯದಿಂದ ಅಸಾಮಾನ್ಯಗೊಳಿಸುವ ಸಾಧನಗಳೇ ಕಲೆಗಳು ಎನ್ನಬಹುದು. ರಕ್ಷಣಾ ಕಲೆ ಇವುಗಳಲ್ಲೊಂದು. ರಾಜ್ಯ ರಾಷ್ಟ್ರದ ಕಲ್ಪನೆಗಳಿಲ್ಲದ ಆ ದಿನಗಳಲ್ಲಿಯೇ ಮಾನವ ತನ್ನ ಜನರ ಮಾನ- […]

Read More

ಶಿಶು ಆರೋಗ್ಯ ಮತ್ತು ಸಮಾಜ

ಅಧ್ಯಯನ ಪೀಠಿಕೆ: ಯಾವುದೆ ದೇಶದ ಸಂಪತ್ತು ನಿಷ್ಕರ್ಷೆಯಾಗುವುದು ಎರಡು ಮೂಲಗಳಿಂದ- ಒಂದು ಅಲ್ಲಿನ ನೈಸರ್ಗಿಕ ಸಂಪತ್ತಿನಿಂದ, ಎರಡು, ಆ ದೇಶದ ಮಾನವ ಸಂಪತ್ತಿನಿಂದ. ಮಾನವ ಸಂಪತ್ತು ಇತರೆಲ್ಲಾ ಸಂಪತ್ತಿಗಿಂತ ಶ್ರೇಷ್ಟವಾದುದು. ಆದರೆ, ಮಾನವ ಸಂಪತ್ತಿನ ಅಸಮರ್ಪಕ ಬೆಳವಣಿಗೆ ಇಡೀ ವ್ಯವಸ್ಥೆಯ ಮೇಲೆ ಎರಡೂ ನಿಟ್ಟಿನಲ್ಲಿ ಅಂದರೆ, ಗುಣಾತ್ಮಕವಾಗಿಯೂ, ಪರಿಮಾಣಾತ್ಮಕವಾಗಿಯೂ ಪ್ರಭಾವ ಬೀರುವುದು. ಆಹಾರ, ನೀರು, ಬಟ್ಟೆ, ನೆಲ, ವಸತಿ ಹಾಗೂ ಖನಿಜಗಳ ಕೊರತೆ ಉಂಟಾಗುವುದಲ್ಲದೆ, ಶಿಕ್ಷಣ, ಆರೋಗ್ಯ, ಹಾಗೂ ಸಂಪನ್ಮೂಲಗಳ ಮೇಲೆ ಪರಿಣಾಮ, ಅಲ್ಲದೆ ನಿರುದ್ಯೋಗ, ಬಡತನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!