Yuvavahini

ಸಿಂಚನ

ಪುಸ್ತಕ ನಮ್ಮ ಜೀವನಕ್ಕೆ ಬೆಳಕು ಕೊಡುವಂತಹದು : ಹರಿಶ್ಚಂದ್ರ ಪಿ. ಸಾಲ್ಯಾನ್

ಮುಲ್ಕಿ : ಓದಿನಲ್ಲಿ ಸಿಗುವ ಆನಂದ ಅನುಭವ, ಒಳ್ಳೆಯ ವಿಚಾರ ಬೇರೆ ಯಾವ ತಂತ್ರಾಂಶದಿಂದ ಸಿಗಲು ಸಾಧ್ಯವಿಲ್ಲ. ಪುಸ್ತಕ ನಮ್ಮ ಜೀವನಕ್ಕೆ ಬೆಳಕು ಕೊಡುವಂತಹದು, ಈ ನಿಟ್ಟಿನಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ಪತ್ರಿಕೆಯ ಸಾಧನೆ ಗಮನಾರ್ಹವಾದುದು ಎಂದು ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕರಾದ ಹರಿಶ್ಚಂದ್ರ ಪಿ. ಸಾಲ್ಯಾನ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 14.11.2018 ರಂದು ಮುಲ್ಕಿ ಸಿ. ಎಸ್. ಐ ಬಾಲಿಕಾಶ್ರಮದಲ್ಲಿ ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ನಡೆದ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ […]

Read More

ತಮ್ಮಯರ ಸಾಧನೆ ಅನುಕರಣೀಯ-ಡಾ.ಏರ್ಯ

ಮಂಗಳೂರು : ಹಿರಿಯ ಸಾಹಿತಿ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ಸನ್ಮಾನಿಸಿ ಮಾತನಾಡಿ, ಬಿ.ತಮ್ಮಯ ಅವರು ಸಾಹಿತಿ, ಸಂಘಟಕರರಾಗಿ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ಜತೆಯಲ್ಲಿ ಅವರು ಅಪ್ಪಟ ಮಾನವತಾವಾದಿಯಾಗಿ ಪ್ರೀತಿ, ಭಾಂದವ್ಯದ ಸಮಾಜ ಕಟ್ಟುವಲ್ಲಿಯೂ ಶ್ರಮಿಸಿದವರು. ಈ ಇಳಿವಯಸ್ಸಿನಲ್ಲೂ ಸಾಹಿತ್ಯ, ಸಂಸ್ಕೃತಿ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಸೇವೆ ಅನುಕರಣೀಯವಾದುದು ಎಂದರು. ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ವತಿಯಿಂದ ತುಳು ವಿದ್ವಾಂಸರು, ಸಂಶೋಧಕರು, ಸಾಹಿತಿಗಳು, ಕಲಾವಿದರು, ಸಂಘಟಕರನ್ನು ಗುರುತಿಸಿ “ಚಾವಡಿ ತಮ್ಮನ” ಮಾಡಿ ಗೌರವಿಸುವ […]

Read More

ಯುವಸಿಂಚನ : ಸೆಪ್ಟೆಂಬರ್ ಸಂಚಿಕೆ ಬಿಡುಗಡೆ

ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಸೆಪ್ಟೆಂಬರ್ ಮಾಸಿಕ‌ ಪತ್ರಿಕೆಯನ್ನು ದಿನಾಂಕ 15.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ‌ನಡೆದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕ ಜಯಂತ್ ನಡುಬೈಲು, ಸಂಪಾದಕ ರಾಜೇಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಜಿತೇಂದ್ರ ಜೆ.ಸುವರ್ಣ. ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ.ಸಿ.ಕರ್ಕೇರ, […]

Read More

ಸಂಪಾದಕರ ಮಾತು : ರಾಜೇಶ್ ಸುವರ್ಣ

ಪ್ರಧಾನ ಕಾರ್ಯದರ್ಶಿ ಹುದ್ದೆ ನಿರ್ವಹಣೆಯ ಸಂತೃಪ್ತಿಯೊಂದಿಗೆ ಸ್ವಲ್ಪ ವಿಶ್ರಾಂತಿ ಪಡೆಯೋಣ ಅಂದುಕೊಂಡಿದ್ದೆ. ಆದರೆ ಎಲ್ಲರ ಒತ್ತಾಸೆ ಮತ್ತೊಂದು ಬಹುದೊಡ್ಡ ಜವಬ್ದಾರಿ ಹೆಗಲೇರಿದೆ. ಒತ್ತಡದ ವೃತ್ತಿ ಬದುಕಿನ ನಡುವೆ ಈ ಕೆಲಸ ತುಸು ಕಷ್ಟ ಅನಿಸಿದರೂ ಇದರಲ್ಲೊಂದು ಸಂತೃಪ್ತಿ ಇದೆ. ಬಿಟ್ಟರೂ ಬಿಡದಿ ಮಾಯೆ ಎಂಬಂತೆ ಮತ್ತೆ ಮತ್ತೆ ನಿಮ್ಮ ಜೊತೆ ನನ್ನ ನಿರಂತರ ಸಂಪರ್ಕಕ್ಕೆ ಸಿಕ್ಕ ಅವಕಾಶ ಅಂದುಕೊಂಡಿದ್ದೇನೆ. ಪ್ರಧಾನ ಕಾರ್ಯದರ್ಶಿ ಆಗಿದ್ದ ಸಮಯದಲ್ಲಿ ನನ್ನೆಲ್ಲ ಘಟಕಗಳೂ ಮತ್ತು ಸದಸ್ಯರ ಜೊತೆ ನಿಕಟ ಸಂಪರ್ಕ ಹೊಂದಿದ್ದೆ, ಹುದ್ದೆ […]

Read More

ಗೌರವ ಸಂಪಾದಕರ ಮಾತು : ಜಯಂತ ನಡುಬೈಲು

ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ವರುಣನ ಅವಕೃಪೆಯಿಂದ ತತ್ತರಿಸಿದ ಕೊಡಗಿನಲ್ಲಿ, ಬಡವ, ಶ್ರೀಮಂತ, ಕೆಳಜಾತಿ ಮೇಲ್ಜಾತಿ ಎಂಬ ಯಾವುದೇ ಭೇದವನ್ನೂ ತೋರದೆ ನೆರೆ ಎಲ್ಲರನ್ನೂ, ಎಲ್ಲವನ್ನೂ ತನ್ನೊಳಗೆ ಸೆಳೆದುಕೊಂಡು ತಣ್ಣನೇ ಹರಿದುಹೋಗಿದೆ. ಬಡವನ ಸೈಕಲ್‍ನಿಂದ ಹಿಡಿದು ಶ್ರೀಮಂತನ ಬೆಂಝ್ , ಆಡಿ ಕಾರುಗಳು ಕೂಡಾ ಮಣ್ಣೋಳಗೆ ಹೂತುಹೋಗಿ ಈಜಿಪ್ತಿನ ಪಿರಮಿಡ್ಡ್ ಒಳಗೆ ಹುದುಗಿರುವ ಅಸ್ಥಿಯಂತೆ ಕಂಡು ಬರುತ್ತಿದೆ. ಮನುಷ್ಯನ ಸ್ವಾರ್ಥದ ರುದ್ರನರ್ತನಕ್ಕೆ ಮುನಿದ ಪ್ರಕೃತಿ ದಯೆ ದಾಕ್ಷಿಣ್ಯವನ್ನೇ ಮರೆತು ಪಾಠ ಕಲಿಸಿದೆ. ಇಲ್ಲಿ ಎಲ್ಲರೂ ಮತ್ತೆ ಹೊಸ […]

Read More

ಸಚಿವೆ ಡಾ.ಜಯಮಾಲಾರಿಂದ ಸಿಂಚನ ವಾರ್ಷಿಕ ವಿಶೇಷಾಂಕ ಬಿಡುಗಡೆ

ಮಂಗಳೂರು : ಲೇಖನಗಳು, ಮಾಹಿತಿಗಳ ಸಂಗ್ರಹ, ಆಶಯ, ಅವಲೋಕನ, ಸಾಹಿತ್ಯ, ಸಾಂಸ್ಕೃತಿಕ, ಕಥೆ, ಕವನ ಮುಂತಾದ ವೈವಿಧ್ಯಮಯ ಬರಹಗಳನ್ನು ಒಳಗೊಂಡ ಯುವವಾಹಿನಿಯ ಮುಖವಾಣಿ 2018 ರ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಬಿಡುಗಡೆಗೊಳಿಸಿದರು. ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶದಲ್ಲಿ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ […]

Read More

ಯುವಸಿಂಚನ ಜುಲೈ ಮಾಸಿಕ ಪತ್ರಿಕೆ ಬಿಡುಗಡೆ

ಬಂಟ್ವಾಳ : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಜುಲೈ ತಿಂಗಳ ‌ಮಾಸಿಕ ಪತ್ರಿಕೆಯನ್ನು ದಿನಾಂಕ 22.07.2018 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ‌ಯುವವಾಹಿನಿ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ಭುವನೇಶ್ ಪಚ್ಚಿನಡ್ಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಸಂಪಾದಕಿ ಶುಭ ರಾಜೇಂದ್ರ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಉಪನ್ಯಾಸಕ ಸ್ಮಿತೇಶ್ […]

Read More

ಸಂಪಾದಕೀಯ ಮಂಡಳಿಯ ಸಭೆ

ಮಂಗಳೂರು : ಯುವವಾಹಿನಿ ಮುಖವಾಣಿ ಯುವಸಿಂಚನ ಪತ್ರಿಕೆಯ ಸಂಪಾದಕೀಯ ಮಂಡಳಿಯ ಸಭೆಯು ದಿನಾಂಕ 05.06.2018 ರಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಜರುಗಿತು. ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕ ಯಶವಂತ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವಸಿಂಚನ ಪತ್ರಿಕೆಯ ಜಾಹಿರಾತು ದರ ಪರಿಷ್ಕರಣೆಯ ಬಗ್ಗೆ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಅಗಸ್ಟ್ 5 ರಂದು ಯುವವಾಹಿನಿಯ ವಾರ್ಷಿಕ ಸಮಾವೇಶದಂದು ಬಿಡುಗಡೆಯಾಗಲಿರುವ ಸಿಂಚನ ವಿಶೇಷಾಂಕ ಉತ್ತಮವಾಗಿ ಮೂಡಿಬರಲು ಕೈಗೊಳ್ಳಬೇಕಾದ ಪೂರ್ವ ತಯಾರಿಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಭೆಯಲ್ಲಿ […]

Read More

ಸಂಪಾದಕರ ಮಾತು : ಶುಭಾ ರಾಜೇಂದ್ರ

ಓದುಗ ಮಿತ್ರರಿಗೆ ನಮಸ್ಕಾರಗಳು ಬರೆಯಬೇಕು ಎಂದು ಅನಿಸುತ್ತಿದೆ ಆದರೆ ಪದಗಳು ಸಿಗುತ್ತಿಲ್ಲ, ಹೇಳಬೇಕು ಅನಿಸುತ್ತಿದೆಆದರೆ ಮಾತುಗಳು ಬರುತ್ತಿಲ್ಲ, ಮೂರು ಸಂಚಿಕೆ ಹೊರಬರುವಷ್ಟರಲ್ಲಿ ನೂರಾರು ಕರೆಗಳು ಅಭಿನಂದನೆಯ ಮಹಾಪೂರಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸುತ್ತಲೇ ಸಾಗುತ್ತಿದೆ. ನಾವು ನಿವೆಲ್ಲ ಬದಲಾವಣೆ ಬಯಸುತ್ತಿದ್ದೇವೆ ಎನ್ನುವುದಕ್ಕೆ ನಿಮ್ಮ ಪ್ರತಿಕ್ರಿಯೇಗಳೇ ಸಾಕ್ಷೀ. ಹಲವಾರು ಮಂದಿ ಪತ್ರದ ಮೂಲಕ ನಮ್ಮನ್ನು ಪ್ರೋತ್ಸಾಹಿಸಿದರೆ ಇನ್ನು ನೂರಾರು ಮಂದಿ ಕರೆ ಮಾಡಿ ಯುವಸಿಂಚನವನ್ನು ಅಭಿನಂದಿಸಿದ್ದಾರೆ. ಇದು ಸಂಪಾದಕ ಮಂಡಳಿಯ ಸಾಧನೆಯಲ್ಲ ಬದಲಾಗಿ ಪ್ರತಿಯೊಂದು ಘಟಕದ, ಕೇಂದ್ರ ಸಮಿತಿಯ ಪದಾಧಿಕಾರಿಗಳ […]

Read More

ಗೌರವ ಸಂಪಾದಕರ ಮಾತು : ಯಶವಂತ ಪೂಜಾರಿ

ಬಂಧುಗಳೇ, ಒಂದು ವರುಷ ವೇಗವಾಗಿ ಉರುಳಿ ಹೋಗುತ್ತಿದೆ, ಮೊನ್ನೆ ಮೊನ್ನೆ ಅಧಿಕಾರ ಸ್ವೀಕರಿಸಿದ್ದೆ ಈಗ ಮುಂದಿನ ಸಮಾವೇಶಕ್ಕೆ ಸಿದ್ದಗೊಳ್ಳಬೇಕಾಗಿದೆ. ಸಿಕ್ಕಿದ 365 ದಿನವನ್ನು ಯುವವಾಹಿನಿಗಾಗಿ ನೀಡಬೇಕುಎನ್ನುವುದು ನನ್ನ ಆಶಯ ಈ ನೆಲೆಯಲ್ಲಿ ಯುವವಾಹಿನಿಯನ್ನು ಉಸಿರಾಗಿಸಿಕೊಂಡಿದ್ದೇನೆ. ಮಾರ್ಚ್- ಎಪ್ರಿಲ್ ತಿಂಗಳು ನನಗೆ ಅತ್ಯಂತ ಖುಷಿಯ ತಿಂಗಳು, ನನ್ನ ಅಧಿಕಾರಾವಧಿ ಯುವವಾಹಿನಿಯ 30ನೇ ವರುಷ. ಈ ನೆಲೆಯಲ್ಲಿ ಯುವವಾಹಿನಿಗೆ 30 ಘಟಕಗಳನ್ನು ಸೇರ್ಪಡೆಗೊಳಿಸಿ ಯುವವಾಹಿನಿಯನ್ನು ಬಲ ಪಡಿಸಬೇಕು ಎನ್ನುವ ಆಶಯವಿತ್ತು. ಈ ಆಸೆ ಇಂದು ಕೈಗೂಡಿದೆ. ಯುವವಾಹಿನಿಗೆ ಬಲಿಷ್ಠವಾದ 30ನೇ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!