Yuvavahini

ಕೇಂದ್ರ ಸಮಿತಿ

ಉಪ್ಪಿನಂಗಡಿಯಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶ ಸಂಪನ್ನ

ಶೈಕ್ಷಣಿಕವಾಗಿ ಮತ್ತು ಸಂಘಟನಾತ್ಮಕವಾಗಿ ಸಮುದಾಯ ಎದ್ದುನಿಂತಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಅದೇ ರೀತಿ ಮುಂದುವರಿದ ಬಿಲ್ಲವ ಸಮುದಾಯ ಈಗ ಬಲಿಷ್ಠಗೊಳ್ಳುತ್ತಿದೆ. ಆದರೆ ಕೆಲವರು ನಮ್ಮನ್ನು ತಮ್ಮ ಕೆಲಸಗಳಿಗಾಗಿ ಸೈನಿಕರನ್ನಾಗಿ ಬಳಸಿಕೊಳ್ಳುತ್ತಿದ್ದು, ಇದರಿಂದ ಕೋಮುಗಲಭೆಯಲ್ಲಿ ಶೇ. 70 ರಿಂದ 80ರಷ್ಟು ಬಿಲ್ಲವರು ಭಾಗಿಗಳಾಗುವಂತಾಗಿದೆ. ಇದರ ವಿರುದ್ಧ ಪ್ರತಿಯೋರ್ವರು ಎಚ್ಚೆತ್ತುಕೊಂಡು ಸಮುದಾಯದ ಯುವಕರು ಹಳಿ ತಪ್ಪದ್ದಂತೆ ಜಾಗೃತೆ ವಹಿಸಿಕೊಳ್ಳಬೇಕಿದೆ ಎಂದು ಐಎಫ್‍ಎಸ್ ಅಧಿಕಾರಿ ದಾಮೋದರ ಎ.ಟಿ. ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿ […]

Read More

ಯುವವಾಹಿನಿ ಸಾಧನಾಶ್ರೀ’ ಪ್ರಶಸ್ತಿ-2017 ಪುರಸ್ಕ್ರತ ಶ್ರೀ ಚಂದಯ್ಯ ಬಿ. ಕರ್ಕೇರಾ

ತಾವು ಪಟ್ಟ ಕಷ್ಟ ನಮ್ಮ ಮಕ್ಕಳಿಗೆ ಸಿಗದಿರಲಿ ಎಂದು ಆಶಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಅವರ ಜೀವನಕ್ಕಾಗಿ ಎಲ್ಲವನ್ನೂ ಧಾರೆ ಎರೆಯುವ ಹೆತ್ತವರನ್ನು ಈ ಸಮಾಜದಲ್ಲಿ ಕಂಡಿದ್ದೇವೆ, ಆದರೆ ಬಡತನದ ಬೇಹುದಿಯಲ್ಲಿ ಬೆಳೆಯುತ್ತಾ ಶಿಕ್ಷಣ ಪಡೆಯಲು ಈ ಸಮಾಜದಲ್ಲಿ ತಾನು ಕಂಡುಕೊಂಡ ಕಷ್ಟ ಇನ್ನೊಬ್ಬರಿಗೆ ಬರದಿರಲಿ ಎಂದು ಆಶಿಸಿ ಒಂದೆರಡು ವರುಷವಲ್ಲ ನಿರಂತರವಾದ ಐವತ್ತು ಸಂವತ್ಸರದಿಂದ ಎಲೆಮರೆಯ ಕಾಯಿಯಂತೆಯೇ ಉಳಿದು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಬಂದ ಅಪರೂಪದ ಸಾಧಕರ ಸಾಲಿನಲ್ಲಿ ಬರುವ ಮೇರು ವ್ಯಕ್ತಿತ್ವದ […]

Read More

ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ(ರಿ) ,ಮಂಗಳೂರು ಸಂಸ್ಥೆಗೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ -2017

ಬ್ರಹ್ಮಶ್ರೀ ನಾರಾಯಣ ಗುರುಗಳು 1909ರಲ್ಲಿ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಅಸ್ಖಲಿತ ವಾಣಿಯಿಂದ ಹರಿದು ಬಂದ ಅತುಲನೀಯವಾದ ಜ್ಞಾನಾಮೃತದಿಂದ ಪ್ರೇರಿತರಾದ ನಮ್ಮ ಸಮಾಜ ಬಾಂಧವರು 1910ರಲ್ಲಿ ಶ್ರೀ ವೆಂಕಟೇಶ ಭಜನಾ ಸಂಘವನ್ನು ಸ್ಥಾಪನೆ ಮಾಡಿದರು. ಬಳಿಕ ಶಿವಭಕ್ತಿ ಯೋಗ ಸಂಘವೆಂಬ ಸಮಾನ ಮನಸ್ಕ ಇನ್ನೊಂದು ಸಂಘವನ್ನು ಸೇರ್ಪಡೆಗೊಳಿಸಿ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ ಎಂಬ ನೂತನ ಸಂಘಟನೆ ಸ್ಥಾಪನೆಯಾಯಿತು. ಈ ಸಂಸ್ಥೆ 1926ರಲ್ಲಿ ಸರಕಾರದ ಆಗಿನ ರಿಜಿಸ್ಟ್ರೇಶನ್ ಆ್ಯಕ್ಟ್‍ನಂತೆ ಸಂಖ್ಯೆ 2/1925-26 ರಂತೆ ನೋಂದಣಿ […]

Read More

ಸಿಂಚನ ವಿಶೇಷಾಂಕ -2017 ಬಿಡುಗಡೆ

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ ಅವರು ಸಿಂಚನ ವಿಶೇಷಾಂಕ -2017 ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ […]

Read More

ಅಧ್ಯಕ್ಷರಾಗಿ ಲೋಕೇಶ್ ಸುವರ್ಣ ಅಲೆತ್ತೂರು ಆಯ್ಕೆ

ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಬಂಟ್ವಾಳ ಪುರಸಭೆಯ ನಾಮನಿರ್ದೇಶಕ ಸದಸ್ಯರಾದ ಲೋಕೇಶ್ ಸುವರ್ಣ ಅಲೆತ್ತೂರು ಇವರು ಆಯ್ಕೆಯಾಗಿದ್ದಾರೆ. ಉಳಿದ ಪದಾಧಿಕಾರಿಗಳಾಗಿ                     ಉಪಾಧ್ಯಕ್ಷರು : ಗಣೇಶ್ ಪೂಂಜೆರೆಕೋಡಿ ಕಾರ್ಯದರ್ಶಿ : ದಿನೇಶ್ ಕೆ. ಸುವರ್ಣ, ಕೋಶಾಧಿಕಾರಿ : ಲೋಕೇಶ್ ಪೂಜಾರಿ. ಜತೆ ಕಾರ್ಯದರ್ಶಿ : ಕಿರಣ್ ರಾಜ್ ನಿರ್ದೇಶಕರು:- ಸಾಂಸ್ಕøತಿಕ : ಹರೀಶ್ ಕೋಟ್ಯಾನ್ ಕುದನೆ ನಾರಾಯಣಗುರು ತತ್ವ […]

Read More

ಯುವವಾಹಿನಿಯ ವಾರ್ಷಿಕ ಸಮಾವೇಶಗಳು

1. 1988 ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರ, ಸುಂಕದಕಟ್ಟೆ 2. 1989 ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ, ಹಳೆಯಂಗಡಿ 3. 1990 ಅಧ್ಯಕ್ಷ ಕೊರಗಪ್ಪ ಸ್ಮಾರಕ ಸಭಾಮಂದಿರ, ಶ್ರೀಗೋಕರ್ಣನಾಥ ಕ್ಷೇತ್ರ, ಕುದ್ರೋಳಿ 4. 1991 ಶ್ರೀ ನಾರಾಯಣಗುರು ಸಭಾಭವನ, ಪಡುಬಿದ್ರಿ 5. 1992 ಶ್ರೀ ನಾರಾಯಣಗುರು ಸಭಾಗೃಹ, ಮೂಲ್ಕಿ 6. 1993 ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು 7. 1994 ಸರ್ವಮಂಗಳ ಸಭಾಂಗಣ, ಶ್ರೀ ಬ್ರಹ್ಮ ಬೈದೆರ್ಕಳ ಗರಡಿ, ಕಂಕನಾಡಿ 8. 1995 ಬ್ರಹ್ಮಶ್ರೀ […]

Read More

ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]

Read More

ಯುವವಾಹಿನಿ ಪಡುಬಿದ್ರೆ ಘಟಕದ ಅಧ್ಯಕ್ಷರಾಗಿ ಸಂತೋಷ್ ಅಧಿಕಾರ ಸ್ವೀಕಾರ

  ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ನಂದಿಕೂರು ಆಯ್ಕೆಯಾಗಿದ್ದಾರೆ. ದಿನಾಂಕ 18.06.2017 ನೇ ಆದಿತ್ಯವಾರ ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಸಂತೋಷ್ ಕುಮಾರ್ ನಂದಿಕೂರು ನೇತ್ರತ್ವದ 13 ಜನರ ತಂಡವು ಪ್ರತಿಜ್ಷಾ ವಿಧಿ ಸ್ವೀಕರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರತಿಜ್ಷಾ ವಿಧಿ ಬೋಧಿಸಿದರು.ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಪಡುಬಿದ್ರೆ ನಾರಾಯಣಗುರು ಮಹಿಳಾ ಮಂಡಳಿ […]

Read More

ಯುವವಾಹಿನಿ ಸಭಾಂಗಣ ಉದ್ಘಾಟನೆ

ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ  ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ […]

Read More

ಹಗ್ಗಜಗ್ಗಾಟ : ಕಟಪಾಡಿ ಹಾಗೂ ಮಂಗಳೂರು ಮಹಿಳಾ ತಂಡಗಳಿಗೆ ಪ್ರಶಸ್ತಿಯ ಗರಿ

ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ  ಯುವವಾಹಿನಿ ಅಂತರ್ ಘಟಕ ಹಗ್ಗಜಗ್ಗಾಟ ಸ್ಪರ್ಧೆ ಜರುಗಿತು. ಈ ಕ್ರೀಡಾಕೂಟದಲ್ಲಿ ಒಟ್ಟು  16 ಯುವವಾಹಿನಿ ತಂಡಗಳು ಭಾಗವಹಿಸಿದ್ದವು ಪುರುಷರ ವಿಭಾಗದಲ್ಲಿ ಯುವವಾಹಿನಿ ಕಟಪಾಡಿ ಪ್ರಥಮ, ಬಂಟ್ವಾಳ ದ್ವಿತೀಯ, ಪುತ್ತೂರು ತೃತೀಯ   ಹಾಗೂ ಮಹಿಳಾ ವಿಭಾಗದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಪ್ರಥಮ, ಉಡುಪಿ ದ್ವಿತೀಯ, ಬಂಟ್ವಾಳ ತೃತೀಯ  ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬಹುಮಾನ ವಿಜೇತ ತಂಡಗಳು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!