Yuvavahini

ಕೇಂದ್ರ ಸಮಿತಿ

ರಕ್ಷಿತ್ ಆರ್. ಕೋಟ್ಯಾನ್ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಕಟಪಾಡಿ ಶ್ರೀ ರಮೇಶ್ ಕೋಟ್ಯಾನ್ ಹಾಗೂ ಇಂದಿರಾ ಆರ್. ಕೋಟ್ಯಾನ್ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ರಕ್ಷಿತ್ ಆರ್. ಕೋಟ್ಯಾನ್ ಓರ್ವ ಸತತ ಪರಿಶ್ರಮದ ಮೂಲಕ ದೇಹದಾರ್ಡ್ಯತೆಯ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಯುವಕ. ಶಿರ್ವದ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿ ಪ್ರಸ್ತುತ ಜಿಲ್ಲೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜು, ಮೂಡಬಿದ್ರಿಯಲ್ಲಿ ತಮ್ಮ ಪದವಿ ಶಿಕ್ಷಣವನ್ನು ಮುಂದುವರಿಸುತ್ತಿರುವ ರಕ್ಷಿತ್ ಶಿಕ್ಷಣದೊಂದಿಗೆ ಕ್ರೀಡಾ ಸಾಧನೆಯ ಮೇರು ಶಿಖರದತ್ತ ಧಾವಿಸುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಚಾರ. […]

Read More

ಸಮಾಜ ಕಾರ್ಯ ಕ್ಷೇತ್ರದ ಅಪೂರ್ವ ಸಾಧಕಿ ಡಾ| ಮಧುಮಾಲ

ಸಮಾಜ ಕಾರ್ಯ (Social work) ಕ್ಷೇತ್ರದ ವಿಷಯ ತಜ್ಞೆಯಾಗಿದ್ದು, ಅಧ್ಯಾಪನದೊಂದಿಗೆ ನಿರಂತರ ಅಧ್ಯಯನ, ಕ್ಷೇತ್ರ ಕಾರ್ಯ ಮಾಡುತ್ತಾ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿರುವ ಡಾ| ಮಧುಮಾಲ ಒರ್ವ ಅಪೂರ್ವ ಸಾಧಕಿ, ಪ್ರಸ್ತುತ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗ (social work Dept.)ದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ 11 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ದಿನ, ವಾರ, ಮಾಸ ಪತ್ರಿಕೆಗಳಲ್ಲಿ ಆಗಿಂದಾಗ್ಗೆ ಜನರನ್ನು ಜಾಗೃತಿಗೊಳಿಸುವ ಲೇಖನಗಳಿಂದ ಪ್ರಸಿದ್ಧಿ ಪಡೆದ ಇವರ ಮಹಿಳಾ ಸಮಾಜ ಸಂಬಂಧಿತ ವಿಚಾರಧಾರೆಗಳು, ಭಾಷಣಗಳು ಚಿಂತನಶೀಲವಾಗಿದೆ. […]

Read More

ಅಕ್ಷತಾ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಪ್ರತಿಭೆಗೆ ಸರಹದ್ದುಗಳಿಲ್ಲ-ಕಾರ್ಯಕ್ಷೇತ್ರಗಳೆಂಬ ಇತಿಮಿತಿ ಇರುವುದಿಲ್ಲ ಎಂಬ ಮಾತಿಗೆ ಸ್ಪಷ್ಟ ನಿದರ್ಶನ-ಬಜಪೆಯ ಶ್ರೀ ಪಿ.ಮೋಹನ್ ಕುಮಾರ್ ಹಾಗೂ ಕನಕಾ ಎಂ ದಂಪತಿಗಳ ಸುಪುತ್ರಿ ಕು| ಅಕ್ಷತಾ. ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ವಾಣಿಜ್ಯ ಕ್ಷೇತ್ರದತ್ತ ಮುಖ ಮಾಡಿದ ಈಕೆ ಬಿ.ಕಾಂ ಪದವಿಯನ್ನು ಮುಗಿಸಿ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ (ಮಾನವ ಸಂಪನ್ಮೂಲ) ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಕಲೆಯಲ್ಲಿ ದಿ| ವಿ.ಪಿ.ಕಾರಂತ, ಶ್ರೀ ಪಿ. ಮೋಹನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ವೈವಿಧ್ಯಮಯ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಕರ್ನಾಟಕ ಸಂಗೀತದತ್ತ ಒಲವು […]

Read More

ಸ್ವಪ್ರಯತ್ನವೇ ಜೀವಾಳ – ಶಶಾಂತ್ ಬಿ.

ಬಂಟ್ವಾಳ ಕಸ್ಬಾ ಗ್ರಾಮದ ಭೋಜ ಪೂಜಾರಿ ಮತ್ತು ವನಿತಾ ದಂಪತಿಗಳ ಸುಪುತ್ರ ಶಶಾಂತ್ ಬಿ. ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಗಣಿತ ಮತ್ತು ಸಂಸ್ಕೃತದಲ್ಲಿ 100 ಅಂಕಗಳನ್ನು ಪಡೆದು 625 ಕ್ಕೆ 614 (98.24%) ಅಂಕ ಗಳಿಸಿರುವುದು ಶ್ಲಾಘನೀಯ. ಬಿಡುವಿನ ವೇಳೆಯಲ್ಲಿ ತಾನೇ ದುಡಿದು ಶಾಲಾ ಶುಲ್ಕವನ್ನು ಭರಿಸಿ ಹೆತ್ತವರಿಗೆ ಹೊರೆಯಾಗದೆ ಎಲ್ಲರ ಪ್ರೀತಿ ಸಂಪಾದಿಸಿದ್ದಾರೆ. ತಾನೇ ನಾಟಕ ರಚಿಸಿ, ಅಭಿನಯಿಸಿದ ಉತ್ತಮ ರಂಗ ಕಲಾವಿದ. ಶಾಲಾ ದಿನಗಳಲ್ಲೇ ನಾಯಕತ್ವ ಗುಣ […]

Read More

ಕಲಿಕೆಯಲ್ಲಿ ನಿಧಿಯೇ ಸರಿ – ಕು| ನಿಧಿಶ್ರೀ ಯು. ಪೂಜಾರಿ

ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]

Read More

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು 2015-16ನೇ ಸಾಲಿನ ಕಾರ್ಯಕಾರಿ ಸಮಿತಿ

ಅಧ್ಯಕ್ಷರು : ಶ್ರೀ ಸಂತೋಷ್ ಕುಮಾರ್ ಉಡುಪಿ ಉಪಾಧ್ಯಕ್ಷರು : ಶ್ರೀ ಪದ್ಮನಾಭ ಮರೋಳಿ ಪಣಂಬೂರು ಪ್ರಧಾನ ಕಾರ್ಯದರ್ಶಿ : ಶ್ರೀ ಕೇಶವ ಎಸ್. ಸುವರ್ಣ ಪಣಂಬೂರು ಕೋಶಾಧಿಕಾರಿ : ಶ್ರೀ ಕಮಲಾಕ್ಷ ಎಂ. ಮಂಗಳೂರು         ನಿರ್ದೇಶಕರುಗಳು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರೀ ರಿತೇಶ್ ಕುಮಾರ್ ಸುರತ್ಕಲ್ ವ್ಯಕ್ತಿತ್ವ ವಿಕಸನ : ಶ್ರೀ ನಿತೇಶ್ ಜೆ. ಕರ್ಕೇರ ಅಡ್ವೆ ಸಮಾಜ ಸೇವೆ : ಶ್ರೀ ಬಿ. ಶ್ರೀಧರ್ ಅಮೀನ್ […]

Read More

ಯುವವಾಹಿನಿ ಕೇಂದ್ರ ಸಮಿತಿ ಪದಗ್ರಹಣ-2015-16

ಯುವವಾಹಿನಿ ಕೇಂದ್ರ ಸಮಿತಿಯ 2015-16 ನೇ ಸಾಲಿನ ಪದಗ್ರಹಣ ಸಮಾರಂಭವು ಬಂಟ್ವಾಳ ಮೆಲ್ಕಾರಿನ ಬಿರ್ವ ಆಡಿಟೋರಿಯಂ ಇಲ್ಲಿ 09.08.2015 ರಂದು ಜರಗಿತು. ಚುನಾವಣಾಧಿಕಾರಿ ರವಿಚಂದ್ರ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು. ಅಧ್ಯಕ್ಷರಾಗಿ  ಸಂತೋಷ್ ಕುಮಾರ್ ಉಡುಪಿ ನೇತೃತ್ವದ ತಂಡವು ಪ್ರಮಾಣ ವಚನ ಸ್ವೀಕರಿಸಿತು.

Read More

ಬಿಲ್ಲವಾನ್ ದುಬೈಸಂಸ್ಥೆಗೆ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವಾನ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಸಂಸ್ಥೆಗೆ ಸಾಮಾಜಿಕ ಕ್ಷೇತ್ರದ ಸಮಗ್ರ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ – 2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ […]

Read More

ಜಯ ಸಿ. ಸುವರ್ಣಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಜಯ ಸಿ. ಸುವರ್ಣರ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ-2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ.ಸಂಜೀವ ಪೂಜಾರಿ, ಆಳ್ವಾಸ್ […]

Read More

ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶ – ಸಂಪನ್ನ

ಕೈ ಒಂದು ಆದರೂ ಕೈ ಬೆರಳುಗಳು ಒಮದೇ ರಿತಿ ಆಗಿರುವುದಿಲ್ಲ. ಆದರೆ ಮುಷ್ಠಿ ಬಿಗಿದರೆ ಎಲ್ಲಾ ಬೆರಳು ಒಂದೇ ಆಗಿರುತ್ತದೆ. ಅದೇ ರೀತಿ ನಮ್ಮಲ್ಲಿ ಸಂಘಟನೆಗಳು ಹತ್ತಾರು ಇದ್ದರೂ ಒಗ್ಗಟ್ಟಿನ ವಿಚಾರ ಬಂದಾಗ ನಾವೆಲ್ಲರೂ ಒಂದಾಗಿ ಇರಬೇಕು. ಯುವವಾಹಿನಿ ಸಮಾಜದಲ್ಲಿ ಶಿಸ್ತನ್ನು ಕಲಿಸುತ್ತದೆ. ಶಿಸ್ತು ಪ್ರತಿಯೊಬ್ಬರ ಮನೆಯಲ್ಲೂ ನೆಲೆಗೊಳ್ಳಬೇಕು ಎಂದು ಮುಂಬಾಯಿ ಬಿಲ್ಲವರ ಎಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಡಿ. ಕೊಟ್ಯಾನ್ ತಿಳಿಸಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!