Yuvavahini

ಕೇಂದ್ರ ಸಮಿತಿ

ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆ

ಮಂಗಳೂರು :- ರಾಜ್ಯಾದ್ಯಂತ 33 ಘಟಕಗಳು ಹಾಗೂ ಮೂರು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿಯ 2022-23ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ಅವರು ಡಿ.25 ರಂದು ಮುಲ್ಕಿ ಯಲ್ಲಿ ನಡೆದ ಯುವವಾಹಿನಿಯ 35 ನೇ ವಾರ್ಷಿಕ ಸಮಾವೇಶದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ ಮಂಗಳೂರು, ಲೋಕೇಶ್ ಕೋಟ್ಯಾನ್ ಕೂಳೂರು , ಪ್ರಧಾನ ಕಾರ್ಯದರ್ಶಿಯಾಗಿ ಕುಸುಮಾಕರ ಕುಂಪಲ , ಕೋಶಾಧಿಕಾರಿಯಾಗಿ ಎಂ […]

Read More

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]

Read More

ಘಟಕಗಳ ಲೆಕ್ಕಪತ್ರ ಕಾರ್ಯಾಗಾರ

ಮಂಗಳೂರು :- ಯುವವಾಹಿನಿ ಕೇಂದ್ರ ಸಮಿತಿಗೆ ಒಳಪಟ್ಟ ಎಲ್ಲಾ ಘಟಕಗಳ ಲೆಕ್ಕಪತ್ರ ಹಾಗೂ ಕಡತ ನಿರ್ವಹಣೆ, ಲೆಕ್ಕಪರಿಶೋಧನೆಯ ಕುರಿತು ಲೆಕ್ಕಪತ್ರ ಕಾರ್ಯಾಗಾರವು ದಿನಾಂಕ 30 ನವೆಂಬರ್ 2022ರ ಭಾನುವಾರದಂದು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ಜರಗಿತು. ಕಾರ್ಯಾಗಾರದ ಉದ್ಘಾಟನೆಯನ್ನು ಕೇಂದ್ರ ಸಮಿತಿಯ ಗೌರವ ಸಲಹೆಗಾರರು ಹಾಗೂ ಹಿರಿಯ ನ್ಯಾಯವಾದಿ ಟಿ ಎನ್ ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಸಕ್ತ ಸಾಲಿನ ಲೆಕ್ಕಪರಿಶೋಧಕರಾದ CA ಸುನಿಲ್ ಎ ರವರು ಘಟಕಗಳಲ್ಲಿ ಲೆಕ್ಕಪರಿಶೋಧನೆಗೆ ಪೂರಕವಾದ ಕಡತ […]

Read More

ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು :- 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ಪ್ರತಿಷ್ಠಿತ ಸಂಸ್ಥೆ ಯುವವಾಹಿನಿಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜರುಗಿದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಸ್ತಾಂತರ ಮಾಡಿದರು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿರುವ ರಾಜ್ಯಾದ್ಯಂತ 33 ಘಟಕಗಳ ಮೂಲಕ 3000ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಿನಾಂಕ 01 ನವೆಂಬರ್ 2022 ಮಂಗಳವಾರದಂದು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಇವರು ಕಿಕ್ಕಿರಿದು […]

Read More

ಯುವವಾಹಿನಿಗೆ ರಾಜ್ಯೋತ್ಸವ ಪ್ರಶಸ್ತಿ : ಉದಯ ಅಮೀನ್ ಮಟ್ಟು ಸಂತಸ

ಕಳೆದ 35 ವರುಷಗಳಿಂದ ಯುವವಾಹಿನಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಹಿರಿಯರು, ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ 33 ಘಟಕಗಳ ಸುಮಾರು ಮೂರು ಸಾವಿರಕ್ಕೂ ಅಧಿಕ ಸದಸ್ಯರ ಶ್ರಮ…..ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ತಿಳಿಸಿದರು. ನಮ್ಮ ಸಂಸ್ಥೆಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ ಕರ್ನಾಟಕ ಸರಕಾರಕ್ಕೆ ಕೃತಜ್ಞತೆಗಳು ಹಾಗೂ ಪ್ರತಿಯೊಂದು ಯುವವಾಹಿನಿ ಸದಸ್ಯರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದು ಹಾಗೂ ಈ ಸಾಧನೆಯ ಹಿಂದಿರುವ ಪ್ರತಿ ಯುವವಾಹಿನಿ ಸದಸ್ಯರಿಗೆ ಹೃದಯಾಂತರಾಳದ […]

Read More

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ ತೀರಾ ಹಿಂದುಳಿದಿರುವ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ […]

Read More

ಕೃಷಿ ಸಂಸ್ಕೃತಿಯಲ್ಲಿ ಯುವಸಮುದಾಯ ತೊಡಗಿಸಿಕೊಳ್ಳಬೇಕು:- ಸಚಿವ ಸುನೀಲ್ ಕುಮಾರ್ ಅಭಿಮತ

ಬೆಳ್ತಂಗಡಿ :- “ಕೆಸರುಗದ್ದೆ ಕ್ರೀಡಾಕೂಟ ಇಂದು ಜನಾಕರ್ಷಣೆ ಪಡೆಯುತ್ತಿದೆ. ಯಾವುದೇ ಒಂದು ಸಂಘಟನೆ ಬಲಪಡಿಸಲು ಈ ರೀತಿಯ ಕ್ರೀಡಾಕೂಟ ಅಗತ್ಯ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಬಿಲ್ಲವ ಸಮುದಾಯವನ್ನು ಒಟ್ಟುಗೂಡಿಸುವ ಕಾರ್ಯ ಯುವವಾಹಿನಿ ಸಂಘಟನೆಯಿಂದಾಗಲಿ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ವೇಣೂರು ಮೂಡುಕೋಡಿ ಗ್ರಾಮದ ನೆಲ್ಲಿಗುಡ್ಡೆ ನೋನೊಟ್ಟು ಗದ್ದೆಯಲ್ಲಿ ಭಾನುವಾರ ನಡೆದ ”ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ […]

Read More

ಕೆಸರ್‌ಡೊಂಜಿ ದಿನ :- ಯುವವಾಹಿನಿ ಮಾಣಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]

Read More

ಕೃಷಿಯೇ ಬದುಕಿನ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ :- ಉಮನಾಥ್ ಕೋಟ್ಯಾನ್

ವೇಣೂರು :- ಹಿರಿಯರ ಕಾಲದಿಂದಲೂ ಕೃಷಿಯೇ ನಮ್ಮ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸು ಜವಾಬ್ದಾರಿ ನಮ್ಮ ಮೇಲಿದೆ. ಕೃಷಿಯನ್ನು ಅವಲಂಬಿಸಿ ಬದುಕಿದ ನಮ್ಮ ಹಿರಿಯರ ಜೀವನವೇ ಅದರ್ಶ ಎಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಂಘಟನೆಗಳು ಸಮುದಾಯದ ಶಕ್ತಿಯಾಗಬೇಕು :- ಪದ್ಮರಾಜ್ ಆರ್ ಬ್ರಹ್ಮಶ್ರೀ ನಾರಾಯಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!