Yuvavahini

ನಾರಾಯಣ ಗುರು

ಮೂಡಿಗೆರೆ : ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

13 9 2019 ಶುಕ್ರವಾರ ಬೆಳಗ್ಗೆ 10:30 ಕ್ಕೆ  ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಮೂಡಿಗೆರೆ ಹಾಗೂ ಯುವವಾಹಿನಿ (ರಿ) ಮೂಡಿಗೆರೆ ಘಟಕ ಸಹಯೋಗದೊಂದಿಗೆ ಸರ್ಕಾರದಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರುಗಳ 165 ಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ನಡೆಸಲಾಯಿತು . ಅಧ್ಯಕ್ಷರಾದ ಯೋಗೇಶ್ ಪೂಜಾರಿ , ಉಪಾಧ್ಯಕ್ಷರು  ಪ್ರವೀಣ್ ಪೂಜಾರಿ ಹಾಗೂ ಸ್ಥಳೀಯ ಶಾಸಕರು ತಾಲೂಕು ಪಂಚಾಯತಿ ಅಧ್ಯಕ್ಷರು ಪಟ್ಟಣ ಪಂಚಾಯತಿ ಸದಸ್ಯರು ಹಾಜರಿದ್ದರು ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Read More

ನಾರಾಯಣ ಗುರು ಜಯಂತಿ : ಗುರುಸಂದೇಶ

ವಿಶ್ವ ಬಿಲ್ಲವರ ಸೇವಾ ಚಾವಡಿ(ರಿ) ಹಾಗೂ ಯುವವಾಹಿನಿ (ರಿ)ಕೊಲ್ಯ ಘಟಕದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 165 ನೇ ಜಯಂತಿ ಯ ಅಂಗವಾಗಿ “ಗುರುಸಂದೇಶ” ಕಾರ್ಯಕ್ರಮವು ತಾರೀಕು 13-09-2019 ನೇ ಶುಕ್ರವಾರ ಬೆಳಿಗ್ಗೆ ಘಂಟೆ 8 ಕ್ಕೆ ಸರಿಯಾಗಿ ಅಭಯ ಆಶ್ರಯ ಅಸೈಗೋಳಿ ಇಲ್ಲಿ ಅರ್ಥಪೂರ್ಣವಾಗಿ ಜರಗಿತು. ಕಾರ್ಯಕ್ರಮ ವು ಆಶ್ರಮ ದ ಹಿರಿಯ ನಿವಾಸಿ ಶ್ರೀ ರಾಜಾರಾಮ ರವರು ಗುರುವರ್ಯರಿಗೆ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭವಾಯಿತು.ವಿಶ್ವ ಬಿಲ್ಲವರ ಸೇವಾ ಚಾವಡಿಯ ಗೌರವ ಸಲಹೆಗಾರರಾದ ಕುಸುಮಾಕರ ಕುಂಪಲರವರು ಗುರು […]

Read More

ಬ್ರಹ್ಮಶ್ರೀ ನಾರಾಯಣ ಗುರು ಸಂದೇಶ ಪ್ರಚಾರ ಜಾಥಾ

             ಬ್ರಹ್ಮಶ್ರಿ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯು ತಾರೀಕು 13.9.2019 ರ ಶುಕ್ರವಾರದಂದು ಮಂಗಳೂರು ಘಟಕದ ವತಿಯಿಂದ ಬಹಳ ವಿಜೃಂಭಣೆಯಿಂದ ಜರುಗಿತು. ಘಟಕದ *ಯುವವಾಹಿನಿ ಸಭಾಂಗಣ* ದಲ್ಲಿ ಬೆಳಿಗ್ಗೆ 9.30 ಗಂಟೆಗೆ ಪುಷ್ಪಾಲಂಕಾರಗೊಂಡ ಗುರುಗಳ ಭಾವಚಿತ್ರಕ್ಕೆ ಕೇಂದ್ರ ಸಮಿತಿ ಅಧ್ಯಕ್ಷರಾದ  ನರೇಶ್ ಕುಮಾರ್ ಸಸಿಹಿತ್ಲು  ರವರು ಆರತಿ ಬೆಳಗಿ ಪುಷ್ಪ ಅರ್ಪಿಸುವುದರೊಂದಿಗೆ ಗುರುನಾರಾಯಣ ಜಯಂತಿಗೆ ಚಾಲನೆ ನೀಡಿದರು. ಸರ್ವಾಲಂಕಾರ ಗೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವಿರುವ ರಥಕ್ಕೆ ಕೇಂದ್ರ […]

Read More

ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜನ್ಮದಿನದ ಆಚರಣೆ

ಯುವವಾಹಿನಿ ಉಡುಪಿ ಘಟಕದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 165 ನೇ  ಜನ್ಮದಿನದ ಆಚರಣೆಯನ್ನು ಘಟಕದ ಸಭಾಂಗಣದಲ್ಲಿ ನಡೆಸಲಾಯಿತು. ಅಲೆವೂರು ಭಾಸ್ಕರ ಪೂಜಾರಿ ಇವರು ವಿಧಿವತ್ತಾಗಿ ಗುರುಪೂಜೆಯನ್ನು ನೆರವೇರಿಸಿದರು. ಅಧ್ಯಕ್ಷರಾದ ನಾರಾಯಣ ಬಿ. ಎಸ್ ರವರು ನಾರಾಯಣ ಗುರುಗಳು ಒಂದೇ ಜಾತಿ  ಒಂದೇ ಮತ, ನಾವೆಲ್ಲರೂ ಒಂದೇ  ಎಂಬ ಸಂದೇಶ ನೀಡಿದ್ದಾರೆ,ಅವರ ಆದರ್ಶಗಳನ್ನು ಪಾಲಿಸಿದರೆ ಜೀವನದಲ್ಲಿ ಒಳಿತಾಗುತ್ತದೆ ಎಂದರು.ಘಟಕದ ಸಲಹೆಗಾರರಾದ ಸಂತೋಷ್ ಕುಮಾರ್ ಮಾತನಾಡಿ ಯುವವಾಹಿನಿಯ ಆಸ್ತಿಯಾಗಿದ್ದು, ದೇವರ ಪಾದ ಸೇರಿದ ತಮ್ಮಯ ಸರ್ ಗೆ ನಾರಾಯಣ […]

Read More

ನಾರಾಯಣಗುರು ಜಯಂತಿ : ವಿಶೇಷ ಗುರು ವಂದನೆ

ದಿನಾಂಕ  13/09/2019 ರಂದು      165 ನೇ ನಾರಾಯಣಗುರು ಜಯಂತಿಯ ಪ್ರಯುಕ್ತ   ಕುಪ್ಪೆಪದವಿನ     ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ   ಯುವವಾಹಿನಿ (ರಿ.) ಕುಪ್ಪೆಪದವು  ಘಟಕದ ವತಿಯಿಂದ ಅಧ್ಯಕ್ಷರು/ಉಪಾಧ್ಯಕ್ಷರು/ ಸ್ಥಾಪಕ ಅಧ್ಯಕ್ಷರು ಪದಾಧಿಕಾರಿಗಳು,ಸದಸ್ಯರು ಹಾಗೂ ಹಿರಿಯರಾದ ಉಮೇಶ್ ಅಮೀನ್ ರವರ ಮಾರ್ಗದರ್ಶನದಲ್ಲಿ ವಿಶೇಷ ಗುರು ವಂದನೆ  ಸಲ್ಲಿಸಲಾಯಿತು.

Read More

ನಾರಾಯಣ ಗುರು ಜಯಂತಿ : ವಿಶೇಷ ಗುರುಪೂಜೆ

165 ನೇ ನಾರಾಯಣಗುರು ಜಯಂತಿ ಪ್ರಯುಕ್ತ ಯುವವಾಹಿನಿ (ರಿ.)ಕಂಕನಾಡಿ ಘಟಕದ ವತಿಯಿಂದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಭೇಟಿ ನೀಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಪ್ರಯುಕ್ತ ವಿಶೇಷ ಗುರುಪೂಜೆ ನಡೆಸಲಾಯಿತು.ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ವಿಶೇಷ ಗುರು ಪೂಜೆ ಸಲ್ಲಿಸಲಾಯಿತು.

Read More

ನಾರಾಯಣ ಗುರು ಜಯಂತಿ : ಭಜನಾ ಕಾರ್ಯಕ್ರಮ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕವು ನಾರಾಯಣ ಗುರು ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಮಹಿಳಾ ಮಂಡಳಿಗಳನ್ನು ಜೊತೆಗೂಡಿಸಿ ಬೆಳಗ್ಗೆ12ರಿಂದ ಸಂಜೆ 7 ಘಂಟೆಯವರೆಗೆ ಭಜನಾ ಕಾರ್ಯಕ್ರಮವನ್ನು ನಡೆಯಸಿತು. ಕಾರ್ಯಕ್ರಮಕ್ಕೆಗುರುಸ್ತೋತ್ರ ಹಾಗೂ ಭಜನೆ ಮೂಲಕ ಮಂಗಳೂರು ಮಹಿಳಾ ಘಟಕವು ಚಾಲನೆ ನೀಡಿ ನಂತರ ವಿವಿಧ ಮಹಿಳಾ ಮಂಡಳಿಗಳಿಗೆ ಅವಕಾಶಕೊಟ್ಟು ನಂತರ ಕೊನೆಯ ಹಂತವನ್ನು ಮಂಗಳೂರುಘಟಕದವರೊಂದಿಗೆ ಸೇರಿ ಮುಕ್ತಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಉಮಾಶ್ರೀಕಾಂತ್, ನೈನವಿಶ್ವನಾಥ್,ರವಿಕಲ,  ನಾರಾಯನಗುರು ತತ್ವ […]

Read More

ನಾರಾಯಣ ಗುರು ಜಯಂತಿ : ವೃದ್ಧಾಶ್ರಮಕ್ಕೆ ಭೇಟಿ

ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಕೂಳೂರು ಘಟಕದ ವತಿಯಿಂದ *ಚಿರಂತನ ವೃದ್ಧಾಶ್ರಮ* ಸುರತ್ಕಲ್ ಇಲ್ಲಿಗೆ ಭೇಟಿ ನೀಡಿ, ಅಲ್ಲಿನ ಹಿರಿಯ ಚೇತನರಿಗೆ ಸಂಜೆಯ ಉಪಹಾರದ ವ್ಯವಸ್ಥೆಯನ್ನು ಮಾಡಿದೆವು. ನಂತರ ಹಿರಿಯ ಚೇತನರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ, ಸದಸ್ಯರೆಲ್ಲರೂ ಸುಮಾರು 2 ಗಂಟೆಗಳ ಕಾಲ ಅವರೊಂದಿಗೆ ಬೆರೆತು, ಕುಣಿದಾಡಿ ಸಂತಸಪಟ್ಟೆವು.  ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಅಮೀನ್,ಕಾರ್ಯದರ್ಶಿ ಮಧುಶ್ರೀ […]

Read More

ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದಲ್ಲಿ ಗುರುಸಂದೇಶ ಕಾರ್ಯಕ್ರಮ

ಉಪ್ಪಿನಂಗಡಿ : ಕೇರಳ ಶಿವಗಿರಿ ಮಠದ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವನ್ನು ಎಲ್ಲಾ ಬಿಲ್ಲವ ಸಮಾಜದ ಬಂಧುಗಳು ತಿಳಿದುಕೊಂಡು ಅದನ್ನು ಅನುಸರಿಸಬೇಕಾಗಿ ಹೇಳಿದರು ಅವರು ಯುವವಾಹಿನಿ ಉಪ್ಪಿನಂಗಡಿ ಘಟಕ ದಿನಾಂಕ 07.06.2019 ರಂದು ಇಳಂತಿಲದಲ್ಲಿ ಆಯೋಜಿಸಿದ ಗುರುಸಂದೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ, ಸಲಹೆಗಾರರಾದ ಡಾ. ಸದಾನಂದ ಕುಂದರ್, ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಪಡ್ಪು,ಕಾರ್ಯದರ್ಶಿ ಅನಿಲ್ ದಡ್ದು ಸೇರಿದಂತೆ ಮಾಜಿ ಅಧ್ಯಕ್ಷರುಗಳು, ಎಲ್ಲಾ […]

Read More

ಬಾಲ್ಯದಲ್ಲಿಯೇ ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಸಂತ ನಾರಾಯಣ ಗುರು :ಸತ್ಯಾನಂದ ತೀರ್ಥ ಸ್ವಾಮೀಜಿ

ಬೆಳ್ತಂಗಡಿ:ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಹೇಳಿದರು ಅವರು ಜೂ 6 ರಂದು ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಗುರು ಸಂದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು . ಕೇರಳದ ತೀಯಾ ಸಮಾಜ ದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳಿಗೆ ಜನಿಸಿದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!