Yuvavahini

ನಾರಾಯಣ ಗುರು

ನಾರಾಯಣಗುರುಗಳ ತತ್ವಸಂದೇಶ ಸಾರ್ವಕಾಲಿಕ ಹಾಗೂ ಅಜರಾಮರ : ಜಯಂತ್ ನಡುಬೈಲು.

ಪಣಂಬೂರು:- ಹಿಂದುಳಿದ ವರ್ಗಗಳಿಗೆ ದೈರ್ಯ ತುಂಬಿ ಅವರ ಬದುಕಿನಲ್ಲಿ ಭರವಸೆ ಬೆಳಕು ಕಾಣಲು ಕಾರಣರಾಗಿದ್ದ ಬ್ರಹ್ಮಶ್ರೀನಾರಾಯಣಗುರುಗಳ ತತ್ವ ಸಂದೇಶ ಸಾರ್ವಕಾಲಿಕ ಮತ್ತು ಅಜರಾಮರವಾಗಿದ್ದು, ಇಂದಿನ ದಿನಗಳಲ್ಲಿ ತತ್ವ ಸಂದೇಶಗಳನ್ನು ಮನೆ ಮನೆಗೆ ತಲುಪಿಸಿ, ಯುವಕರಲ್ಲಿ ಜಾಗ್ರತಿಯನ್ನು ಮೂಡಿಸಿ ಮುಂದಿನ ಪೀಳಿಗೆಗೆ ತತ್ವ ಸಂದೇಶಗಳನ್ನು ತಿಳಿಸಿ ಹೇಳುವ ಕಾರ್ಯಕ್ರಮಗಳನ್ನು ಸಂಯೋಜಿಸಿದ ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಕಾರ್ಯಕ್ರಮ ಶ್ಲಾಘನೀಯವಾದದ್ದು ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ಹೇಳಿದರು. ದಿನಾಂಕ 18.11.2018ನೇ ರವಿವಾರದಂದು ಯುವವಾಹಿನಿ (ರಿ) […]

Read More

ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಶಿವಗಿರಿ ಯಾತ್ರೆ

ಕಂಕನಾಡಿ : 2018ರ ಅಕ್ಟೋಬರ್ 21ರಿಂದ24 ರವರೆಗೆ ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.ಇದರಲ್ಲಿ ನಾರಾಯಣ ಗುರುಗಳ ತತ್ವಾದರ್ಶದಂತೆ ಜಾತಿ, ಮತ ಭೇದವಿಲ್ಲದೆ ಕಂಕನಾಡಿ ಘಟಕದ ಸದಸ್ಯರು ಹಾಗೂ ಇತರರು ಸೇರಿ ಒಟ್ಟು 53 ಸದಸ್ಯರು ಈ ಒಂದು ಯಾತ್ರೆಯಲ್ಲಿ ಭಾಗವಹಿಸಿದ್ದರು. ಶಿವಗಿರಿ ಮಠದ ಪೂಜ್ಯ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾರಾಯಣ ಗುರುಗಳ ಮಹಾ ಸಮಾಧಿ, ಕೆಲವು ಐತಿಹಾಸಿಕ ಸ್ಥಳಗಳು, ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಮಣ್ಯ ದೇವಸ್ಥಾನ , ಅರವಿಪುರಂ ದೇವಸ್ಥಾನ […]

Read More

ಶೋಷಿತ ಸಮಾಜಕ್ಕೆ ದೇವರನ್ನು ತೋರಿಸಿದ ನಾರಾಯಣಗುರುಗಳು : ರಾಜೀವ ಪೂಜಾರಿ.

ಪಣಂಬೂರು : ದೇವಸ್ಥಾನವನ್ನು ನಿರ್ಮಿಸಿ, ದೇವರನ್ನು ಪ್ರತಿಷ್ಟೆ ಮಾಡಿ ಶೋಷಿತ ಸಮಾಜಕ್ಕೆ ದೇವರನ್ನು ಕಾಣುವ ಭಾಗ್ಯವನ್ನು ಕರುಣಿಸಿ, ತಾನು ಗಳಿಸಿದ ಜ್ಞಾನದಿಂದ ಸಮಾಜ ಪರಿವರ್ತನೆಯನ್ನು ಮಾಡಿದ ಸಮಾಜ ಸುದಾರಕ, ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳು. ಅವರ ತತ್ವಾದರ್ಶಗಳು ಅಂದಿಗೂ, ಇಂದಿಗೂ, ಮುಂದೆಯೂ ಅಳಿಯದ ಸಂದೇಶವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 21.10.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ಕುಳಾಯಿ ಮೂಡುಬೆಟ್ಟು ತುಕಾರಾಮ ಕರ್ಕೇರರವರ ಮನೆಯಲ್ಲಿ ಜರಗಿದ ಬಿಲ್ಲವ ಸಮಾಜ […]

Read More

ಹಿಂದುಳಿದವರ ಪ್ರಗತಿಗೆ ನಾರಾಯಣಗುರುಗಳು ಪ್ರೇರಣೆ : ರಾಜೀವ ಪೂಜಾರಿ.

ಪಣಂಬೂರು : ಬ್ರಹ್ಮಶ್ರೀ ನಾರಾಯಣಗುರುಗಳು ಸನಾತನ ಪರಂಪರೆ, ಧ್ಯಾನ, ತಪಸ್ಸನ್ನು ಪ್ರತಿಪಾದಿಸಿದ್ದರು. ಈ ಮೂಲಕ ಸಮಾಜದಲ್ಲಿ ಆ ಕಾಲದಲ್ಲಿದ್ದ ಅಸ್ಪ್ರಶ್ಯತೆ, ಅಂಧಶ್ರದ್ಧೆ ಮೊದಲಾದ ಸಮಸ್ಯೆಗಳ ಬಗ್ಗೆ ಕ್ರಾಂತಿಕಾರಿ ಬದಲಾವಣೆ ತರಲು ಯತ್ನಿಸಿದ್ದರು. ತಪಸ್ಸನ್ನು ಆಚರಿಸಿ ಭಗವತ್ ಸಾಕ್ಷಾತ್ಕಾರವನ್ನು ಪಡೆದು ಸಮಾಜ ಪರಿವರ್ತನೆಯನ್ನು ಮಾಡುವ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಿದರು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 07.10.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ಎಂ ಟಿ ಸಾಲ್ಯಾನ್ […]

Read More

ಯುವವಾಹಿನಿ (ರಿ ) ಬಜಪೆ ಘಟಕದ ವತಿಯಿಂದ ಶಿವಗಿರಿ ಯಾತ್ರೆ

ಬಜಪೆ : ದಿನಾಂಕ 03.10.2018 ರಿಂಡ್ 05.10.2018 ರವರೆಗೆ ಯುವವಾಹಿನಿ (ರಿ ) ಬಜಪೆ ಘಟಕದ ವತಿಯಿಂದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 48 ಸದಸ್ಯರು ಈ ಒಂದು ಯಾತ್ರೆಯಲ್ಲಿ ಭಾಗವಹಿಸಿದ್ದರು. ಶಿವಗಿರಿ ಮಠದ ಪೂಜ್ಯ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾರಾಯಣ ಗುರುಗಳ ಮಹಾ ಸಮಾಧಿ, ಕೆಲವು ಐತಿಹಾಸಿಕ ಸ್ಥಳಗಳು, ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಮಣ್ಯ ದೇವಸ್ಥಾನ, ಅರವಿಪುರಂ ದೇವಸ್ತಾನ, ಕನ್ಯಾಕುಮಾರಿಯ ದೇವಿ ದರ್ಶನ, ಮಾರುತಮಲೈ ಬೆಟ್ಟ, ಕನ್ಯಾಕುಮಾರಿ, ಅನಂತ ಪದ್ಮನಾಭ ದರ್ಶನದೊಂದಿಗೆ ಯಾತ್ರೆ ಸಮಾಪನಗೊಂಡಿತು […]

Read More

ಗುರುಗಳ‌ ಸಂದೇಶ ಜಗತ್ತಿನ ಕತ್ತಲೆಯನ್ನು ದೂರವಾಗಿಸುವ ಬೆಳಕಾಗಿದೆ : ರಾಜೀವ ಪೂಜಾರಿ

ಪಣಂಬೂರು : ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಂದೇಶ ಜಗತ್ತಿನ ಕತ್ತಲೆಯನ್ನು ದೂರವಾಗಿಸುವ ಬೆಳಕಾಗಿದೆ. ಆದ್ದರಿಂದ ಅವರ ಸಂದೇಶಗಳನ್ನು ದೇಶದೆಲ್ಲೆಡೆ ಸಾರುವ ಕೆಲಸವಾಗಬೇಕಾಗಿದೆ. ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ಬೀಜಮಂತ್ರದಿಂದ ಎಲ್ಲಾ ಮತದ ಜನಮನವನ್ನು ಗೆದ್ದು ಆಧ್ಯಾತ್ಮಿಕ ಆಂದೋಲನಕ್ಕೆ ವೇದಿಕೆ ನಿರ್ವಿುಸಿದ ನಾರಾಯಣಗುರುಗಳು ವಿಶ್ವಮಾನವರಾಗಿ ಬೆಳಗುತ್ತಿದ್ದಾರೆ.ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 23.09.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ದಿ.ಲಿಂಗಪ್ಪ ಕರ್ಕೇರ ಸುಬ್ಬ ಮನೆ […]

Read More

ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ : ವೇದವ್ಯಾಸ ಕಾಮತ್

ಮಂಗಳೂರು : ಭಜನೆಯಿಂದ ಪ್ರಗತಿ, ಕ್ಷಮತೆ, ಶಿಸ್ತು, ಕ್ರಿಯಾಶೀಲತೆ, ಕೌಶಲ, ಸಾಧನೆ ಹೆಚ್ಚಾಗುತ್ತದೆ. ಭಕ್ತಿಯ ಅಂತರಗಂಗೆ ಭಜನೆ ಮೂಲಕ ಜಲಪಾತವಾಗಿ ಧುಮುಕುತ್ತದೆ. ನಿಷ್ಕಲ್ಮಶ ಪ್ರೀತಿಯಿಂದ, ಮುಗ್ದ ಭಕ್ತಿಯಿಂದ ಭಜನೆ ಹಾಡಿದರೆ ಪರಮಾತ್ಮನ ಸಾಕ್ಷಾತ್ಕಾರವಾಗುತ್ತದೆ. ಭಜನಾ ಸಂಸ್ಕೃತಿಯ ಪುನರುತ್ಥಾನದೊಂದಿಗೆ ಭಜಕರು ನವಭಾರತ ನಿರ್ಮಾಣದ ಶಿಲ್ಪಿಗಳಾಗಬೇಕು , ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು. ಅವರು ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ […]

Read More

ನಾರಾಯಣ ಗುರು ನಾಡುಕಂಡ ಅಪೂರ್ವ ದಾರ್ಶನಿಕ. : ಅರವಿಂದ ಚೊಕ್ಕಾಡಿ

ಮೂಡಬಿದಿರೆ‌ : ಜಗತ್ತಿನ ಎಲ್ಲಾ ಜೀವಿಗಳನ್ನು ತನ್ನ ಆತ್ಮವೆಂದೇ ತಿಳಿ ಎಂಬ ಉಪನಿಷತ್ತಿನ ತತ್ವವನ್ನು ಅಕ್ಷರಶಃ ಪಾಲಿಸಿದವರು ನಾರಾಯಣ ಗುರುಗಳು. ನಾರಾಯಣ ಗುರುಗಳದ್ದು ಎಲ್ಲರನ್ನು ಒಳಗೊಳ್ಳುವ ಚಿಂತನೆ, ನಾರಾಯಣ ಗುರು ನಾಡುಕಂಡ ಅಪೂರ್ವ ದಾರ್ಶನಿಕ.ತನ್ನಲ್ಲೆ ದೇವನನ್ನು ಕಾಣುವ ಅದ್ವೆಯ್ತವಾದ ಅವರದ್ದು. ತನ್ನಲ್ಲೂ .ಇತರರಲ್ಲೂ ದೇವರನ್ನು ಕಾಣುವ ಮಹಾ ಗುಣ ಅವರದ್ದು . ಎಂದು ಲೇಖಕ ಅರವಿಂದ ಚೊಕ್ಕಾಡಿ ನುಡಿದರು. ಯುವವಾಹಿನಿ (ರಿ) ಮೂಡಬಿದಿರೆ‌ ಘಟಕದಿಂದ ದಿನಾಂಕ 21:09:2018ನೇ ಶುಕ್ರವಾರದಂದು ಬೆಳಿಗ್ಗೆ 10:30ಕ್ಕೆ ಸರಿಯಾಗಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ […]

Read More

ತುಳುನಾಡಿನ ಆಚರಣೆಯಲ್ಲಿ ನಂಬಿಕೆ – ಮೂಢನಂಬಿಕೆಗಳು ವಿಚಾರಗೋಷ್ಠಿ

ಪಡುಬಿದ್ರಿ : ಇಂದಿನ ಯುವಪೀಳಿಗೆಗೆ ನಮ್ಮ‌ ಹಿರಿಯರು ಮೂಲ ನಂಬಿಕೆಗಳನ್ನು ತಿಳಿಸುವ ಅನಿವಾರ್ಯತೆಯಿದೆ. ಮೂಲ ನಂಬಿಕೆಗಳು ಮೂಢನಂಬಿಕೆಗಳಾಗದಂತೆ ಗಮನಹರಿಸಬೇಕಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಾ| ವೈ.ಎನ್. ಶೆಟ್ಟಿ ಹೇಳಿದರು. ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಮತ್ತು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ದಿನಾಂಕ 21.09.2018 ರಂದು ಬ್ರಹ್ಮಶ್ರೀ ನಾರಾಯಣಗುರುಗಳ 90ನೇ ಪುಣ್ಯತಿಥಿಯ ಅಂಗವಾಗಿ ತುಳುನಾಡಿನ ಆಚರಣೆಯಲ್ಲಿ ನಂಬಿಕೆ- ಮೂಢನಂಬಿಕೆಗಳು ಎಂಬ ವಿಚಾರಗೋಷ್ಠಿಯಲ್ಲಿ ಸಮನ್ವಯಕಾರರಾಗಿ ಅವರು […]

Read More

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಶಿವಗಿರಿಯಾತ್ರೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ 16.09.2018 ರಂದು ನಡೆದ ಶಿವಗಿರಿಯಾತ್ರೆ ಯಶಸ್ವಿಯಾಗಿ ನಡೆಯಿತು . ಮಂಗಳೂರಿನಿಂದ ರೈಲಿನ ಮೂಲಕ ಹೊರಟ ಯುವವಾಹಿನಿಯ ಯಾತ್ರಾ ತಂಡವನ್ನು ವರ್ಕಳ ರೈಲು ನಿಲ್ದಾನದಲ್ಲಿ ಶಿವಗಿರಿ ಮಠದ ಪೂಜ್ಯ ಸತ್ಯಾನಂದತೀರ್ಥ ಶ್ರೀಗಳು ಸ್ವಾಗತಿಸುವ ಮೂಲಕ ಯಾತ್ರೆಯು ಆರಂಭವಾಯಿತು. ಸ್ವಾಮೀಜಿಯವರ ನೇತೃತ್ವದಲ್ಲಿ ಶಿವಗಿರಿಯಲ್ಲಿ ನ ನಾರಾಯಣಗುರುಗಳ ಮಹಾಸಮಾಧಿ ಮತ್ತು ಕೆಲ ಐತಿಹಾಸಿಕ ಸ್ಥಳಗಳನ್ನು ಸಂದರ್ಶಿಸಿದೆವು. ಆ ಬಳಿಕ ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಹ್ಮಣ್ಯ ದೇವಾಲಯ, ನಾರಾಯಣಗುರುಗಳೇ ತನ್ನ ಕಯ್ಯಾರೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!