ಗುರು ಸನ್ಮತಿ : ತಿಳುವಳಿಕೆಯ ತಿರುಳು
19-01-2026, 8:53 AM
18-01-2026, 1:00 PM
ಸುಳ್ಯ : “ಮನುಷ್ಯರೆಲ್ಲರೂ ಒಂದೇ ಜಾತಿ ಎಂಬ ಸಂದೇಶವನ್ನು ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಪ್ರತಿಯೊಬ್ಬರೂ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯ. ಗುರು ತತ್ವಗಳನ್ನು ಆಧಾರವಾಗಿಟ್ಟುಕೊಂಡು ಸಂಘಟಿತರಾದರೆ ಯಶಸ್ಸು ಖಂಡಿತ,” ಎಂದು ಯುವವಾಹಿನಿ ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಕುಸುಮಾಕರ ಕುಂಪಲ ಹೇಳಿದರು.ಅವರು ದಿನಾಂಕ 18.01.2026 ರಂದು ಯುವವಾಹಿನಿ ಸುಳ್ಯ ಘಟಕದ ವತಿಯಿಂದ, ಸುಳ್ಯ ಘಟಕದ ಸ್ಥಾಪಕಾಧ್ಯಕ್ಷ ಶಿವಪ್ರಸಾದ್ ಕೆ.ವಿ. ಅವರ ಮನೆಯಲ್ಲಿ ಆಯೋಜಿಸಲಾದ ಗುರುಸ್ಫೂರ್ತಿ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿ ಮಾತನಾಡಿದರು. […]
08-01-2026, 9:00 PM
ಉಡುಪಿ: ವಿವಿಧ ರೂಪದ ಸಾಮಾಜಿಕ ಕಟ್ಟುಪಾಡುಗಳ ಕಾರಣದಿಂದ ಗಂಭೀರ ಶೋಷಣೆಗೆ ಗುರಿಯಾಗಿದ್ದ ಸಮಾಜಕ್ಕೆ ಬೆಳಕು ತೋರಿದ ಮಹಾನ್ ಚಿಂತಕ ನಾರಾಯಣ ಗುರು ಆಗಿದ್ದಾರೆ. ಸಮಾನ ಮನಸ್ಕ ಅನುಯಾಯಿಗಳ ಮೂಲಕ ತ್ಯಾಗ ಹಾಗೂ ಸೇವೆಯ ಮೌನ ಕ್ರಾಂತಿಯನ್ನು ಸಂಘಟಿಸಿದ ಗುರುಗಳಲ್ಲಿ ಬದ್ದತೆಯ ಅನನ್ಯ ಆದರ್ಶಗಳು ಅಡಗಿವೆ ಎಂದು ರಂಗನಿರ್ದೇಶಕ ವಿದ್ದು ಉಚ್ಚಿಲ್ ತಿಳಿಸಿದರು. ಪ್ರಸ್ತುತ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಡಿ ಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿರುವ ಎಲ್ಲಾ ತರದ ಸಾಮಾಜಿಕ ಬಂಧನಗಳಿಂದ ಬಿಡುಗಡೆಯು ಗುರುತತ್ವಗಳ ಪಾಲನೆಯಿಂದ ಮಾತ್ರ ಸಾಧ್ಯವಿದೆ ಎಂದು ಅವರು […]
04-01-2026, 1:47 PM
ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಮಂಗಳೂರು ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ದೈವದಶಕಂ ಕನ್ನಡ ಗಾಯನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿದರು ಕಾರ್ಯಕ್ರಮವು ಭಕ್ತಿಭಾವ ಹಾಗೂ ನೆರವೇರಿತು.
04-01-2026, 7:15 AM
ಶ್ರೀ ನಾರಾಯಣಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕುದ್ರೋಳಿ ತೀರ್ಥಾಟನಾ ಪ್ರಯುಕ್ತ, ಪೂಜ್ಯ ಬ್ರಹ್ಮಶ್ರೀ ನಾರಾಯಣಗುರುಗಳು ರಚಿಸಿದ ದೈವದಶಕಂ ಕೃತಿಯ ಕನ್ನಡ ಧ್ವನಿ ಸುರುಳಿ ಬಿಡುಗಡೆಯ ಕಾರ್ಯಕ್ರಮ ಇಂದು ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಕ್ತಿಭಾವಪೂರ್ಣವಾಗಿ ನಡೆಯಿತು. ಶ್ರೀರಕ್ಷಾ ಎಸ್. ಎಚ್. ಪೂಜಾರಿ ಕೊಣಾಜೆ ಇವರ ಕಂಠಸ್ಪರ್ಶದಲ್ಲಿ ದೈವದಶಕಂನ ದಾರ್ಶನಿಕ ಸಂದೇಶಗಳು ಧ್ವನಿಯಾಗಿ ಮೂಡಿಬಂದ ಈ ಧ್ವನಿ ಸುರುಳಿ, ಆತ್ಮಚಿಂತನೆ, ಸಮಾನತೆ ಮತ್ತು ಮಾನವೀಯತೆಯ […]
04-01-2026, 7:01 AM
ದೈವ ದಶಕಂ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಮಹಿಳಾ ಘಟಕದ ಭಾಗವಹಿಕೆ ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ಪೂಜ್ಯ ನಾರಾಯಣ ಗುರುಗಳು ರಚಿಸಿದ “ದೈವ ದಶಕಂ” ಕೃತಿಯ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಸದಸ್ಯರು […]
03-01-2026, 4:09 AM
ಕಾರ್ಕಳ: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ “ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ” ಕಾರ್ಯಕ್ರಮವು ಜನವರಿ 3ರಂದು ಘಟಕದ ಪೂರ್ವಾಧ್ಯಕ್ಷರಾದ ಗಣೇಶ್ ಸಾಲ್ಯಾನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮವನ್ನು ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ತತ್ವಗಳನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಸರಕಾರ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು […]
01-01-2026, 12:29 PM
ಬಂಟ್ವಾಳ : ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವು ಜಾತಿ–ಮತ–ಭೇದಗಳನ್ನು ಮೀರಿ ಮಾನವೀಯತೆಯ ಆಧಾರದ ಮೇಲೆ ಸಮಾಜವನ್ನು ಒಗ್ಗೂಡಿಸುವ ಶಾಶ್ವತ ಚಿಂತನೆಯಾಗಿದೆ. ಗುರುಗಳ ತತ್ತ್ವಗಳು, ಶಾಂತಿ, ಸೌಹಾರ್ದತೆ ಮತ್ತು ಸಮತೋಲನದ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಿವೆ. ಗುರುಗಳ ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಸಮಾಜ ಸಮರಸತೆ ಸಾಧ್ಯವಾಗುತ್ತದೆ ಎಂಬ ಸತ್ಯವನ್ನು ಈ ಚಿಂತನೆ ನಮಗೆ ನೆನಪಿಸುತ್ತದೆ ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು. ಅವರು ಜನವರಿ 01ರಂದು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ರಾಮನಗರ ಮದ್ವದಲ್ಲಿ, ಯುವವಾಹಿನಿ ಬಂಟ್ವಾಳ […]
29-12-2025, 6:08 AM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯರು ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಅನುಯಾಯಿಗಳ ತಂಡವು ದಿನಾಂಕ: 29- 12-2025 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಕೇರಳದ ಶಿವಗಿರಿಯಲ್ಲಿ ಡಿಸಂಬರ್ 30, 31 ರಂದು ನಡೆಯಲಿರುವ ತೀರ್ಥಾಟನೆಯಲ್ಲಿ ಭಾಗವಹಿಸಲು ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.)ಮಂಗಳೂರು ಘಟಕದ ಮಾಜಿ ಅಧ್ಯಕ್ಷರುಗಳಾದ ಹರೀಶ್ ಪೂಜಾರಿ, ಹರೀಶ್ ವಿ. ಪಚ್ಚನಾಡಿ ಮತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು.
12-12-2025, 7:18 AM
ದಿನಾಂಕ – 13/11/2025 ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರು : ರೇಣುಕಾ ಕಣಿಯೂರು ನಾರಾಯಣಗುರುಗಳ ದೃಷ್ಟಿಯಲ್ಲಿ ದೇವರು ಕಲ್ಲಿನೊಳಗಿಲ್ಲ, ಅವನು ಕರುಣೆಯೊಳಗಿದ್ದಾನೆ, ಪ್ರೀತಿಯೊಳಗಿದ್ದಾನೆ, ಮಾನವತೆಯೊಳಗಿದ್ದಾನೆ. ಅವರು ನಿರ್ಮಿಸಿದ ದೇವಾಲಯಗಳು ಕೇವಲ ಪೂಜೆಯ ಸ್ಥಳವಲ್ಲ, ಅವು ಮಾನವನ ಆತ್ಮಕ್ಕೆ ದಿಕ್ಕು ತೋರಿದ ಬೆಳಕಿನ ಮಂದಿರಗಳು. ಅವರು ಶಿಕ್ಷಣವನ್ನು ಶಕ್ತಿಯನ್ನಾಗಿ, ಜ್ಞಾನವನ್ನು ವಿಮೋಚನೆಯನ್ನಾಗಿ ರೂಪಿಸಿದರು. ನಾರಾಯಣಗುರುಗಳ ಜೀವನವೆಂದರೆ ಅಜ್ಞಾನದಿಂದ ಜ್ಞಾನಕ್ಕೆ, ಅಸಮಾನತೆಯಿಂದ ಸಮಾನತೆಗೆ, ಅಹಂಕಾರದಿಂದ ಮಾನವೀಯತೆಗೆ ನಡೆದ ಪವಿತ್ರ ಪಯಣದಲ್ಲಿ ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರುಗಳ ಧ್ಯೇಯ […]