Yuvavahini

ನಾರಾಯಣ ಗುರು

ಗುರು ತತ್ವಗಳಿಂದ ಸಂಘಟನೆಯೇ ಯಶಸ್ಸಿನ ದಾರಿ : ಕುಸುಮಾಕರ್ ಕುಂಪಲ

ಸುಳ್ಯ : “ಮನುಷ್ಯರೆಲ್ಲರೂ ಒಂದೇ ಜಾತಿ ಎಂಬ ಸಂದೇಶವನ್ನು ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಪ್ರತಿಯೊಬ್ಬರೂ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯ. ಗುರು ತತ್ವಗಳನ್ನು ಆಧಾರವಾಗಿಟ್ಟುಕೊಂಡು ಸಂಘಟಿತರಾದರೆ ಯಶಸ್ಸು ಖಂಡಿತ,” ಎಂದು ಯುವವಾಹಿನಿ ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಕುಸುಮಾಕರ ಕುಂಪಲ ಹೇಳಿದರು.ಅವರು ದಿನಾಂಕ 18.01.2026 ರಂದು ಯುವವಾಹಿನಿ ಸುಳ್ಯ ಘಟಕದ ವತಿಯಿಂದ, ಸುಳ್ಯ ಘಟಕದ ಸ್ಥಾಪಕಾಧ್ಯಕ್ಷ ಶಿವಪ್ರಸಾದ್ ಕೆ.ವಿ. ಅವರ ಮನೆಯಲ್ಲಿ ಆಯೋಜಿಸಲಾದ ಗುರುಸ್ಫೂರ್ತಿ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿ ಮಾತನಾಡಿದರು. […]

Read More

ಸಾಮಾಜಿಕ ಬಂಧನಗಳಿಂದ ಮುಕ್ತಿಗೆ ಗುರುತತ್ವವೇ ಮಾರ್ಗ – ವಿದ್ದು ಉಚ್ಚಿಲ್

ಉಡುಪಿ: ವಿವಿಧ ರೂಪದ ಸಾಮಾಜಿಕ ಕಟ್ಟುಪಾಡುಗಳ ಕಾರಣದಿಂದ ಗಂಭೀರ ಶೋಷಣೆಗೆ ಗುರಿಯಾಗಿದ್ದ ಸಮಾಜಕ್ಕೆ ಬೆಳಕು ತೋರಿದ ಮಹಾನ್ ಚಿಂತಕ ನಾರಾಯಣ ಗುರು ಆಗಿದ್ದಾರೆ. ಸಮಾನ ಮನಸ್ಕ ಅನುಯಾಯಿಗಳ ಮೂಲಕ ತ್ಯಾಗ ಹಾಗೂ ಸೇವೆಯ ಮೌನ ಕ್ರಾಂತಿಯನ್ನು ಸಂಘಟಿಸಿದ ಗುರುಗಳಲ್ಲಿ ಬದ್ದತೆಯ ಅನನ್ಯ ಆದರ್ಶಗಳು ಅಡಗಿವೆ ಎಂದು ರಂಗನಿರ್ದೇಶಕ ವಿದ್ದು ಉಚ್ಚಿಲ್ ತಿಳಿಸಿದರು. ಪ್ರಸ್ತುತ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಡಿ ಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿರುವ ಎಲ್ಲಾ ತರದ ಸಾಮಾಜಿಕ ಬಂಧನಗಳಿಂದ ಬಿಡುಗಡೆಯು ಗುರುತತ್ವಗಳ ಪಾಲನೆಯಿಂದ ಮಾತ್ರ ಸಾಧ್ಯವಿದೆ ಎಂದು ಅವರು […]

Read More

ದೈವದಶಕಂ ಕನ್ನಡ ಗಾಯನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಕೊಲ್ಯ ಘಟಕದ ಸದಸ್ಯರ ಭಾಗವಹಿಕೆ

ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಮಂಗಳೂರು ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ದೈವದಶಕಂ ಕನ್ನಡ ಗಾಯನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿದರು ಕಾರ್ಯಕ್ರಮವು ಭಕ್ತಿಭಾವ ಹಾಗೂ ನೆರವೇರಿತು.

Read More

ದೈವದಶಕಂ : ಧ್ವನಿಸುರುಳಿ ಬಿಡುಗಡೆ

ಶ್ರೀ ನಾರಾಯಣಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕುದ್ರೋಳಿ ತೀರ್ಥಾಟನಾ ಪ್ರಯುಕ್ತ, ಪೂಜ್ಯ ಬ್ರಹ್ಮಶ್ರೀ ನಾರಾಯಣಗುರುಗಳು ರಚಿಸಿದ ದೈವದಶಕಂ ಕೃತಿಯ ಕನ್ನಡ ಧ್ವನಿ ಸುರುಳಿ ಬಿಡುಗಡೆಯ ಕಾರ್ಯಕ್ರಮ ಇಂದು ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಕ್ತಿಭಾವಪೂರ್ಣವಾಗಿ ನಡೆಯಿತು. ಶ್ರೀರಕ್ಷಾ ಎಸ್. ಎಚ್. ಪೂಜಾರಿ ಕೊಣಾಜೆ ಇವರ ಕಂಠಸ್ಪರ್ಶದಲ್ಲಿ ದೈವದಶಕಂನ ದಾರ್ಶನಿಕ ಸಂದೇಶಗಳು ಧ್ವನಿಯಾಗಿ ಮೂಡಿಬಂದ ಈ ಧ್ವನಿ ಸುರುಳಿ, ಆತ್ಮಚಿಂತನೆ, ಸಮಾನತೆ ಮತ್ತು ಮಾನವೀಯತೆಯ […]

Read More

ದೈವ ದಶಕಂ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಮಹಿಳಾ ಘಟಕದ ಭಾಗವಹಿಕೆ

ದೈವ ದಶಕಂ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಮಹಿಳಾ ಘಟಕದ ಭಾಗವಹಿಕೆ ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ಪೂಜ್ಯ ನಾರಾಯಣ ಗುರುಗಳು ರಚಿಸಿದ “ದೈವ ದಶಕಂ” ಕೃತಿಯ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಸದಸ್ಯರು […]

Read More

ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ

ಕಾರ್ಕಳ: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ “ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ” ಕಾರ್ಯಕ್ರಮವು ಜನವರಿ 3ರಂದು ಘಟಕದ ಪೂರ್ವಾಧ್ಯಕ್ಷರಾದ ಗಣೇಶ್ ಸಾಲ್ಯಾನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮವನ್ನು ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ತತ್ವಗಳನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಸರಕಾರ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು […]

Read More

ನಾರಾಯಣಗುರುಗಳ ಸಂದೇಶ ಸಮಾಜದ ಸಮರಸತೆಗೆ ಪ್ರೇರಣೆ

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವು ಜಾತಿ–ಮತ–ಭೇದಗಳನ್ನು ಮೀರಿ ಮಾನವೀಯತೆಯ ಆಧಾರದ ಮೇಲೆ ಸಮಾಜವನ್ನು ಒಗ್ಗೂಡಿಸುವ ಶಾಶ್ವತ ಚಿಂತನೆಯಾಗಿದೆ. ಗುರುಗಳ ತತ್ತ್ವಗಳು, ಶಾಂತಿ, ಸೌಹಾರ್ದತೆ ಮತ್ತು ಸಮತೋಲನದ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಿವೆ. ಗುರುಗಳ ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಸಮಾಜ ಸಮರಸತೆ ಸಾಧ್ಯವಾಗುತ್ತದೆ ಎಂಬ ಸತ್ಯವನ್ನು ಈ ಚಿಂತನೆ ನಮಗೆ ನೆನಪಿಸುತ್ತದೆ ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು. ಅವರು ಜನವರಿ 01ರಂದು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ರಾಮನಗರ ಮದ್ವದಲ್ಲಿ, ಯುವವಾಹಿನಿ ಬಂಟ್ವಾಳ […]

Read More

ಶಿವಗಿರಿ ತೀರ್ಥಾಟನೆ

ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯರು ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಅನುಯಾಯಿಗಳ ತಂಡವು ದಿನಾಂಕ: 29- 12-2025 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಕೇರಳದ ಶಿವಗಿರಿಯಲ್ಲಿ ಡಿಸಂಬರ್ 30, 31 ರಂದು ನಡೆಯಲಿರುವ ತೀರ್ಥಾಟನೆಯಲ್ಲಿ ಭಾಗವಹಿಸಲು ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.)ಮಂಗಳೂರು ಘಟಕದ ಮಾಜಿ ಅಧ್ಯಕ್ಷರುಗಳಾದ ಹರೀಶ್ ಪೂಜಾರಿ, ಹರೀಶ್ ವಿ. ಪಚ್ಚನಾಡಿ ಮತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು.

Read More

ಗುರುತತ್ವವಾಹಿನಿ ಮಾಲಿಕೆ‌ 59 ಕಾರ್ಯಕ್ರಮ-ಯುವವಾಹಿನಿ(ರಿ.) ಬಂಟ್ವಾಳ ಘಟಕ

ದಿನಾಂಕ – 13/11/2025 ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರು : ರೇಣುಕಾ ಕಣಿಯೂರು ನಾರಾಯಣಗುರುಗಳ ದೃಷ್ಟಿಯಲ್ಲಿ ದೇವರು ಕಲ್ಲಿನೊಳಗಿಲ್ಲ, ಅವನು ಕರುಣೆಯೊಳಗಿದ್ದಾನೆ, ಪ್ರೀತಿಯೊಳಗಿದ್ದಾನೆ, ಮಾನವತೆಯೊಳಗಿದ್ದಾನೆ. ಅವರು ನಿರ್ಮಿಸಿದ ದೇವಾಲಯಗಳು ಕೇವಲ ಪೂಜೆಯ ಸ್ಥಳವಲ್ಲ, ಅವು ಮಾನವನ ಆತ್ಮಕ್ಕೆ ದಿಕ್ಕು ತೋರಿದ ಬೆಳಕಿನ ಮಂದಿರಗಳು. ಅವರು ಶಿಕ್ಷಣವನ್ನು ಶಕ್ತಿಯನ್ನಾಗಿ, ಜ್ಞಾನವನ್ನು ವಿಮೋಚನೆಯನ್ನಾಗಿ ರೂಪಿಸಿದರು. ನಾರಾಯಣಗುರುಗಳ ಜೀವನವೆಂದರೆ ಅಜ್ಞಾನದಿಂದ ಜ್ಞಾನಕ್ಕೆ, ಅಸಮಾನತೆಯಿಂದ ಸಮಾನತೆಗೆ, ಅಹಂಕಾರದಿಂದ ಮಾನವೀಯತೆಗೆ ನಡೆದ ಪವಿತ್ರ ಪಯಣದಲ್ಲಿ ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರುಗಳ ಧ್ಯೇಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!