Yuvavahini

ಅಧ್ಯಕ್ಷರು

ಯಶವಂತ ಪೂಜಾರಿ : ಅಧ್ಯಕ್ಷರು -2017-18

ಆತ್ಮೀಯರೇ ಒಂದು ದಶಕದ ಹಿಂದಿನ ದಿನಗಳು ನನಗೆ ನೆನಪಾಗುತ್ತಿದೆ, ಅದು ಡಾನ್‍ಬಾಸ್ಕೋ ಮಿನಿ ಹಾಲ್‍ನ ಮೂಲೆಯ ಕುರ್ಚಿ ಮೇಲೆ ಕುಳಿತ್ತಿರುತ್ತಿದ್ದ ನಾನು ಯುವವಾಹಿನಿಯ ಸಭೆಯಲ್ಲಿ ನಡೆಯುವ ಕಲಾಪಗಳನ್ನು ಮೂಕ ವಿಸ್ಮಿತನಾಗಿ ವೀಕ್ಷಿಸುತ್ತಿದ್ದೆ. ಯಾರಾದರೂ ನನ್ನಲ್ಲಿ ವೇದಿಕೆಯ ಮುಂದೆ ಮಾತನಾಡಲು ಕೇಳುತ್ತಾರೋ ಎಂದು ಅಂಜಿ ಸಭೆಯಿಂದ ಎಷ್ಟೊ ಬಾರಿ ಅರ್ಧದಿಂದ ಎದ್ದು ನಡೆದಿದೆ. ಯಾವುದೇ ಜವಬ್ದಾರಿಕೊಟ್ಟರೂ ಮತ್ತೆ ಎರಡು ದಿನ ನನಗೆ ನಿದ್ದೆಯೇ ಬೀಳುತ್ತಿರಲಿಲ್ಲ. ಇದೆಲ್ಲ ಮರೆಯಾಗಿ ಕೇವಲ ಹತ್ತು ವರುಷ ಕಳೆಯಿತು. ಹತ್ತು ವರುಷದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. […]

Read More

ಪದ್ಮನಾಭ ಮರೋಳಿ : ಅಧ್ಯಕ್ಷರು 2016-17

ಆತ್ಮೀಯರೇ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳ ಬೆಳಕಿನಡಿಯಲ್ಲಿ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯದೊಂದಿಗೆ ನಿಸ್ವಾರ್ಥ ಹಾಗೂ ಅರ್ಪಣಾ ಮನೋಭಾವದ ಸದಸ್ಯರ ಕೂಡುವಿಕೆಯೊಂದಿಗೆ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಹಾನ್ ಸಂಸ್ಥೆಯೇ ಯುವವಾಹಿನಿ. ನವೋಲ್ಲಾಸದ ನವ ಚೈತನ್ಯದಿಂದ 30ನೇ ಸಮಾವೇಶದ ವಿಶಿಷ್ಟ ಕಾರ್ಯಕ್ರಮದ ಅಂಗಳದಲ್ಲಿ ನಾವಿದ್ದೇವೆ. ದಿನಾಂಕ 30-07-2016ರಂದು ಪೊಡವಿಗೂಡೆಯ ಶ್ರೀಕೃಷ್ಣನ ನಾಡಾದ ಉಡುಪಿಯಲ್ಲಿ ಅಧ್ಯಕ್ಷನಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಸಮಾಜದ ನೋವಿನೊಂದಿಗೆ ನೊಂದಿದ್ದೇನೆ, ನಲಿವಿನೊಡನೆ ಕುಣಿದಿದ್ದೇನೆ ಹಾಗೂ ಎಲ್ಲರ ಸಲಹೆ, […]

Read More

ಕಿಶೋರ್ ಕೆ. ಬಿಜೈ – ಅಧ್ಯಕ್ಷರು -2011-12

ಮಂಗಳೂರಿನ ಬಿಜೈ ನಿವಾಸಿಯಾಗಿರುವ ಕೆ. ಮೋನಪ್ಪ ಸುವರ್ಣ ಮತ್ತು ಶ್ರೀಮತಿ ಕೆ. ಜಲಜಾಕ್ಷಿ ಇವರ ಸುಪುತ್ರನಾಗಿರುವ ಕಿಶೋರ್ ಕೆ. ಬಿಜೈ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸಂತ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಕೆನರಾ ಹೈಸ್ಕೂಲ್ ಡೊಂಗರಕೇರಿ ಇಲ್ಲಿ ಪೂರೈಸಿ, ಕೆನರಾ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದಿರುತ್ತಾರೆ. ಇದೇ ವೇಳೆ ಇವರಿಗೆ ಎಸ್ .ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರೀಯಲ್ ಕೋ ಆಪರೇಟೀವ್ ಸೊಸೈಟಿಯಲ್ಲಿ ಉದ್ಯೋಗ ಲಭಿಸಿದ್ದು, ಉದ್ಯೋಗವನ್ನು ಮಾಡುತ್ತಲೇ ಶಿಕ್ಷಣವನ್ನು […]

Read More

ಡಾ. ಸದಾನಂದ ಕುಂದರ್ – ಅಧ್ಯಕ್ಷರು -2010-11

ಮಂಗಳೂರು ತಾಲೂಕಿನ ತಾಳಿಪಾಡಿ ಗ್ರಾಮದ ದಿ| ಸಂಜೀವ ಜಿ. ಅಮೀನ್ ಮತ್ತು ಶ್ರೀಮತಿ ಜಾನಕಿಯವರ ಸುಪುತ್ರರಾದ ಡಾ| ಸದಾನಂದ ಕುಂದರ್‌ರವರು ಸುಮಾರು 34 ವರ್ಷಗಳಿಂದ ನೆಲ್ಯಾಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಜಾದೂಗಾರರಾಗಿಯೂ ಖ್ಯಾತಿಯನ್ನು ಪಡೆದಿರುತ್ತಾರೆ. ಕಳೆದ 20 ವರ್ಷಗಳಿಂದ ಕರ್ನಾಟಕ, ಕೇರಳ, ಗೋವಾ ರಾಜ್ಯಗಳಲ್ಲಿ 900 ಕ್ಕೂ ಮಿಕ್ಕಿ ಜಾದೂ ಪ್ರದರ್ಶನಗಳನ್ನು ನೀಡಿ ಜನಮೆಚ್ಚುಗೆಯನ್ನು ಗಳಿಸಿರುತ್ತಾರೆ. ಆರೋಗ್ಯ ಮಾಹಿತಿಯಲ್ಲಿ ಜಾದೂ, ಜನಜಾಗೃತಿಗಾಗಿ ಜಾದೂ, ಬುದ್ಧಿಮಾಂದ್ಯರಿಗೆ ಜಾದೂ, ಗುಜರಾತ್ ಭೂಕಂಪ ಮತ್ತು ತ್ಸುನಾಮಿ ಸಂತ್ರಸ್ತರ ಪರಿಹಾರ ನಿಧಿಗಾಗಿ ಜಾದೂ ಹೀಗೆ ಹಲವು ಜನಹಿತ […]

Read More

ಜಯರಾಮ ಕಾರಂದೂರ್ – ಅಧ್ಯಕ್ಷರು -2009-10

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಮನೆತನಗಳಾದ ಕಾರಂದೂರು ಹಾಗೂ ಪಡುಪಾಲ್ಜಾಲು ಮನೆತನದ ಪಡುಪಾಲ್ಜಾಲು ಪದ್ಮ ಪೂಜಾರಿ ಮತ್ತು ಶ್ರೀಮತಿ ಲಕ್ಷ್ಮಿ ಪಿ. ಪೂಜಾರಿಯವರ ಸುಪುತ್ರರಾದ ಇವರು ಬಿ.ಎ. ಪದವೀಧರ. 7ನೇ ತರಗತಿಯಲ್ಲಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. M.C.F. Ltd ಕಂಪೆನಿಯಲ್ಲಿ ಸಾರ್ವಜನಿಕ ಸಂಪರ್ಕ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ, ಎರಡು ಬಾರಿ ಸಿಂಚನ ಜಾಹಿರಾತಿನ ಸಂಚಾಲಕರಾಗಿ ಯುವವಾಹಿನಿ ವಾರ್ಷಿಕ ಸಮಾವೇಶದ ಸಂಚಾಲಕರಾಗಿ, ಮಂಗಳೂರು ಶ್ರೀ ಗೋಕರ್ಣನಾಥ ಕೋ ಓಪರೇಟಿವ್ […]

Read More

ಮೂಲ್ಕಿ ಚಂದ್ರಶೇಖರ್ ಸುವರ್ಣ – ಅಧ್ಯಕ್ಷರು -2008-09

ಯುವವಾಹಿನಿ ಕೇಂದ್ರ ಸಮಿತಿಯ 2008-09 ನೇ ಸಾಲಿನ ಅಧ್ಯಕ್ಷರಾಗಿರುವ ಇವರು ಪ್ರಸಕ್ತ ಮೂಲ್ಕಿ ಬಿಲ್ಲವ ಸಂಘದ ಜೊತೆ ಕಾರ್ಯದರ್ಶಿಯಾಗಿ, ಬಪ್ಪನಾಡು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿದ್ದು ಮೂಲ್ಕಿ ದಿ ಯೂನಿಯನ್ ಕ್ಲಬ್‌ನ ಖಜಾಂಚಿಯಾಗಿ, ಮೂಲ್ಕಿ ಮೂರ್ತೆದಾರರ ಸೇವಾ ಸೊಸೈಟಿಯ ನಿರ್ದೇಶಕರಾಗಿರುತ್ತಾರೆ. ಹಾಗೂ ಮೂಲ್ಕಿ ಯುವವಾಹಿನಿ(ರಿ) ಘಟಕದ ಮಾಜಿ ಅಧ್ಯಕ್ಷರಾಗಿರುತ್ತಾರೆ. ಮೂಲ್ಕಿ ಚೆನ್ನಪ್ಪ ಸುವರ್ಣ ಮತ್ತು ಲಲಿತ ಸಿ. ಸುವರ್ಣರ ಸುಪುತ್ರನಾಗಿ 2-8-1960 ರಂದು ಜನಿಸಿದರು. ಪತ್ನಿ- ಚಿತ್ರಾ ಸಿ. ಸುವರ್ಣ, ಮಕ್ಕಳು – ಗಗನ್ ಸುವರ್ಣ, ದೀಕ್ಷಾ ಸುವರ್ಣ ಕಲಾ […]

Read More

ರವಿರಾಜ್ ಕುಮಾರ್ – ಅಧ್ಯಕ್ಷರು -2007-08

ಶ್ರೀಯುತ ಬಿ. ವಾಸು ಮತ್ತು ಶ್ರೀಮತಿ ಕುಸುಮ ದಂಪತಿಯವರ ಸುಪುತ್ರ ಶ್ರೀ ರವಿರಾಜ ಕುಮಾರ್ 10.04.1963 ರಂದು ಉಡುಪಿಯ ಉದ್ಯಾವರದಲ್ಲಿ ಜನಿಸಿದರು. ಬಿ.ಕಾಂ., ಎಲ್.ಎಲ್.ಬಿ ಪದವೀಧರರಾದ ಇವರು ಉಡುಪಿ ಹೃದಯ ಭಾಗದಲ್ಲಿರುವ ಮೈತ್ರಿ ಕಾಂಪ್ಲೆಕ್ಸ್‌ನಲ್ಲಿ ಸ್ವಂತ ಕಛೇರಿಯೊಂದಿಗೆ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲಾ ನ್ಯಾಯಾಲಯದ ವಕೀಲರಾದ ಶ್ರೀಯುತರು ಹಲವಾರು ಇನ್ಸೂರೆನ್ಸ್ ಕಂಪೆನಿಗಳಿಗೆ ಸಲಹಾ ವಕೀಲರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮೂರು ವರ್ಷಗಳವರೆಗೆ ಸರಕಾರೀ ಹೆಣ್ಮಕ್ಕಳ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ, 1995-2005 ರ ವರೆಗೆ ಸರಕಾರೀ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ದುಡಿದ ಅನುಭವ […]

Read More

ನೇಮಿರಾಜ್ ಪಿ. – ಅಧ್ಯಕ್ಷರು -2006-07

ಮಂಗಳೂರಿನ ಮರೋಳಿ ಕುಲಶೇಖರ ನಿವಾಸಿಯಾಗಿರುವ ನೇಮಿರಾಜ್ ಓರ್ವ ಉತ್ತಮ ಸಂಘಟಕರು, ಕಲಾಪೋಷಕರಾಗಿ ಬೆಳೆದವರು. ನಾಯಕತ್ವ ಗುಣವನ್ನು ತನ್ನೊಡಲಲ್ಲೇ ತುಂಬಿಕೊಂಡು ಬಂದಿರುವಂತಹ ಶ್ರೀಯುತರು ಯುವವಾಹಿನಿಯ ಸ್ಥಾಪಕ ಸದಸ್ಯರಾಗಿರುವುದರೊಂದಿಗೆ ಪ್ರತಿಯೊಂದು ಕಾರ್ಯಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡವರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಶ್ರೀಯುತರು 2004ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವರು. ಕೇಂದ್ರ ಸಮಿತಿಯ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ 2006-07ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ. ’ಜೈ ಭಾರತ್‌ಮಾತಾ ಎಜುಕೇಶನ್ ಸೊಸೈಟಿ, ಮಂಡ್ಯ’ ಇದರ ಅಧ್ಯಕ್ಷರಾಗಿ, ಆತ್ಮಶಕ್ತಿ ವಿವಿದೋದ್ಧೇಶ ಸಹಕಾರಿ ಸಂಘ […]

Read More

ತಾರಾನಾಥ್ ಎಚ್. ಬಿ. – ಅಧ್ಯಕ್ಷರು -2005-06

2005-06 ಯುವವಾಹಿನಿಯ ಚರಿತ್ರೆಯಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ವರ್ಷ. ಯುವವಾಹಿನಿ ಬಹುದಿನಗಳಿಂದ ಕಂಡ ಕನಸು ನನಸಾದ ಸಮಯ. ಬ್ರಹ್ಮಶ್ರೀ ನಾರಾಯಣ ಗುರುಗಳ 150 ನೇ ಜಯಂತಿಯ ವರ್ಷಾ ಚಾರಣೆಯ ಸಂಭ್ರಮದಲ್ಲಿ ಅವರ ಬದುಕನ್ನು ಸಾಕ್ಷ್ಯ ಚಿತ್ರದ ಮೂಲಕ ಸಮಾಜಕ್ಕರ್ಪಿಸಿದ ವರ್ಷ. ದಿನಾಂಕ 4-9-2005 ರಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರನ ದಿವ್ಯ ಸನ್ನಿಧಿಯಲ್ಲಿ, ಅಧ್ಯಕ್ಷ ಕೊರಗಪ್ಪ ಸಭಾಭವನದಲ್ಲಿ ಕನ್ನಡ ಚಲನ ಚಿತ್ರರಂಗದ ದಿಗ್ಗಜ ಶ್ರೀ ಗಿರೀಶ್ ಕಾಸರವಳ್ಳಿಯವರ ಅಮೃತ ಹಸ್ತದಲ್ಲಿ, ಶ್ರೀ ಜಯ ಸಿ.ಸುವರ್ಣರವರ ಅಧ್ಯಕ್ಷತೆಯಲ್ಲಿ ಖ್ಯಾತ ನಿರ್ದೇಶಕರಾದ ಶ್ರೀ ಸದಾನಂದ […]

Read More

ಜಿತೇಂದ್ರ ಜೆ. ಸುವರ್ಣ – ಅಧ್ಯಕ್ಷರು -2004-05

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ದಿನಾಂಕ 2-9-1971 ರಲ್ಲಿ ಜನಿಸಿದ ಜಿತೇಂದ್ರ ಜೆ.ಸುವರ್ಣರವರು ಬಿ.ಕಾಂ. ಪದವೀದರರಾಗಿದ್ದು ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿರುವರು. ಯುವವಾಹಿನಿಯ 2004-05 ರ ಸಾಲಿನ ಅಧ್ಯಕ್ಷರಾಗಿ ಎಲ್ಲಾ ಘಟಕದೊಂದಿಗೆ ನಿಕಟ ಸಂಪರ್ಕವಿರಿಸಿ ಘಟಕಗಳು ಉತ್ತಮ ಕಾರ್ಯಕ್ರಮವನ್ನು ನಡೆಸಿಕೊಳ್ಳುವಲ್ಲಿ ಸಹಕರಿಸಿ ಸಂಸ್ಥೆಯನ್ನು ಮುನ್ನಡೆಸಿದವರು. ಉದ್ಯಮಿಯಾಗಿರುವ ಇವರು ಕೊಡುಗೈದಾನಿಯಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ದುಡಿದಿರುವ ಅನುಭವ ಹೊಂದಿದವರಾಗಿರುತ್ತಾರೆ. ಬಂಟ್ವಾಳ ತಾಲೂಕು ಯುವಜನ ಒಕ್ಕೂಟದ ಮಾಜಿ ಉಪಾಧ್ಯಕ್ಷರಾಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸಿನ ಗ್ರಾಮ ಮಟ್ಟ, ಮಂಡಳಿ ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!