16-07-2026, 2:00 PM
ಮಾಣಿ, ಜುಲೈ 16: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಘಟಕದ ಸದಸ್ಯರ ಮಕ್ಕಳಿಗೆ ‘ಪ್ರತಿಭಾ ಗೌರವ ಅಭಿನಂದನಾ ಕಾರ್ಯಕ್ರಮ’ ಆಯೋಜಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಆಧ್ಯಾ ಎಂ.ಎಸ್., ಗ್ರೀಷ್ಮಾ, ಪ್ರಗತಿ ಆರ್. ಸಾಲ್ಯಾನ್, ಹನ್ಶಿಕಾ ಎಸ್.ಡಿ. ಪೂಜಾರಿ, ಕೌಶಿಕ್, ದಿಶಾ ಕೆ. ಪೂಜಾರಿ, ದಿಶಾಂತ್ ಪೂಜಾರಿ ಹಾಗೂ ಪೂರ್ವಿ ಬಿ.ಕೆ. ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದ […]
Read More
15-07-2026, 6:00 PM
ಮಾಣಿ, ಜುಲೈ 15: ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕರಾದ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ₹75,000 ಧನಸಹಾಯ ಹಸ್ತಾಂತರಿಸಲಾಯಿತು. ಘಟಕದ ಸದಸ್ಯರ ಸ್ವಯಂಪ್ರೇರಿತ ಸಹಕಾರದಿಂದ ಈ ಧನಸಹಾಯವನ್ನು ಸಂಗ್ರಹಿಸಿ, ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ, ಸಂಕಷ್ಟದ […]
Read More
08-07-2026, 1:00 PM
ಮಾಣಿ, ಜುಲೈ 8: ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಯುವವಾಹಿನಿ (ರಿ.) ಮಾಣಿ ಘಟಕವು ತನ್ನ ‘ಯುವ ಆರೋಗ್ಯ ಸ್ಪರ್ಶ’ ಯೋಜನೆಯಡಿ ಘಟಕದ ಸಕ್ರಿಯ ಸದಸ್ಯ ಯಶೋಧರ ಕೊಡಾಜೆ (ಮಾಣಿ ಗ್ರಾಮದ ದೈವಪಾತ್ರಿ) ಅವರ ಚಿಕಿತ್ಸೆಗೆ ₹50,000 ಧನಸಹಾಯವನ್ನು ವಿತರಿಸಿತು. ಯಶೋಧರ ಕೊಡಾಜೆ ಅವರು ಎಲುಬುಗಳಿಗೆ ಸಂಬಂಧಿಸಿದ ಅಪರೂಪದ ಆಲ್ಕಾಪ್ಟೋನೂರಿಯಾ (Alkaptonuria) ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಹಲವು ವರ್ಷಗಳಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ […]
Read More
06-07-2026, 10:00 PM
ಮಾಣಿ, ಜೂನ್: ಯುವವಾಹಿನಿ (ರಿ.) ಮಾಣಿ ಘಟಕದ ‘ಯುವ ಸೇವಾ ಸ್ಪರ್ಶ’ ಯೋಜನೆಯಡಿ ಗೋಳಿಕಟ್ಟೆಯ ನಿವಾಸಿಗಳಾದ ಆನಂದ ಹಾಗೂ ಲೀಲಾ ದಂಪತಿಗಳಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಅನಾರೋಗ್ಯದಿಂದ ಬಳಲುತ್ತಿರುವ ಲೀಲಾ ಅವರು ನಡೆಯಲೂ ಕಷ್ಟಪಡುತ್ತಿರುವುದಲ್ಲದೆ ಆನಂದ ಅವರ ಆರೋಗ್ಯವೂ ಉತ್ತಮವಾಗಿಲ್ಲ. ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಈ ದಂಪತಿಗಳಿಗೆ ಮಾನವೀಯ ಕಾಳಜಿಯಿಂದ ಯುವವಾಹಿನಿ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಿಸಿ ನೆರವು ನೀಡಲಾಯಿತು. ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ಅವರ ಅಧ್ಯಕ್ಷತೆಯಲ್ಲಿ ಹಾಗೂ […]
Read More
28-06-2026, 1:00 PM
ಮಾಣಿ, ಜೂ. 28: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಯುವ ಸದಸ್ಯತ್ವ ಅರಿವು, ನಾಯಕತ್ವ ತರಬೇತಿ ಹಾಗೂ ವಿದ್ಯಾರ್ಥಿ ಅಭಿನಂದನಾ ಕಾರ್ಯಕ್ರಮ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ರಾಜೇಶ್ ಸುವರ್ಣ, ಬಂಟ್ವಾಳ ದೀಪ ಪ್ರಜ್ವಲನೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪ್ರೌಢಶಾಲಾ ಮಂಡಳಿಯ ಅಧ್ಯಕ್ಷ ಕಿರಣ್ ಹೆಗ್ಡೆ ಮಾತನಾಡಿ, “ಯುವಜನರಲ್ಲಿ ಸಂಘಟನಾ ಮನೋಭಾವ, […]
Read More
28-06-2026, 1:00 PM
ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಾಮಾಜಿಕ ಜಾಲತಾಣ ಹಾಗೂ ವೆಬ್ಸೈಟ್ ಸಂಪಾದಕರಾದ ರಾಜೇಶ್ ಸುವರ್ಣ ಅವರು ಯುವಕರಿಗೆ ಸದಸ್ಯತ್ವದ ಮಹತ್ವ, ನಾಯಕತ್ವದ ಗುಣಗಳು […]
Read More
28-06-2026, 10:00 AM
ಮಾಣಿ: “ಮರದ ನೆರಳು – ಬದುಕಿಗೆ ನೆರಳು” ಎಂಬ ಮಹೋನ್ನತ ಧ್ಯೇಯದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿದ್ದ “ಯುವ ವೃಕ್ಷೋತ್ಸವ” ಅಭಿಯಾನವು ಯಶಸ್ವಿಯಾಗಿ ಪೂರ್ಣಗೊಂಡಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಘಟಕವು 20 ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿತು. ಅಭಿಯಾನದ ಸಮಾರೋಪ ಕಾರ್ಯಕ್ರಮವು ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಈ ಅಭಿಯಾನದ ಮೂಲಕ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು […]
Read More
25-06-2026, 11:00 PM
ಮಾಣಿ, ಜೂನ್ 25: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮಜಿ ವೀರಕಂಭ ಶಾಲೆಯ ಮುಖಮಂಟಪದ ಮೇಲ್ಚಾವಣಿಗೆ ಅಳವಡಿಸಲಾದ ಶೀಟ್ಗಳ ಸಮರ್ಪಣೆ ಹಾಗೂ ಹಸ್ತಾಂತರ ಕಾರ್ಯಕ್ರಮ ಮತ್ತು “ಯುವ ವೃಕ್ಷೋತ್ಸವ–2026” ಕಾರ್ಯಕ್ರಮವು ಗುರುವಾರ ಶಾಲಾ ಆವರಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಅಶೋಕ್ ಪಡ್ಪು ಮಾತನಾಡಿ, “ಶಾಲೆಗಳ ಅಭಿವೃದ್ಧಿಗೆ ನೀಡುವ […]
Read More
22-06-2026, 6:00 PM
ಮಾಣಿ, ಜೂನ್ 22: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಯುವ ವೃಕ್ಷೋತ್ಸವ–2026” ಅಂಗವಾಗಿ ಮಾಣಿ ವ್ಯಾಪ್ತಿಯ ವಿವಿಧ ಶಾಲೆಗಳು, ಧಾರ್ಮಿಕ ಕ್ಷೇತ್ರಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಈ ಅಭಿಯಾನದ ಭಾಗವಾಗಿ ಶ್ರೀರಾಮಚಂದ್ರ ಪದವಿ ಪೂರ್ವ ಕಾಲೇಜು ಪೆರ್ನೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇರ, ಸರಕಾರಿ ಪ್ರೌಢಶಾಲೆ ಸೂರ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು, ಮಾಣಿ ಶ್ರೀ ಉಳ್ಳಾಲ್ತಿ ಧರ್ಮಚಾವಡಿ ಹಾಗೂ ಇಡ್ಕಿದು ಗ್ರಾಮ ಪಂಚಾಯಿತಿ ಅಂಗನವಾಡಿ ಕೇಂದ್ರ […]
Read More
18-06-2026, 6:00 PM
ಶಂಭೂರಿನ ದಕ್ಷಿಣ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 18-06-2026ರಂದು ಸಂಜೆ 6.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೆ “ಸಾಯಿ ಭಕ್ತಿ ಸುಧೆ” ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಮಂದಿರದ ಅರ್ಚಕರಾದ ಶ್ರೀ ಕೇಶವ ಶಾಂತಿ ಹಾಗೂಆಡಳಿತ ಮುಖ್ಯಸ್ಥರು ಸುರಜ್ ಸಾಯಿಅವರ ಮಾರ್ಗದರ್ಶನ ಹಾಗೂ ಸಮ್ಮುಖದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಜನಾ ತಂಡದ ಸದಸ್ಯರು ಮಂದಿರದ ಪರಿಸರದಲ್ಲಿ ಎರಡು ಸಂಪಿಗೆ ಗಿಡಗಳನ್ನು ನೆಡುವುದರ […]
Read More