Yuvavahini

ವೇಣೂರು

ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ವೃತ್ತಿಮಾರ್ಗದರ್ಶನ ಶಿಬಿರ

ವೇಣೂರು : ಸೂಕ್ತವಾದ ಒಂದು ಉದ್ಯೋಗವನ್ನು ಪಡೆಯಬೇಕಾದರೆ ನಾವು ಯಾವ ತೆರನಾದ ಶಿಕ್ಷಣವನ್ನು ಪಡೆಯಬೇಕು ಎಂಬ ಮಾಹಿತಿಯನ್ನು ಪಡೆದುಕೊಂಡು ಅದರಂತೆಯೇ ನಾವು ಮುನ್ನಡೆದರೆ ನಮ್ಮ ಬದುಕು ಹಸನನಾಗುವುದರಲ್ಲಿ ಯಾವುದೇ ಸಂಶಯವಿಲ್ಲಯೆಂದು ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರಾಸಾಯನಶಾಸ್ರ ಉಪನ್ಯಾಸಕರಾದ ಸಂತೋಷ್ ಎ ಹೇಳಿದರು. ಅವರು ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ವೇಣೂರು ಲಯನ್ಸ್ ಭವನದಲ್ಲಿ ನಡೆದ ವೃತ್ತಿಮಾರ್ಗದರ್ಶನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ) ವೇಣೂರು ಘಟಕದ ಅಧ್ಯಕ್ಷರಾದ ನವೀನ್ ಪೂಜಾರಿ […]

Read More

ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ: ನ್ಯಾಯಾಧೀಶ ಬಿ.ಕೆ. ನಾಗೇಶ್‌ಮೂರ್ತಿ

ವೇಣೂರು: ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಚೌಕಟ್ಟಿನಲ್ಲಿ ಬದುಕಬೇಕು. ಈಗಾಗಿ ಕಾನೂನಿನ ಸಾಮಾನ್ಯ ಜ್ಞಾನ ಎಲ್ಲರಿಗೂ ಅವಶ್ಯಕವಾಗಿದೆ. ನಿತ್ಯ ಜೀವನದಲ್ಲಿ ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಬಿ.ಕೆ. ನಾಗೇಶ್‌ಮೂರ್ತಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಯುವವಾಹಿನಿ ಘಟಕ ವೇಣೂರು ಹಾಗೂ ವೇಣೂರು ಸ.ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜು. 09 ರಂದು ವೇಣೂರು ಸ.ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ಜರಗಿದ ಕಾನೂನು […]

Read More

ಬಜಿರೆ ಹಿಂದೂರುದ್ರಭೂಮಿಯಲ್ಲಿ ಸಸಿನೆಡುವ ಕಾರ್ಯಕ್ರಮ

ವೇಣೂರು: ಯುವವಾಹಿನಿ ಘಟಕ ವೇಣೂರು ಇದರ ಆಶ್ರಯದಲ್ಲಿ ಗ್ರಾ.ಪಂ. ವೇಣೂರು, ಹಿಂದೂ ರುದ್ರಭೂಮಿ ಅನುಷ್ಠಾನ ಸಮಿತಿ ಬಜಿರೆ, ಅರಣ್ಯ ಇಲಾಖೆ ವೇಣೂರು ಇದರ ಸಹಕಾರದಲ್ಲಿ ಪರಿಸರ ಸಂರಕ್ಷಣೆ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮವು ರವಿವಾರ ಬಜಿರೆ ಹಿಂದೂರುದ್ರಭೂಮಿ ಮೋಕ್ಷ ಧ್ವಾರ ಇಲ್ಲಿ ಜರಗಿತು. ವೇಣೂರು ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯುವವಾಹಿನಿ ಘಟಕದ ಅಧ್ಯಕ್ಷ ನವೀನ್ ಪಚ್ಚೇರಿ ಅಧ್ಯಕ್ಷತೆ ವಹಿಸಿದ್ದರು. ವೇಣೂರು ಗ್ರಾ.ಪಂ. ಉಪಾಧ್ಯಕ್ಷ […]

Read More

ಸಮಾಜಸೇವೆಯ ಪರಿಕಲ್ಪನೆ ಎಲ್ಲೆಡೆ ಫಸರಿಸಲಿ: ಜಯಂತ ನಡುಬೈಲು

ವೇಣೂರು: ಆರೋಗ್ಯ ಮತ್ತು ಶಿಕ್ಷಣಕ್ಕೆ ಉತ್ತೇಜನ ನೀಡುವ ವೇಣೂರು ಯುವವಾಹಿನಿ ಘಟಕದ ಕಾರ್ಯವೈಖರಿಯೇ ವಿಶಿಷ್ಟ. ಯುವ ಮನಸ್ಸುಗಳಿಂದ ನಿಶ್ವಾರ್ಥವಾಗಿ ನಡೆಯುವ ಇಂತಹ ಸೇವೆಯಿಂದ ಸಂಘಟನೆ ಜನಸಾಮಾನ್ಯರಿಗೆ ಹತ್ತಿರವಾಗುತ್ತಿದೆ. ಇಂತಹ ಸಮಾಜಸೇವೆಯ ಪರಿಕಲ್ಪನೆ ಎಲ್ಲೆಡೆ ಫಸರಿಸಲಿ ಎಂದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು. ಯುವವಾಹಿನಿ ವೇಣೂರು ಘಟಕದ ವತಿಯಿಂದ ರವಿವಾರ ವೇಣೂರು ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರಗಿದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಆಸರೆ ಎಂಬ […]

Read More

ಯುವವಾಹಿನಿ ವೇಣೂರು ಘಟಕಕ್ಕೆ ಯುವಕೀರ್ತಿ ಬಿರುದು ಪ್ರದಾನ

ವೇಣೂರು : ಯುವವಾಹಿನಿ ವೇಣೂರು ಘಟಕಕ್ಕೆ ಕಲಾಕಾರ್ ಕಲೋತ್ಸವ ಸಮಾರಂಭದಲ್ಲಿ ಯುವಕೀರ್ತಿ ಬಿರುದು ಪ್ರದಾನ ಮಾಡಲಾಯಿತು. ಯುವವಾಹಿನಿ ವೇಣೂರು ಘಟಕದ ಸಮಾಜಮುಖಿ ಸೇವಾ ಕಾರ್ಯಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನವೀನ್ ಪುಚ್ಚೇರಿ, ನಿಕಟಪೂರ್ವ ಅಧ್ಯಕ್ಷ ನಿತೀಶ್ ಎಚ್, ಸತೀಶ್ ಪಿ.ಎನ್ ಮತ್ತಿತರರು ಉಪಸ್ಥಿತರಿದ್ದರು

Read More

ಯುವವಾಹಿನಿ (ರಿ) ವೇಣೂರು ಘಟಕದಿಂದ ಸಾಂತ್ವನ ನಿಧಿ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಅಂಡಿಂಜೆ ಗ್ರಾಮಸಂಚಾಲನ ಸಮಿತಿಯ ವತಿಯಿಂದ ಮರಕಡಿಯುವ ಮೆಷಿನ್ ತಾಗಿ ಗಾಯಗೊಂಡು ‍ಆರ್ಥಿಕ ಸಂಕಷ್ಟದಲ್ಲಿರುವ ಅಂಡಿಂಜೆ ಗ್ರಾಮದ ಕಾನ ಮನೆಯ ಪ್ರವೀಣ್ ಪೂಜಾರಿಯವರಿಗೆ 10,000/ ರೂಪಾಯಿ ಸಾಂತ್ವನ ನಿಧಿಯನ್ನು ಹಸ್ತಾಂತರ ಮಾಡಲಾಯಿತು ,ಈ ಸಂದರ್ಭದಲ್ಲಿ ಸಂಚಾಲನ ಸಮಿತಿಯ ಅಧ್ಯಕ್ಷರಾದ ರಾಕೇಶ್ ಪೂಜಾರಿ ,ಕಾರ್ಯದರ್ಶಿ ರಕ್ಷಿತ್ ಹಲಕ್ಕಿ,ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯರಾದ ನಿತೀನ್ ಮುಂಡೇವು, ಯುವವಾಹಿನಿ ವೇಣೂರು ಘಟಕದ ನಿರ್ದೇಶಕರಾದ ಪ್ರಶಾಂತ್ ನವಜ್ಯೋತಿ ,ಉಮೇಶ್ಚಂದ್ರ ಅಂಬಲ,ಸತೀಶ್ ಪಿ ಎನ್,ಶುಭಕರ ರಾಗಿಮೇರು , […]

Read More

ಯುವವಾಹಿನಿ ಯುವಕರ ಪ್ರೇರಕ ಶಕ್ತಿ: ವಸಂತ ಬಂಗೇರ

ವೇಣೂರು : ಸಂಘಟನೆಗಳು ಉದ್ಯೋಗ, ಶಿಕ್ಷಣದ ಜತೆಗೆ ಸಮು ದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅದುವೇ ಮೂಲ ಉದ್ದೇಶವಾಗಬೇಕು. ಸಮುದಾಯದ ಅಭಿವೃದ್ಧಿಯ ವಿಷಯ ದಲ್ಲಿ ಹಸ್ತಕ್ಷೇಪ ಸಲ್ಲದು. ಸಾಮಾಜಿಕ ಸೇವೆಯಲ್ಲಿ ಯುವವಾಹಿನಿ ಯುವಕರ ಪ್ರೇರಕ ಶಕ್ತಿ ಆಗಿದೆ ಎಂದು ಹೇಳಿದರು.ಅಲ್ಲದೆ ಜಿಲ್ಲೆಯಲ್ಲಿ ಯುವವಾಹಿನಿ ಉತ್ತಮ ಕಾರ್ಯಸಾಧನೆ ಮಾಡಿದೆ. ಅದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿರುವುದು ನಮಗೆಲ್ಲ ಹೆಮ್ಮೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿರುವ ಈ ಸಂಘಟನೆಗೆ ಎಲ್ಲರೂ ಬೆಂಬಲ ನೀಡಬೇಕಿದೆ.ಅವಿಭಜಿತ ಜಿಲ್ಲೆ ಯಲ್ಲಿ ಬಿಲ್ಲವರೇ ಬಹುಸಂಖ್ಯಾಕರಾಗಿ ದ್ದಾರೆ. ಆದರೆ ನಮ್ಮಲ್ಲಿ […]

Read More

ಜಲ ಸಾಕ್ಷರತೆ ಅರಿವು ಹಾಗೂ ನದಿ ಮಟ್ಟ ಏರಿಕೆಗೆ ಶ್ರಮದಾನ

ವೇಣೂರು :ಯುವವಾಹಿನಿ(ರಿ) ವೇಣೂರು ಘಟಕದ ಆಶ್ರಯದಲ್ಲಿ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ದಿನಾಂಕ 20/1/2019ನೇ ಆದಿತ್ಯವಾರ ವೇಣೂರಿನ ಪಲ್ಗುಣಿ ನದಿಗೆ ಪಾರಂಪರಿಕ ಕಟ್ಟ ಹಾಕುವ ಮೂಲಕ ನದಿ ಮಟ್ಟ ಏರಿಕೆಗೆ ಶ್ರಮದಾನ ಮತ್ತು ಜಲ ಸಾಕ್ಷರತೆ ಅರಿವು ಕಾರ್ಯಕ್ರಮವು ವೇಣೂರಿನ ಕೈತೇರಿ ಎಂಬಲ್ಲಿ ನಡೆಯಿತು . ಉಪವಿಭಾಗಾಧಿಕಾರಿ ಡಾ.ಹೆಚ್.ಕೆ.ಕೃಷ್ಣ ಮೂರ್ತಿಯವರು ಚಾಲನೆ ನೀಡುವುದರೊಂದಿಗೆ ದಿನವಿಡೀ ನಡೆದ ಶ್ರಮದಾನದಲ್ಲಿ ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷರಾದ ನಿತೀಶ್ ಹೆಚ್. ಜಿಲ್ಲಾ ಪಂ.ಸದಸ್ಯರಾದ ಧರಣೇಂದ್ರ ಕುಮಾರ್,ಶೇಖರ್ ಕುಕ್ಕೇಡಿ,ಪತ್ರಕರ್ತ ಪದ್ಮನಾಭ ಕುಲಾಲ್, ಯುವವಾಹಿನಿ […]

Read More

ಕೋಟಿ-ಚೆನ್ನಯ ಕ್ರೀಡಾಕೂಟ: ಯುವವಾಹಿನಿ(ರಿ) ವೇಣೂರು ಘಟಕ ಸಮಗ್ರ ಚಾಂಪಿಯನ್‌

ವೇಣೂರು : ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆದ 9ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟದ ಪುರುಷರ ಮತ್ತು ಮಹಿಳೆಯರ ವಿಭಾಗ ದಲ್ಲಿ ಯುವವಾಹಿನಿ ವೇಣೂರು ಘಟಕವು ಸಮಗ್ರ ಚಾಂಪಿಯನ್‌ ಪ್ರಶಸ್ತಿ ಪಡೆದುಕೊಂಡಿದೆ. ಮಹಿಳೆಯರ ವಿಭಾಗದ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ಪ್ರಥಮ, ತ್ರೋಬಾಲ್‌ನಲ್ಲಿ ದ್ವಿತೀಯ, ಪುರುಷರ ವಿಭಾಗದಲ್ಲಿ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ರನ್ನರ್ಸ್‌ ಅಪ್‌ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು, ರೂ. 13,000 ನಗದು, ಪ್ರಶಸ್ತಿ ಪಡೆದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!