16-07-2026, 11:00 AM
ಮೂಡುಬಿದಿರೆ, ಜುಲೈ 16: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಯುವವಾಹಿನಿ ಕ್ರೀಡೋತ್ಸವ–2026ರ ಯಶಸ್ವಿ ಆಯೋಜನೆ ಕುರಿತು ಸಮಾಲೋಚನಾ ಸಭೆ ಇಂದು ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರನ್ನು ಭೇಟಿ ಮಾಡಿ ನಡೆಸಲಾಯಿತು. ಸಭೆಯಲ್ಲಿ ಕ್ರೀಡೋತ್ಸವದ ರೂಪುರೇಷೆ, ವ್ಯವಸ್ಥಾಪನೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಚರ್ಚಿಸಿ, ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಆಳ್ವಾಸ್ ಫೌಂಡೇಶನ್ನ ಸಹಕಾರ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ […]
Read More
11-07-2026, 4:00 PM
ಮೂಡುಬಿದಿರೆ, ಜುಲೈ 11: ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಮಾನಸಿಕ ಆರೋಗ್ಯದ ಮಹತ್ವ ತಿಳಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ-ಮಾದಕ ವಸ್ತು ವ್ಯಸನ ಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಹಾಗೂ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿ ಮನೋಹಿತ” ಆರೋಗ್ಯ ಮಾಹಿತಿ ಕಾರ್ಯಾಗಾರ ಜ್ಯೋತಿನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಆಪೋಲೀನೋ […]
Read More
29-06-2026, 2:00 PM
ಮೂಡುಬಿದಿರೆ, ಜೂನ್ 29: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮೂಡುಬಿದಿರೆಯ ಸಮಾಜ ಮಂದಿರದ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಮಾತನಾಡಿ, ಮಹಿಳೆಯರು ಕಾಲಕ್ಕೆ ತಕ್ಕಂತೆ ಬೇಡಿಕೆಯಿರುವ ಕೌಶಲ್ಯಗಳನ್ನು ಕಲಿತು ಸ್ವಯಂ […]
Read More
28-06-2026, 5:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ 2026ನೇ ಅಕ್ಟೋಬರ್ 4ರಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುವ ಯುವವಾಹಿನಿ ಕ್ರೀಡೋತ್ಸವ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು
Read More
23-06-2026, 1:00 PM
ಮೂಡುಬಿದಿರೆ, ಜೂನ್ 23: ಯುವವಾಹಿನಿ (ರಿ.) ಮೂಡುಬಿದರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ ಮೂಡುಬಿದರೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾರ್ಯಕ್ರಮವು ಮಂಗಳವಾರ ಮೂಡುಬಿದರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಉದ್ಘಾಟನೆಯಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ನಿರ್ದೇಶಕರಾದ ಶಂಕರ್ ಕೋಟ್ಯಾನ್ ಅವರು ಮಾತನಾಡಿ, “ಹೊಲಿಗೆ ಕಲಿತ ಮಹಿಳೆಯರು […]
Read More
21-06-2026, 5:00 PM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮ, ಕಲೆ, ಸಾಹಿತ್ಯ, ಭಜನಾ ಹಾಗೂ ನೃತ್ಯ ತಂಡಗಳ ರಚನೆ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜೂನ್ 21ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ವಹಿಸಿ, ಕಲೆ, ಸಾಹಿತ್ಯ, ಭಜನಾ ಹಾಗೂ ನೃತ್ಯ ತಂಡಗಳ ರಚನೆಯ ಉದ್ದೇಶ, ಕಾರ್ಯಯೋಜನೆ ಮತ್ತು ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆರ್.ಜೆ. ಹಾಗೂ ಸಾಹಿತಿ ವಿನೋದ್ ಕುಂಪಲ ಅವರು ಯುವ […]
Read More
31-05-2026, 1:00 PM
ಶಿರ್ತಾಡಿ : “ಹೋಮಿಯೋಪತಿ ಚಿಕಿತ್ಸೆಯು ಅಡ್ಡಪರಿಣಾಮಗಳಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿದೆ. ಕಳೆದ 13 ವರ್ಷಗಳಿಂದ ಆರೋಗ್ಯ ಸಮಸ್ಯೆಗಳು ಎದುರಾದಾಗ ನಾನು ಹೋಮಿಯೋಪತಿ ಚಿಕಿತ್ಸೆಯನ್ನೇ ಅನುಸರಿಸುತ್ತಿದ್ದು ಉತ್ತಮ ಫಲಿತಾಂಶ ಕಂಡಿದ್ದೇನೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 31-05-2026ರಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಆಳ್ವಾಸ್ […]
Read More
28-05-2026, 1:00 PM
ಮೂಡುಬಿದಿರೆ, ಮೇ 28: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ನೋಮಿ ನೆಟ್ವರ್ಕ್ ಪ್ರಾಯೋಜಕತ್ವದಲ್ಲಿ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಸಹಯೋಗದೊಂದಿಗೆ ಆಯೋಜಿಸಲಾದ 15 ದಿನಗಳ ಉಚಿತ ಫ್ಯಾಷನ್ ಡಿಸೈನ್ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು 28-05-2026 ರಂದು ವಿಚೀಸ್ ಕೌಶಲ್ಯ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಅವರು, ಮಹಿಳೆಯರು ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದು […]
Read More
17-05-2026, 1:30 PM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ತರಬೇತಿ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ “ಉಚಿತ ಮಲ್ಲಿಗೆ ಕೃಷಿ ಮಾಹಿತಿ ಶಿಬಿರವು ದಿನಾಂಕ 17/05/2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲ್ಲಿಗೆ ಕೃಷಿ ಮಾಹಿತಿ ಮತ್ತು ಪ್ರೇರಣೆ : ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ […]
Read More
17-05-2026, 1:00 PM
ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (ಬಿ.ವಿ.ಟಿ.) ಮಣಿಪಾಲ (ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ) ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಸೌರಶಕ್ತಿ ಯೋಜನೆ ಹಾಗೂ ಬ್ಯಾಂಕ್ ಸಾಲ ಸೌಲಭ್ಯಗಳ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಸಮಾಜ ಮಂದಿರದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ. ಅವರು, “ಪ್ರಸ್ತುತ ದಿನಗಳಲ್ಲಿ ಸೌರಶಕ್ತಿ ಆಧಾರಿತ ತಂತ್ರಜ್ಞಾನಗಳ ಬಳಕೆ […]
Read More