Yuvavahini

ಮೂಡಬಿದ್ರಿ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಸಾಧನೆ ಮೆಚ್ಚುವಂತದ್ದು : ಪದ್ಮನಾಭ ಸಾಲಿಯನ್

ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ 2024-25 ನೇ ಸಾಲಿನ ತಂಡದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ 29-12-2024 ರ ಅಪರಾಹ್ನ ಜರಗಿತು. ಮೂಡುಬಿದಿರೆ ಘಟಕವು ಆರಂಭವಾದಾಗಿನಿಂದ ಇದರ ಪ್ರತಿಯೊಂದು ಕಾರ್ಯಕ್ರಮವನ್ನು ನೋಡುವ ಅವಕಾಶ ನನಗೆ ಸಿಕ್ಕಿದೆ. ಇದುವರೆಗೆ ಘಟಕದ ಚುಕ್ಕಾಣಿಯನ್ನು ಎತ್ತಿ ಹಿಡಿದ ಆರು ಅಧ್ಯಕ್ಷರುಗಳು ಕೂಡ ಘಟಕದ ಬೆಳವಣಿಗೆಗೆ ಸಾಕ್ಷಿಯಾಗಿದ್ದಾರೆ ಎಂದು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀ […]

Read More

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗೋಣ

ಮೂಡುಬಿದಿರೆ: ಹಣತೆಯು ತಾನು ಬೆಳಕು ಚೆಲ್ಲುವ ಜೊತೆಗೆ ಇತರ ಹಣತೆಗಳನ್ನೂ ಬೆಳಗಿಸಿ ಬೆಳಕನ್ನು ಆಚರಿಸುವ ಪ್ರಕ್ರಿಯೆಯಲ್ಲಿ ಜೀವನ ಸಾರ್ಥಕ್ಯ ಸಾರುತ್ತದೆ‌. ನಾವೂ ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗಬೇಕಾಗಿದೆ. ಗಂಧದಂತೆ ಸವೆಸಿಕೊಂಡು ತ್ಯಾಗಿಯಾಗಿ ಪರಿಮಳಿಸಬೇಕಾಗಿದೆ ಎಂದು ಎಸ್.ಎನ್.ಎಂ ಪಾಲಿಟೆಕ್ನಿಕ್ ಉಪನ್ಯಾಸಕ ಡಾ. ಎಸ್.ಪಿ.ಗುರುದಾಸ್ ಅಭಿಪ್ರಾಯಪಟ್ಟರು. ಸಮಾಜ ಮಂದಿರ ಸಭಾ (ರಿ) ಮೂಡುಬಿದಿರೆ ಮತ್ತು ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಇವರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು ರಂಗೋಲಿ […]

Read More

ಯುವವಾಹಿನಿಯ ಸಿದ್ದತೆ ಮತ್ತು ಬದ್ದತೆ ಇತರರಿಗೆ ಮಾದರಿ : ನಾರಾಯಣ ಪಿ.ಎಂ

ಮೂಡುಬಿದಿರೆ: ದಿನೇ ದಿನೇ ಬಲಿಷ್ಠ ಸಂಘಟನೆಯಾಗಿ ಯಶಸ್ಸಿನತ್ತ ಮುನ್ನುಗ್ಗುತ್ತಿರುವ ಯುವವಾಹಿನಿಯ ಸದಸ್ಯರ ಸಿದ್ದತೆ ಮತ್ತು ಬದ್ದತೆ ಇತರರಿಗೆ ಮಾದರಿಯಾಗಿದೆ ಎಂದು ಉದ್ಯಮಿ ನಾರಾಯಣ ಪಿ.ಎಂ ತಿಳಿಸಿದರು. ಅವರು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 15-09-2024 ರಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆದ ಬಹುಮಾನ, ವಿದ್ಯಾರ್ಥಿ ವೇತನ ಹಾಗೂ ಸದಸ್ಯರ ಐಡಿ ಕಾರ್ಡ್ ವಿತರಣಾ ಸಮಾರಂಭವನ್ನು ದೀಪ ಬೆಳಗುವುದರ ಮೂಲಕ‌ ಉದ್ಘಾಟಿಸಿ ಮಾತನಾಡಿದರು.  ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ […]

Read More

ಮದ್ಯಮುಕ್ತ ಮೆಹೆಂದಿ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಯುವವಾಹಿನಿ ತಂಡ

ಮೂಡುಬಿದಿರೆ : ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯ ಉದ್ದೇಶವನ್ನು ಇಟ್ಟುಕೊಂಡ ಯುವವಾಹಿನಿ (ರಿ.) ಮೂಡುಬಿದರೆ ಘಟಕವು ಪ್ರಾರಂಭಿಸಿದ ಮದ್ಯ ಮುಕ್ತ ಮೆಹಂದಿ ಕಾರ್ಯಕ್ರಮದ ಅಡಿಯಲ್ಲಿ ಯುವವಾಹಿನಿಯ 34 ನೇ ಘಟಕ ಗ್ರಾಮಚಾವಡಿ ಕೊಣಾಜೆ ಇದರ ಅಧ್ಯಕ್ಷರಾದ ಹರೀಶ್ ಪೂಜಾರಿ ಇವರ ಧರ್ಮಪತ್ನಿಯ ತಮ್ಮನಾದ ಪಾಲಡ್ಕದ ಪೂಜಾರಿಬೆಟ್ಟು ನಿವಾಸಿ ಗ್ರಾಮಚಾವಡಿ ಘಟಕದ ಸದಸ್ಯ ಸುಕೇಶ್ ಪೂಜಾರಿ ಇವರು ತನ್ನ ಮದುವೆಯ ಮೆಹಂದಿ ಕಾರ್ಯಕ್ರಮವನ್ನು ತನ್ನ ಹುಟ್ಟೂರಾದ ಪಾಲಡ್ಕದ (ಮೂಡುಬಿದಿರೆ) ಮನೆಯಲ್ಲಿ ಬಹಳ ಸಾಂಪ್ರದಾಯಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾಜಿ […]

Read More

ನಾರಾಯಣಗುರುಗಳು ಮನುಕುಲದ ಪರಿವರ್ತನಾ ಚಿಂತಕರು : ಡಾ.ಮೋಹನ್ ಆಳ್ವ

ಮೂಡುಬಿದಿರೆ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ನಾರಾಯಣಗುರುಗಳು ಅಸ್ಪ್ರಶ್ಯತೆಯ ವಿರುದ್ಧ ಮೌನ ಕ್ರಾಂತಿಯ ಮೂಲಕ ಸಾಮಾಜಿಕ ಸುಧಾರಣೆಯನ್ನು ತನ್ನ ಜೀವಿತಾವಧಿಯಲ್ಲೇ ಸಾಧಿಸಿ ತೋರಿಸಿದ ಮನುಕುಲದ ಪರಿವರ್ತನಾ ಚಿಂತನೆಯ ವಿಶ್ವಗುರು ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್.ಮೋಹನ್ ಆಳ್ವ ಅಭಿಪ್ರಾಯ ಪಟ್ಟರು. ಅವರು ದಿನಾಂಕ 28-08-2024ನೇ ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ […]

Read More

ಆಟಿದ ಕೂಟ – 2024

ಮೂಡುಬಿದ್ರಿ :ಯುವವಾಹಿನಿ (ರಿ) ಮೂಡುಬಿದ್ರಿ ಘಟಕದ ವತಿಯಿಂದ ಆಟಿದ ಕೂಟ – 2024 28-07.2024 ನೇ ಆದಿತ್ಯವಾರ ಸೃಷ್ಟಿ ಮಲ್ಟಿಪರ್ಪಸ್ ಸಭಾಂಗಣ ಕಡಲಕೆರೆ ಒಂಟಿಕಟ್ಟೆ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರು ಶಂಕರ್ ಎ.ಕೋಟ್ಯಾನ್ ವಹಿಸಿದ್ದರು. ತೆಂಗಿನ ಮರದ ಕೊಂಬಿಗೆ ಹಾಲೆರೆಯುವ ಮುಖಾಂತರ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಪದ್ಮಯ್ಯ ಬಿ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಆಟಿದ ಮದಿಪು ನೀಡಲು ಆಗಮಿಸಿದ ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಸೀತಾರಾಮ್ ಕಟೀಲ್ […]

Read More

ಕಂಪ್ಯೂಟರ್ ಟೇಬಲ್ ವಿತರಣೆ

ಮೂಡುಬಿದ್ರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಮೂಡುಬಿದ್ರೆ ಘಟಕದ ವತಿಯಿಂದ ದಿ 18-07-2024ರಂದು ಮೂಡಬಿದ್ರೆಯ ಸರಕಾರಿ ಮೈನ್ ಶಾಲೆಗೆ ಅಗತ್ಯವಿರುವ ಕಂಪ್ಯೂಟರ್ ಟೇಬಲನ್ನು ಸದಸ್ಯರಾದ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಮಾಜಿ ಅಧ್ಯಕ್ಷರಾದ ಸುಶಾಂತ್ ಕರ್ಕೇರ, ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್, ಹಾಗೂ ಬಿಲ್ಲವ ಸಂಘ ಮೂಡಬಿದ್ರೆಯ ಆಡಳಿತ ಕಮಿಟಿ […]

Read More

ಸಮವಸ್ತ್ರ ವಿತರಣೆ

ಮೂಡುಬಿದ್ರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ವತಿಯಿಂದ ಮೂಡುಮಾರ್ನಾಡು ಅಂಗನವಾಡಿ ಶಾಲೆಯ 15 ಪುಟಾಣಿಗಳಿಗೆ ಉಚಿತ ಸಮವಸ್ತ್ರ ವಿತರಣೆಯ ಕಾರ್ಯಕ್ರಮವನ್ನು ಸದಸ್ಯರಾದ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಇವರು ವಿತರಿಸಿ ಪುಟಾಣಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್ ಹಾಗೂ ಅಂಗನವಾಡಿಯ ಶಿಕ್ಷಕರು, ಮತ್ತು ಮಕ್ಕಳ ಪೋಷಕರು ಹಾಜರಿದ್ದರು.

Read More

ಕಂಪ್ಯೂಟರ್ ಟೇಬಲ್ ಹಸ್ತಾಂತರ

ಮೂಡುಬಿದ್ರೆ : ವಿದ್ಯೆ ಉದ್ಯೋಗ ಸಂಪರ್ಕ ಎಂಬ ಧ್ಯೇಯ ಉದ್ದೇಶವನ್ನು ಮುಂದಿಟ್ಟುಕೊಂಡು ಸಮಾಜಮುಖಿ ಸೇವಾಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ದಿ 10-07-2024 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಜ್ಯೋತಿನಗರ, ಮೂಡುಬಿದಿರೆ ಇಲ್ಲಿಗೆ ಕಲಿಕೆಗೆ ಅಗತ್ಯವಾಗಿರುವ ಎರಡು ಕಂಪ್ಯೂಟರ್ ಟೇಬಲ್ ನ್ನು ಹಸ್ತಾಂತರಿಸುವ ಕಾರ್ಯಕ್ರಮವು ನಡೆಯಿತು. ಶಾಲಾ ಮುಖ್ಯೋಪಾಧ್ಯಾಯನಿ ಅಪೋಲಿನ್ ಮೊನಿಶ್ ಇವರು ಘಟಕದ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್, ಉಪಾಧ್ಯಕ್ಷರಾದ ಮುರಳೀಧರ್ ಕೋಟ್ಯಾನ್ ಹಾಗೂ ಪ್ರಭಾಕರ್ ಚಾಮುಂಡಿಬೆಟ್ಟ, ಕೋಶಾಧಿಕಾರಿ ಪ್ರತಿಭಾ ಸುರೇಶ್, ಕಾರ್ಯದರ್ಶಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!