Yuvavahini

ಕೆಂಜಾರು – ಕರಂಬಾರು

ಕೆಂಜಾರು ಕರಂಬಾರು ಯುವವಾಹಿನಿ ಘಟಕದಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ

ಬಜಪೆ: ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ವತಿಯಿಂದ ಮೇಘೆ ಹುಣ್ಣಿಮೆಯ ಶುಭ ಸಂದರ್ಭದಲ್ಲಿ ದಿನಾಂಕ 03-03-2026, ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ​ಬೆಳಿಗ್ಗೆ 4 ಗಂಟೆಗೆ ಕೆಂಜಾರು ಕರಂಬಾರಿನ ಶ್ರೀ ದೇವಿ ಭಜನಾ ಮಂದಿರದಿಂದ “ಓಂ ಗುರುಭ್ಯೋ ನಮಃ” ಎಂಬ ಗುರುಸ್ಮರಣೆಯೊಂದಿಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಘಟಕದ ಸದಸ್ಯರು ಹಾಗೂ ಭಕ್ತಾದಿಗಳು ಸೇರಿ ಒಟ್ಟು 15 ಮಂದಿಯ ತಂಡವು ಪಾದಯಾತ್ರೆಯ ಮೂಲಕ ಕಟೀಲು ಕ್ಷೇತ್ರವನ್ನು ತಲುಪಿ, ಅಮ್ಮನವರ ದರ್ಶನ ಪಡೆದು […]

Read More

ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ಕ್ಷೇತ್ರದರ್ಶನ

ಮಂಗಳೂರು: ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ, ದಿನಾಂಕ 04-01-2026 ರ ಆದಿತ್ಯವಾರದಂದು ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಕ್ಷೇತ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ಕರಂಬಾರು ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಯುವವಾಹಿನಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಸೇರಿ ಒಟ್ಟು 72 ಮಂದಿ ಒಂದೇ ಬಸ್ಸಿನಲ್ಲಿ ಪುಣ್ಯಕ್ಷೇತ್ರಕ್ಕೆ ತೆರಳಿದರು. ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಿ, ಅರ್ಚಕರ […]

Read More

ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ-ಯುವವಾಹಿನಿ (ರಿ ) ಕೆಂಜಾರು ಕರಂಬಾರು ಘಟಕ

ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಶ್ರೀ ದೇವಿ ಭಜನಾ ಮಂದಿರದ ಆವರಣ. ಘಟಕದ ಸದಸ್ಯರಾದ ಶ್ರೀಮತಿ ಪ್ರತಿಮಾ ಪಾಲನ್ ಗುರು ಪ್ರಾಥನೆ ಮಾಡಿದರು. ಭಜನಾ ಮಂದಿರದ ಉಪಾಧ್ಯಕ್ಷರಾದ ಉಗ್ಗಪ ಬಂಗೇರ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು . ತೀರ್ಪುಗಾರರಾಗಿ ಶ್ರೀಮತಿ ಕನಕ ಮೋಹನ್ ಮತ್ತು ವಿದುಷಿ ಕುಮಾರಿ ಶ್ರೇಯ ಶೆಟ್ಟಿಯವರು ಪಾಲ್ಗೊಂಡಿದರು. ಮುದ್ದು ಕೃಷ್ಣ, ತುoಟ ಕೃಷ್ಣ, ಬಾಲ ಕೃಷ್ಣ, ರಾಧ ಕೃಷ್ಣ, ನಾಲ್ಕು ವಿಭಾಗದ ಸ್ಪರ್ಧೆ ಏರ್ಪಡಿಸಲಾಗಿತು ಸುಮಾರು ಮೂವತಕ್ಕು ಹೆಚ್ಚು […]

Read More

ಪದಗ್ರಹಣ ಕಾರ್ಯಕ್ರಮ -ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ

ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ ಪದಗ್ರಹಣ ಕಾರ್ಯಕ್ರಮ 09-03-2025 ಆದಿತ್ಯವಾರ ಶ್ರೀ ದೇವಿ ಭಜನಾಮಂದಿರ ಬಜಪೆ ಶ್ರೀ ನಾರಾಯಣ ಗುರು ಸಮಾಜ ಮಂದಿರದ ಅಧ್ಯಕ್ಷರಾದ ಶ್ರೀಯುತ ಶಿವರಾಮ ಪೂಜಾರಿಯವರು ಶ್ರೀ ನಾರಾಯಣ ಗುರು ಸ್ವಾಮಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯಿತ್ತರು.ಶ್ರೀಮತಿ ಪ್ರತಿಮಾ ಪುನಿತ್ ಅವರು ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ವಾಗತಿಸಿದರು. ಶ್ರೀಯುತ ಮಂಜು ಪೂಜಾರಿ ಭಂಡಾರಮನೆ ಇವರು ದೀಪ ಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರಿಸಿದರು.ಘಟಕದ ಮಾಜಿ […]

Read More

ಬೃಹತ್ ಆರೋಗ್ಯ ಶಿಬಿರ

  ಕೆಂಜಾರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಬೊಂದೇಲ್, ಎ.ಜೆ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನ ಕೇಂದ್ರ ಇದರ ಸಹಯೋಗದೊಂದಿಗೆ ದಿನಾಂಕ 22-09-2024 ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಮ್ಮ ಕ್ಲಿನಿಕ್ ಮಳವೂರು – ಕರಂಬಾರು ಇಲ್ಲಿ ಬೃಹತ್‌ ಆರೋಗ್ಯ ಶಿಬಿರ ನಡೆಯಿತು. ಎ.ಜೆ ಸಂಸ್ಥೆಯ ವೈದ್ಯಕೀಯ ತಂಡ ಸುಮಾರು 10 […]

Read More

ಕೃಷ್ಣ ವೇಷ ಸ್ಪರ್ಧೆ

ಕೆಂಜಾರು: ಯುವವಾಹಿನಿ (ರಿ ) ಕೆಂಜಾರು – ಕರಂಬಾರು ಘಟಕದ ವತಿಯಿಂದ 6 ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ (ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ರಾಧಾ-ಕೃಷ್ಣ ಹಾಗೂ ಯಶೋಧ ಕೃಷ್ಣ) ಒಟ್ಟು 5 ವಿಭಾಗಗಳಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು- ಕರಂಬಾರು ಇದರ ಹೊರಾಂಗಣದ ಮುಕ್ತ ವೇದಿಕೆಯಲ್ಲಿ 25-08-2024 ರಂದು ಜರಗಿತು. ಬೆಳಿಗ್ಗೆ 9.30 ಕ್ಕೆ ಶ್ರೀ ದೇವಿಗೆ ಪೂಜೆ ಸಲ್ಲಿಸಿ, ಉದ್ಘಾಟನಾ ಸಭಾ ಕಾರ್ಯಕ್ರಮ ಜರಗಿತು. ಘಟಕದ ಅಧ್ಯಕ್ಷ ವಿನೋದ್ […]

Read More

ಮಂತ್ರಾಲಯ ಕ್ಷೇತ್ರ ದರ್ಶನ

ಮಂಗಳೂರು: ಕೆಂಜಾರು – ಕರಂಬಾರು ಘಟಕದ ವತಿಯಿಂದ 2 ದಿವಸದ ಮಂತ್ರಾಲಯ ಕ್ಷೇತ್ರ ದರ್ಶನ ರಾಯರ ಕೃಪೆಯಿಂದ ಯಶಸ್ವಿಯಾಗಿ ನೆರವೇರಿತು. ದಿನಾಂಕ 25-05-2024 ಶನಿವಾರ 3 ಗಂಟೆಗೆ ಬಸ್ ನಲ್ಲಿ ಹೊರಟ ತಂಡ 26-05-24 ಆದಿತ್ಯವಾರ ಬೆಳಿಗ್ಗೆ ಕ್ಷೇತ್ರ ತಲುಪಿತು. ಮೊದಲೇ ಕಾಯ್ದಿರಿಸಿದ ವಸತಿ ಗೃಹಗಳಲ್ಲಿ ಸ್ನಾನ, ಶೌಚಾದಿಗಳನ್ನು ಮುಗಿಸಿ ರಾಯರ ದರ್ಶನ ಪಡೆದು, ಮಂಚಾಲಮ್ಮನಿಗೆ ಕೈ ಮುಗಿದು ಬೆಳಿಗ್ಗೆನ ಉಪಹಾರ ಮುಗಿಸಿ 35 ಅಡಿ ಎತ್ತರದ ಅಭಯಾಂಜನೇಯ ದೇವರಿಗೆ ಕೈ ಮುಗಿದು, ಪಂಚಮುಖಿ ಆಂಜನೇಯನ ದರ್ಶನ ಪಡೆದು, […]

Read More

ವೈವಿಧ್ಯತೆಗೆ ಯುವವಾಹಿನಿ ಮಾದರಿ : ಯೋಗೀಶ್ ಕೈರೋಡಿ

ಕೆಂಜಾರು-ಕರಂಬಾರು: ಧಾರ್ಮಿಕತೆ ಎಂಬುವುದು ಜನಜೀವನದ ಭಾಗ. ವಸ್ತುವಿನಲ್ಲಿ ವಿವಿಧ ನೆಲೆಯ ಗುಣಮಟ್ಟ ಇರುವಂತೆ ಧಾರ್ಮಿಕತೆಯಲ್ಲಿಯೂ ಉತ್ತಮ,ಉನ್ನತ ಹಾಗೂ ದುರ್ಬಲ ಎಂಬ ಮೂರು ಗುಣಮಟ್ಟವಿದೆ. ಉತ್ತಮ ಹಾಗೂ ಉನ್ನತ ಧಾರ್ಮಿಕತೆಯ ಪಾಲಕರು ಫಲಾನುಭವಿಗಳಾಗಬೇಕು. ದುರ್ಬಲ ಧಾರ್ಮಿಕತೆಯಿಂದ ಯುವಜನತೆಯನ್ನು ಪಾರುಗೊಳಿಸುವ ಹೊಣೆ ಯುವವಾಹಿನಿಗಿರಲಿ. ಒಂದು ವರ್ಷದ ಅವಧಿಯಲ್ಲಿ ಅಲ್ಪಾವಧಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಚಿಂತನೆ ಸಹಜವಾಗಿ ನೂತನ ಪದಾಧಿಕಾರಿಗಳಿಗಿರುತ್ತದೆ. ಅಲ್ಪಾವಧಿಯೊಂದಿಗೆ ದೂರದೃಷ್ಟಿಯ ಕಾರ್ಯಕ್ರಮಗಳಿಗೂ ಆದ್ಯತೆ ಇರಲಿ. ಸಂಘಟನೆ ಸ್ವರೂಪ ಮತ್ತು ಕಾರ್ಯಕ್ರಮದ ವೈವಿಧ್ಯಕ್ಕೆ ಯುವವಾಹಿನಿ ನಾಡಿಗೆ ಮಾದರಿ ಎಂದು ಮೂಡುಬಿದಿರೆ ಆಳ್ವಾಸ್ […]

Read More

ಬಹುಮಾನ ವಿತರಣಾ ಕಾರ್ಯಕ್ರಮ

ಕೆಂಜಾರು ಕರಂಬಾರು :- 04 ಸೆಪ್ಟೆಂಬರ್ 2022ರ ರವಿವಾರದಂದು ಸಾಹಿತ್ಯ ಸೌರಭ ಹಾಗೂ ನಾಲ್ಕನೇ ವರ್ಷದ ಕೃಷ್ಣ ವೇಷ ಸ್ಪರ್ಧೆ 2022 ಇದರ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀ ದೇವಿ ಭಜನಾ ಮಂದಿರ ಕೆಂಜಾರ್ -ಕರಂಬಾರ್‌ ಇಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯೆ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಹೇಳಿದರು. ಘಟಕದ ಎಲ್ಲಾ ಕಾರ್ಯಕ್ರಮವನ್ನು ಶ್ಲಾಘಿಸಿದರು. ಶ್ರೀ ದೇವಿ ಭಜನಾ ಮಂದಿರದ ಎರಡನೇ […]

Read More

ಪದಪ್ರದಾನ ಸಮಾರಂಭ

ಮಂಗಳೂರು ದಿ.27.02.2022 ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ ಪದಗ್ರಹಣ ಸಮಾರಂಭವು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರು ಇಲ್ಲಿ ಜರುಗಿತು. ಶ್ರೀ ರಾಮಾಂಜನೆಯ ಮಂದಿರ ಕೆಂಜಾರು ಇದರ‌ ಅಧ್ಯಕ್ಷರಾದ ಶ್ರೀ ಮಹಾಬಲ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಆರತಿಗೈದು ದೀಪ ಪ್ರಜ್ವಲನೆ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಶ್ರೀದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಶೇಖರ್ ಬಂಗೇರ ಅವರು ಸಮಾರಂಭವನ್ನು ‌ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜೀತೇಶ್ ಸಾಲ್ಯಾನ್ ವಹಿಸಿದ್ದರು. ಮಾಜಿ ಅಧ್ಯಕ್ಷರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!