16-07-2026, 6:00 PM
ಕುಪ್ಪೆಪದವು, ಜುಲೈ 16: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ಸಕ್ರಿಯ ಸದಸ್ಯೆ ಹರೀನಾಕ್ಷಿ ಅವರು ಆಕಸ್ಮಿಕವಾಗಿ ಬಿದ್ದು ಕಾಲಿನ ಮೂಳೆ ಮುರಿತಕ್ಕೊಳಗಾದ ಹಿನ್ನೆಲೆಯಲ್ಲಿ, ಘಟಕದ ವತಿಯಿಂದ ಆರೋಗ್ಯ ನಿಧಿಯಡಿ ಧನಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಪದಾಧಿಕಾರಿಗಳು, ಸದಸ್ಯರ ಸಂಕಷ್ಟದ ಸಂದರ್ಭದಲ್ಲಿ ಯುವವಾಹಿನಿ ಸದಾ ಅವರೊಂದಿಗೆ ನಿಲ್ಲುವ ಬದ್ಧತೆಯನ್ನು ಹೊಂದಿದ್ದು, ಆರೋಗ್ಯ ನಿಧಿಯಂತಹ ಯೋಜನೆಗಳು ಸದಸ್ಯರಿಗೆ ನೆರವಾಗುವ ಮಹತ್ವದ ಉಪಕ್ರಮಗಳಾಗಿವೆ ಎಂದು ತಿಳಿಸಿದರು. ಹರೀನಾಕ್ಷಿ ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದರು. ಧನಸಹಾಯ ವಿತರಣೆಯ […]
Read More
21-06-2026, 6:00 PM
ಕುಪ್ಪೆಪದವು: ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ಸರಕಾರಿ ಪ್ರಾಥಮಿಕ ಶಾಲೆ ಕಲ್ಲಾಡಿ ಕಿಲೆಂಜಾರು, ಕುಪ್ಪೆಪದವು ಇಲ್ಲಿ ಪರಿಸರ ಸ್ವಚ್ಛತಾ ಹಾಗೂ ವೃಕ್ಷಾರೋಪಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ವಠಾರದ ಸ್ವಚ್ಛತಾ ಕಾರ್ಯವನ್ನು ಕೈಗೊಂಡು, ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ವಿವಿಧ ಗಿಡಗಳನ್ನು ನೆಟ್ಟು ಶ್ರಮದಾನ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕುಪ್ಪೆಪದವು-ಎಡಪದವು ಘಟಕದ ಅಧ್ಯಕ್ಷರಾದ ಶ್ರೀಧರ ಪೂಜಾರಿ, ಕಾರ್ಯದರ್ಶಿ ಅಕ್ಷತಾ, ಯುವವಾಹಿನಿ […]
Read More
10-05-2026, 7:00 PM
ಕುಪ್ಪೆಪದವು : “ನಾರಾಯಣ ಗುರುಗಳ ತತ್ವದಂತೆ ‘ವಿದ್ಯೆ–ಉದ್ಯೋಗ–ಸಂಪರ್ಕ’ ಎಂಬ ಧ್ಯೇಯೋದ್ದೇಶದೊಂದಿಗೆ ರಾಜ್ಯವ್ಯಾಪಿ ಬೆಳೆಯುತ್ತಿರುವ ಯುವವಾಹಿನಿ ಸಂಸ್ಥೆಯು, ಯುವಶಕ್ತಿಯನ್ನು ಸಮಾಜಸೇವೆಯತ್ತ ಕೊಂಡೊಯ್ಯುತ್ತಿರುವುದು ಹೆಮ್ಮೆಯ ವಿಚಾರ,” ಎಂದು ಶಾಸಕರಾದ ವೈ ಭರತ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ವಿದ್ಯಾನಿಧಿ ಸಹಾಯಾರ್ಥವಾಗಿ ಕಿಲೆಂಜಾರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಘಟಕವು ಯುವಜನರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಅವರು ಶ್ಲಾಘಿಸಿದರು. ಪಂದ್ಯಕೂಟವನ್ನು ಕಿಲೆಂಜಾರು ಅರಮನೆ […]
Read More
15-09-2025, 3:29 PM
7 ನೇ ವರ್ಷದ ಕೃಷ್ಣವೇಷ ಸ್ಪರ್ಧೆಯು ದಿನಾಂಕ 10.8.25 ನೇ ಆದಿತ್ಯವಾರ ಆಶಾಕಿರಣ ಸಭಾ ಭವನದಲ್ಲಿ ಗುರುಗಳಿಗೆ ದೀಪ ಬೆಳಗಿಸುವ ಮೂಲಕ ಪ್ರಾರಂಭವಾಯಿತು.. ಕಾರ್ಯಕ್ರಮದ ಉದ್ಘಾಟನೆಯನ್ನು ಧಾರ್ಮಿಕ ಮುಂದಾಳು ಐ ಕೃಷ್ಣ ಅಸ್ರಣ್ಣ ರವರು ನಡೆಸಿಕೊಟ್ಟರು..ವೇದಿಕೆಯಲ್ಲಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಸ್ಥಾಪಕ ಅಧ್ಯಕ್ಷರು, ಘಟಕದ ಕಾರ್ಯದರ್ಶಿ, ಉಪಸ್ಥಿತರಿದ್ದರು. ಯಶೋಧ ಕೃಷ್ಣ, ಮುದ್ದುಕೃಷ್ಣ,ಬಾಲಕೃಷ್ಣ ,ತುಂಟಕೃಷ್ಣ ಎಂಬ 4 ವಿಭಾಗದಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.. ಪ್ರತಿವಿಭಾಗಕ್ಕೂ ಪ್ರಥಮ, ದ್ವಿತೀಯ ಪ್ರಶಸ್ತಿಯನ್ನು ಹಾಗೂ ಸ್ಪರ್ಧಿಸಿದ ಎಲ್ಲಾ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ […]
Read More
24-06-2024, 4:19 PM
ಕುಪ್ಪೆಪದವು: ಯುವವಾಹಿನಿ(ರಿ.) ಕುಪ್ಪೆಪದವು ಮತ್ತು ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವು ಜಂಟಿ ಆಶ್ರಯದಲ್ಲಿ ದಿನಾಂಕ 24-06-2024 ಸೋಮವಾರದಂದು ಅರಮನೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕುಪ್ಪೆಪದವು ಘಟಕದ ಅಧ್ಯಕ್ಷರು ಅಕ್ಷಿತ್ ಕುಮಾರ್ ಮತ್ತು ಶಾಲಾ ನಾಯಕಿ ಸಾನ್ವಿ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಕರು ಮಾರ್ಕ್ ಮೆಂಡೊನ್ಸಾ, ಕಾರ್ಯಕ್ರಮದ ಉದ್ದೇಶ ಮತ್ತು ಅವಶ್ಯಕತೆಯನ್ನು ತಿಳಿ ಹೇಳಿದರು. ನಮ್ಮ ಮತ್ತು ಪರಿಸರ ಸಂಬಂಧ ಗಟ್ಟಿಗೊಳಿಸಿದಾಗ ಪ್ರಕೃತಿಯ […]
Read More
09-06-2024, 3:13 PM
ಕುಪ್ಪೆಪದವು: ಯುವವಾಹಿನಿ(ರಿ.) ಕುಪ್ಪೆಪದವು ಘಟಕದ ವತಿಯಿಂದ 09-06-2024 ನೇ ಆದಿತ್ಯವಾರ ನಾಗಂದಡಿ ಸಭಾಭವನದಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಯುವವಾಹಿನಿ(ರಿ.) ಕುಪ್ಪೆಪದವು ಘಟಕದ ಅಧ್ಯಕ್ಷರು ಅಕ್ಷಿತ್ ಕುಮಾರ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರು ಸೌಮ್ಯಾ ಕೋಟ್ಯಾನ್, ಕಾರ್ಯದರ್ಶಿ ರೇಣುಕಾ ಸುನಿಲ್, ಕೋಶಾಧಿಕಾರಿ ದೇಜಪ್ಪ ಪೂಜಾರಿ ಉಪಸ್ಥಿತರಿದ್ದರು. ಸುಮಾರು 56 ಮಕ್ಕಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಮಾಜಿ ಅಧ್ಯಕ್ಷರು ಅಜಯ್ ಅಮೀನ್ ಸ್ವಾಗತಿಸಿದರು. ಅಧ್ಯಕ್ಷರು ತಮ್ಮ ಅಧ್ಯಕ್ಷೀಯ ಮಾತನ್ನಾಡಿದರು. ಕಾರ್ಯದರ್ಶಿ ರೇಣುಕಾ ಸುನಿಲ್ ನಿರೂಪಿಸಿ […]
Read More
19-05-2024, 3:02 PM
ಮಂಗಳೂರು: ಯುವವಾಹಿನಿ(ರಿ.) ಕುಪ್ಪೆಪದವು ಘಟಕದ ವತಿಯಿಂದ 19-05-2024ನೇ ಆದಿತ್ಯವಾರ ಶ್ರೀ ದುರ್ಗಾ ಕ್ರಿಕೆಟರ್ಸ್ ಸಹಯೋಗದೊಂದಿಗೆ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಉದ್ಘಾಟನೆಯನ್ನು ಘಟಕದ ಅಧ್ಯಕ್ಷರಾದ ಅಕ್ಷಿತ್ ಕುಮಾರ್ ನಡೆಸಿಕೊಟ್ಟರು. ವೇದಿಕೆಯಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ಅರುಣ್ ಕುಮಾರ್, ಕ್ರೀಡಾ ನಿರ್ದೇಶಕರಾದ ನವೀನ್ ಚಂದ್ರ, ಮಾಜಿ ಅಧ್ಯಕ್ಷರಾದ ಅಜಯ್ ಅಮೀನ್, ಮುತ್ತೂರ್ ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ದುರ್ಗಾಕೋಡಿ, ಶ್ರೀ ದುರ್ಗಾ ಕ್ರಿಕೆಟರ್ಸ್ ನ ಅಧ್ಯಕ್ಷರಾದ ಹನೀಫ್ ನೆಲಚ್ಚೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 20 ತಂಡಗಳು ಭಾಗವಹಿಸಿದ್ದವು. 30 ಗಜಗಳ ಅಂಡರ್ ಆರ್ಮ್ ಶೈಲಿಯ, ಲೀಗ್ […]
Read More
11-02-2024, 11:38 AM
ಕುಪ್ಪೆಪದವು : ಯುವವಾಹಿನಿ (ರಿ.) ಕುಪ್ಪೆಪದವು ಘಟಕದ 2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಕುಪ್ಪೆಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ದಿನಾಂಕ 11-02-2024 ರ ರವಿವಾರ ನಡೆಯಿತು. ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪದಪ್ರದಾನಗೈದು, ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಗಳನ್ನು ಆದರ್ಶವಾಗಿಟ್ಟುಕೊಂಡು, ಸಮಾಜದ ಏಳಿಗೆಗಾಗಿ ಶ್ರಮಿಸುತ್ತಾ ಬಿಲ್ಲವ […]
Read More
13-11-2022, 5:48 PM
ಕುಪ್ಪೆಪದವು :- ಯುವವಾಹಿನಿಯ ಶಿಸ್ತು ಬದ್ಧ ಕಾರ್ಯಕ್ರಮ, ಪಾರದರ್ಶಕತೆ, ಎಲ್ಲವನ್ನು ಗಮನಿಸಿ ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಈ ಸಂಸ್ಥೆಯು ಬೇರೆ ಸಂಘಟನೆಗಿಂತ ವಿಭಿನ್ನವಾಗಿದೆ. ಸೇವಾ ಮನೋಭಾವ ಹೊಂದಿರುವ ಸಂಸ್ಥೆಯ ಕಾರ್ಯಕ್ರಮಕ್ಕೆ ಬೇರೆ ಯಾವ ಕಾರ್ಯಕ್ರಮದ ಒತ್ತಡವಿದ್ದರೂ ಕೂಡ ಪಾಲ್ಗೊಳ್ಳುವ ಅವಕಾಶ ಬಿಟ್ಟುಕೊಡಲಾರೆ. ಯುವವಾಹಿನಿ ಸಂಸ್ಥೆಗೆ ಯಾವುದೇ ರೀತಿಯ ಸಹಕಾರ ನೀಡಲು ಸದಾ ಸಿದ್ಧ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಮತ್ತು ತತ್ವಾದರ್ಶಗಳು ಸರ್ವರಿಗೂ ಅನ್ವಯವಾಗುವಂತಿವೆ […]
Read More
10-09-2022, 4:08 PM
ಕುಪ್ಪೆಪದವು:- ಯುವವಾಹಿನಿ (ರಿ.) ಕುಪ್ಪೆಪದವು ಘಟಕದ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನಾಚರಣೆ ಅಂಗವಾಗಿ ಗುರು ನಮನ ಸಲ್ಲಿಸಲಾಯಿತು. ನಾಗಂದಡಿ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ರಾದ ಜಗದೀಶ್ ದುರ್ಗಾಕೊಡಿ, ಸ್ಥಾಪಕ ಅಧ್ಯಕ್ಷ ರಾದ ಅರುಣ್ ಕುಮಾರ್ ಅಂಬೇಲೋಟ್ಟು , ಮಾಜಿ ಅಧ್ಯಕ್ಷರಾದ ಅಜಯ್ ಅಮೀನ್ ಹಾಗೂ ಪದಾಧಿಕಾರಿಗಳು ಮತ್ತು ಘಟಕದ ಸದಸ್ಯರುಗಳು ಉಪಸ್ಥಿತರಿದ್ದರು.
Read More