21-06-2026, 9:00 PM
ಸುಳ್ಯ, ಜೂನ್ 21 : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ 5ನೇ ಗುರು ಸ್ಪೂರ್ತಿ ಕಾರ್ಯಕ್ರಮವು ಸುಳ್ಯದ ಅಶ್ವಿನಿ ಲೋಕೇಶ್ ಅವರ ನಿವಾಸದಲ್ಲಿ ಭಕ್ತಿಪೂರ್ವಕವಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಯುವವಾಹಿನಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಆಯೋಜಿಸಲಾಯಿತು. ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಸ್ಮರಿಸುತ್ತಾ ನಡೆದ ಭಜನಾ ಕಾರ್ಯಕ್ರಮದಲ್ಲಿ ಸದಸ್ಯರು ಭಕ್ತಿಭಾವದಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ, ನಾರಾಯಣಗುರು ತತ್ವ ನಿರ್ದೇಶಕ ರೋಹಿತ್ ರೆಂಜಾಳ, ಸುಳ್ಯ ಘಟಕದ ಸ್ಥಾಪಕ […]
Read More
13-06-2026, 1:00 PM
ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರಸಿದ್ಧ ಕೊಟ್ಟಿಯೂರು ಮಹಾದೇವ ದೇವಸ್ಥಾನಕ್ಕೆ ದಿನಾಂಕ 14.06.2026ರಂದು ಭಕ್ತಿಪೂರ್ವಕ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ದಿನಾಂಕ 13.06.2026ರಂದು ರಾತ್ರಿ 10:30 ಗಂಟೆಗೆ ಬಳ್ಪದಿಂದ ಸುಬ್ರಹ್ಮಣ್ಯ – ಇರಿಟ್ಟಿ ಮಾರ್ಗವಾಗಿ ವ್ಯಾನ್ನಲ್ಲಿ ಪ್ರಯಾಣ ಆರಂಭಿಸಲಾಯಿತು. ಈ ಯಾತ್ರೆಯಲ್ಲಿ ಘಟಕದ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು, ನಿರ್ದೇಶಕರು, ಬಳ್ಪ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರು ಸೇರಿದಂತೆ ಸುಮಾರು 26 ಮಂದಿ ಸದಸ್ಯರು ಭಾಗವಹಿಸಿದ್ದರು. ಮರುದಿನ ಬೆಳಿಗ್ಗೆ ಸುಮಾರು 4:00 […]
Read More
05-06-2026, 11:00 AM
ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ 05-06-2026ರಂದು ವಿಶ್ವ ಪರಿಸರ ದಿನಾಚರಣೆ ಹಾಗೂ ಬಳ್ಪ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಯುವವಾಹಿನಿ (ರಿ.) ಕಡಬ ಘಟಕ ಮತ್ತು ಗ್ರಾಮ ಅರಣ್ಯ ಸಮಿತಿ ಬಳ್ಪ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಪಂಜ ವಲಯದ ಉಪ ವಲಯ ಅರಣ್ಯ ಅಧಿಕಾರಿಗಳಾದ ಮಹಬೂಬ್ ಇಲಾ ಅವರು ಉದ್ಘಾಟಿಸಿ, […]
Read More
19-04-2026, 8:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 19-04-2026 ರ ಭಾನುವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಏನೆಕಲ್ಲಿನಲ್ಲಿ ಮನೆ ಮನ ಭಜನೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡರು. ಪರಮಪೂಜ್ಯ ನಾರಾಯಣ ಗುರು ಅವರ ಭಜನೆಗಳ ಮೂಲಕ ಧಾರ್ಮಿಕ ಜಾಗೃತಿ ಹಾಗೂ ಸಾಮಾಜಿಕ ಐಕ್ಯತೆಗೆ ಯುವವಾಹಿನಿ ಸದಾ ಬದ್ಧವಾಗಿರುವುದನ್ನು ಈ ಕಾರ್ಯಕ್ರಮ ಮತ್ತೊಮ್ಮೆ ಪ್ರತಿಪಾದಿಸಿತು.ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ […]
Read More
22-03-2026, 1:00 PM
ಹಳೆನೇರೆಂಕಿ: ಯುವವಾಹಿನಿ (ರಿ.) ಕಡಬ ಘಟಕ ಮತ್ತು ಬಿಲ್ಲವ ಗ್ರಾಮ ಸಮಿತಿ ಹಳೆನೇರೆಂಕಿಯ ಮಹಿಳಾ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 22 ರಂದು ಹಳೆನೇರೆಂಕಿಯ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಪುರುಷೋತ್ತಮ ಬರಂಬೆಟ್ಟು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಘಟಕದ ಉಪಾಧ್ಯಕ್ಷೆ ಸರಿತಾ ಉಂಡಿಲ ಅವರು ಅತಿಥಿಗಳು ಹಾಗೂ ಸಭಿಕರನ್ನು ಸ್ವಾಗತಿಸಿದರು.ಜಿಲ್ಲಾ ಮಹಿಳಾ […]
Read More
28-02-2026, 9:00 PM
ಕಡಬ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಆದರ್ಶಗಳನ್ನು ಮನೆಮನಕ್ಕೆ ತಲುಪಿಸುವ ನಿಟ್ಟಿನಲ್ಲಿ ಯುವವಾಹಿನಿ (ರಿ.) ಕಡಬ ಘಟಕದ ಆಶ್ರಯದಲ್ಲಿ ಎರಡನೇ ಹಂತದ ‘ಗುರುಸ್ಫೂರ್ತಿ’ ಕಾರ್ಯಕ್ರಮವು ದಿನಾಂಕ 28-02-2026ರ ಶನಿವಾರದಂದು ಬಳ್ಪದ ತುಳಸಿ ನಾಗೇಶ್ ಪಡ್ಕಿಲಾಯ ಅವರ ನಿವಾಸದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಬಳ್ಪ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ಚಿನ್ನಪ್ಪ ಪೂಜಾರಿ ಕೊರಪ್ಪಣೆ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶಿಕ್ಷಕಿ ರೇಣುಕಾ ಕಣಿಯೂರು ಅವರು […]
Read More
21-02-2026, 12:47 PM
ಕಡಬ/ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವಲಿಂಗ ಪ್ರತಿಷ್ಠಾಪಿಸಿದ ಪವಿತ್ರ ಸ್ಮರಣೆಗಾಗಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡಿಗೆ – ಶ್ರೀಗುರುವಿನೆಡೆಗೆ” ಎಂಬ ಸಂಕಲ್ಪದ ಕುದ್ರೋಳಿ ತೀರ್ಥಾಟನೆಯಲ್ಲಿ ಯುವವಾಹಿನಿ (ರಿ.) ಕಡಬ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ದಿನಾಂಕ 21-02-2026ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಆಗಮಿಸಿದ ಶಿವಗಿರಿ ಪೀಠಾಧಿಪತಿಗಳನ್ನು ಅತ್ಯಂತ ಭವ್ಯವಾಗಿ ಬರಮಾಡಿಕೊಳ್ಳುವ ಮೂಲಕ ತೀರ್ಥಾಟನೆಗೆ ಚಾಲನೆ ನೀಡಲಾಯಿತು. ಅಲ್ಲಿಂದ ಆರಂಭಗೊಂಡ ಭಕ್ತಿಪೂರ್ವಕ ಮೆರವಣಿಗೆಯೂದ್ದಕ್ಕೂ ಕಡಬ […]
Read More
20-02-2026, 9:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಧಾರ್ಮಿಕ ಜಾಗೃತಿ ಮತ್ತು ಸದಸ್ಯರ ನಡುವಿನ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಐವತ್ತೊಕ್ಲು ಗ್ರಾಮದ ಪೊಳೆಂಜದಲ್ಲಿ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ದಿನಾಂಕ 20.02.2026ರ ಶುಕ್ರವಾರ ಸಂಜೆ ಶ್ರೀಮತಿ ಮತ್ತು ಶ್ರೀ ನಾಗೇಶ್ ಪೂಜಾರಿಯವರ ಗೃಹದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಪಾಲ್ಗೊಂಡರು. ಸಂಜೆ 7.15 ರಿಂದ 9.00 ಗಂಟೆಯವರೆಗೆ ನಡೆದ ಭಜನೆಯಲ್ಲಿ ಸುಶ್ರಾವ್ಯವಾಗಿ ನಾಮಸಂಕೀರ್ತನೆ ಮಾಡುವ ಮೂಲಕ ಭಕ್ತಿ ಸೇವೆಯನ್ನು ಸಮರ್ಪಿಸಲಾಯಿತು. ಧಾರ್ಮಿಕ ಬದ್ಧತೆ: […]
Read More
25-01-2026, 9:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 25.01.2026ರ ಆದಿತ್ಯವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಕುತ್ಯಾಡಿ ಗ್ರಾಮದಲ್ಲಿ ಐದು ಮನೆಗಳಲ್ಲಿ ಮನೆ–ಮನೆ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕುತ್ಯಾಡಿಯ ಶ್ರೀಮತಿ ಮತ್ತು ಶ್ರೀ ಸುನಂದ ಪೂಜಾರಿ, ಶ್ರೀಮತಿ ಯಶೋದಾ ಪೂಜಾರಿ, ಶ್ರೀಮತಿ ಸುನಿತಾ ದಿನೇಶ್ ಪೂಜಾರಿ, ಶ್ರೀಮತಿ ಪ್ರೇಮ ಪೂಜಾರಿ, ಶ್ರೀಮತಿ ದಿವ್ಯ ಮತ್ತು ಬೇಬಿ ಪೂಜಾರಿ ಇವರ ಮನೆಗಳಲ್ಲಿ ಭಜನಾ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ […]
Read More
23-01-2026, 10:36 AM
ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 23-01-2026ರ ಶುಕ್ರವಾರ ಸಂಜೆ 5.00 ರಿಂದ 7.00 ಗಂಟೆಯವರೆಗೆ ಕಡಬದ ಜಯದುರ್ಗ ದೇವಸ್ಥಾನದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ದೇವಸ್ಥಾನದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣಾ ಕಾರ್ಯದಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದರು. ಸಮಾಜಮುಖಿ ಕಾರ್ಯಗಳ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಜಾಗೃತಿಗೆ ಯುವವಾಹಿನಿ ಸದಾ ಬದ್ಧವಾಗಿರುವುದಕ್ಕೆ ಈ ಶ್ರಮದಾನ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಶ್ರಮದಾನದಲ್ಲಿ […]
Read More