Yuvavahini

ಕಡಬ

ವಿದ್ಯಾಸ್ಪೂರ್ತಿ ವಿದ್ಯಾರ್ಥಿಗಳ ಭವಿಷ್ಯದ ಪಯಣದ ಹೆಬ್ಬಾಗಿಲು : ಅಶೋಕ್ ಕುಮಾರ್ ಪಡ್ಪು

ಕಡಬ : ಪರೀಕ್ಷೆ ಜೀವನದ ಅಂತಿಮ ತೀರ್ಪಲ್ಲ. ಸೋಲು ಎನ್ನುವುದು ನಿಮ್ಮ ಸಾಮರ್ಥ್ಯವನ್ನು ಅಳೆಯುವ ಪ್ರಮಾಣವಲ್ಲ; ಅದು ಇನ್ನಷ್ಟು ಶ್ರಮಿಸುವ ಪಾಠ ಮಾತ್ರ. ತಪ್ಪುಗಳಿಂದ ಕಲಿಯುವ ಮನೋಭಾವವನ್ನು ಬೆಳೆಸಿಕೊಂಡರೆ, ಪ್ರತಿಯೊಂದು ಅಡೆತಡೆಯೂ ಅವಕಾಶವಾಗುತ್ತದೆ ಈ ನಿಟ್ಟಿನಲ್ಲಿ ಯುವವಾಹಿನಿ ಕಡಬ ಘಟಕದ ಮಹತ್ವಾಕಾಂಕ್ಷೆಯ ವಿದ್ಯಾಸ್ಪೂರ್ತಿ ಕಾರ್ಯಾಗಾರವು ವಿದ್ಯಾರ್ಥಿಗಳ ಭವಿಷ್ಯದ ಪಯಣದ ಹೆಬ್ಬಾಗಿಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ತಿಳಿಸಿದರು. ಅವರು ದಿನಾಂಕ 13.01.2026 ರಂದು ಕಡಬ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಕಡಬ ತಾಲೂಕಿನ […]

Read More

ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಯುವವಾಹಿನಿ ಸದಸ್ಯರ ಭಜನಾ ಸಂಕೀರ್ತನೆ

ಕಡಬ : ಕಡಬ ಶ್ರೀ ಮಹಾವಿಷ್ಣು ದೇವಸ್ಥಾನ, ಪಿಜಕ್ಕಳದಲ್ಲಿ ದಿನಾಂಕ 11.01.2026 ನೇ ಬೆಳಿಗ್ಗೆ ಧನುಪೂಜೆ ಪ್ರಯುಕ್ತ ಯುವವಾಹಿನಿ (ರಿ.) ಕಡಬ ಘಟಕದ ಸದಸ್ಯರು ಭಕ್ತಿಭಾವಪೂರ್ಣ ಭಜನಾ ಸೇವೆಯನ್ನು ಸಲ್ಲಿಸಿದರು. ಬೆಳಿಗ್ಗೆ 4.00 ಗಂಟೆಯಿಂದ 5.15 ಗಂಟೆಯವರೆಗೆ ನಡೆದ ಭಜನಾ ಸೇವೆಯಲ್ಲಿ ಭಕ್ತಿಗೀತೆಗಳು ಹಾಗೂ ನಾಮಸಂಕೀರ್ತನೆಯ ಮೂಲಕ ದೇವರ ಸ್ಮರಣೆಯಲ್ಲಿ ತೊಡಗಿಸಿಕೊಂಡರು. ಯುವವಾಹಿನಿ ಕಡಬ ಘಟಕದ ಈ‌ ಸೇವೆಗೆ ದೇವಾಲಯದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

Read More

ಯುವವಾಹಿನಿ ಕಡಬ ಘಟಕದ ಅಧ್ಯಕ್ಷರಾಗಿ ಉಮೇಶ್ ಬಲ್ಪ ಆಯ್ಕೆ

ಕಡಬ : ಯುವವಾಹಿನಿ (ರಿ.) ಕಡಬ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಬಲ್ಪ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಉಮೇಶ್ ಬಳ್ಪ ಉಪಾಧ್ಯಕ್ಷರು : ಸರಿತಾ ಉಂಡಿಲ ಕಾರ್ಯದರ್ಶಿ:ಸತೀಶ್ ಕೊರಪ್ಪಣೆ ಜತೆ ಕಾರ್ಯದರ್ಶಿ: ರಾಜು ಪದವು ಕೋಶಾಧಿಕಾರಿ: ಸುಧಾಕರ ಪೂಜಾರಿ ಬಲ್ಯ ವ್ಯಕ್ತಿತ್ವ ವಿಕಸನ ನಿರ್ದೇಶಕರು : ರೇಖಾ ಐತ್ತೂರು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ದೀಕ್ಷಿತ್ ಪಣೆಮಜಲು ಸಮಾಜ […]

Read More

ಮಕ್ಕಳ ದಿನಾಚರಣೆ

ಕಡಬ : ಯುವವಾಹಿನಿ (ರಿ) ಕಡಬ ಘಟಕದ ವತಿಯಿಂದ ದಿ :14-11-2024 ನೇ ಗುರುವಾರ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳಿಗ್ಗೆ 9 ಗಂಟೆಗೆ ದ. ಕ. ಜಿ. ಪ. ಹಿ. ಪ್ರಾ. ಶಾಲೆ ಪನ್ಯ ಗುರಿಯಡ್ಕ -ಕೋಡಿಂಬಾಳ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಘಟಕದ ವತಿಯಿಂದ ಗುರುತಿನ ಚೀಟಿ (ಐಡ್ ಕಾರ್ಡ್) ವಿತರಿಸುವ ಕಾರ್ಯಕ್ರಮವುನಡೆಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಸುಂದರ ಪೂಜಾರಿ ಅಂಗಣ, ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಘಟಕದ ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣಪ್ಪ ಅಮೈ, […]

Read More

ಯುವವಾಹಿನಿ (ರಿ) ಕಡಬ ಘಟಕ : ಗುರುಸ್ಪೂರ್ತಿ, ಭಜನೆ, ಸಾಧಕರಿಗೆ ಸನ್ಮಾನ

ಕಡಬ : ಯುವವಾಹಿನಿ (ರಿ ) ಕಡಬ ಘಟಕದ ವತಿಯಿಂದ ದಿನಾಂಕ 09-11-2024 ನೇ ಶನಿವಾರ ಸಂಜೆ 5 ರಿಂದ ಉಮೇಶ್ ಪೂಜಾರಿ ಬುಡೆಂಗಿ ಬಳ್ಪ ಮನೆಯಲ್ಲಿ ಗುರು ಸ್ಫೂರ್ತಿ, ಭಜನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ನಾಟಿ ವೈದ್ಯರಾದ ಶ್ರೀಮತಿ ಬಾಲಕ್ಕ ಕೊರಪ್ಪಣೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ ವಹಿಸಿದ್ದರು. ವೇದಿಕೆಯಲ್ಲಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಗಣೇಶ್ ನಡವಾಲ್, […]

Read More

ಕೆಸರ್ದ ಕಂಡೊಡು ಬಿರುವೆರ್ನ ಗೊಬ್ಬುಲು

ಕಡಬ : ಯುವವಾಹಿನಿ (ರಿ) ಕಡಬ ಘಟಕದ ಆಶ್ರಯದಲ್ಲಿ ಹಾಗೂ ಕಡಬ ತಾಲೂಕು ಬಿಲ್ಲವ ಸಂಚಾಲನ ಸಮಿತಿ, ಕಡಬ ತಾಲೂಕಿನ ಎಲ್ಲಾ ಬಿಲ್ಲವ ಗ್ರಾಮ ಸಮಿತಿಯ ಸಹಕಾರದೊಂದಿಗೆ ಕಡಬದ ಜಯ ದುರ್ಗಾಪರಾಮೇಶ್ವರಿ ದೇವಸ್ಥಾನ ಪುಣ್ಯದ ಗದ್ದೆಯಲ್ಲಿ ದಿನಾಂಕ 22-09-2024ನೇ ಆದಿತ್ಯವಾರ ಬಿಲ್ಲವ ಬಂಧುಗಳ 3 ನೇ ವರ್ಷದ ಕೆಸರ್ದ ಕಂಡೊಡು ಬಿರುವೆರ್ನ ಗೊಬ್ಬುಲು ಬಹಳ ವಿಜ್ರಂಭಣೆಯಿಂದ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಲಿಂಗಪ್ಪ ಪೂಜಾರಿ ಕೇಪುಳು ಉದ್ಘಾಟಿಸಿದರು, ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆ

ಕಡಬ: ದಿನಾಂಕ 20-08-2024ನೇ ಮಂಗಳವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಸರಕಾರದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ ಮಾತನಾಡಿ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಸಾರ್ವಜನಿಕವಾಗಿ ಗುರು ಜಯಂತಿ ಆಚರಣೆ ನಡೆಯಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ, ಯುವವಾಹಿನಿ (ರಿ) ಕೇಂದ್ರ ಸಮಿತಿ […]

Read More

ಮನೆ‌ಮನೆ‌ ಭಜನೆ

ಕಡಬ: ಕಡಬ ಘಟಕ ಇದರ ಭಜನಾ ತಂಡದ ವತಿಯಿಂದ ದಿನಾಂಕ 29-06-2024 ನೇ ಶನಿವಾರ ಸಂಜೆ 6.30 ರಿಂದ ಮನೆ‌ಮನೆ‌ ಭಜನೆ ಎಂಬ ಕಾರ್ಯಕ್ರಮವನ್ನು ಬೇರಿಕೆ-ಬಲ್ಯ ಸಮಾಜ ಬಾಂಧವರ 6 ಮನೆಗಳಲ್ಲಿ ಆರಂಭಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 6 ಜನ ಭಜಕರು ಭಾಗಿಯಾಗಿ, ಬಿಲ್ಲವ ಗ್ರಾಮ ಸಮಿತಿ ಬಲ್ಯ ಇದರ ಅಧ್ಯಕ್ಷರಾದ ಹರೀಶ್ ಡಿ. ಎಚ್ ಹಾಗೂ ಬೇರಿಕೆ-ಬಲ್ಯದ ಸಮಾಜ ಬಾಂಧವರ ಸಂಪೂರ್ಣ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿದೆ, ಇವರಿಗೆ ಯುವವಾಹಿನಿ ಭಜನಾ ತಂಡದ ವತಿಯಿಂದ ತುಂಬು ಹೃದಯದ ಧನ್ಯವಾದಗಳು, […]

Read More

ಗುರುಸಂದೇಶ ಯುವವಾಹಿನಿಗೆ ಪ್ರೇರಕ ಶಕ್ತಿ : ಸ್ಮಿತೇಶ್ ಬಾರ್ಯ

ಕಡಬ : ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಂದೇಶಗಳು ಯುವವಾಹಿನಿ ಸಂಸ್ಥೆಗೆ ಸದಾ ಪ್ರೇರಕ ಶಕ್ತಿಯಾಗಿದೆ. ಗುರುಗಳ ಸಂದೇಶ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಯುವವಾಹಿನಿಯ ಘಟಕಗಳ ಕಾರ್ಯ ಶ್ಲಾಘನೀಯ ಎಂದು ಚಲನಚಿತ್ರ ನಿರ್ದೇಶಕ, ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸ್ಮಿತೇಶ್ ಎಸ್.ಬಾರ್ಯ ತಿಳಿಸಿದರು. ಅವರು 2024 ನೇ ಜನವರಿ 21 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ಯುವವಾಹಿನಿ (ರಿ.) ಕಡಬ ಘಟಕ ಮತ್ತು ಕಡಬ ತಾಲೂಕು ವಲಯದ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!