08-02-2026, 6:00 PM
ಬೆಂಗಳೂರು: ಯುವಕರು ಸಮಾಜವನ್ನು ಬಲಿಷ್ಠ ಮತ್ತು ಆರೋಗ್ಯಕರ ದಿಕ್ಕಿನಲ್ಲಿ ಮುನ್ನಡೆಸುವ ಶಕ್ತಿ ಹೊಂದಿದ್ದಾರೆ; ಇಂತಹ ಕ್ರೀಡಾ ವೇದಿಕೆಗಳು ಅವರಲ್ಲಿ ಶಿಸ್ತು, ಏಕತೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತವೆ ಎಂದು ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷರು ಹಾಗೂ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಚೇರ್ಮೆನ್ ಸೂರ್ಯಕಾಂತ್ ಜೆ. ಸುವರ್ಣ ಅಭಿಪ್ರಾಯಪಟ್ಟರು.ಅವರು ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಚಿಕ್ಕಬಾಣಾವರ ಸಮೀಪದ ಗೋಲ್ಡನ್ ರೇ ಕ್ರೀಡಾಂಗಣದಲ್ಲಿ ಫೆಬ್ರವರಿ 8ರಂದು ಆಯೋಜಿಸಲಾದ “ಬ್ರಹ್ಮಶ್ರೀ ಕ್ರೀಡಾಕೂಟ 2026” ನ್ನು ಉದ್ಘಾಟಿಸಿ ಮಾತನಾಡಿ ಯುವಕರು ಸಮಾಜದ […]
Read More
08-01-2026, 11:18 AM
ಬೆಂಗಳೂರು: ಆರ್ಯ ಈಡಿಗ ಮಹಿಳಾ ಸಂಘ ಬೆಂಗಳೂರು ಇದರ ಆಶ್ರಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ, ಯುವವಾಹಿನಿ (ರಿ.) ಬೆಂಗಳೂರು ಘಟಕದ ಸದಸ್ಯರು ವಿವಿಧ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಶ್ರಮ ಮತ್ತು ಪರಿಶ್ರಮದಿಂದ ಸಾಧನೆಯ ಶಿಖರವೇರಬಹುದು ಎಂಬುದಕ್ಕೆ ಯುವವಾಹಿನಿ ಬೆಂಗಳೂರು ಘಟಕ ಕಣ್ಣಿಗೆ ಕಾಣುವ ಜೀವಂತ ಉದಾಹರಣೆಯಾಗಿ ಹೊರಹೊಮ್ಮಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ನಿರ್ಧಾರ ಕೈಗೊಂಡ ಬಳಿಕ, ಸದಸ್ಯರು ಸಿಕ್ಕ ಬಿಡುವಿನ ಸಮಯವನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು, ಹಗಲು-ರಾತ್ರಿ ಎನ್ನದೇ ನಿರಂತರ ಅಭ್ಯಾಸ ನಡೆಸಿದ ಫಲವಾಗಿ ಈ ಯಶಸ್ಸು […]
Read More
07-01-2026, 1:49 PM
ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು. ಸಾಮಾಜಿಕ, ಸಂಘಟನಾ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ತೋರಿದ ಸಾಧನೆ ಮತ್ತು ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ. ಈ ಪುರಸ್ಕಾರ ಯುವವಾಹಿನಿಗೆ ಹೆಮ್ಮೆಯ ವಿಷಯವಾಗಿದ್ದು, ಸಂಘಟನೆಯ ಮಹಿಳಾ ಶಕ್ತಿಗೆ ಸ್ಫೂರ್ತಿಯಾಗಿದೆ. ಯುವವಾಹಿನಿ (ರಿ.) ಕೇಂದ್ರ ಸಮಿತಿಯು […]
Read More
13-12-2025, 3:20 AM
ಬೆಂಗಳೂರು : ದೇವನಹಳ್ಳಿ ಮಕ್ಕಳಧಾಮ ಕ್ಯಾಂಪಸ್ನಲ್ಲಿ ಸ್ಪರ್ಶ ಟ್ರಸ್ಟ್ ಆಯೋಜಿಸಿದ್ದ “ಜಾಯ್ ಆಫ್ ಲರ್ನಿಂಗ್ – 2025” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ಸದಸ್ಯರು ನಿಸ್ವಾರ್ಥ ಸೇವೆಯ ಮೂಲಕ ಸಮಾಜಮುಖಿ ಬದ್ಧತೆಯನ್ನು ಮೆರೆದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವಕಾಶವಂಚಿತ ಮಕ್ಕಳಿಗೆ ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಆತ್ಮವಿಶ್ವಾಸ, ಉತ್ಸಾಹ ಮತ್ತು ಬದುಕಿನ ಹೊಸ ಆಶಯ ತುಂಬುವ ಮಹತ್ವದ ಪ್ರಯತ್ನ ನಡೆಯಿತು. ಡಿಸೆಂಬರ್ 13ರಂದು ಕಬಡ್ಡಿ, ವಾಲಿಬಾಲ್, ತ್ರೋಬಾಲ್, ರಿಲೇ, ಲಾಂಗ್ ಜಂಪ್ ಸೇರಿದಂತೆ ವಿವಿಧ ಕ್ರೀಡಾ […]
Read More
01-12-2025, 2:55 PM
ಕೋಟಿ ಚೆನ್ನಯ್ಯ ಟ್ರೋಫಿ-2025″ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಭಾನುವಾರ, ಅಕ್ಟೋಬರ್ 12 ರಂದು ನಾಡಪ್ರಭು ಕೆಂಪೇಗೌಡ ಬ್ಯಾಡ್ಮಿಂಟನ್ ಕೋರ್ಟ್, ವಿಜಯನಗರ ದಲ್ಲಿ ನಡೆಯಿತು. ಪುರುಷರ ಸಿಂಗಲ್ಸ್, ಡಬಲ್ಸ್, ಮಹಿಳೆಯರ ಡಬಲ್ಸ್ , ಮಿಕ್ಸಡ್ ಡಬಲ್ಸ್ ಪಂದ್ಯಗಳು* ನಡೆದವು. ಮಧ್ಯಾಹ್ನ 3 ಗಂಟೆಯಿಂದ ಮಾಸಿಕ ಸಭೆ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಿತು. ಬ್ಯಾಡ್ಮಿಂಟನ್ ಕೋರ್ಟ್, ರೆಫರಿಗಳು, ಜಡ್ಜ್ ಹಾಗೂ ಇತರೆ ಸ್ಥಳೀಯ ವ್ಯವಸ್ಥೆಗಳನ್ನು ಕ್ರೀಡಾ ನಿರ್ದೇಶಕರು ಕಿಶನ್ ಪೂಜಾರಿ ಮತ್ತು ರಕ್ಷಾ ಪ್ರಾಯೋಜಿಸಿದ್ದರು. ಸುಂದರ ಟ್ರೋಫಿಗಳು ಮತ್ತು […]
Read More
01-12-2025, 2:47 PM
ಯುವವಾಹಿನಿ (ರಿ.) ಬೆಂಗಳೂರು ಘಟಕದ 41 ಮಂದಿ ಸದಸ್ಯರು ತಮ್ಮ ಜೀವನದ ಮೊದಲ ಶಿವಗಿರಿ ತೀರ್ಥಯಾತ್ರೆಯನ್ನು 31 ಅಕ್ಟೋಬರ್ 2025 ರಂದು ಮೆಜಸ್ಟಿಕ್ ರೈಲು ನಿಲ್ದಾಣ ದಿಂದ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾದ ಸಂತೋಷ್ ಪಣಪಿಲ ಇವರ ಮಾರ್ಗದರ್ಶನದಲ್ಲಿ ಪ್ರಾರಂಭಿಸಿದರು. ಗುರುಗಳ ಕೃಪೆಯಿಂದಲೇ ಈ ಯಾತ್ರೆ ಸಾಧ್ಯವಾಯಿತು ನವೆಂಬರ್ 1, ಶನಿವಾರದ ಬೆಳಿಗ್ಗೆ ತಂಡ ಶಿವಗಿರಿ ತಲುಪಿತು. ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ನಮ್ಮ ತಂಡಕ್ಕೆ ಆಶೀರ್ವಾದ ನೀಡಿ, ಎಲ್ಲ ವ್ಯವಸ್ಥೆಗಳನ್ನು ಸುಗಮವಾಗಿ ನಡೆಸಿಕೊಟ್ಟರು. ತಂಡವು […]
Read More
21-10-2025, 3:48 PM
ದಿನಾಂಕ: 15 ಸೆಪ್ಟೆಂಬರ್ 2025, ಭಾನುವಾರ ಮಧ್ಯಾಹ್ನ ಸ್ಥಳ: ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ, ಪದ್ಮನಾಭನಗರ ಕಾರ್ಯಕ್ರಮವು ಸದಸ್ಯರಿಗಾಗಿ ಫಿಟ್ನೆಸ್ ಆಟಗಳು (ಫ್ಲ್ಯಾಂಕ್ ಚಾಲೆಂಜ್ ಮುಂತಾದವು)ಗಳಿಂದ ಪ್ರಾರಂಭವಾಯಿತು. ಬಳಿಕ, ಸ್ಪರ್ಶ್ ಆಸ್ಪತ್ರೆಯ ಪ್ರಸಿದ್ಧ ಹೃದ್ರೋಗ ತಜ್ಞರಾದ ಡಾ. ಬಸವರಾಜ್ ಹಗರಗಿ ಅವರು ಹೃದಯದ ಆರೋಗ್ಯ ಕುರಿತಾದ ಪ್ರೇರಣಾದಾಯಕ ಹಾಗೂ ಜ್ಞಾನಮಯ ಉಪನ್ಯಾಸವನ್ನು ನೀಡಿದರು. ಡಾ ಬಸವರಾಜ್ ಹಗರಗಿಯವರ ಕೆಲವು ಮುಖ್ಯ ಸಂದೇಶಗಳು* : 1. ಹೃದಯವು ನಮ್ಮ ದೇಹದ ಎಂಜಿನ್ನಂತೆ ಕಾರ್ಯನಿರ್ವಹಿಸುತ್ತದೆ. 2. ಕೊಲೆಸ್ಟ್ರಾಲ್ ಜಮಾವಣೆಯಿಂದ ಹೃದಯದಲ್ಲಿ […]
Read More
15-09-2025, 4:10 PM
ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೆಯ ಜನುಮ ಮಹೋತ್ಸವದ ಪ್ರಯುಕ್ತ ಈ ಸಾಲಿನ ಮೊದಲ ಗೃಹಭಜನೆ ಘಟಕದ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಅನಿತಾ ಕಮಲಾಕ್ಷ ಅವರ ಮನೆಯಲ್ಲಿ ನೆರವೇರಿತು. ಘಟಕದ ಸದಸ್ಯರಾದ ಶ್ರೀ ಜಯಂತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಿತು. ಘಟಕದ ಸದಸ್ಯರಿಂದ ಭಜನೆ ಹಾಗೂ ಕುಣಿತ ಭಜನೆ ಕಾರ್ಯಕ್ರಮ ಮೂಡಿ ಬಂತು. ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜನೆ ಮಾಡಿದ ಶ್ರೀಮತಿ ಅನಿತಾ ಕಮಲಾಕ್ಷ […]
Read More
14-09-2025, 4:40 PM
ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಮತ್ತು ತುಳು ಸಿರಿ ಚಾವಡಿ – 2025 ಕಾರ್ಯಕ್ರಮವು ದೈವಜ್ಞ ಸಭಾಭವನ ಜಾಲಹಳ್ಳಿಯಲ್ಲಿ 24 ಆಗಸ್ಟ್ 2025ರ ಭಾನುವಾರ ನೆರವೇರಿತು. ಬೆಳಿಗ್ಗೆ 9.30ಕ್ಕೆ ಗುರುಭಜನೆ ಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಶ್ರೀ ನಾರಾಯಣಗುರುಗಳ ಪ್ರತಿಮೆಗೆ ಶ್ರೀ ಜಯಂತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ವೈದಿಕ ರೀತಿಯಲ್ಲಿ ಪೂಜೆ ನೆರವೇರಿಸಲಾಯಿತು. ಪೂಜೆಯ ಬಳಿಕ ಪ್ರಸಾದ ವಿತರಣೆ ನಡೆಸಲಾಯಿತು. ನಂತರ ಯುವವಾಹಿನಿಯ ನಾಲ್ಕು ತಂಡಗಳಾದ ಯುವ ಬಿರುವೆರ್, ಯುವ ತುಡರ್, ಯುವ ಚಾಲೆಂಜರ್ಸ್ ಮತ್ತು ಯುವ ಪವರ್ ತಂಡದ […]
Read More
06-10-2024, 4:59 PM
ಬೆಂಗಳೂರು : ಘಟಕದ ಒಂದು ದಿನದ ಪ್ರವಾಸ ಕಾರ್ಯ ಯೋಜನೆಯು ದಿನಾಂಕ ಅಕ್ಟೋಬರ್ 6 ಆದಿತ್ಯವಾರದಂದು ಯಶಸ್ವಿಯಾಗಿ ನಡೆಯಿತು. ಈ ಪ್ರವಾಸದಲ್ಲಿ ಘಟಕದ ಸದಸ್ಯರು ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿ, ಮಠಾಧೀಶರಾದ ರಾಮನಗರ ಜಿಲ್ಲೆಯ ಸೋಲೂರು ಮಠ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನ ಮತ್ತು ಎಡಿಯೂರು ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಗಳಿಗೆ ಭೇಟಿಕೊಟ್ಟು ಶ್ರೀದೇವರ ದರ್ಶನವನ್ನು ಮಾಡಿದರು. ಬೆಳಿಗ್ಗೆ 9:00ಗೆ ಬೆಂಗಳೂರಿನ ಜೆಪಿ ನಗರದಿಂದ ಬಸ್ ಮೂಲಕ ಬಾಂಧವ್ಯದ ಪಯಣ ಆರಂಭಗೊಂಡಿತು. ಸದಸ್ಯರು, ಪದಾಧಿಕಾರಿಗಳು ಸೇರಿ ಒಟ್ಟು […]
Read More