Yuvavahini

ಎಕ್ಕಾರು-ಪೆರ್ಮುದೆ

ಸ್ವಚ್ಛತಾ ಕಾರ್ಯಕ್ರಮ

ದಿನಾಂಕ 17/11/2019 ರಂದು ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಘಟಕದ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಇದರ ವಠಾರದ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಅಧ್ಯಕ್ಷರಾದ ಸಂದೇಶ್ ಪೂಜಾರಿ, ಉಪಾಧ್ಯಕ್ಷರಾದ ಚಂದ್ರಹಾಸ ಪೂಜಾರಿ, ಹಿರಿಯರಾದ ಪ್ರದೀಪ್ ಕುಮಾರ್ ಸುವರ್ಣ, ವಿನೋದ್ ಸಾಲ್ಯಾನ್ ಸೇರಿದಂತೆ ಒಟ್ಟು 12 ಸದಸ್ಯರು ಹಾಜರಿದ್ದರು.

Read More

ಮಕ್ಕಳಿಗೆ ಛದ್ಮವೇಷ ಸ್ಪರ್ಧೆ

ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಹಾಗು ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ 14/11/2019 ಮಕ್ಕಳ ದಿನಾಚರಣೆಯಂದು ಅಂಗನವಾಡಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ಮಕ್ಕಳಿಗೆ ಬಹುಮಾನ ಹಾಗು ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು. ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಅಧ್ಯಕ್ಷರಾದ ಸಂದೇಶ್ ಪೂಜಾರಿ, ಗ್ರಾಮ ಪಂಚಾಯತ್ ಪೆರ್ಮುದೆ ಇದರ ಅಧ್ಯಕ್ಷರಾದ ಸರೋಜ, ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಹಿರಿಯ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ, ಚಂದ್ರಕಲಾ ಹಾಗು ಇತರ ಸದಸ್ಯರು ಉಪಸ್ಥಿತರಿದ್ದರು.

Read More

ರಾಧೆ-ಕೃಷ್ಣ ಸ್ಪರ್ಧೆ‌ 2019

ಯುವವಾಹಿನಿ(ರಿ)ಎಕ್ಕಾರು-ಪೆರ್ಮುದೆ ಹಾಗು ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ ರಾಧೆ-ಕೃಷ್ಣ ಸ್ಪರ್ಧೆ‌ ೨೦೧೯ ದಿನಾಂಕ ೨೫/೦೮/೨೦೧೯ ರಂದು ಬಿಲ್ಲವ ಸಮಾಜ ಸೇವಾ ಸಂಘ ದ ಸಭಾ ಭವನ ದಲ್ಲಿ ಜರುಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂದೇಶ್ ಪೂಜಾರಿ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಯಾದವ ಕೋಟ್ಯಾನ್, ಪ್ರದೀಪ್ ಕುಮಾರ್ ಸುವರ್ಣ, ರಮಾನಂದ‌ ಸಾಲ್ಯಾನ್, ಉಪಾಧ್ಯಕ್ಷರಾದ ಚಂದ್ರಹಾಸ ಪೂಜಾರಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ – ಅಕ್ಷರ ಎಕ್ಕಾರು, ದ್ವಿತೀಯ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19

ಎಕ್ಕಾರು ಪೆರ್ಮುದೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಎಕ್ಕಾರು ಪೆರ್ಮುದೆ ಘಟಕದ ಆತಿಥ್ಯದಲ್ಲಿ ವಿಶು ಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19 ನಡೆಯಿತು. ಯುವವಾಹಿನಿ ರಿ‌. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿಯ ಮಾಜಿ ಸಂಚಾಲಕರಾದ ಕಿಶೋರ್ ಬಿಜೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, […]

Read More

ಯುವವಾಹಿನಿ(ರಿ) ಎಕ್ಕಾರು ಪೆರ್ಮುದೆ ಘಟಕದಿಂದ ಸಹಾಯ ಹಸ್ತ

ಎಕ್ಕಾರು ಪೆರ್ಮುದೆ : ಮನನೊಂದ ಅಶಕ್ತ ಸಮಾಜ ಬಾಂಧವರ ಸಹಾಯಕ್ಕೆ ಸದಾ ಸಿದ್ದ ಎನ್ನುವ ಯುವವಾಹಿನಿ(ರಿ) ಎಕ್ಕಾರು ಪೆರ್ಮುದೆ  ಘಟಕವು ತನ್ನ ಧ್ಯೇಯ ವಾಕ್ಯದಂತೆ ಮತ್ತೊಂದು ನೊಂದ ಬಡ ಮನಸ್ಸಿಗೆ ತನ್ನ ಸಹಾಯ ಹಸ್ತವನ್ನು ನೀಡಿರುತ್ತದೆ ಮೂಡಿಗೆರೆಯ ಸುರೇಶ್ ಇವರು ಕಳೆದ ಕೆಲ ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ನಗರದ ಎ.ಜೆ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಮೂಲತಃ ಬಡ ಕುಟುಂಬದವರಾಗಿದ್ದು, ಅವಿವಾಹಿತರಾಗಿದ್ದು ತನ್ನ ತಂದೆಯನ್ನೂ ಕಳೆದುಕೊಂಡಿರುತ್ತಾರೆ. ಇವರ ಚಿಕಿತ್ಸೆಗೆ ಹಣ ಹೊಂದಿಸಲು ಇವರ ಸಹೋದರಿ ಸುಮ ಇವರು ಕಷ್ಟ […]

Read More

ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆ

ಪೆರ್ಮುದೆ ಎಕ್ಕಾರು : ಯುವವಾಹಿನಿ (ರಿ) ಎಕ್ಕಾರು ಪೆರ್ಮುದೆ  ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸಂದೇಶ್ ಪೂಜಾರಿ ಪೆರ್ಮುದೆ ಉಪಾಧ್ಯಕ್ಷರು : ಚಂದ್ರಹಾಸ್ ಪೂಜಾರಿ ಎಕ್ಕಾರು ಕಾರ್ಯದರ್ಶಿ : ಸಂದೇಶ್ ಕೋಟ್ಯಾನ್ ಪೆರ್ಮುದೆ ಜತೆ ಕಾರ್ಯದರ್ಶಿ : ರೋಹಿತ್ ಎಕ್ಕಾರು ಕೋಶಾಧಿಕಾರಿ : ಜಯಲಕ್ಷ್ಮಿ ಕೆ.ಪೂಜಾರಿ ಪೆರ್ಮುದೆ ಸಂಘಟನಾ ಕಾರ್ಯದರ್ಶಿ : ಶಿವರಾಮ್ ಕೋಟ್ಯಾನ್ ಪೆರ್ಮುದೆ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ದೀಪಕ್ ಪೂಜಾರಿ ಪೆರ್ಮುದೆ ಉದ್ಯೋಗ ಮತ್ತು […]

Read More

ಎಕ್ಕಾರು ಪೆರ್ಮುದೆ – ಘಟಕ ಉದ್ಘಾಟನೆ

ಎಕ್ಕಾರು ಪೆರ್ಮುದೆ  : ಯುವವಾಹಿನಿಯ 33 ನೇ ನೂತನ ಘಟಕ ಎಕ್ಕಾರು ಪೆರ್ಮುದೆ  ಘಟಕವು ದಿನಾಂಕ 04.11.2018 ರಂದು ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಎಕ್ಕಾರು ಇಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷ ಯಾದವ ಕೋಟ್ಯಾನ್ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯು ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯಗಳೊಂದಿನ ಯುವಜನರ ದ್ವನಿಯಾಗಿ ರೂಪುಗೊಂಡಿದೆ, ಎಂದು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದ  ಯುವವಾಹಿನಿ (ರಿ) […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!