20-07-2026, 9:00 PM
ಮಂಗಳೂರು, ಜುಲೈ 20 : “ನಮಗೆ ಕನಸುಗಳಿರಬೇಕು. ಹಾಗೆಯೇ ದೂರದೃಷ್ಟಿಯೂ ಇರಬೇಕು. ನೀವು ಯಾವ ಕ್ಷೇತ್ರದಲ್ಲಿ ಉದ್ಯಮ ಆರಂಭಿಸಬೇಕೆಂದು ಬಯಸುತ್ತೀರೋ, ಆ ಕ್ಷೇತ್ರವನ್ನು ‘ನಾನು ಸಾಧಿಸಬಲ್ಲೆ’ ಎಂಬ ಆತ್ಮವಿಶ್ವಾಸದಿಂದ ಆಯ್ಕೆ ಮಾಡಿಕೊಂಡು, ಅದರ ಬಗ್ಗೆ ಸೂಕ್ತ ಮಾಹಿತಿಯನ್ನು ಪಡೆದುಕೊಳ್ಳಬೇಕು. ಹಿಂಜರಿಕೆಯಿಂದ ಸಮಯವನ್ನು ವ್ಯರ್ಥ ಮಾಡಿದರೆ, ಕಳೆದ ಸಮಯ ಮತ್ತೆ ಮರಳಿ ಸಿಗುವುದಿಲ್ಲ” ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, […]
Read More
20-07-2026, 8:00 PM
ಮಂಗಳೂರು, ಜುಲೈ 20: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತಿ ಸೋಮವಾರ ನಡೆಯುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ, ಸೋಮವಾರ ಸಂಜೆ ನಡೆದ ಭಜನಾ ಸೇವೆಯು ಭಕ್ತಿಭಾವದಿಂದ ನೆರವೇರಿತು. ಈ ವಾರದ ಭಜನಾ ಸೇವೆಯನ್ನು ಶ್ರೀ ನಾರಾಯಣ ಗುರು ಸೇವಾ ಮಂದಿರ, ಕೂಳೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಭಜನಾ ತಂಡದ ಸದಸ್ಯರು ಹರಿನಾಮ ಸ್ಮರಣೆಯೊಂದಿಗೆ ಭಕ್ತಿರಸಪೂರ್ಣ ಭಜನೆಗಳನ್ನು ಹಾಡುವ ಮೂಲಕ ಶ್ರೀ ಗೋಕರ್ಣನಾಥ ಹಾಗೂ ಬ್ರಹ್ಮಶ್ರೀ […]
Read More
20-07-2026, 3:38 PM
ಕೊಲ್ಯ ಜುಲೈ 19 : ಯುವವಾಹಿನಿ (ರಿ) ಕೊಲ್ಯ ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ಜೀವನ್ ಕೊಲ್ಯ ಆಯ್ಕೆಯಾಗಿದ್ದಾರೆ 2026-27 ನೇ ಸಾಲಿನ ಕಾರ್ಯಕಾರಿ ಸಮಿತಿಅಧ್ಯಕ್ಷರು : ಜೀವನ್ ಕೊಲ್ಯಪ್ರಥಮ ಉಪಾಧ್ಯಕ್ಷರು : ಜೀವನ್ ಬೆರಿಕೆದ್ವಿತೀಯ ಉಪಾಧ್ಯಕ್ಷರು : ಲತೀಶ್ ಪಾಪುದಡಿಕಾರ್ಯದರ್ಶಿ : ಮುಕೇಶ್ ಕಿನ್ಯಜೊತೆ ಕಾರ್ಯದರ್ಶಿ : ಭಾಸ್ಕರ್ ಮಡ್ಯಾರ್ಕೋಶಾಧಿಕಾರಿ : ಅನಿತಾ ಸುಂದರ್ ನಿರ್ದೇಶಕರುನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಶಶಿಕಾಂತ್ ಪರ್ಯಾತ್ತೂರ್ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸವಿತಾ ಬಂಗೇರಕ್ರೀಡಾ […]
Read More
19-07-2026, 8:00 PM
ಸುಳ್ಯ, ಜುಲೈ 19 : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಜೂನ್ ತಿಂಗಳ ‘ಗುರುಸ್ಪೂರ್ತಿ’ ಕಾರ್ಯಕ್ರಮವು ಘಟಕದ ಪೂರ್ವಾಧ್ಯಕ್ಷ ಸುನಿಲ್ ಪೂಜಾರಿ ಕಳಂಜಪಟ್ಟೆ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಹೊನ್ನಪ್ಪ ಕೈಂದಾಡಿ ಅವರು ನಾರಾಯಣಗುರುಗಳ ಸಂದೇಶವನ್ನು ನೀಡುತ್ತಾ, ಗುರುಗಳ ತತ್ವ-ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸೌಹಾರ್ದತೆ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬೇಕೆಂದು ಕರೆ ನೀಡಿದರು. ಯುವವಾಹಿನಿ (ರಿ.) ಸುಳ್ಯ ಘಟಕದ ಅಧ್ಯಕ್ಷ ಮಹೇಶ್ ಕಲ್ಪಣೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ […]
Read More
19-07-2026, 6:00 PM
ಬೆಂಗಳೂರು, ಜುಲೈ 19: ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ “ಕೋಟಿ ಚೆನ್ನಯ್ಯ ಟ್ರೋಫಿ – ಸೀಸನ್ 2” ಬ್ಯಾಡ್ಮಿಂಟನ್ ಕ್ರೀಡಾಕೂಟವು ಭಾನುವಾರ ಬೆಂಗಳೂರಿನ ದಾಸರಹಳ್ಳಿ ಸಮೀಪದ ಎಎಂ ಸ್ಪೋರ್ಟ್ಸ್ ಅರೆನಾದಲ್ಲಿ ಸಂಭ್ರಮ, ಉತ್ಸಾಹ ಮತ್ತು ಕ್ರೀಡಾಸ್ಫೂರ್ತಿಯ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿತ್ಯಾನಂದ ಶೆಟ್ಟಿ ಹಾಗೂ ನಂಜುಂಡ ಪೂಜಾರಿ ಅವರು, ಘಟಕದ ಅಧ್ಯಕ್ಷ ವಿಜೇತ್ ವಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. […]
Read More
19-07-2026, 3:00 PM
ಬಜಪೆ ಜುಲೈ 19 : ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ -ಕರಂಬಾರು ಇವರ ಸಹಕಾರದಲ್ಲಿ “ಆಟಿದ ನೆಂಪು -2026” ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಬಜಪೆ ಇಲ್ಲಿ 19.07.2026 ರಂದು ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಊರಿಗೆ ಬಂದ ಮಾರಿ ರೋಗದ ಕಳೆ ರುಜಿನದ ಕೊಳೆಯ ಕಳೆಯುತ್ತಾ ಮನೆಯಂಗಳಕ್ಕೆ […]
Read More
19-07-2026, 2:00 PM
ಕೊಲ್ಯ ಜುಲೈ19 : ಯುವವಾಹಿನಿ (ರಿ) ಕೊಲ್ಯ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುಪೂಜೆಯೊಂದಿಗೆ ಘಟಕದ ಅಧ್ಯಕ್ಷ ನಿತಿನ್ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 19.07.2026ರಂದು ನಡೆಯಿತು ಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ–ಸೋಮೇಶ್ವರದ ಅಧ್ಯಕ್ಷ ಶೇಷಪ್ಪ ಬೈದ್ಯಮನೆ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಕಳೆದ ಒಂದು ವರ್ಷದ […]
Read More
19-07-2026, 2:00 PM
ಸುರತ್ಕಲ್, ಜುಲೈ 19 : ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ “ಆಟಿದ ಐಸಿರ -2026” ಕಾರ್ಯಕ್ರಮವು 19-07-2026ರಂದು ಗುಡ್ಡೆಕೊಪ್ಲದ “ಮಾತೃಕೃಪಾ”ದಲ್ಲಿ ಘಟಕದ ಅಧ್ಯಕ್ಷೆ ರೇವತಿ ನವೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮನೆಯಂಗಳಕ್ಕೆ ಆಗಮಿಸಿದ ಆಟಿಕಳೆಂಜನಿಗೆ ಪುಷ್ಪ ಅವರು ಪಡಿಯಕ್ಕಿ ಸುರಿಯುವ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಿಕ್ಷಕಿ, ನಿರೂಪಕಿ ಹಾಗೂ ಜೈ ತುಳುನಾಡು (ರಿ.) ಬಂಟ್ವಾಳ ಘಟಕದ ಸಂಘಟನಾ ಕಾರ್ಯದರ್ಶಿ ರೇಣುಕಾ ಕಾಣಿಯೂರ್ ಅವರು ಮಾತನಾಡಿ, “ಆಟಿದ […]
Read More
19-07-2026, 9:00 AM
ನಿಯಮಾವಳಿ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಆತಿಥ್ಯದಲ್ಲಿ, 2026ರ ಆಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಯುವವಾಹಿನಿ ಭಜನಾ ಸ್ಪರ್ಧೆ–2026ರ ನಿಯಮಾವಳಿ ಈ ಕೆಳಗಿನಂತಿದೆ. 🔹 ಅರ್ಹತೆ ಮತ್ತು ಸದಸ್ಯತ್ವ1) ಇದು ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾದ ಅಂತರ್ಘಟಕ ಭಜನಾ ಸ್ಪರ್ಧೆಯಾಗಿದೆ.2) ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರು ನಿಗದಿತ ಅವಧಿಯೊಳಗೆ ವಾರ್ಷಿಕ ಸದಸ್ಯತ್ವ ಶುಲ್ಕ ಪಾವತಿಸಿ, ಕೇಂದ್ರ ಸಮಿತಿಯಿಂದ ಅನುಮೋದನೆಗೊಂಡ ಸದಸ್ಯತ್ವ ಸಂಖ್ಯೆ […]
Read More
16-07-2026, 8:30 PM
ಬಂಟ್ವಾಳ, ಜುಲೈ 16: “ಶ್ರೀ ನಾರಾಯಣಗುರುಗಳ ಸಂದೇಶಗಳು ಇಂದಿನ ಸಮಾಜ ಮತ್ತು ಜೀವನ ಮೌಲ್ಯಗಳಿಗೆ ಅತ್ಯಂತ ಪ್ರಸ್ತುತವಾಗಿವೆ. ಸಮಾನತೆ, ಮಾನವೀಯತೆ, ಶಿಕ್ಷಣ ಹಾಗೂ ಸೌಹಾರ್ದತೆಯ ಕುರಿತು ಗುರುದೇವರು ನೀಡಿದ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ,” ಎಂದು ಶಿಕ್ಷಕಿ ತ್ರಿವೇಣಿ ರಮೇಶ್ ಹೇಳಿದರು. ಅವರು ದಿನಾಂಕ 16-07-2026 ರಂದು ನರಹರಿನಗರ, ಕಲ್ಲಡ್ಕದ ಶೇಖರ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಗುರುತತ್ವವಾಹಿನಿ ಮಾಲಿಕೆ–71ರ ಭಜನಾ […]
Read More