ಪದಗ್ರಹಣ ಸಮಾರಂಭ
06-06-2026, 5:10 PM
05-06-2026, 11:00 AM
ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ 05-06-2026ರಂದು ವಿಶ್ವ ಪರಿಸರ ದಿನಾಚರಣೆ ಹಾಗೂ ಬಳ್ಪ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಯುವವಾಹಿನಿ (ರಿ.) ಕಡಬ ಘಟಕ ಮತ್ತು ಗ್ರಾಮ ಅರಣ್ಯ ಸಮಿತಿ ಬಳ್ಪ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಪಂಜ ವಲಯದ ಉಪ ವಲಯ ಅರಣ್ಯ ಅಧಿಕಾರಿಗಳಾದ ಮಹಬೂಬ್ ಇಲಾ ಅವರು ಉದ್ಘಾಟಿಸಿ, […]
05-06-2026, 10:00 AM
ಮಾಣಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಮರದ ನೆರಳು – ಬದುಕಿಗೆ ನೆರಳು” ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಂಡಿರುವ ಯುವ ವೃಕ್ಷೋತ್ಸವ ಕಾರ್ಯಕ್ರಮಕ್ಕೆ ದಿನಾಂಕ 05.06.2026ರಂದುನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದ ವಠಾರದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ನಾರಾಯಣಗುರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಸಾಲಿಯಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಕಾರ್ಯದರ್ಶಿ […]
01-06-2026, 8:00 PM
ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಅಂಗವಾಗಿ, ದಿನಾಂಕ 01-06-2026ರಂದು ಸೋಮವಾರ ಸಂಜೆ 5.30 ಗಂಟೆಗೆ ಭಜನಾ ಸೇವಾ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಈ ಭಜನಾ ಸೇವೆಯು ಶ್ರೀರಾಮ ಕ್ಷತ್ರಿಯ ಭಜನಾ ತಂಡ, ಸುರತ್ಕಲ್ ಇವರ ಸಹಯೋಗದೊಂದಿಗೆ ನೆರವೇರಿತು. ಸಂಜೆ 7.00 ಗಂಟೆಗೆ ಶ್ರೀ ನಾರಾಯಣಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಕ್ಷೇತ್ರದ ವತಿಯಿಂದ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ […]
31-05-2026, 1:00 PM
ಶಿರ್ತಾಡಿ : “ಹೋಮಿಯೋಪತಿ ಚಿಕಿತ್ಸೆಯು ಅಡ್ಡಪರಿಣಾಮಗಳಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿದೆ. ಕಳೆದ 13 ವರ್ಷಗಳಿಂದ ಆರೋಗ್ಯ ಸಮಸ್ಯೆಗಳು ಎದುರಾದಾಗ ನಾನು ಹೋಮಿಯೋಪತಿ ಚಿಕಿತ್ಸೆಯನ್ನೇ ಅನುಸರಿಸುತ್ತಿದ್ದು ಉತ್ತಮ ಫಲಿತಾಂಶ ಕಂಡಿದ್ದೇನೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 31-05-2026ರಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಆಳ್ವಾಸ್ […]
31-05-2026, 1:00 PM
ಅಳಕೆ : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಶ್ರೀ ನಾರಾಯಣಗುರುಗಳ ” ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ” ಎಂಬ ಸಂದೇಶವು ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು. ಜ್ಞಾನ ಮತ್ತು ಸಂಸ್ಕಾರಗಳೊಂದಿಗೆ ಪಡೆದ ಶಿಕ್ಷಣವು ವ್ಯಕ್ತಿಯನ್ನು ಉತ್ತಮ ನಾಗರಿಕನನ್ನಾಗಿ ರೂಪಿಸಿ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದರು. ಶಿಕ್ಷಣದ ಮೂಲಕ ಸಮಾನತೆ, ಸಹೋದರತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಬೆಳೆಸಿಕೊಂಡು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಂತೆ […]
30-05-2026, 9:00 PM
ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ‘ಮನೆ ಮನೆ ಭಜನೆ’ ಸರಣಿಯ ಅಂಗವಾಗಿ ಘಟಕದ ಸಕ್ರಿಯ ಸದಸ್ಯರಾದ ರಾಘವೇಂದ್ರ ಪೂಜಾರಿ ಹಾಗೂ ತಾರಾವತಿ ದಂಪತಿಗಳ ರಜತ ಮಹೋತ್ಸವದ (25ನೇ ವರ್ಷದ) ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಅವರ ನಿವಾಸದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮವು ಅತ್ಯಂತ ಭಕ್ತಿಭಾವದಿಂದ ನೆರವೇರಿತು. ಇದೇ ಸುಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ಅವರ ಪೌರೋಹಿತ್ಯದಲ್ಲಿ ಭಕ್ತಿಪೂರ್ವಕ “ದುರ್ಗಾ ನಮಸ್ಕಾರ ಪೂಜೆ”ಯು ಸಂಪನ್ನಗೊಂಡಿತು. ಧಾರ್ಮಿಕ ವಿಧಿವಿಧಾನಗಳ ನಂತರ ಯುವವಾಹಿನಿ ಘಟಕದ […]
30-05-2026, 4:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ದಿನಾಂಕ 30.05.2026ರಂದುಕಕ್ವ ಕೊಕ್ರಾಣಿ ಡಾನ್ ಬಾಸ್ಕೋ ರೆಸಾರ್ಟ್ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಘಟಕದ 35 ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಜಯಕುಮಾರ್ ಕುಬೆವೂರು ಅವರು ವಿವಿಧ ಮನರಂಜನಾ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಘಟಕದ ಅಧ್ಯಕ್ಷರಾದ ವಿನಯಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ರೆಸಾರ್ಟ್ನ ಮಾಲಕರಾದ ಕ್ಯಾನಿ ಡಿ’ಸೋಜಾ […]
28-05-2026, 9:00 PM
ಮಂಗಳೂರು, ಮೇ 28: ಯುವವಾಹಿನಿ (ರಿ.) ಕಂಕನಾಡಿ ಘಟಕವು ತನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳ ಅಂಗವಾಗಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಂಗಳೂರಿನ ಉಜ್ಜೋಡಿ ನಿವಾಸಿ ರಾಜೇಶ್ ಅವರಿಗೆ ಆರ್ಥಿಕ ನೆರವು ನೀಡಿದೆ. ರಾಜೇಶ್ ಅವರ ವೈದ್ಯಕೀಯ ಚಿಕಿತ್ಸೆಗೆ ಸಹಕಾರಿಯಾಗುವ ಉದ್ದೇಶದಿಂದ ಘಟಕದ ಸದಸ್ಯರು ಮತ್ತು ಹಿತೈಷಿಗಳ ಸಹಯೋಗದೊಂದಿಗೆ ಸಂಗ್ರಹಿಸಲಾದ Rs. 30,000/- ಮೊತ್ತದ ಧನಸಹಾಯವನ್ನು 28-05-2026 ರಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ರಾಜೇಶ್ ಅವರು ಶೀಘ್ರವಾಗಿ ಸಂಪೂರ್ಣ ಆರೋಗ್ಯವನ್ನು […]