04-08-2026, 11:30 AM
ಕಂಕನಾಡಿ, ಆ. 4: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ (ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ) ಸಹಯೋಗದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (KSTA) ಭವನ, ಗೋರಿಗುಡ್ಡದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಯುಷ್ ಇಲಾಖೆಯ ಹೋಮಿಯೋಪತಿ ತಜ್ಞೆ ಡಾ. ಶ್ರೀ ದೇವಿ ವೆಂಕಟಾಪುರ ಅವರು, “ಹೋಮಿಯೋಪತಿ ಔಷಧಿಗಳಿಗೆ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಶಿಶುವಿನಿಂದ ಹಿಡಿದು ಎಲ್ಲಾ ವಯೋಮಾನದವರು […]
Read More
02-08-2026, 11:00 PM
ಮೂಡುಬಿದಿರೆ, ಆ. 2: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಮಹತ್ವ, ಸಾಮಾಜಿಕ ಜವಾಬ್ದಾರಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ‘ಅರಿವು–2026’ ಕಾರ್ಯಕ್ರಮವು ಮೂಡುಬಿದಿರೆಯ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಮೃತ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಅಧಿಕಾರಿ ಜಿನೇಂದ್ರ […]
Read More
02-08-2026, 8:00 PM
ಹೆಜಮಾಡಿ, ಆ. 2: ಯುವವಾಹಿನಿ (ರಿ.) ಹೆಜಮಾಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಹೆಜಮಾಡಿ ಬಿಲ್ಲವರ ಸಂಘ (ರಿ.) ಸಭಾಂಗಣದಲ್ಲಿ ಘಟಕದ ಅಧ್ಯಕ್ಷ ನಿಶಾಂಕ್ ಎಸ್. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವರ ಸಂಘ (ರಿ.) ಅಧ್ಯಕ್ಷ ಮೋಹನ್ ದಾಸ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವವಾಹಿನಿಯು ಸಮಾಜಮುಖಿ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ […]
Read More
02-08-2026, 7:00 PM
ಮುಲ್ಕಿ, ಆ. 2: ಕಾರ್ಗಿಲ್ ವಿಜಯ ದಿನಾಚರಣೆಯು ಕೇವಲ ವಿಜಯದ ಸಂಭ್ರಮವಲ್ಲ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹುತಾತ್ಮ ಯೋಧರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಗೌರವ ಸಲಹೆಗಾರ ವೈ.ಎನ್. ಸಾಲ್ಯಾನ್ ಹೇಳಿದರು. ಅವರು ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಂಘದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕಾರ್ಗಿಲ್ ವಿಜಯ ಸುಲಭವಾಗಿ ದೊರೆತ ಗೆಲುವಲ್ಲ. ನಮ್ಮ ಯೋಧರು ತಮ್ಮ […]
Read More
02-08-2026, 4:00 PM
ಬೆಳ್ಳಾರೆ, ಆ. 2: ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಆಟಿ ತಿಂಗಳ ಮಹತ್ವವನ್ನು ಇಂದಿನ ಯುವಜನತೆಗೆ ಪರಿಚಯಿಸುವ ಕಾರ್ಯ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಭಾನುವಾರ ಬೆಳ್ಳಾರೆ ಪೆರುವಾಜೆಯ ಜೆ.ಡಿ. ಆಡಿಟೋರಿಯಂನಲ್ಲಿ ಆಯೋಜಿಸಲಾದ ಆಟಿದ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಟಿ ತಿಂಗಳು ಕೇವಲ ಆಚರಣೆಯ ತಿಂಗಳಲ್ಲ; ಅದು […]
Read More
02-08-2026, 3:00 PM
ಮೂಡುಬಿದಿರೆ, ಆ. 2: ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನಶೈಲಿಯತ್ತ ಅವರನ್ನು ಪ್ರೇರೇಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕಿ ಹಾಗೂ ಸರ್ಕಾರಿ ಶಾಲಾ ಶಿಕ್ಷಕಿ ಯೋಗಿತಾ ನವಾನಂದ ಹೇಳಿದರು. ಅವರು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ‘ವಿದ್ಯಾರ್ಥಿ ಮನೋಹಿತ’ […]
Read More
02-08-2026, 1:00 PM
ಬಂಟ್ವಾಳ, ಆ. 3: ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವ ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಬ್ರೈನ್ ಟ್ಯೂಮರ್ನಿಂದ ಬಳಲುತ್ತಿರುವ ರಾಮಚಂದ್ರ ಸಾಲ್ಯಾನ್ ಅವರಿಗೆ ಸೇವಾ ಯೋಜನೆಯಡಿ ₹25,000 ಮೊತ್ತದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಈ ಸೇವಾ ಯೋಜನೆಯನ್ನು ರೂಪಿಸಲಾಗಿದ್ದು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ನೆರವಿನ ಮೊತ್ತವನ್ನು ಫಲಾನುಭವಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಮಾರ್ಗದರ್ಶಕರಾದ ಭುವನೇಶ್ ಪಚ್ಚಿನಡ್ಕ ಚಕ್ ಹಸ್ತಾಂತರ ಮಾಡಿದರು ಯುವವಾಹಿನಿ ಬಂಟ್ವಾಳ […]
Read More
01-08-2026, 2:00 PM
ಮೂಡುಬಿದಿರೆ, ಆ. 1: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಮೂಡುಬಿದಿರೆಯಲ್ಲಿ ಆಗಸ್ಟ್ 1ರಂದು ‘ವಿದ್ಯಾರ್ಥಿ ಮನೋಹಿತ’ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಾಗಾರ–2 ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ, ಶಿಸ್ತುಬದ್ಧ ಜೀವನಶೈಲಿಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಸಂತೋಷ್ ನಾಯ್ಕ್ […]
Read More
31-07-2026, 8:30 PM
ಕಲ್ಲಡ್ಕ, ಜುಲೈ 31: “ಎಲ್ಲಾ ಮತಧರ್ಮಗಳಲ್ಲಿರುವ ಉತ್ತಮಾಂಶಗಳ ಸಾರವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಆಧ್ಯಾತ್ಮಿಕತೆ. ಶ್ರೀ ನಾರಾಯಣಗುರುಗಳ ಸಂದೇಶಗಳಲ್ಲಿ ಈ ವಿಶಾಲ ಮಾನವೀಯ ದೃಷ್ಟಿಕೋನ ಸ್ಪಷ್ಟವಾಗಿ ಕಾಣುತ್ತದೆ” ಎಂದು ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕರಾದ ಪ್ರಶಾಂತ್ ಅನಂತಾಡಿ ಹೇಳಿದರು.ಅವರು ಜುಲೈ 31ರಂದು ಮುರಬೈಲು–ಗೊಳ್ತಮಜಲು, ಕಲ್ಲಡ್ಕದ ಮೋಹನ್ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ – 73ನೇ ಮಾಲಿಕೆ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿದರು.ಗುರುಗಳ ಚಿಂತನೆಗಳನ್ನು ಅರಿತಾಗ ಭಗವಾನ್ ಬುದ್ಧ, ಆದಿ […]
Read More
30-07-2026, 6:00 PM
ಮಂಗಳೂರು, ಜು. 30: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸೀಡಾಕ್), ಧಾರವಾಡ, ಸೀಡಾಕ್ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ಮಂಗಳೂರು, ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ ಚೌಕಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜುಲೈ 30ರಂದು ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ […]
Read More