15-09-2024, 6:26 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ 15-09-2024 ರಂದು ಉಡುಪಿಯಲ್ಲಿ ಜರುಗಿತು. ಮುಖ್ಯ ಅತಿಥಿ ಶಿಕ್ಷಣ ತಜ್ಞ ರವೀಂದ್ರ ಪೂಜಾರಿ ಅಡ್ವೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಹಾಗೂ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಘಟಕದ ಉಪಾಧ್ಯಕ್ಷರು ದಯಾನಂದ ಉಗ್ಗೆಲ್ಬೆಟ್ಟು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಹಾರ್ದಿಕವಾಗಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಡ್ವೆ ರವೀಂದ್ರ ಪೂಜಾರಿಯವರು “ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಪಾಠ ಬೋಧನೆಯ ಜೊತೆಗೆ ಜೀವನ ಸಂಗತಿಗಳನ್ನು […]
Read More
15-09-2024, 6:23 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಸಂಗೀತ ಇವರ ಸಂಚಾಲಕತ್ವದಲ್ಲಿ ದಿನಾಂಕ 15-09-2024 ಆದಿತ್ಯವಾರದಂದು ಮಧ್ಯಾಹ್ನ 2.30 ಗಂಟೆಗೆ ಸರಿಯಾಗಿ ಸ್ವ ಉದ್ಯೋಗ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ವಿದ್ಯಾ ರಾಕೇಶ್ ಆಗಮಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಸಾಲ […]
Read More
15-09-2024, 5:52 AM
ಪಾಪುದಡಿ : ಸುಂದರ ಹಚ್ಚ ಹಸಿರ ತೋಟಗಳ ನಡುವೆ ಯುವವಾಹಿನಿ (ರಿ) ಕೊಲ್ಯ ಘಟಕದ ಕೋಶಾಧಿಕಾರಿ ಯುವ ರೈತ ಲತೀಶ್ ಪಾಪುದಡಿ ಇವರ ಕೊಳಕೆ ಗದ್ದೆಯಲ್ಲಿ ದಿನಾಂಕ 15/09/2024 ರಂದು ಯುವವಾಹಿನಿ ಕೊಲ್ಯ ಘಟಕದ ಸದಸ್ಯರಿಂದ ಭತ್ತ ನಾಟಿ ಕೆಲಸ ನಡೆಯಿತು. ಹಿರಿಯ ಮಹಿಳೆಯರು ಓ ಬೇಲೆ ಬೇಲೆ ಹಾಡುತ್ತಾ ಘಟಕದ ಸದಸ್ಯರಿಗೆ ಸ್ಫೂರ್ತಿ ನೀಡುತ್ತಾ ನಾಟಿ ಮಾಡುವ ಕ್ರಮವನ್ನು ವಿವರಿಸಿದರು. ಅದರಂತೆ ಎಲ್ಲರೂ ಗದ್ದೆಯಲ್ಲಿ ಭತ್ತದ ನೇಜಿ ನಾಟಿ ಮಾಡುತ್ತಾ ಕೃಷಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡರು. […]
Read More
15-09-2024, 5:05 AM
ಕುಳಾಯಿ : ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಮಾಧವ ಕೀರ್ತನೋತ್ಸವ – 2024 ಭಜನಾ ಕಾರ್ಯಕ್ರಮವು 15-09-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಭಜನಾ ಕ್ಷೇತ್ರದ ಹಿರಿಯರು ಮಾಧವ ಅಂಚನ್ ಇಡ್ಯಾರವರು ದೀಪ ಬೆಳಗಿಸುವುದರ ಮೂಲಕ ಭಜನಾ ಸಂಕೀರ್ತನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಜನಾ ಸಂಕೀರ್ತನೆಯಲ್ಲಿ ಸ್ಥಳೀಯ ಭಜನಾ ತಂಡದ ಭಜಕರು ಭಾಗವಹಿಸಿದ್ದರು. ಭಜನಾ ಮಂಗಲೋತ್ಸವದ ನಂತರ ಭಜನಾ ಕ್ಷೇತ್ರದ ಸಾಧಕರನ್ನು ಗೌರವಿಸುವ ಕಾರ್ಯಕ್ರಮವು ಜರಗಿತು. ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) […]
Read More
15-09-2024, 4:44 AM
ಮೂಡುಬಿದಿರೆ: ದಿನೇ ದಿನೇ ಬಲಿಷ್ಠ ಸಂಘಟನೆಯಾಗಿ ಯಶಸ್ಸಿನತ್ತ ಮುನ್ನುಗ್ಗುತ್ತಿರುವ ಯುವವಾಹಿನಿಯ ಸದಸ್ಯರ ಸಿದ್ದತೆ ಮತ್ತು ಬದ್ದತೆ ಇತರರಿಗೆ ಮಾದರಿಯಾಗಿದೆ ಎಂದು ಉದ್ಯಮಿ ನಾರಾಯಣ ಪಿ.ಎಂ ತಿಳಿಸಿದರು. ಅವರು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 15-09-2024 ರಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆದ ಬಹುಮಾನ, ವಿದ್ಯಾರ್ಥಿ ವೇತನ ಹಾಗೂ ಸದಸ್ಯರ ಐಡಿ ಕಾರ್ಡ್ ವಿತರಣಾ ಸಮಾರಂಭವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ […]
Read More
14-09-2024, 4:33 PM
ಮುಲ್ಕಿ : ದಿನಾಂಕ 14 -09-2024 ರಂದು ಶನಿವಾರ ಸಂಜೆ 5:30ಕ್ಕೆ ಮುಲ್ಕಿಯ ಬ್ರಹ್ಮಶ್ರೀ ನಾರಾಯಣ ಗುರು ವರ್ಯರ ಸಾನಿಧ್ಯದಲ್ಲಿ ಮಂದಿರದ ಅರ್ಚಕರಾದ ಕೃಷ್ಣನ್ ಶಾಂತಿಯವರ ನೇತೃತ್ವದಲ್ಲಿ ಶ್ರೀಗುರುವರ್ಯರಿಗೆ ವಿಶೇಷ ಪ್ರಾರ್ಥನೆ ಯನ್ನು ಸಲ್ಲಿಸಿ, ಘಟಕದ ಅಧ್ಯಕ್ಷರಾದ ರಿತೇಶ್ ಅಂಚನ್ ಇವರ ಮನೆಯಲ್ಲಿ ಭಜನಾ ಸಂಕೀರ್ತನೆ ಜರಗಿತು. ಘಟಕದ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಪಾಲ್ಗೊಂಡರು. ಈ ಕಾರ್ಯಕ್ರಮದ ನೆನಪಿಗಾಗಿ ಬ್ರಹ್ಮಶ್ರೀ ಗುರುವರ್ಯರ ಚರಿತ್ರೆಯ ಪುಸ್ತಕವನ್ನು ಘಟಕದ ವತಿಯಿಂದ ನೀಡಲಾಯಿತು.
Read More
12-09-2024, 3:33 PM
ಬಂಟ್ವಾಳ : ಬ್ರಹ್ಮಶ್ರೀ ನಾರಾಯಣ ಗುರುಗಳು 1908 ರಲ್ಲಿ ತಲಶ್ಶೇರಿಯಲ್ಲಿ ನಿರ್ಮಾಣವಾದ ಶ್ರೀ ಜಗನ್ನಾಥ ದೇವಾಲಯದ ವಿಚಾರದಲ್ಲಿ ನಡೆಸಿದ ಹೋರಾಟದಂತೆ, ಅಂದು ನಡೆಸಿದ ಮೌನ ಕ್ರಾಂತಿಯ ಹೋರಾಟವು ಮನುಕುಲದ ಬದುಕಿನಲ್ಲಿ ಮೂಡಿದ ಆಶಾಕಿರಣವು ಪ್ರಸ್ತುತ ಕಾಲಘಟ್ಟದಲ್ಲಿಯೂ ಸಕಾಲಿಕವಾಗಿದೆ ಎಂದು ಪ್ರಶಾಂತ್ ತಿಳಿಸಿದರು. ಅವರು ದಿನಾಂಕ 12-09-2024 ನೇ ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷರಾದ ಶಿವಾನಂದ ಎಂ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 11 ನೇ ಮಾಲಿಕೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷರಾದ ನಾರಾಯಣ […]
Read More
12-09-2024, 12:56 PM
ಕಂಕನಾಡಿ: ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ದಿನಾಂಕ 12-09-2024 ರಂದು ಘಟಕದ ಕಛೇರಿಯಲ್ಲಿ ಸಂಜೆ ಗಂಟೆ 6:30ಕ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನ ಕಾರ್ಯಕ್ರಮ ಆಚರಿಸಲಾಯಿತು. ಅಧ್ಯಕ್ಷರಾದ ರಾಹುಲ್ ಸನಿಲ್ ಇವರು ಸಭೆಗೆ ಬಂದ ಎಲ್ಲಾ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಸ್ವಾಗತಿಸಿದರು. ಘಟಕದ ಮತ್ತು ಪರಿಸರದ 3 ಶಿಕ್ಷಕರನ್ನು ಸನ್ಮಾನಿಸುವ ಮೂಲಕ ಗುರುವಂದನೆಯನ್ನು ಸಲ್ಲಿಸಲಾಯಿತು. ಸನ್ಮಾನ ಸ್ವೀಕರಿಸಿದ ಶಿಕ್ಷಕಿ ಶ್ರೀಮತಿ ಶೀಲಾ ಟೀಚರ್ ರವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ಪಡಿಸಿದರು. ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ […]
Read More
11-09-2024, 5:16 AM
ಮೂಡುಬಿದಿರೆ : ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯ ಉದ್ದೇಶವನ್ನು ಇಟ್ಟುಕೊಂಡ ಯುವವಾಹಿನಿ (ರಿ.) ಮೂಡುಬಿದರೆ ಘಟಕವು ಪ್ರಾರಂಭಿಸಿದ ಮದ್ಯ ಮುಕ್ತ ಮೆಹಂದಿ ಕಾರ್ಯಕ್ರಮದ ಅಡಿಯಲ್ಲಿ ಯುವವಾಹಿನಿಯ 34 ನೇ ಘಟಕ ಗ್ರಾಮಚಾವಡಿ ಕೊಣಾಜೆ ಇದರ ಅಧ್ಯಕ್ಷರಾದ ಹರೀಶ್ ಪೂಜಾರಿ ಇವರ ಧರ್ಮಪತ್ನಿಯ ತಮ್ಮನಾದ ಪಾಲಡ್ಕದ ಪೂಜಾರಿಬೆಟ್ಟು ನಿವಾಸಿ ಗ್ರಾಮಚಾವಡಿ ಘಟಕದ ಸದಸ್ಯ ಸುಕೇಶ್ ಪೂಜಾರಿ ಇವರು ತನ್ನ ಮದುವೆಯ ಮೆಹಂದಿ ಕಾರ್ಯಕ್ರಮವನ್ನು ತನ್ನ ಹುಟ್ಟೂರಾದ ಪಾಲಡ್ಕದ (ಮೂಡುಬಿದಿರೆ) ಮನೆಯಲ್ಲಿ ಬಹಳ ಸಾಂಪ್ರದಾಯಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾಜಿ […]
Read More
08-09-2024, 2:07 PM
ಪಡುಬಿದ್ರಿ : ಅವಿಭಜಿತ ಜಿಲ್ಲೆಯಲ್ಲಿ ವಿದ್ಯೆ, ಉದ್ಯೋಗ, ಸಂಪರ್ಕದ ತತ್ವದಲ್ಲಿ ಆದರ್ಶತೆ ಮೆರೆದ ಸಂಸ್ಥೆ ಯುವವಾಹಿನಿ. ಈ ಸಂಘಟನೆ ತೆರೆಮರೆಯಲ್ಲಿ ಹಲವಾರು ಕಾರ್ಯಗಳನ್ನು ಮಾಡುತ್ತಿದೆ. ಯುವಕರು ಸಮಾಜದಲ್ಲಿ ತಪ್ಪು ದಾರಿಗೆ ಹೋಗದೆ ಸರಿ ದಾರಿಯಲ್ಲಿ ಸಾಗುವ ಪಥ ತೋರಿಸುವ ಸಂಸ್ಥೆಯಾಗಿದೆ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರು ವೈ. ಸುಧೀರ್ ಕುಮಾರ್ ನುಡಿದರು. ಯುವವಾಹಿನಿ (ರಿ) ಪಡುಬಿದ್ರಿ ಘಟಕದ 2024-25ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು 08-09-2024 ರಂದು ಪಡುಬಿದ್ರಿ ಬಿಲ್ಲವ […]
Read More