10-05-2018, 3:17 AM
ಕೂಳೂರು : ಎಲ್ಲಾ ಬಾಂಧವ್ಯ ಸಂಬಂಧಗಳನ್ನು ಮೀರಿದವಳು ತಾಯಿ, ತಾನು ಎಲ್ಲಾ ಕಡೆ ಇರಲಾರೆ ಎಂಬ ಕಾರಣಕ್ಕಾಗಿ ದೇವರು ತಾಯಿಯನ್ನು ಸೃಷ್ಟಿಸಿದ ಎಂಬ ಮಾತನ್ನು ಅಕ್ಷರಶಃ ರುಜುವಾತು ಮಾಡಿಕೊಟ್ಟವಳು. ಹೆಜ್ಜೆಯಿಡಲು ಕಲಿಸಿದವಳು, ಕೈ ತುತ್ತು ನೀಡಿದವಳು, ಕರುಳಕುಡಿಯ ಜೀವನಕ್ಕಾಗಿ ತನ್ನ ಜೀವವನ್ನು ಸವೆಸಿದವಳು, ಕಂದನ ಪ್ರತಿ ಯಶಸ್ಸಿನಲ್ಲೂ ಆಕೆಯ ಪಾಲಿದೆ ಪ್ರತಿ ಕಷ್ಟದಲ್ಲೂ ಆಕೆಯ ಸಾಂತ್ವನವಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 10.05.2018 ರಂದು ಯುವವಾಹಿನಿ (ರಿ) […]
Read More
05-05-2018, 4:25 PM
ಮಂಗಳೂರು : ಕೌಟುಂಬಿಕ ವಲಯದಲ್ಲಿರುವ ವ್ಯಕ್ತಿಗಳಿಗೆ ಹೆಣ್ಣು ಆಸಕ್ತಿಯ, ಆತ್ಮ ಸಂಗಾತದ ವಿಷಯ. ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ನಾದಿನಿಯಾಗಿ, ಅತ್ತಿಗೆಯಾಗಿ, ಅತ್ತೆಯಾಗಿ, ಗೆಳತಿಯಾಗಿ, ಪ್ರೇಮಿಯಾಗಿ ಆಕೆ ನಿರ್ವಹಿಸುವ ಪಾತ್ರಗಳು ಅದ್ಬುತ, ವರ್ಣನಾತೀತ. ಏಕೆಂದರೆ ಸ್ತ್ರೀ ಒಂದು ಸಮುದಾಯವನ್ನು ಸಮರ್ಥವಾಗಿ ಪ್ರತಿನಿಧಿಸುವ ಸಾಮರ್ಥ್ಯ ಹೊಂದಿರುವಂತಹವಳು. ಕೌಟುಂಬಿಕ ವಲಯದ ಸ್ತ್ರೀ ಕುಟುಂಬದ ಕಟ್ಟುಪಾಡುಗಳಿಗೆ ಒಳಗಾಗಿ ಜೀವನ ನಡೆಸುತ್ತಿದ್ದಾಳೆ ಹಾಗೂ ಆಕೆ ತನ್ನ ಕುಟುಂಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದಳಾಗಿರುತ್ತಾಳೆ ಎಂದು ಅನುಪಮಾ ಮಹಿಳಾ ಮಾಸಿಕ ಪತ್ರಿಕೆಯ ಸಂಪಾದಕರು, ಹಾಗೂ ಸಾಹಿತಿ […]
Read More
02-05-2018, 2:08 PM
ದಿನಾಂಕ : 02/05/2018 ರಂದು ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ಕಿಲೆಂಜಾರು ಗ್ರಾಮದ ನಿವಾಸಿಯಾದ,ನಡೆದಾಡಲು ಅಸಾಧ್ಯವಾಗಿ ಹಾಸಿಗೆ ಹಿಡಿದಿರುವ ರವೀಂದ್ರ ಇವರಿಗೆ ವೀಲ್ ಚೇರ್ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೋಟ್ಟು , ಉಪಾಧ್ಯಕ್ಶರಾದ ಅಜೇಯ್ ಅಮೀನ್ ನಾಗಂದದಿ, ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ಲ್ , ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು
Read More
30-04-2018, 4:04 PM
ಯುವವಾಹಿನಿ (ರಿ) ಸುರತ್ಕಲ್ ಹಾಗೂ ಪಣಂಬೂರು ಘಟಕದ ಆಶ್ರಯದಲ್ಲಿ ದಿನಾಂಕ 30.04.2018 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಜಿ.ಎಸ್.ಟಿ.ತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸೋಪ್ಟ್ ಲಿಂಕ್ ಸಂಸ್ಥೆಯ ಮೆನೇಜರ್ ಬಾಲಕೃಷ್ಣ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಯುವವಾಹಿನಿ ಪಣಂಬೂರು ಘಟಕದ ಅಧ್ಯಕ್ಷರಾದ ಉದಯ ಕುಮಾರ್ ಯುವವಾಹಿನಿ ಸುರತ್ಕಲ್ ಘಟಕದ ಸಲಹೆಗಾರರಾದ ಸಾಧು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಸುರತ್ಕಲ್ […]
Read More
29-04-2018, 6:13 AM
ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ವತಿಯಿಂದ ಕೆಂಜಾರು ನಿವಾಸಿ ಶ್ರೀ ಮತಿ ಸುಶೀಲರ ಮಗಳು ಅಮಿತ ರವರ ಮದುವೆಗೆ ₹.10,000/- ಸಹಾಯ ಧನ ನೀಡಲಾಯಿತು. ಸುಶೀಲರವರ ಪತಿ 20 ವರ್ಷಗಳ ಹಿಂದೆಯೆ ತೀರಿ ಹೋಗಿರುತ್ತಾರೆ. ಮಗಳು ಅಮಿತಳೊಂದೆಗೆ ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಇವರು ಈಗ ಕ್ಯಾನ್ಸರ್( last stage) ರೋಗ ದಿಂದ ಬಳಲುತ್ತಿದ್ದು ಮಗಳ ಮದುವೆಗೂ ಹೋಗಲಾರದಂತಹ ಸ್ಥಿತಿಯಲ್ಲಿದ್ದಾರೆ. .ಈ ಸಂದರ್ಭದಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಉಪಾಧ್ಯಕ್ಷರಾದ ಯಶವಂತ್ , ಕಾರ್ಯದರ್ಶಿ ಜಿತೇಶ್ […]
Read More
28-04-2018, 2:08 PM
ಮೂಡಬಿದ್ರೆ: ದಿನಾಂಕ 28.04.2018 ರಂದು ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ವತಿಯಿಂದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ, ಮಂಗಳೂರು ತಾಲೂಕು ದರೆಗುಡ್ಡೆ ಕೆಲ್ಲಪುತ್ತಿಗೆಯ ಮೇಲಿನ ಮನೆಯ ಡೊಂಬಯ್ಯ ಪೂಜಾರಿ ಎಂಬವರ ಮಗಳು ಬಡ ಕುಟುಂಬದ ಪೂಜಾ ಪೂಜಾರಿ ಇವರಿಗೆ ವೈದ್ಯಕೀಯ ನೆರವು ರೂ 15,000/- ಹಸ್ತಾಂತರಿಸಲಾಯಿತು. ಹಾಗೂ ಮಂಗಳೂರು ತಾಲೂಕಿನ ನೆಲ್ಲಿಕಾರ್ ನಿವಾಸಿ ಮನೋಜ್ ಪೂಜಾರಿ ಕಡು ಬಡತನದಲ್ಲಿ ಬದುಕುತ್ತಿರುವ ಇವರಿಗೆ ರೂ 5,000/- ವೈದ್ಯಕೀಯ ನೆರವು ನೀಡಲಾಯಿತು.
Read More
28-04-2018, 7:34 AM
ಮೂಡಬಿದ್ರೆ : ಬಹುಮುಖ ನೆಲೆಗಳಿಂದ ಶಿಕ್ಷಣವು ದೊರೆತಾಗ ಮಾತ್ರ ಬದುಕಿನ ನಡೆ ಜ್ಞಾನದ ಹಾದಿಯಾಗುತ್ತದೆ. ಪಠ್ಯ ಕೇಂದ್ರಿತ ಶಿಕ್ಷಣವು ಅಂಕಗಳನ್ನೇ ಮಾನದಂಡವಾಗಿಸಿದೆ. ಸ್ಪರ್ಧಾತ್ಮಕವಾದ ಆಧುನಿಕ ಶಿಕ್ಷಣ ಕ್ರಮವು ವಿದ್ಯಾರ್ಥಿಗಳನ್ನು ಬದುಕಿನ ಜೀವನಾನುಭವಗಳಿಂದ ವಂಚಿತವನ್ನಾಗಿಸಿದೆ. ಪಕೃತಿ ವರವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಸಂಸ್ಕಾರವು ಇಲ್ಲವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳ ಬದುಕಿನಲ್ಲಿ ಎದುರಾಗುವ ಸವಾಲು, ಆತಂಕವನ್ನು ಎದುರಿಸಲು ನೈತಿಕ ಸ್ಥೈರ್ಯ ಇಲ್ಲಾವಾಗಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ರೂಪದ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಶೋಚನೀಯ ಸಂಗತಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]
Read More
21-04-2018, 4:07 PM
ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ನೇತ್ರತ್ವದಲ್ಲಿ ದಿನಾಂಕ 21/04/2018 ರಿಂದ 24/04/2018 ರ ವರೆಗೆ ಶಿವಗಿರಿಯಾತ್ರೆಯು ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಯವರ ಮಾರ್ಗದರ್ಶನದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 41 ಸದಸ್ಯರು ಯಾತ್ರಿಗಳು ಭಾಗವಹಿಸಿದ್ದರು. ಯಾತ್ರೆಯು ಶಿವಗಿರಿ, ಗುರು ಜನ್ಮಸ್ಥಳ ಚಂಬಳಂತಿ, ಅರವೀಪುರ, ಕನ್ಯಾಕುಮಾರಿ, ಮರತ್ತಮಲೆ ಬೆಟ್ಟ ಹಾಗೂ ತಿರುವನಂತಪುರ ಅನಂತಪದ್ಮನಾಭ ದೇವಸ್ಥಾನಗಳನ್ನು ಒಳಗೊಂಡಿತ್ತು. ಘಟಕದ ಕಾರ್ಯದರ್ಶಿ ಜೀತೇಶ್ ಸಾಲ್ಯಾನ್, ಕೋಶಾದಿಕಾರಿ ಯಶವಂತ್ ಬಿ., ಸಂಚಾಲಕರಾದ ಶೇಖರ್ ಪೂಜಾರಿ ಹಾಗೂ ಸಂದೀಪ್ […]
Read More
21-04-2018, 1:29 PM
ಯುವವಾಹಿನಿ (ರಿ) ಯಡ್ತಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಾಪ್ಟ್ ವೇರ್ ಇಂಜಿನಿಯರ್ ಸತೀಸ್ ಪೂಜಾರಿ ಆಯ್ಕೆಯಾಗಿದ್ದಾರೆ ಅಧ್ಯಕ್ಷರು ; ಸತೀಶ್ ಪೂಜಾರಿ ಉಪಾಧ್ಯಕ್ಷರು : ಶರತ್ ಪೂಜಾರಿ : ರಾಘವೇಂದ್ರ ಪೂಜಾರಿ ಕಾರ್ಯದರ್ಶಿ : ಚಂದ್ರ. ಪಿ ಜತೆ ಕಾರ್ಯದರ್ಶಿ : ನಿತೇಶ್ ಪೂಜಾರಿ ಕೋಶಾಧಿಕಾರಿ : ದೀಕ್ಷಿತ ನಿರ್ದೇಶಕರು : ಕ್ರೀಡೆ : ಆರತಿ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ : ಪ್ರಕಾಶ್ ಪೂಜಾರಿ ವ್ಯಕ್ತಿತ್ವ ವಿಕಸನ : ಗಣೇಶ್ ಪೂಜಾರಿ […]
Read More
21-04-2018, 8:30 AM
ಯುವವಾಹಿನಿಯು ಪ್ರೀತಿ, ವಾತ್ಸಲ್ಯವನ್ನು ಯುವ ಮನಸುಗಳಿಗೆ ರವಾನಿಸುವ ಕಾರ್ಯವನ್ನು ಸಮಾಜದಲ್ಲಿ ಮಾಡುತ್ತುದೆ. ಯುವ ಪ್ರತಿಭೆಗಳಿಗೆ ವೇದಿಕೆಯಾಗಿ, ರೋಗಿಗಳಿಗೆ ಸಂಜೀವಿನಿಯಾಗಿ, ವಿದ್ಯಾರ್ಥಿಗಳಿಗೆ ಸರಸ್ವತಿಯಾಗಿ, ಅಮಾಯಕರಿಗೆ ಕರುಣಾಮಯಿಯಾಗಿ ಯುವವಾಹಿನಿ ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 21.04.2018 ರಂದು ಯಡ್ತಾಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ 2018-19 ನೇ ಸಾಲಿನ ಪದಸ್ವೀಕಾರ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಕೋಟ ಹೊಬಳಿಯ ಬಿಲ್ಲವ ಒಕ್ಕೂಟದ […]
Read More