ಪದಗ್ರಹಣ ಸಮಾರಂಭ
13-06-2026, 10:00 AM
08-06-2026, 8:00 PM
ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಜೂನ್ ತಿಂಗಳ ಮನೆ-ಮನೆ ಭಜನಾ ಸಂಕೀರ್ತನೆಯು ದಿನಾಂಕ 08-06-2026 ರಂದು ಸಂಜೆ 6.30 ರಿಂದ 7.30 ಗಂಟೆಯವರೆಗೆ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಘಟಕದ ಸದಸ್ಯರಾದ ರೂಪಾ ಸತೀಶ್ ಹಾಗೂ ಕುಮಾರಿ ಜೀವಿತ ಅವರ ನಿವಾಸ “ಶ್ರೀ ವೈಭವ ಲಕ್ಷ್ಮೀ”, ಅಂಬಿಕಾ ನಗರ, ಸುಂಕದಕಟ್ಟೆ, ಬಜಪೆ ಇಲ್ಲಿ ಭಜನಾ ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನಡೆಯಿತು. ಈ ಭಜನಾ ಸೇವೆಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷರಾದ ಪೂಜಾ ಕಿರಣ್, ದ್ವಿತೀಯ ಉಪಾಧ್ಯಕ್ಷರಾದ ಶರ್ಮಿಳಾ ಚಂದ್ರಶೇಖರ್, […]
07-06-2026, 10:00 PM
ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]
07-06-2026, 10:00 PM
ಕೂಳೂರು : ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಮಹಾದೇವ ದೇವಸ್ಥಾನವು ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ತನ್ನ ಆಧ್ಯಾತ್ಮಿಕ ಮಹತ್ವದಿಂದ ಭಕ್ತರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿದೆ. ಈ ಪುಣ್ಯಕ್ಷೇತ್ರಕ್ಕೆ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ವಿಶೇಷ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ಜೂನ್ 6, 2026ರಂದು ರಾತ್ರಿ 10.00 ಗಂಟೆಗೆ ಕೂಳೂರಿನಿಂದ ಬಸ್ಸಿನ ಮೂಲಕ ಯಾತ್ರೆ ಆರಂಭಗೊಂಡಿತು. ಈ ಯಾತ್ರೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 40 ಮಂದಿ […]
07-06-2026, 10:00 PM
ಮಂಗಳೂರು: ವರ್ಷದಲ್ಲಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ನಡೆಯುವ ಕೊಟ್ಟಿಯೂರು ಪರಶಿವನ ಜಾತ್ರೆಯ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಜೂನ್ 6, 2026ರಂದು ವಿಶೇಷ ಕ್ಷೇತ್ರಯಾತ್ರೆಯನ್ನು ಆಯೋಜಿಸಲಾಯಿತು. ರಾತ್ರಿ 8.30 ಗಂಟೆಗೆ ಮಂಗಳೂರಿನಿಂದ ಹೊರಟ ಯಾತ್ರಿಕರು ಮುಂಜಾನೆ ಸುಮಾರು 4 ಗಂಟೆಗೆ ಕೊಟ್ಟಿಯೂರು ಪುಣ್ಯಕ್ಷೇತ್ರವನ್ನು ತಲುಪಿದರು. ಪವಿತ್ರ ವಾವಲಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ಕ್ಷೇತ್ರ ಪ್ರದಕ್ಷಿಣೆ ಸಲ್ಲಿಸಿ, ಭಕ್ತಿಭಾವದಿಂದ ಪರಶಿವ ಮತ್ತು ಸತಿಯ ದರ್ಶನ ಪಡೆದರು. ಕೊಟ್ಟಿಯೂರು ಕ್ಷೇತ್ರವು ತನ್ನ […]
07-06-2026, 10:00 PM
ಕೆಂಜಾರು-ಕರಂಬಾರು: ಯುವವಾಹಿನಿ (ರಿ.) ಕೆಂಜಾರು-ಕರಂಬಾರು ಘಟಕದ ವತಿಯಿಂದ ಆಯೋಜಿಸಲಾದ ಕೊಟ್ಟಿಯೂರು ಪುಣ್ಯಕ್ಷೇತ್ರಗಳ ಪವಿತ್ರ ಯಾತ್ರೆಯು ಯಶಸ್ವಿಯಾಗಿ ನೆರವೇರಿತು. ಜೂನ್ 6, 2026ರಂದು ರಾತ್ರಿ 8.30 ಗಂಟೆಗೆ ಶ್ರೀ ದೇವಿ ಭಜನಾ ಮಂದಿರ, ಕೆಂಜಾರು-ಕರಂಬಾರುವಿನಿಂದ ಯಾತ್ರೆಯು ಅತ್ಯಂತ ಉತ್ಸಾಹದಿಂದ ಆರಂಭವಾಯಿತು. ಈ ಧಾರ್ಮಿಕ ಪ್ರವಾಸದಲ್ಲಿ ಒಂದು ಬಸ್ಸಿನಲ್ಲಿ 50 ಮಂದಿ ಹಾಗೂ ಒಂದು ಟಿಟಿ ವಾಹನದಲ್ಲಿ 14 ಮಂದಿ ಸೇರಿದಂತೆ ಒಟ್ಟು 64 ಮಂದಿ ಯಾತ್ರಿಕರು ಭಾಗವಹಿಸಿದ್ದರು.ಮರುದಿನ ಮುಂಜಾನೆ ಸುಮಾರು 4.00 ಗಂಟೆಗೆ ಯಾತ್ರಿಕರು ಪವಿತ್ರ ಕೊಟ್ಟಿಯೂರು ಕ್ಷೇತ್ರವನ್ನು […]
07-06-2026, 7:00 PM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಜೂನ್ 7ರಂದು 51 ಸದಸ್ಯರೊಂದಿಗೆ ಕುಂದಾಪುರದ UVA ಮೆರಿಡಿಯನ್ ವಾಟರ್ ಪಾರ್ಕ್ಗೆ ಒಂದು ದಿನದ ಸೌಹಾರ್ದಯುತ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಪ್ರವಾಸವು ಗುರುಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸದಸ್ಯರೆಲ್ಲರೂ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಅನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಹಾಗೂ ದರ್ಶನದಲ್ಲಿ ಭಾಗವಹಿಸಿದರು. ಪ್ರವಾಸದ ಮಧ್ಯೆ ಸದಸ್ಯರಿಗಾಗಿ ಉಪಹಾರದ ವ್ಯವಸ್ಥೆ […]
07-06-2026, 11:00 AM
ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ಜೂನ್ 7ರಂದು ಬಿ.ಸಿ.ರೋಡ್ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದರು. 2026-27ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಪ್ರಥಮ ಉಪಾಧ್ಯಕ್ಷರಾಗಿ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಅಜೆಕಲ, ಕಾರ್ಯದರ್ಶಿಯಾಗಿ ಗೀತಾ ಜಗದೀಶ್, ಜತೆ ಕಾರ್ಯದರ್ಶಿಯಾಗಿ ಧನುಷ್ ಮಧ್ವ […]
07-06-2026, 11:00 AM
ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆಯಾದ “ಯುವ ಸೇವಾ ಸ್ಪರ್ಶ” ಕಾರ್ಯಕ್ರಮದಡಿ ಮೊದಲನೇ ಸೇವಾ ಹಸ್ತವನ್ನು ಅಗತ್ಯವಿರುವ ಕುಟುಂಬವೊಂದಕ್ಕೆ ವಿತರಿಸಲಾಯಿತು. ಮಾಣಿ ಗ್ರಾಮದ ದಿವಂಗತ ವೀರಪ್ಪ ಪೂಜಾರಿ ಅವರ ಕುಟುಂಬವು ಆರ್ಥಿಕ ಹಾಗೂ ಆರೋಗ್ಯ ಸಂಬಂಧಿತ ಸಂಕಷ್ಟಗಳನ್ನು ಎದುರಿಸುತ್ತಿದ್ದು, ನಾಲ್ಕು ಹೆಣ್ಣು ಮಕ್ಕಳ ಪೈಕಿ ಮೂವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕುಟುಂಬದ ಒಬ್ಬ ಸದಸ್ಯರು ಮಾತ್ರ ದುಡಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಈ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಯುವವಾಹಿನಿ (ರಿ.) […]