14-07-2018, 5:06 PM
ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಆಶ್ರಯದಲ್ಲಿ ನಮ್ಮ ನಡೆ ಬೇಸಾಯದ ಕಡೆ ಎಂಬ ಪರಿಕಲ್ಪನೆಯ ಅಡಿಯಲ್ಲಿ ದಿನಾಂಕ 14.07.2018 ರಂದು ಘಟಕದ ಸದಸ್ಯರು ಹಲ ಉಳುಮೆ ನಡೆಸಿ ಕೃಷಿ ಬಿತ್ತನೆ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕುಪ್ಪೆಪದವು ಘಟಕದ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು
Read More
14-07-2018, 8:18 AM
ಬಜ್ಪೆ: ವಿದ್ಯೆ ಉದ್ಯೋಗ ಸಂಪರ್ಕವೆನ್ನುವ ಮಹತ್ತರವಾದ ಆಶಯವನ್ನಿರಿಸಿಕೊಂಡು, ಸಮಾಜಮುಖಿಯಾಗಿ ಕಾರ್ಯೋನ್ಮುಖವಾಗಿರುವ ಯುವವಾಹಿನಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲೂ ತನ್ನನ್ನು ಬಹುವಾಗಿ ಅನ್ವಯಿತಗೊಳಿಸಿಕೊಂಡಿರುವ ಕಾರಣವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಗೇರಿಸಿಕೊಂಡಿರುವುದು ಕಡಿಮೆ ಸಾಧನೆಯೇನಲ್ಲ. ಯುವವಾಹಿನಿ ಕೇಂದ್ರ ಸಮಿತಿಯ ಪಡಿನೆಳಲಲ್ಲಿ ತನ್ನ ಪ್ರತಿಭೆಯನ್ನು ವಿಸ್ತಾರಗೊಳಿಸಿಕೊಂಡಿರುವ ಘಟಕಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ. 14.07.2018 ರಂದು ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ(SEZ) ಇದರ ಸಹಭಾಗಿತ್ವದಲ್ಲಿ, ಪ್ರಸಾದ್ ನೇತ್ರಾಲಯ […]
Read More
12-07-2018, 4:22 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ ೧೨. ೦೭. ೨೦೧೮ ಪಡುಬಿದ್ರಿ ನಾರಾಯಣಗುರು ಮಂದಿರದಲ್ಲಿ ವಾರದ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.
Read More
12-07-2018, 2:43 AM
ಬೆಂಗಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿಯ ತಂಡವು ಬೆಂಗಳೂರಿಗೆ ತೆರಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಡಾ.ಜಯಮಾಲರನ್ನು ವಿದಾನಸೌಧದಲ್ಲಿ ಭೇಟಿಯಾಗಿ ಯುವವಾಹಿನಿಯ ೩೧ನೆೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ನೀಡಿ ಸಮಾವೇಶಕ್ಕೆ ಆಹ್ವಾನ ನೀಡಲಾಯಿತು. ಆಗಸ್ಟ್ 05 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯುತ್ತಿರುವ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ತಾನೂ ಪಾಲ್ಗೊಳ್ಳುತ್ತಿದ್ದು, ಎಲ್ಲರೂ ಸಮಾವೇಶ ಯಶಸ್ವಿಗೊಳಿಸೋಣ ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ […]
Read More
08-07-2018, 5:13 PM
ಕೂಳೂರು : ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ ದಿನಾಂಕ 08/07/2018 ರಂದು ಒಂದು ದಿನದ *ಕ್ಷೇತ್ರ ದರ್ಶನ* ಪ್ರವಾಸವನ್ನು ಏರ್ಪಡಿಸಲಾಗಿದ್ದು 120 ಮಂದಿ ಸದಸ್ಯರನ್ನು ಒಳಗೊಂಡ ತಂಡವು ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಇದಕ್ಕೆ ಚಾಲನೆ ನೀಡಿದರು… 6 ಗಂಟೆಗೆ ಸರಿಯಾಗಿ ಕೂಳೂರಿನಿoದ ಹೊರಟು 7.15ಕ್ಕೆ ಪಾಜಕ ಕ್ಷೇತ್ರವನ್ನು ತಲುಪಿ ದೇವರ ದರ್ಶನದ ನಂತರ ಅಲ್ಲಿಂದ ಹೊರಟು 8.45 ಕ್ಕೆ ಆನೆಗುಡ್ಡೆ ಕುಂಭಾಶಿ ದೇವಸ್ಥಾನಕ್ಕೆ ತಲುಪಿದೆವು .ಅಲ್ಲಿ […]
Read More
08-07-2018, 4:44 PM
ಯುವವಾಹಿನಿ ರಿ ಕೊಲ್ಯ ಘಟಕ ಇದರ ವತಿಯಿಂದ ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ ಕಾರ್ಯಕ್ರಮ ತಾ08-07-2018ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೊಣಾಜೆ ಅಸೈಗೋಳಿಯಲ್ಲಿರುವ ಅಭಯ ಆಶ್ರಮದಲ್ಲಿ ಆಶ್ರಮದ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆ ಹಾಗೂ ಅರೆಹೊಳೆ ಪ್ರತಿಷ್ಠಾನ ರಿ ಮಂಗಳೂರು ಇದರ ಕಲಾವಿದರಿಂದ ಸೊಗಸಾದ ಹಾಡಿನೊಂದಿಗೆ ಮನರಂಜನಾ ಕಾರ್ಯಕ್ರಮ,ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟಕದ ಸದಸ್ಯ ದಂಪತಿಗಳಿಗೆ ಆಶ್ರಮದ ಹಿರಿಯರಿಂದ ಶುಭಹಾರೈಕೆ,ಆಶ್ರಮದ ಸದಸ್ಯರೊಂದಿಗೆ ಸಹಭೋಜನ ಹಾಗೂ ಕಾರ್ಯಕ್ರಮದ ಸವಿನೆನಪಿಗೆ […]
Read More
08-07-2018, 3:18 PM
ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಲಯನ್ಸ್ ಕ್ಲಬ್ ಶಿರ್ತಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀನಿವಾಸ್ ಇನ್ಸಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ ಸುರತ್ಕಲ್ ಇದರ ಸಹಯೋಗದೊಂದಿಗೆ ದಿನಾಂಕ 08.07.2018 ರಂದು ಆನೆಗುಡ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಆನೆಗುಡ್ಡೆ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಜೆರಾಲ್ಡ್ ಪ್ರಾನ್ಸಿಸ್ ಪಿಂಟೋ ಇವರು ದೀಪ ಬೆಳಗುವುದರ ಮತ್ತು ಮೂಲಕ ಶಿಬಿರ ಉದ್ಘಾಟಿಸಿದರು. ಯುವವಾಹಿನಿಯ ಯುವಕರು ಸಮಾಜಮುಖಿ […]
Read More
07-07-2018, 2:38 PM
ಕೆಂಜಾರು ಕರಂಬಾರು : ಯುವವಾಹಿನಿ (ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ದಿನಾಂಕ .08/07/2018 ಆದಿತ್ಯ ವಾರ ಕರಂಬಾರು ಶ್ರೀ ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತೆ ಹಾಗೂ ವನಮಹೋತ್ಸವ ಹಮ್ಮಿಕೊಳ್ಳಲಾಯಿತು. ಸದಸ್ಯರು ದೈವಸ್ಥಾನದ ಅಂಗಣವನ್ನು ಸ್ವಚ್ಚ ಗೊಳಿಸಿದರು. ದೈವಸ್ಥಾನದ ಸಮಿತಿಯ ಅಧ್ಯಕ್ಷರಾದ ಜಗನ್ನಾಥ್ ಸಾಲ್ಯಾನ್ ಗಿಡ ನೆಡುವುದರೊಂದಿಗೆ ವನಮಹೋತ್ಸಕ್ಕೆ ಚಾಲನೆ ನೀಡಿದರು. ಸುಮಾರು 50 ವಿವಿಧ ಗಿಡಗಳನ್ನು ನೆಡಲಾಯಿತು ಹಾಗೂ ಸದಸ್ಯರಿಗೆ ಗಿಡಗಳನ್ನು ವಿತರಿಸಲಾಯಿತು. ದೈವಸ್ಥಾನದ ಅರ್ಚಕ ರುಕ್ಕಯ್ಯ ಪಾತ್ರಿ, ಘಟಕದ ಅಧ್ಯಕ್ಷ ಗಣೇಶ್ ಅರ್ಬಿ, […]
Read More
02-07-2018, 4:19 PM
ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ ದಿನಾಂಕ 02-07-2018ನೇ ಸೋಮವಾರದಂದು ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರ ಸಂಕಿರಣ ಕಾರ್ಯಕ್ರಮ ಜರುಗಿತು . “ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರದ ವಿಚಾರ ಸಂಕಿರಣ ಜರಗಿತು. ಶ್ರೀ ಯೋಗೀಶ್ ಮಲ್ಲಿಗೆಮಾಡು, ರೋಶನಿ ನಿಲಯ, ಮಂಗಳೂರು ಇವರು ಅತ್ಯುತ್ತಮವಾದ ವಿಚಾರಗಳನ್ನು ಮಂಡಿಸಿದರು. ಈ ಪ್ರಕೃತಿ ಅದರ ವೈಶಿಷ್ಟ್ಯ, ನಾವು ಹೇಗೆ ಪ್ರಕೃತಿಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಪಡೆಯುತ್ತಿದ್ದೇವೆ, ಯಾವ ರೀತಿಯಾಗಿ ನಾವು ಪ್ರಕೃತಿಯ ಕೊಡುಗೆಯನ್ನು […]
Read More
01-07-2018, 3:20 PM
ಕಡಬ : ಮನೆ ಮನ ಬೆಳಗುವ ,ಯುವ ಮನಸ್ಸುಗಳನ್ನು ಬೆಸೆದು ಸಮಾಜವನ್ನು ಒಗ್ಗೂಡಿಸುವ ಕಾರ್ಯಕ್ರಮ ಗುರುಸ್ಪೂರ್ತಿ ಯುವವಾಹಿನಿ(ರಿ) ಕಡಬ ಘಟಕದ ಆಶ್ರಯದಲ್ಲಿ ,ದಿನಾಂಕ 01.07.2018 ನೇ ಆದಿತ್ಯವಾರ ಉದ್ಘಾಟನೆಗೊಂಡಿತು. ನೂಜಿಬಾಳ್ತಿಲ ಗ್ರಾಮ ಸಂಘಟನಾ ಕಾರ್ಯದರ್ಶಿ ಶ್ರೀ ಸಂದೇಶ್ ಪಿ ಬಿ ಇವರ ಮನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯರಾದ ಶ್ರೀ ಬಾಲಕೃಷ್ಣ ಪೂಜಾರಿ ಪಲಯಮಜಲು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಡಾ| ಸದಾನಂದ ಕುಂದರ್ […]
Read More