Yuvavahini

ಘಟಕಗಳು

ಶ್ರೀ ಕ್ಷೇತ್ರ ಪೊಳಲಿಗೆ ಪಾದಯಾತ್ರೆ

ಬಂಟ್ವಾಳ :- ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ನೇತ್ರತ್ವದಲ್ಲಿ ದಿನಾಂಕ 30 ಅಕ್ಟೋಬರ್ 2022 ರಂದು ಲೋಕಕಲ್ಯಾಣಾರ್ಥವಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಬಿ.ಸಿ ರೋಡ್ ನಿಂದ ಪೋಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ‌ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಹಾಗೂ ಘಟಕದ ಮಾಜಿ ಅಧ್ಯಕ್ಷರು, ಘಟಕದ ಅಧ್ಯಕ್ಷರು ,ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 200 ಮಂದಿ ಭಕ್ತಾದಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Read More

25ರ ಸಂಭ್ರಮ – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮದ 15 ನೇ ಕಾರ್ಯಕ್ರಮವನ್ನು ದಿನಾಂಕ 29 ಅಕ್ಟೋಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2017-2018ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅಶೋಕ್ ಕುಮಾರ್ ಪಡ್ಪು ಇವರ “ಸಾನಿಧ್ಯ” ಮನೆಯಲ್ಲಿ ನಡೆಯಿತು.ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ […]

Read More

ಜಾಗೃತವಾಗಲಿ ಅಂತಃಸತ್ವ, ದೂರಾಗಲಿ ಅಂಧಕಾರ :- ಕೇಶವ ಬಂಗೇರ

ಕೂಳೂರು :- ದೀಪಾವಳಿಯ ಬೆಳಕು ಅಂತರಾತ್ಮವನ್ನು ಉದ್ದೀಪನಗೊಳಿಸಬೇಕು, ಪಟಾಕಿ ಸದ್ದು ನಿದ್ದೆಯಲ್ಲಿದ್ದವರನ್ನೂ ಬಡಿದೆಬ್ಬಿಸುವಂತೆ ದೀಪಾವಳಿ ಹಬ್ಬ ನಮ್ಮೊಳಗೆ ಅಂತರ್ಗತವಾಗಿರುವ ಅಂತಃಸತ್ವವನ್ನು ಬಡಿದೆಬ್ಬಿಸಬೇಕು ಮತ್ತು ಅಂಧಕಾರವನ್ನು ಹೋಗಲಾಡಿಸಬೇಕು ಎಂದು ಕುದ್ರೋಳಿ ನಾರಾಯಣ ಗುರು ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕ ವತಿಯಿಂದ ದಿನಾಂಕ 29 ಅಕ್ಟೋಬರ್ 2022 ರಂದು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರ ಮನೆ ಪಂಜಿಮೊಗರು ಶ್ರೀರಕ್ಷಾದಲ್ಲಿ ನಡೆದ -ನಮ್ಮ ಮನೆ ಹಬ್ಬ ದೀಪಾವಳಿ ಕಾರ್ಯಕ್ರಮದಲ್ಲಿ […]

Read More

ಸಂಭ್ರಮದ ದೀಪಾವಳಿ ಆಚರಣೆ

ಮಂಗಳೂರು :- ದಿನಾಂಕ 26 ಅಕ್ಟೋಬರ್ 2022ರಂದು ಮಂಗಳೂರು ಘಟಕದ ವತಿಯಿಂದ ದೀಪಾವಳಿಯ ಸಂಭ್ರಮಾಚರಣೆಯನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಪ್ರಾರಂಭದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಗುರುಗಳ ಭಾವಚಿತ್ರದ ಸಾನಿಧ್ಯದಲ್ಲಿ ಗುರು ಪೂಜೆಯನ್ನು ನಡೆಸಿ, ಎಲ್ಲರಿಗೂ ಪ್ರಸಾದ ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಹಾಗೂ ಸರ್ವ ಸದಸ್ಯರನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಕಾರ್ಯದರ್ಶಿಯವರಾದ ಅಶೋಕ್ ಅಂಚನ್ ರವರು ಗತ ಸಭೆಯ ವರದಿಯನ್ನು ಮಂಡಿಸಿ, ಅನುಮೋದನೆ […]

Read More

ಕೃಷಿ ಸಂಸ್ಕೃತಿಯಲ್ಲಿ ಯುವಸಮುದಾಯ ತೊಡಗಿಸಿಕೊಳ್ಳಬೇಕು:- ಸಚಿವ ಸುನೀಲ್ ಕುಮಾರ್ ಅಭಿಮತ

ಬೆಳ್ತಂಗಡಿ :- “ಕೆಸರುಗದ್ದೆ ಕ್ರೀಡಾಕೂಟ ಇಂದು ಜನಾಕರ್ಷಣೆ ಪಡೆಯುತ್ತಿದೆ. ಯಾವುದೇ ಒಂದು ಸಂಘಟನೆ ಬಲಪಡಿಸಲು ಈ ರೀತಿಯ ಕ್ರೀಡಾಕೂಟ ಅಗತ್ಯ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಬಿಲ್ಲವ ಸಮುದಾಯವನ್ನು ಒಟ್ಟುಗೂಡಿಸುವ ಕಾರ್ಯ ಯುವವಾಹಿನಿ ಸಂಘಟನೆಯಿಂದಾಗಲಿ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ವೇಣೂರು ಮೂಡುಕೋಡಿ ಗ್ರಾಮದ ನೆಲ್ಲಿಗುಡ್ಡೆ ನೋನೊಟ್ಟು ಗದ್ದೆಯಲ್ಲಿ ಭಾನುವಾರ ನಡೆದ ”ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ […]

Read More

ಕೆಸರ್‌ಡೊಂಜಿ ದಿನ :- ಯುವವಾಹಿನಿ ಮಾಣಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]

Read More

ಕೃಷಿಯೇ ಬದುಕಿನ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ :- ಉಮನಾಥ್ ಕೋಟ್ಯಾನ್

ವೇಣೂರು :- ಹಿರಿಯರ ಕಾಲದಿಂದಲೂ ಕೃಷಿಯೇ ನಮ್ಮ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸು ಜವಾಬ್ದಾರಿ ನಮ್ಮ ಮೇಲಿದೆ. ಕೃಷಿಯನ್ನು ಅವಲಂಬಿಸಿ ಬದುಕಿದ ನಮ್ಮ ಹಿರಿಯರ ಜೀವನವೇ ಅದರ್ಶ ಎಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಂಘಟನೆಗಳು ಸಮುದಾಯದ ಶಕ್ತಿಯಾಗಬೇಕು :- ಪದ್ಮರಾಜ್ ಆರ್ ಬ್ರಹ್ಮಶ್ರೀ ನಾರಾಯಣ […]

Read More

ಭಜನಾ ತರಬೇತಿ ಮತ್ತು ಸತ್ಸಂಗ

ಶಕ್ತಿನಗರ :- ಭಕ್ತರಿಗೆ ಭಜನೆ ಮಾಡುವ ಕಲೆ ದೇವರು ಕೊಟ್ಟ ವರದಾನ , ಭಕ್ತಿಯಿಂದ ಭಗವಂತನನ್ನು ಹಾಡಿ ಹೊಗಳಿದರೆ ಭಗವಂತ ಅನುಗ್ರಹಿಸುತ್ತಾನೆ. ಭಕ್ತರಿಗೆ ಭಗವತ್ ದರ್ಶನವೇ ಜೀವನದ ಗುರಿ. ಸಕಲ ಜೀವರಾಶಿಗಳ ಸೃಷ್ಟಿ ಸ್ಥಿತಿ ಲಯಗಳ ನಿಯಂತ್ರಕನಾದ ಭಗವಂತನನ್ನು ಒಲಿಸಿಕೊಳ್ಳುವ ಏಕೈಕ ಮಾರ್ಗವೇ ಭಜನೆ ಎಂಬುದನ್ನು ಮನಗಂಡು ಘಟಕದ ವತಿಯಿಂದ ಪ್ರತಿ ಗುರುವಾರ ಶಕ್ತಿನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ ನಡೆಯುವ ಭಜನೆ ಕಾರ್ಯಕ್ರಮವು ಗುರುಗಳ ಕೃಪೆಯಿಂದ ಸಾಂಗವಾಗಿ ನಡೆಯಿತು, ಆಗಮಿಸಿದ ಎಲ್ಲರನ್ನೂ ಅಧ್ಯಕ್ಷರು ಜಯರಾಮ ಪೂಜಾರಿ […]

Read More

ಜನ ಮನ ಗೆದ್ದ ಉಚಿತ ಶರಬತ್ತು ವಿತರಣೆ

ಮಂಗಳೂರು :- ವಿಶ್ವ ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವದ ಶಾರದಾ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರಿಗೆ ಯುವವಾಹಿನಿ (ರಿ.) ಮಂಗಳೂರು ಘಟಕವು ಉಚಿತ ಶರಬತ್ತು ಸೇವೆಯನ್ನು ನೀಡುವುದರೊಂದಿಗೆ ಜನಮನ ಗೆದ್ದಿತು. ಮಂಗಳೂರು ದಸರಾ ಮಹೋತ್ಸವದ ಶೋಭಾ ಯಾತ್ರೆಯ ದಿನವಾದ 05 ಅಕ್ಟೋಬರ್ 2022ರ ಬೆಳಿಗ್ಗೆಯಿಂದಲೇ ಶರಬತ್ತು ಸೇವೆಗೆ ಪೂರ್ವ ತಯಾರಿ ಕಾರ್ಯಕ್ರಮಗಳು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿಯಿರುವ ಎಸ್. ಎಲ್. ಡೈಮಂಡ್ ಮಳಿಗೆಯ ಅಂಗಣದಲ್ಲಿ ಘಟಕದ ಅಜೀವ ಸದಸ್ಯರಾದ ಬಾಲಕೃಷ್ಣ […]

Read More

ಗೆಜ್ಜೆಗಿರಿಯಲ್ಲಿ ಭಜನಾ ಸೇವೆ

ಕಡಬ :- ಭಜನೆ ಎಂಬ ಮೂರು ಅಕ್ಷರಕ್ಕೆ ಬಹಳ ಮಹತ್ವವಿದೆ.* ಭ,ಎಂದರೇ ಭಜಿಸು ಜ, ಎಂದರೇ ಜಪಿಸು ನೆ, ಎಂದರೇ ನೆನಪಿಸು ಈ ಸುಂದರ ಅರ್ಥ ಉಲ್ಲ ಭಜನೆಯನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ತಾಯಿ ದೇಯಿಬೈದೆತಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ದಿನಾಂಕ 02 ಅಕ್ಟೋಬರ್ 2022ರ ಆದಿತ್ಯವಾರದಂದು ಘಟಕದ ನಡೆಸಲಾಯಿತು. ಮಧ್ಯಾಹ್ನ ಗಂಟೆ 12:30ರಿಂದ 2:00 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಪ್ರವೀಣ್ ಓಂಕಾಲ್, ಕಾರ್ಯದರ್ಶಿ ಕೃಷ್ಣಪ್ಪ ಅಮೈ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!