27-07-2026, 10:00 PM
ಮಂಗಳೂರು, ಜುಲೈ 27: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುತ್ತಿರುವ “ಒಂದೇ ನಾಮ, ಒಂದೇ ಭಾವ” ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಜುಲೈ 27ರಂದು ಸಂಜೆ ಭಜನಾ ಸೇವೆಯು ಭಕ್ತಿಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ಮಂಜುಳ ಪ್ರಭಾಕರ್ ಮತ್ತು ಬಳಗ, ಅಶೋಕನಗರ, ಮಂಗಳೂರು ಅವರ ಸಹಯೋಗದಲ್ಲಿ ಭಜನಾ ಸಂಕೀರ್ತನ ನಡೆಯಿತು. ಭಜನಾ ತಂಡದ ಸದಸ್ಯರು ಹರಿನಾಮ ಸ್ಮರಣೆಯೊಂದಿಗೆ ಭಕ್ತಿರಸಪೂರ್ಣ ಭಜನೆಗಳನ್ನು ಗಾಯನ ಮಾಡಿ, ಶ್ರೀ ಗೋಕರ್ಣನಾಥ […]
Read More
27-07-2026, 6:00 PM
ಮಾಣಿ, ಜುಲೈ 27: ಯುವವಾಹಿನಿ (ರಿ.) ಮಾಣಿ ಘಟಕದ ಮಹತ್ವಾಕಾಂಕ್ಷೆಯ “ಯುವ ಸೇವಾ ಸ್ಪರ್ಶ” ಯೋಜನೆಯ ಮೂರನೇ ಹಂತದ ಸೇವಾ ಕಾರ್ಯದ ಅಂಗವಾಗಿ, ಪೆರಾಜೆ ಗ್ರಾಮದ ನಿವಾಸಿ ಪದ್ಮಾವತಿ ಅವರಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳ ಕಿಟ್ನ್ನು ವಿತರಿಸಲಾಯಿತು. ಪದ್ಮಾವತಿ ಅವರು ಒಂಟಿಯಾಗಿ ಜೀವನ ಸಾಗಿಸುತ್ತಿದ್ದು, ಅನಾರೋಗ್ಯದ ಕಾರಣ ದುಡಿದು ಜೀವನ ನಿರ್ವಹಿಸಲು ಅಸಮರ್ಥರಾಗಿದ್ದಾರೆ. ಅವರ ಸಂಕಷ್ಟವನ್ನು, ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಮನಗಂಡ ಯುವವಾಹಿನಿ (ರಿ.) ಮಾಣಿ ಘಟಕವು ಮಾನವೀಯ ಕಳಕಳಿಯಿಂದ ಒಂದು ತಿಂಗಳಿಗೆ […]
Read More
26-07-2026, 2:00 PM
ಬೆಳ್ತಂಗಡಿ, ಜು. 26 : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಿ, ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವು ಭಾನುವಾರ ಯಶಸ್ವಿಯಾಗಿ ನಡೆಯಿತು. ಘಟಕದ ಅಧ್ಯಕ್ಷೆ ಲೀಲಾವತಿ ಪಣಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡಿಕೊಡಿ ಉದ್ಘಾಟಿಸಿದರು. ಅವರು ಮಾತನಾಡಿ, ಸಂಘಟನೆಯ ಬೆಳವಣಿಗೆಯಲ್ಲಿ ತರಬೇತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿ, ನೂತನ ಕಾರ್ಯಕಾರಿ ಸಮಿತಿಯ […]
Read More
26-07-2026, 2:00 PM
ಸುಳ್ಯ, ಜು. 26 : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಘಟಕದ ಪೂರ್ವಾಧ್ಯಕ್ಷರು ಹಾಗೂ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿದ್ದು ಸಮಾಜಸೇವೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದ ದಿವಂಗತ ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನವನ್ನು ಭಾನುವಾರ ಗೌರವಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಳಿಗ್ಗೆ 8 ಗಂಟೆಗೆ ನೆಟ್ಟಾರು ನಿವಾಸದಲ್ಲಿ ದಿವಂಗತ ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಸಮಾಜಮುಖಿ ಸೇವೆ, ಸಂಘಟನಾ ಕೌಶಲ್ಯ ಹಾಗೂ ಯುವವಾಹಿನಿಯ ಬೆಳವಣಿಗೆಗೆ ನೀಡಿದ ಅಮೂಲ್ಯ […]
Read More
26-07-2026, 2:00 PM
ಮೂಡುಬಿದಿರೆ, ಜುಲೈ 26: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಶಿರ್ತಾಡಿ ಇವರ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ, ಶಿರ್ತಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು–ಮೂಡುಬಿದಿರೆ ವತಿಯಿಂದ ಉಚಿತ ನೇತ್ರ ತಪಾಸಣೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶೋಭಾವನ, […]
Read More
26-07-2026, 2:00 PM
ಮುಲ್ಕಿ, ಜುಲೈ 26: “ಇಂದು ದೇಶ-ವಿದೇಶಗಳಲ್ಲಿ ಆಟಿಡೊಂಜಿ ದಿನದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದರೆ, ಅದಕ್ಕೆ ಮೂಲ ಪ್ರೇರಣೆಯೇ ಯುವವಾಹಿನಿ (ರಿ.) ಮುಲ್ಕಿ ಘಟಕ” ಎಂದು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ್ ಹೆಜ್ಮಾಡಿ ಹೇಳಿದರು. ಅವರು ಜುಲೈ 26ರಂದು ಮುಲ್ಕಿ ಬಿಲ್ಲವ ಸಂಘದ ಸಭಾಭವನದಲ್ಲಿ ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಆಯೋಜಿಸಲಾದ 24ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಹಿಂದಿನ ಕಾಲದ ಚಿಮಿನಿ ದೀಪ ಬೆಳಗಿಸುವ ಮೂಲಕ ವಿಶಿಷ್ಟವಾಗಿ ಉದ್ಘಾಟಿಸಿ ಮಾತನಾಡಿದರು. ತುಳುನಾಡಿನ […]
Read More
25-07-2026, 6:00 PM
ಮಂಗಳೂರು, ಜುಲೈ 25: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ವಿಶೇಷ ಕಾರ್ಯಕ್ರಮವು ಜುಲೈ 25ರಂದು ಶನಿವಾರ ಸಂಜೆ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ವಹಿಸಿದ್ದರು. ಅಧ್ಯಕ್ಷೀಯ ಭಾಷಣದಲ್ಲಿ ಅವರು ಕಾರ್ಗಿಲ್ ವಿಜಯ ದಿವಸದ ಮಹತ್ವವನ್ನು ವಿವರಿಸಿ, ದೇಶದ ಗಡಿಯನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದ ವೀರ ಯೋಧರ ಶೌರ್ಯ, ತ್ಯಾಗ ಹಾಗೂ ದೇಶಭಕ್ತಿಯನ್ನು ಸ್ಮರಿಸಿದರು. ದೇಶಕ್ಕಾಗಿ ಸರ್ವಸ್ವವನ್ನು ಅರ್ಪಿಸಿದ […]
Read More
25-07-2026, 1:00 PM
ಬಂಟ್ವಾಳ, ಜು. 25 : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಐ.ಎಂ.ಎ. ಮಂಗಳೂರು ಶಾಖೆಯ ಸಹಕಾರದೊಂದಿಗೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಶನಿವಾರ ಯಶಸ್ವಿಯಾಗಿ ನಡೆಯಿತು. ಆರೋಗ್ಯ ಜಾಗೃತಿ ಹಾಗೂ ಸಮಾಜಸೇವೆಯ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಯುವವಾಹಿನಿಯ ಸುಮಾರು 70 ಮಂದಿ ಸದಸ್ಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ […]
Read More
24-07-2026, 1:00 PM
ವಿಟ್ಲ, ಜು. 24 : ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ಘಟಕದ ಸದಸ್ಯೆ ಹರಿಣಾಕ್ಷಿ ಸುಧಾಕರ ಪೂಜಾರಿ ಅವರ ಮನೆಯಲ್ಲಿ ದುರ್ಗಾಪೂಜೆಯ ಪ್ರಯುಕ್ತ ಭಜನಾ ಸಂಕೀರ್ತನೆ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಭಜನಾ ಸಂಕೀರ್ತನೆಯು ಶ್ರದ್ಧಾ-ಭಕ್ತಿಯಿಂದ ನೆರವೇರಿದ್ದು, ಭಕ್ತಾದಿಗಳಲ್ಲಿ ಆಧ್ಯಾತ್ಮಿಕ ವಾತಾವರಣವನ್ನು ಮೂಡಿಸಿತು. ದೇವಿಯ ಸನ್ನಿಧಿಯಲ್ಲಿ ನಡೆದ ಭಜನಾ ಸೇವೆಯಲ್ಲಿ ಯುವವಾಹಿನಿ ಸದಸ್ಯರು ಭಕ್ತಿಗೀತೆಗಳನ್ನು ಹಾಡುವ ಮೂಲಕ ದುರ್ಗಾದೇವಿಯ ಕೃಪೆಗೆ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷ ಕೆ.ಟಿ. ಆನಂದ ಪೂಜಾರಿ, ಎರಡನೇ […]
Read More
23-07-2026, 10:00 PM
ಬಂಟ್ವಾಳ, ಜು. 23 : ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಗುರುತತ್ವವಾಹಿನಿ 72ನೇ ಮಾಲಿಕೆ ಕಾರ್ಯಕ್ರಮವು ಗುರುವಾರ ಸಜೀಪ ಮುನ್ನೂರು ಗ್ರಾಮದ ಪುರುಷೋತ್ತಮ ಪೂಜಾರಿ ಮಿತ್ತಕಟ್ಟ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಗುರುತತ್ವ ಸಂದೇಶ ನೀಡಿದ ಜಯಶಂಕರ್ ಕಾನ್ಸಾಲೆ ಅವರು, ಶ್ರೀ ನಾರಾಯಣ ಗುರುಗಳ ತತ್ವಗಳು ಸಮಾಜದಲ್ಲಿ ಸಮಾನತೆ, ಸಹೋದರತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಶಾಶ್ವತ ಸಂದೇಶಗಳಾಗಿವೆ. ಗುರುಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ವ್ಯಕ್ತಿಯೊಂದಿಗೆ ಸಮಾಜವೂ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಹೇಳಿದರು. ಯುವವಾಹಿನಿ […]
Read More