Yuvavahini

ಘಟಕಗಳು

ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 168ನೇ ಜನ್ಮ ದಿನಾಚರಣೆ

ಕೊಲ್ಯ :- ಅಭಯ ಆಶ್ರಯ ಅಸೈಗೋಳಿ ಇದರ ಓಂ ಧ್ಯಾನ ದೇಗುಲದ ದಿವ್ಯ ಸಾನಿಧ್ಯದಲ್ಲಿ ಸಾಕಾರಗೊಂಡ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 168 ನೆಯ ಜನ್ಮ ದಿನಾಚರಣೆಯು ವಿಶ್ವ ಬಿಲ್ಲವರ ಸೇವಾ ಚಾವಡಿ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ತಾರೀಕು 10 ಸೆಪ್ಟೆಂಬರ್ 2022ನೇ ಶನಿವಾರ ಸಂಜೆ ಅಸೈಗೊಳಿ ಅಭಯಾಶ್ರಯದ ಪ್ರಶಾಂತವಾದ ತಾಣದಲ್ಲಿ ಇತ್ತೀಚೆಗೆ ನೂತನವಾಗಿ ಲೋಕಾರ್ಪಣೆಗೊಂಡ ಓಂ ಧ್ಯಾನ ದೇಗುಲದ ದಿವ್ಯ ಸಾನಿಧ್ಯದಲ್ಲಿ ಆಶ್ರಮದ ಹಿರಿಯ ಸದಸ್ಯರ ಸಮಕ್ಷಮದಲ್ಲಿ ಬ್ರಹ್ಮ ಶ್ರೀ ನಾರಾಯಣ […]

Read More

ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮ ದಿನಾಚರಣೆ

ಪುತ್ತೂರು :- ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮ ದಿನಾಚರಣೆಯ, ಸಾಧಕರಿಗೆ ಸನ್ಮಾನ , ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಪುತ್ತೂರು ಬಿಲ್ಲವ ಸಂಘದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಮಧ್ಯಾಹ್ನದ ಅನ್ನ ಪ್ರಸಾದ ಭೋಜನದ ವ್ಯವಸ್ಥೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕಕ್ಕೆ ನೀಡಿದ್ದು ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ಮಧ್ಯಾಹ್ನದ ನಂತರ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ವಿಠಲ್ ನಾಯಕ್ ಕಲ್ಲಡ್ಕ ಇವರ ತಂಡದಿಂದ ಮನರಂಜನಾ ಕಾರ್ಯಕ್ರಮ ಗೀತ […]

Read More

ಕೇದಾರನಾಥದಲ್ಲಿ ರಾರಾಜಿಸಿದ ಯುವವಾಹಿನಿ ಮತ್ತು ತುಳುನಾಡ ಬಾವುಟ

ಮಂಗಳೂರು:- ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಸುಮಾರು 26 ಜನ ಯಾತ್ರಾರ್ಥಿಗಳು, 2 ಜನ ಟೂರ್ ಮ್ಯಾನೇಜರ್, 3 ಜನ ಬಾಣಸಿಗರನ್ನು ಒಳಗೊಂಡ 31 ಜನರ ತಂಡವು ಸಪ್ಟೆಂಬರ್ 8ರಿಂದ ಸೆಪ್ಟೆಂಬರ್ 19ರವರೆಗೆ 11 ದಿವಸಗಳ ಚಾರುಧಾಮ ಕೇದರನಾಥ ಯಾತ್ರೆ ಮಂಗಳೂರಿನಿಂದ ಹೊರಟಿತು. ದೆಹಲಿ, ಹರಿದ್ವಾರ, ಗಂಗಾ ಆರತಿ, ಯಮುನೋತ್ರಿ, ಉತ್ತರ ಕಾಶಿ ವಿಶ್ವನಾಥ ಮಂದಿರ, ಗಂಗಾ ನದಿ, ಸೀತಾಪುರ, ಕೇದಾರನಾಥ ದೇವಾಲಯ, ಬದರಿನಾಥ ದೇವಾಲಯ, ಭೀಮನ ಸೇತುವೆ, ಗಣೇಶ ಗುಹೆ, ವ್ಯಾಸ ಗುಹೆ, ಪಿಪಿಎಲ್ ಕೋಟು, […]

Read More

ಸಾಪ್ತಾಹಿಕ ಭಜನಾ ಸಂಕೀರ್ತನೆ

ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 05.09.2022ರ ಸೋಮವಾರದಂದು ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಬಹಳ ಸುಶ್ರಾವ್ಯವಾಗಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಗುರುಪೂಜೆ ನಡೆಸಿ ಆಡಳಿತ ಮಂಡಳಿ ಮತ್ತು ಆರ್ಚಕರು ಸೇವಾರ್ಥಿಗಳಿಗೆ ಪ್ರಸಾದ ನೀಡಿದರು. ಭಜನಾ ಸಲಹೆಗಾರರಾದ ರಾಮಚಂದ್ರ ಪೂಜಾರಿ ದಂಪತಿಗಳು ಭಜನಾ ಸೇವಾರ್ಥಿಗಳಿಗೆ ಶಾಲು ಹೊದಿಸಿ, ಅನುಗ್ರಹ ಪತ್ರ ನೀಡಿ ಗೌರವಿಸಿದರು. […]

Read More

ಗುರುವಂದನೆ -2022

ಮಾಣಿ :- ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್ 2022 ರ ಸೋಮವಾರದಂದು ಬರಿಮಾರು ಗ್ರಾಮದ ಕಲ್ಲೆಟ್ಟಿ ಶಾರದಾ ರತ್ನಾಕರ ಇವರ ಮನೆಯಲ್ಲಿ ಗುರುವಂದನೆ ಕಾರ್ಯಕ್ರಮವನ್ನು ನಡೆಸಲಾಯಿತು. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು ದ.ಕ.ಜಿ.ಪಂ.ಕಿ. ಪ್ರಾಥಮಿಕ ಶಾಲೆ ಬಂಟ್ರಿಂಜ ಅನಂತಾಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾರದಾ ರತ್ನಾಕರ ಇವರಿಗೆ ಘಟಕದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು ಮಾತನಾಡಿ ” ಗುರು ತತ್ವಾದರ್ಶದ ನೆಲೆಯಲ್ಲಿ ಬೆಳೆದು […]

Read More

ಶಿಕ್ಷಕರ ದಿನಾಚರಣೆ

ಮುಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05 ಸೆಪ್ಟೆಂಬರ್ 2022ನೇ ಸೋಮವಾರದಂದು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಯಲ್ಲಿ ಜರುಗಿತು. ಘಟಕದ ಅಧ್ಯಕ್ಷರಾದ ಭಾಸ್ಕರ್ ಭಾರತಿ ಕೋಟ್ಯಾನ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಎಚ್ .ವಿ .ಕೋಟ್ಯಾನ್ ದೀಪ ಬೆಳಗಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ […]

Read More

ಶಿಕ್ಷಕರ ದಿನಾಚರಣೆ

ಪಣಂಬೂರು – ಕುಳಾಯಿ :- ಶಿಕ್ಷಕರ ದಿನಾಚರಣೆಯ ಅಂಗವಾಗಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್2022 ರ ಸೋಮವಾರದಂದು ಘಟಕದ ವತಿಯಿಂದ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿವಿಧ ಶಾಲೆಗಳಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮ ಘಟಕದ ಸದಸ್ಯರುಗಳಾದ ಶ ಸುಜಾತ ಕುಳಾಯಿ, ಜಯಶ್ರೀ ಅಶೋಕ್ , ಕೀರ್ತಿ ಹಾಗು ಮನಿಷಾ ರೂಪೇಶ್ ಇವರಿಗೆ ಘಟಕದ ಮಹಿಳಾ ಸದಸ್ಯರುಗಳು ಆರತಿ ಬೆಳಗಿ, ಹರಿಸಿನ ಕುಂಕುಮ ಹಚ್ಚಿ, ಹೂಮುಡಿಸಿ, ಶಾಲು ಹೊದೆಸಿ, ಗುರುದಕ್ಷಿಣೆ ನೀಡುವ ಮೂಲಕ ಗೌರವಿಸಲಾಯಿತು. ಈ […]

Read More

ಬಹುಮಾನ ವಿತರಣಾ ಕಾರ್ಯಕ್ರಮ

ಕೆಂಜಾರು ಕರಂಬಾರು :- 04 ಸೆಪ್ಟೆಂಬರ್ 2022ರ ರವಿವಾರದಂದು ಸಾಹಿತ್ಯ ಸೌರಭ ಹಾಗೂ ನಾಲ್ಕನೇ ವರ್ಷದ ಕೃಷ್ಣ ವೇಷ ಸ್ಪರ್ಧೆ 2022 ಇದರ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀ ದೇವಿ ಭಜನಾ ಮಂದಿರ ಕೆಂಜಾರ್ -ಕರಂಬಾರ್‌ ಇಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯೆ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಹೇಳಿದರು. ಘಟಕದ ಎಲ್ಲಾ ಕಾರ್ಯಕ್ರಮವನ್ನು ಶ್ಲಾಘಿಸಿದರು. ಶ್ರೀ ದೇವಿ ಭಜನಾ ಮಂದಿರದ ಎರಡನೇ […]

Read More

ಬೆಳ್ಳಿ ಬೆಳಕು -2022, 25ರ ಸಂಭ್ರಮ

  ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನೆಡೆಸಿದ ಮಾಜಿ ಅಧ್ಯಕ್ಷರುಗಳ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ದಿ.04 ಸೆಪ್ಟೆಂಬರ್ 2022ರಂದು ಉಪ್ಪಿನಂಗಡಿ ಘಟಕವನ್ನು 2015-2016ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸುನೀಲ್ ಕುಮಾರ್ ದಡ್ಡು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ನಮ್ಮ ಘಟಕದ ಉಪಾಧ್ಯಕ್ಷರು, ನ್ಯಾಯವಾದಿ ಮನೋಹರ್ ಕುಮಾರ್ ಅಟಾಲು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]

Read More

ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು – ಸಂತೋಷ್ ಕಾಮತ್

ಕಂಕನಾಡಿ :- ಯುವಕರು ವಿದ್ಯಾವಂತರಾಗಿ, ಪ್ರತಿಭಾವಂತರಾಗಿ, ಸ್ವಾವಲಂಬಿಗಳಾಗಿ ಧನಾತ್ಮಕವಾಗಿ ಚಿಂತನೆಗಳನ್ನು ಮಾಡುತ್ತಾ ಸಮಾಜದ ಬೇರೆ ಬೇರೆ ಕ್ಷೇತ್ರಗಳಲ್ಲಿ ಮುಂದೆ ಬಂದು ಸಾಧನೆ ಮಾಡುವಂತಾಗಬೇಕೆಂದು ಎಂದು ಉದ್ಯಮಿ ಹಾಗೂ ಸಮಾಜ ಸೇವಕರೂ ಆಗಿರುವ ಸಂತೋಷ್ ಕಾಮತ್ ರವರು ಯುವಕರಿಗೆ ಕರೆ ನೀಡಿದರು. ಅವರು ದಿನಾಂಕ 4 ಸೆಪ್ಟಂಬರ್ 2022ದಂದು ಕಂಕನಾಡಿ ಗರೋಡಿ ಬಳಿಯ ಸಮೃದ್ಧಿ ಭವನದಲ್ಲಿ ಜರಗಿದ ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!