Yuvavahini

ಘಟಕಗಳು

ಮಹಿಳಾ ಸ್ವ-ಉದ್ಯೋಗ ಉಚಿತ ತರಬೇತಿ

ಕಂಕನಾಡಿ: ಯುವವಾಹಿನಿ (ರಿ.) ಕಂಕನಾಡಿ ಘಟಕ ಹಾಗೂ ಭಾರತ ಸರ್ಕಾರ ದತ್ತೋಪಂಥ, ಠೇಂಗಡಿ, ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ದಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಪ್ರಾದೇಶಿಕ ನಿರ್ದೇಶನಾಲಯ, ಮಂಗಳೂರು ವತಿಯಿಂದ ಮಹಿಳೆಯರಿಗೆ ಸ್ವಉದ್ಯೋಗ ಉಚಿತ ತರಬೇತಿ ಕಾರ್ಯಗಾರವು ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನ ಸಭಾಂಗಣದಲ್ಲಿ ದಿನಾಂಕ 24-02-2024 ಶನಿವಾರದಂದು ನಡೆಯಿತು. ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ಅಧ್ಯಕ್ಷರಾದ ಉಮಾನಾಥ್ ಕೋಟ್ಯಾನ್ ರವರು ದೀಪ ಪ್ರಜ್ವಲಿಸುವ ಮುಖೇನ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ರೇಖಾ ಗೋಪಾಲ್ […]

Read More

ಮನೆ ಮನೆ ಭಜನೆ

ಬಜಪೆ: ಯುವವಾಹಿನಿ ಬಜಪೆ ಘಟಕದ ಫೆಬ್ರವರಿ ತಿಂಗಳ ಮನೆ ಮನೆ ಭಜನಾ ಸಂಕೀರ್ತಣೆಯು ದಿನಾಂಕ 23/02/24 ರಂದು ಘಟಕದ ಪ್ರಧಾನ ಕಾರ್ಯದರ್ಶಿಯಾದ ದೀಕ್ಷಿತ್ ಅಮೀನ್ ಇವರ ಮನೆಯಲ್ಲಿ ಸಾಯಂಕಾಲ 6:00 ಗಂಟೆಯಿಂದ 7:00 ಗಂಟೆಯವರೆಗೆ ಅರ್ಥಪೂರ್ಣವಾಗಿ ನೆರವೇರಿತು.

Read More

ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಾನೂನು ಮತ್ತು ಶಿಸ್ತಿನ ಅರಿವು

ಯುವವಾಹಿನಿ(ರಿ.) ಕೊಲ್ಯ ಘಟಕದ ವತಿಯಿಂದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ದಿನಾಂಕ 23-02-2024ನೇ ಶುಕ್ರವಾರದಂದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಾನೂನು ಮತ್ತು ಶಿಸ್ತಿನ ಅರಿವು ಮುಗ್ದ ಮನಗಳೊಂದಿಗೆ ಒಲವಿನ ಸಂವಾದ ಎಂಬ ಕಾರ್ಯಕ್ರಮವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟು ಶಾಲಾ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಸುಸಂದರ್ಭದಲ್ಲಿ ಆನಂದಾಶ್ರಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗುರುಮೂರ್ತಿ ದೀಪ ಬೆಳಗಿಸಿ ಉದ್ಘಾಟಿಸಿ ಮಕ್ಕಳು ತಮ್ಮ ಜೀವನದಲ್ಲಿ ಬಹಳ ಅಗತ್ಯವಾಗಿ ಅಳವಡಿಸಿಕೊಳ್ಳಬಹುದಾದ ಮೌಲ್ಯಯುತವಾದ ಕಾರ್ಯಕ್ರಮವೆಂದು ಹರ್ಷ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಪನ್ಮೂಲ ವ್ಯಕ್ತಿ ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಡಿ. ಸುವರ್ಣ […]

Read More

ಉಳ್ಳಾಲ ಬಿಲ್ಲವ ಸಮಾವೇಶ: ಮನೆ ಮನೆ ಭೇಟಿ

ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಇವರ ಆಶ್ರಯದಲ್ಲಿ ಉಳ್ಳಾಲ ತಾಲೂಕು ಬಿಲ್ಲವರ ಸಮಾವೇಶ ಸಮಿತಿ ಸಹಭಾಗಿತ್ವದಲ್ಲಿ ಫೆಬ್ರವರಿ 25 ರಂದು ಕೊಲ್ಯ ಬಿಲ್ಲವ ಸಮಾಜ ಸಂಘದ ಆವರಣದಲ್ಲಿ ಬಿಲ್ಲವರ ಸಮಾವೇಶ ನಡೆಯಲಿದೆ. ಕೇಂದ್ರ ಸರ್ಕಾರದ ಮಾಜಿ ವಿತ್ತ ಸಚಿವರು, ಬಿಲ್ಲವರ ಹಿರಿಯ ಮುಖಂಡರಾದ ಬಿ. ಜನಾರ್ಧನ ಪೂಜಾರಿ ಇವರಿಂದ ಉದ್ಘಾಟನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಗಣ್ಯಾತಿಗಣ್ಯರು ಭಾಗವಹಿಸಲಿದ್ದು ದಿನಪೂರ್ತಿ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಉಳ್ಳಾಲ ವಲಯದ ಅನೇಕ ಬಿಲ್ಲವ […]

Read More

ಅನ್ನಸಂತರ್ಪಣೆ ಸೇವೆ

ವಿಟ್ಲ: ಪುಣಚ ನೀರುಮಜಲು ಬ್ರಹ್ಮ ಬೈದೆರ್ಕಳ ಗರಡಿ ನೇಮೋತ್ಸವದ ಸಂದರ್ಭ ದಿನಾಂಕ 22-02-2024 ಗುರುವಾರ ದಂದು ರಾತ್ರಿ 8-00ರಿಂದ 11-00 ಗಂಟೆಯವರೆಗೆ ಯುವವಾಹಿನಿ ವಿಟ್ಲ ಘಟಕದ ಸದಸ್ಯರು ಅನ್ನ ಸಂತರ್ಪಣೆಯ ಸ್ವಯಂ ಸೇವೆಯಲ್ಲಿ‌ ಭಾಗವಹಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ, ಕಾರ್ಯದರ್ಶಿ ಶೋಭಾ, ಕೋಶಾಧಿಕಾರಿ ನಿರ್ಮಲಾ, ಪದಾಧಿಕಾರಿಗಳು ಮತ್ತು ಸುಮಾರು 20 ಸದ್ಯಸರು ಸ್ವಯಂ ಸೇವೆಯಲ್ಲಿ ಪಾಲ್ಗೊಂಡರು.

Read More

ಸ್ವ ಉದ್ಯೋಗ ತರಬೇತಿ ಕಾರ್ಯಾಗಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕ ಹಾಗೂ ಅಂಬಲಪಾಡಿ ರೋಟರಿ ಜಂಟಿ ಆಶ್ರಯದಲ್ಲಿ ಭಾರತ ಸರ್ಕಾರ ದತ್ತೋಪಂಥ ಠೇಂಗಡಿ, ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ದಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇವರ ವತಿಯಿಂದ ಮಹಿಳೆಯರಿಗಾಗಿ ಅರ್ಧ ದಿನದ ಸ್ವಉದ್ಯೋಗ ಉಚಿತ ತರಬೇತಿ ಕಾರ್ಯಾಗಾರವು ಯುವವಾಹಿನಿ ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 21-02-24 ರಂದು ನಡೆಯಿತು. ದೀಪ ಪ್ರಜ್ವಲನೆ ಹಾಗೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಶಿಬಿರ ಆರಂಭಗೊಂಡಿತು. ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ […]

Read More

ಯುವವಾಹಿನಿ ಯುವಜನತೆಯ ಸ್ಪೂರ್ತಿ : ಹರೀಶ್ ಕೆ.ಪೂಜಾರಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ಯುವಕರ ಆಕರ್ಷಣೆಯ ಮೂಲಕ ಯುವಜನತೆಯಲ್ಲಿ ಹೊಸ ಸ್ಪೂರ್ತಿ ತುಂಬಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ತಿಳಿಸಿದರು. ಅವರು 2024 ಫೆಬ್ರವರಿ 20 ರಂದು ಮಂಗಳೂರಿನ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ ಮಂಗಳೂರು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಶ್ರೀನಿವಾಸ್ ಬಲ್ಕ್ ಕ್ಯಾರಿಯರ್ ಇದರ ಮಾಲೀಕರಾದ ಲೋಕೇಶ್ ಆರ್ ಅಮೀನ್ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು, ಕೇಂದ್ರ […]

Read More

ವೈವಿಧ್ಯತೆಗೆ ಯುವವಾಹಿನಿ ಮಾದರಿ : ಯೋಗೀಶ್ ಕೈರೋಡಿ

ಕೆಂಜಾರು-ಕರಂಬಾರು: ಧಾರ್ಮಿಕತೆ ಎಂಬುವುದು ಜನಜೀವನದ ಭಾಗ. ವಸ್ತುವಿನಲ್ಲಿ ವಿವಿಧ ನೆಲೆಯ ಗುಣಮಟ್ಟ ಇರುವಂತೆ ಧಾರ್ಮಿಕತೆಯಲ್ಲಿಯೂ ಉತ್ತಮ,ಉನ್ನತ ಹಾಗೂ ದುರ್ಬಲ ಎಂಬ ಮೂರು ಗುಣಮಟ್ಟವಿದೆ. ಉತ್ತಮ ಹಾಗೂ ಉನ್ನತ ಧಾರ್ಮಿಕತೆಯ ಪಾಲಕರು ಫಲಾನುಭವಿಗಳಾಗಬೇಕು. ದುರ್ಬಲ ಧಾರ್ಮಿಕತೆಯಿಂದ ಯುವಜನತೆಯನ್ನು ಪಾರುಗೊಳಿಸುವ ಹೊಣೆ ಯುವವಾಹಿನಿಗಿರಲಿ. ಒಂದು ವರ್ಷದ ಅವಧಿಯಲ್ಲಿ ಅಲ್ಪಾವಧಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಚಿಂತನೆ ಸಹಜವಾಗಿ ನೂತನ ಪದಾಧಿಕಾರಿಗಳಿಗಿರುತ್ತದೆ. ಅಲ್ಪಾವಧಿಯೊಂದಿಗೆ ದೂರದೃಷ್ಟಿಯ ಕಾರ್ಯಕ್ರಮಗಳಿಗೂ ಆದ್ಯತೆ ಇರಲಿ. ಸಂಘಟನೆ ಸ್ವರೂಪ ಮತ್ತು ಕಾರ್ಯಕ್ರಮದ ವೈವಿಧ್ಯಕ್ಕೆ ಯುವವಾಹಿನಿ ನಾಡಿಗೆ ಮಾದರಿ ಎಂದು ಮೂಡುಬಿದಿರೆ ಆಳ್ವಾಸ್ […]

Read More

ಮಾಡತಡ್ಕ ದೈವಸ್ಥಾನದಲ್ಲಿ ಶ್ರಮದಾನ

ವಿಟ್ಲ: ಯುವವಾಹಿನಿ (ರಿ.) ವಿಟ್ಲ ಘಟಕ ಇದರ ನೇತೃತ್ವದಲ್ಲಿ ಶ್ರೀ ಮಲರಾಯ -ಮೂವರ್ ದೈವಂಗಳ ದೈವಸ್ಥಾನ ಮಾಡತಡ್ಕ ಇದರ ಕಾಲಾವದಿ ನೇಮೋತ್ಸವದ ಪ್ರಯುಕ್ತ ದಿನಾಂಕ 18-02-2024 ಆದಿತ್ಯವಾರ ಬೆಳಿಗ್ಗೆ 8 ರಿಂದ ಮದ್ಯಾಹ್ನ 1ರ ವರೆಗೆ ವಿಟ್ಲ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು.ಈ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ ಕಾರ್ಯದರ್ಶಿ ಶೋಭಾ, ಕೋಶಾಧಿಕಾರಿ ನಿರ್ಮಲ, ಪ್ರಚಾರ ನಿರ್ದೇಶಕರಾದ ಶ್ರೇಯಸ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದರು.

Read More

ಶ್ರೀ ಕ್ಷೇತ್ರ ಪೊಳಲಿಗೆ ಪಾದಯಾತ್ರೆ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಿಂದ ಲೋಕ ಕಲ್ಯಾಣನಾರ್ಥ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಲಾಯಿತು. ದಿನಾಂಕ 18.02.2024ರ ಬೆಳಗ್ಗೆ 5.00 ಗಂಟೆಗೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ, ಕಾರ್ಯದರ್ಶಿ ನಿಕೇಶ್ ಕೋಟ್ಯಾನ್, ಕಾರ್ಯಕ್ರಮ ಸಂಚಾಲಕರಾದ ಕಿರಣ್‌ರಾಜ್ ಪೂಂಜರೆಕೋಡಿ, ಮಾಜಿ ಅಧ್ಯಕ್ಷರು, ಸೇರಿ ಒಟ್ಟು 48 ಸದಸ್ಯರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!