Yuvavahini

ಘಟಕಗಳು

ಯುವವಾಹಿನಿ ( ರಿ.) ವಿಟ್ಲ ಘಟಕ

ಯುವವಾಹಿನಿ ( ರಿ.) ವಿಟ್ಲ ಘಟಕ ಪುಣಚ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಾರ್ಷಿಕ ನೆಮೋತ್ಸವದ ಪ್ರಯುಕ್ತ ಘಟಕದ ವತಿಯಿಂದ ದಿನಾಂಕ 12/03/2025 ನೇ ಬುಧವಾರ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದರು ಈ ಸಂದರ್ಭದಲ್ಲಿ ಘಟಕದ ಸದಸ್ಯರೆಲ್ಲರು ಭಾಗವಹಿಸಿದರು

Read More

ವಿಶ್ವ ಮಹಿಳಾ ದಿನಾಚರಣೆ-ಯುವವಾಹಿನಿ (ರಿ)ಮೂಡುಬಿದಿರೆ ಘಟಕದ

ಯುವವಾಹಿನಿ (ರಿ)ಮೂಡುಬಿದಿರೆ ಘಟಕದ* ಆತಿಥ್ಯದಲ್ಲಿ *ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ) ಕಡಂದಲೆ-ಪಾಲಡ್ಕ* ಹಾಗೂ *ಮಹಿಳಾ ಘಟಕದ* ಸಹಯೋಗದೊಂದಿಗೆ *ವಿಶ್ವ ಮಹಿಳಾ ದಿನಾಚರಣೆ* ಅಂಗವಾಗಿ *ಮಾ. 9ರಂದು* *ಬಿಲ್ಲವ ಸಂಘ, ಕಡಂದಲೆ-ಪಾಲಡ್ಕದಲ್ಲಿ* ಸಾಧಕ ಮಹಿಳೆಯರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ *“ಸಮರ್ಪಣೆ-2025”* ಕಾರ್ಯಕ್ರಮವು ಕಡಂದಲೆ – ಪಾಲಡ್ಕ ಇಲ್ಲಿ ಜರುಗಿತು. ಅನ್ನಪೂರ್ಣದ *ಶ್ರೀಮತಿ ಪ್ರಶಾಂತಿ ಶೇಖರ ಅಂಚನ್* ರವರು ದೀಪಾ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಂದಲೆ-ಪಾಲಡ್ಕ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕದ ಅಧ್ಯಕ್ಷೆ *ಶ್ರೀಮತಿ ಸೌಮ್ಯ […]

Read More

ಭಜನಾ ಸಂಕೀರ್ಥನೆ -ಯುವ ವಾಹಿನಿ( ರಿ.) ಶಕ್ತಿನಗರ ಘಟಕ

ಯುವ ವಾಹಿನಿ( ರಿ.) ಶಕ್ತಿನಗರ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಸ‌ಹಯೋಗದಲ್ಲಿ 13-03-25ರಂದು ಗುರುವಾರ ಭಜನಾ ಸಂಕೀರ್ಥನೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು

Read More

ಭಜನಾ ಕಾರ್ಯಕ್ರಮ-ಯುವವಾಹಿನಿ (ರಿ) ಮಂಗಳೂರು ಘಟಕ

ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಯ ಜಂಟಿ ಆಶ್ರಯದಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಕರ್ನಾಟಕ ಮಂಗಳೂರು ಇದರ ಸದಸ್ಯರಿಗೆ ಯುವವಾಹಿನಿಯ ಕಾರ್ಯವೈಖಾರಿ, ಸಮಾಜ ಸೇವೆ, ವಿವಿಧ ಕಾರ್ಯಕ್ರಮಗಳ ಬಗ್ಗೆ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಪರಮೇಶ್ವರ ಪೂಜಾರಿ ಸವಿಸ್ತಾರವಾಗಿ ತಿಳಿಸಿದರು. ಈ ಸಂದರ್ಭ ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್ ಕಾರ್ಯದರ್ಶಿ ಯಶವಂತ್ ಪೂಜಾರಿ […]

Read More

ಯುವವಾಹಿನಿ ( ರಿ.) ಬಂಟ್ವಾಳ ಘಟಕ

ಯುವವಾಹಿನಿ ( ರಿ.) ಬಂಟ್ವಾಳ ಘಟಕ ಘಟಕದ ಸಾಂಸ್ಕೃತಿಕ ನಿರ್ದೇಶಕ ಧನುಷ್ ಮದ್ವ ಇವರ ಮನೆಯಲ್ಲಿ ಘಟಕದ ಗುರುತತ್ವವಾಹಿನಿ 38 ಮಾಲಿಕೆ ನಡೆಯಿತು. ಕಾರ್ಯಕ್ರಮದಲ್ಲಿ ಪೂಂಜಲಕಟ್ಟೆ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ರವರು ಬ್ರಹ್ಮಶ್ರೀ ನಾರಾಯಣ ಗುರುಗಳು ನಡೆಸಿದ ದಾರ್ಮಿಕ ಕ್ರಾಂತಿಯ ಬಗ್ಗೆ ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀ ಆದಿಗುರು ದತ್ತಸಾಯಿ, ಆದಿಶಕ್ತಿ ದುರ್ಗಾಪರಮೇಶ್ವರಿ ಹಾಗೂ ಪರಿವಾರ ಶಕ್ತಿಗಳ ಕ್ಷೇತ್ರ ಬಸವನಗುಡಿ ಪೂಂಜಾಲಕಟ್ಟೆಯ ಧರ್ಮದರ್ಶಿ ಕೃಷ್ಣಪ್ರಸಾದ್ ಶಾಂತಿ ಉಪಸ್ಥಿತರಿದ್ದರು…ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು..

Read More

ಯುವವಾಹಿನಿ (ರಿ) ಶಕ್ತಿನಗರ ಘಟಕ

ಯುವವಾಹಿನಿ (ರಿ) ಶಕ್ತಿನಗರ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ) ನಿಂದ ಜೋಕುಲಸಾನ ಶಕ್ತಿನಗರದ ನೇಮೋತ್ಸವದಲ್ಲಿ ಬಂದಂತಹ ಎಲ್ಲಾ ಭಕ್ತಾಭಿಮಾನಿಗಳಿಗೆ ಪಾನಕ ಸೇವೆ ದಿನಾಂಕ 15/3/2025ರಂದು ಮಾಡಲಾಯಿತು. ಜಾತ್ರಾ ಮಹೋತ್ಸವದಲ್ಲಿ ಸದಸ್ಯರೆಲ್ಲರೂ ಸೇರಿ ಸರಿ ಸುಮಾರು 3000 ಜನರಿಗೆ ಪಾನಕವನ್ನು ಹಂಚಲಾಯಿತು.

Read More

ಯುವವಾಹಿನಿ( ರಿ.) ಬಂಟ್ವಾಳ ಘಟಕ ರಕ್ತದಾನ ಶಿಬಿರ

ಯುವವಾಹಿನಿ( ರಿ.) ಬಂಟ್ವಾಳ ಘಟಕ , ಶ್ರೀ ನಾರಾಯಣಗುರು ವೈದಿಕ ಸಮಿತಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಸಹಕಾರದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ರಕ್ತದಾನ ಶಿಬಿರ ಸಜಿಪ ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅತ್ಯಧಿಕ ಬಾರಿ ರಕ್ತದಾನ ಮಾಡಿದ ಮಹೇಶ್ಚಂದ್ರ ಬಿ.ಟಿ, ಲೋಕೇಶ್ ಸುವರ್ಣ […]

Read More

ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

*ಯುವವಾಹಿನಿ( ರಿ.)ಬೆಳ್ತಂಗಡಿ ಘಟಕ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ* ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಗೆ ಭೇಟಿ ನೀಡಿ ಪೂಜ್ಯ ಸ್ವಾಮೀಜಿಗಳಾದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ಪೂಜ್ಯ ಸ್ವಾಮೀಜಿಗಳು ಆಶೀರ್ವಚನ ನೀಡಿದರು ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಇವರನ್ನು ಪೂಜ್ಯ ಸ್ವಾಮೀಜಿಗಳು ಅಭಿನಂದಿಸಿದರು. ಈ ಸಂದರ್ಭದಲ್ಲಿ ಘಟಕದ ಸದಸ್ಯರು ಭಾಗವಹಿಸಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

Read More

ಯುವವಾಹಿನಿ (ರಿ) ಕಂಕನಾಡಿ ಘಟಕ

ಯುವವಾಹಿನಿ (ರಿ) ಕಂಕನಾಡಿ ಘಟಕ ಶ್ರೀ ಕ್ಷೇತ್ರ ಗೆಜ್ಜಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!