Yuvavahini

ಘಟಕಗಳು

ಶ್ರೇಷ್ಠ ನಾಯಕತ್ವದ ಹಾದಿಯಲ್ಲಿ ರಜತ್ ಕುಮಾರ್ ಎನ್.ಎಸ್.

ಬದುಕಿನಲ್ಲಿ ಸುನಿಶ್ಚಿತ ಗುರಿಯುಳ್ಳ ಇತ್ಯಾತ್ಮಕ ಸಾಧನೆಯ ಮುಂಚೂಣಿ ಮತ್ತು ಮುನ್ನಗ್ಗುವ ಎದೆಗಾರಿಕೆಯುಳ್ಳ ಯುವಜನರಲ್ಲಿ ಕೆಲವೇ ಕೆಲವರು ವಿದ್ಯಾರ್ಥಿ ಜೀವನದಲ್ಲಿ ಸ್ವಯಂಪ್ರೇರಿತವಾಗಿ ಉತ್ತಮ ನಾಯಕತ್ವದ ಲಕ್ಷಣಗಳನ್ನು ಮೈಗೂಡಿಸಿಕೊಂಡು ಯಶಸ್ವೀ ನಾಯಕರಾಗುತ್ತಾರೆ. ಇಂತಹದ್ದೇ ಒಂದು ಮನೋಧರ್ಮದವರಾಗಿದ್ದು ರಾಷ್ಟ್ರ ಚಿಂತನೆಯ ಹಾದಿಯಲ್ಲಿ ಸಾಗುತ್ತಾ ಕರ್ನಾಟಕ ರಾಜ್ಯಪಾಲರಿಂದ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂ ಸೇವಕ ರಾಜ್ಯ ಪ್ರಶಸ್ತಿ (2014-15 ರಲ್ಲಿ) ಬಾಚಿಕೊಂಡ ಓರ್ವ ವಿದ್ಯಾರ್ಥಿಯ ಯಶೋಗಾಥೆ ಇದು. ಆತ ಬೇರಾರೂ ಅಲ್ಲ; ಪುತ್ತೂರಿನ ಶ್ರೀ N. ಶೀನಪ್ಪ ಪೂಜಾರಿ- ರೇಖಾ ದಂಪತಿಗಳ ಹೆಮ್ಮೆಯ […]

Read More

ರಾಷ್ಟ್ರಪತಿ ಪುರಸ್ಕಾರ ಪಡೆದ ಕು| ತೃಪ್ತಿ ಆನಂದ್

ಸಮುದಾಯ ಸೇವೆಗೆ ಗೈಡ್ ಸಂಸ್ಥೆ ಹೆಸರುವಾಸಿಯಾಗಿದ್ದು ಅತ್ಯಂತ ಉತ್ಕೃಷ್ಠ ರಾಷ್ಟ್ರಪತಿಗೈಡ್ಸ್ ಪುರಸ್ಕಾರ ಪಡೆಯುವ ಅರ್ಹತೆ ಲಕ್ಷದಲ್ಲೊಬ್ಬರಿಗೆ ಬರಬಹುದು. ರಾಷ್ಟ್ರಮಟ್ಟದಲ್ಲಿ ಇಂತಹ ಮಹೋನ್ನತ ಗೈಡ್ಸ್ ಪುರಸ್ಕಾರ ಪಡೆದು ಬಿಲ್ಲವ ಸಮುದಾಯಕ್ಕೆ ಕಿರೀಟ ಸದೃಶ ಕೀರ್ತಿ ತಂದ ಕು. ತೃಪ್ತಿ ಆನಂದ್ ಮಂಗಳೂರಿನ K.S Hegde ವೈದ್ಯಕೀಯ ಕಾಲೇಜಿನ ಪೊಫೆಸರ್ ಡಾ. ಆನಂದ ಬಂಗೇರ ಹಾಗೂ ಅಲ್ಲೇ ಪ್ರೊಫೆಸರ್ ಆಗಿರುವ ಡಾ. ವಸಂತಿ ಕೋಟ್ಯಾನ್‌ರವರ ಸುಪುತ್ರಿ St. ತೆರೆಸಾ ಶಾಲೆ, ಬೆಂದೂರಿನಲ್ಲಿ 10ನೇ ತರಗತಿವರೆಗೆ ಓದಿ ಮೌಲ್ಯ ಶಿಕ್ಷಣ (Value […]

Read More

ಉನ್ನತ ಸಾಧನೆಯ ಪ್ರತಿಭೆ – ಕು| ದಿಶಾ ಎಸ್.

ಪುತ್ತೂರಿನ ಶ್ರೀ ಸಂತೋಷ್ ಹಾಗೂ ಶ್ರೀಮತಿ ದಿವ್ಯಾ ಎಸ್ ಇವರ ಸುಪುತ್ರಿ ಕು. ದಿಶಾ ಎಸ್ ಈ ಬಾರಿ SSLCಯಲ್ಲಿ ಅತ್ಯುನ್ನತ ಶ್ರೇಣಿಯ ಸಾಧನೆಯನ್ನು ಮಾಡಿ ಎಲ್ಲರ ಗಮನ ಸೆಳೆದಿದ್ದಾಳೆ. ಪುತ್ತೂರಿನ ಸಂತ ವಿಕ್ಟರ್‍ಸ್ ಹೈಸ್ಕುಲಿನ ವಿದ್ಯಾರ್ಥಿನಿಯಾದ ಈಕೆ ಕನ್ನಡ, ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ಶೇಕಡಾ 100 ಅಂಕಗಳಿಸಿದ್ದು ಒಟ್ಟಿನಲ್ಲಿ 625 ಕ್ಕೆ 616 ಅಂಕಗಳಿಸಿ(98.56%) ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ಶಾಲೆಯ ಅಧ್ಯಾಪಕರು, ಹೆತ್ತವರು ಬಿಲ್ಲವ ಸಮಾಜ ಮತ್ತು ಜಿಲ್ಲೆಗೆ ಕೀರ್ತಿ ತಂದ ಇವರ ಪರಿಶ್ರಮವನ್ನು ಮೆಚ್ಚಲೇಬೇಕು. ಪ್ರಾಯ ಸಹಜವಾದ ಯಾವುದೇ […]

Read More

ಕರಾಟೆ ಮಿಂಚು ಸಂಚಲನದ ಯುವ ಪ್ರತಿಭೆ ಕು| ಚೈತ್ರಾ ಸಾಲಿಯಾನ್

ಕರಾಟೆ – ಆತ್ಮರಕ್ಷಣೆಯ ಕಲೆ. ವಿದ್ಯಾರ್ಥಿ ಜೀನದಲ್ಲಿ ಕಲಿಕೆಯೊಂದಿಗೆ ಈ ಕ್ರೀಡೆಯಲ್ಲಿ ತನ್ನನ್ನು ಪರಿಪೂರ್ಣವಾಗಿ ಸಮರ್ಪಿಸಿ ಮಾರ್ಗದರ್ಶಕ ಶ್ರೀ ಸತೀಶ್ ಪೂಜಾರಿ ಬೆಳ್ಮಣ್ ಇವರ ಗರಡಿಯಲ್ಲಿ ಪಳಗಿ ಉನ್ನತ ಕಪ್ಪು ಪಟ್ಟಿ ಪದವಿಗಳಸಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿ ಕೊಂಡು ತಂದೆ ತಾಯಿ, ಸಮಾಜ ಮಾತ್ರವಲ್ಲ ಜಿಲ್ಲೆಗೇ ಹೆಸರು ತಂದ ಕು| ಚೈತ್ರಾ ಸಾಲಿಯಾನ್ ಓರ್ವ ಉದಯೋನ್ಮುಖ ಪ್ರತಿಭೆ. ತಂದೆ ಶ್ರೀ ಅಶೋಕ್ ಸಾಲ್ಯಾನ್ -ತಾಯಿ ಶ್ರೀಮತಿ ಸಾಲ್ಯಾನ್ ದಂಪತಿಗಳಿಗೆ ಗೌರವ ಹೆಮ್ಮೆ […]

Read More

ಉಡುಪಿಯಲ್ಲಿ ಹೊಸ ಇತಿಹಾಸ ಬರೆದ ಯುವವಾಹಿನಿ ; ಅಭೂತಪೂರ್ವ ಯಶಸ್ಸು ಕಂಡ 29 ನೇ ವಾರ್ಷಿಕ ಸಮಾವೇಶ

ಸೂರ್ಯ ನಸುನಗುತ್ತಾ ಮೂಡಿ ತುಸು ಹೊತ್ತು ಕಳೆದಿತ್ತಷ್ಟೇ, ಪೂರ್ವ ದಿಗಂತದಲ್ಲಿ ಕೆಂಬಣ್ಣ ಇನ್ನೂ ಮಾಸಿರಲಿಲ್ಲ, ಕರಗಿದ ಮೋಡ ಇಬ್ಬನಿಯಾಗಿ ಹಸಿರೆಲೆಯ ಮೇಲೆ ಇನ್ನೂ ಜಿನುಗುತ್ತಲೇ ಇತ್ತು. ಹಾಡು ಹಕ್ಕಿಗಳ ಕೂಗು ಕೇಳುತ್ತಲೇ ಇನ್ನೂ ನಿಂತಿರಲಿಲ್ಲ. ಆದರೆ ಉಡುಪಿಯ ಪುರಭವನ ಅಷ್ಟರಲ್ಲಿಯೇ ತುಂಬಿ ತುಳುಕುತ್ತಿದ್ದವು. ಬೆಳ್ತಂಗಡಿ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ ಮತ್ತು ಮಂಗಳೂರು ಹೀಗೆ ದೂರದೂರಿನಿಂದ ಬಂದಿದ್ದ ಯುವವಾಹಿನಿಯ ಬಂಧುಗಳು ಅದಾಗಲೇ ಪುರಭವನಕ್ಕೆ ರಂಗು ತಂದಿದ್ದರು. ಯುವವಾಹಿನಿಯ 29 ವರುಷಗಳ ಭವ್ಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ನಿಗದಿತ ಸಮಯದಲ್ಲಿ ಸದಸ್ಯರು […]

Read More

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರರವರಿಗೆ 2016 ರ ಸಾಲಿನ ವಿಶುಕುಮಾರ್ ಪ್ರಶಸ್ತಿ

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಲನಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನಡೆ ನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯು ಕಳೆದ 14 ವರ್ಷಗಳಿಂದ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ದುಡಿದ, ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ. 2016ರ ಸಾಲಿನ ವಿಶುಕುಮಾರ್ ಪ್ರಶಸ್ತಿಯು ದ್ವಿಭಾಷಾ ಕವಿ, […]

Read More

ರಮ್ಯಾ ಸುಜೀರ್ ಇವರಿಗೆ ಯುವವಾಹಿನಿ ಯುವ ಸಾಹಿತ್ಯ ಪುರಸ್ಕಾರ – 2016

ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಮನೆ, ತಿಮ್ಮಪ್ಪ ಪೂಜಾರಿ ಹಾಗೂ ಶ್ರೀಮತಿ ಪುಷ್ಪಾರವರ ಸುಪುತ್ರಿಯಾದ ರಮ್ಯ ಸುಜೀರ್‌ರವರು ತನ್ನ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದವರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ತುಳು ಅಧ್ಯಯನ ವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎ. ಬಿ.ಎಡ್. ಪದವಿಯನ್ನು ಪಡೆದಿರುತ್ತಾರೆ. ಸೈಂಟ್ ಜೋನ್ಸ್ ಪದವಿ ಪೂರ್ವ ಕಾಲೇಜು ಗಂಡಸಿ ಹಾಸನ ಇಲ್ಲಿ 1 ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ […]

Read More

ಸುಖದ ಪ್ರಸವ – ನಮ್ಮ ಪ್ರವಾಸ

ಪ್ರವಾಸಾನುಭವ ’ದೇಶ ಸುತ್ತಿ ನೋಡು, ಕೋಶ ಓದಿ ನೋಡು ಎಂಬ ತತ್ವವನ್ನಿರಿಸಿಕೊಂಡು ಹಲವು ಚಿಕ್ಕ-ದೊಡ್ಡ ಪ್ರವಾಸಗಳನ್ನು ಏರ್ಪಡಿಸುತ್ತ ಬಂದಿರುವ ಯುವವಾಹಿನಿ ಮಂಗಳೂರು ಘಟಕವು ಈ ಬಾರಿ ದಕ್ಷಿಣ ಭಾರತ ಪ್ರವಾಸವನ್ನು ಏರ್ಪಡಿಸಿತ್ತು. 2014 ರಲ್ಲಿ ಉತ್ತರ ಭಾರತ ಮತ್ತು ನೇಪಾಳದ 10 ದಿನಗಳ ಪ್ರವಾಸದಲ್ಲಿ ಭಾಗಿಯಾಗಿದ್ದ ನಾನು 2015 ರ ಉತ್ತರ ಭಾರತ ಪ್ರವಾಸ (ವಾರಣಾಸಿ, ಹೃಷಿಕೇಶ, ಹರಿದ್ವಾರ, ವೈಷ್ಣೋದೇವಿ, ದೆಹಲಿ, ಅಮೃತಸರ್, ವಾಘಾ ಬೋರ್ಡರ್ ಇತ್ಯಾದಿ ಸ್ಥಳಗಳಿಗೆ)ಕ್ಕೆ ಹೋಗಲಾಗಲಿಲ್ಲ. ಈ ಬಾರಿ ದಕ್ಷಿಣ ಭಾರತದ ತಮಿಳುನಾಡು ಮತ್ತು ಕೇರಳದ ಆಯ್ದ […]

Read More

ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ – 2016

ಮಾನವ ಸಂಪನ್ಮೂಲ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕೂಡಾ ತನ್ನ ಆಸಕ್ತಿಯ ಕ್ಷೇತ್ರ ಛಾಯಾಗ್ರಹಣದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತ 4 ಚಿನ್ನದ ಪದಕ ಸಹಿತ 7 ಪ್ರಶಸ್ತಿಗಳನ್ನು ಗಳಿಸಿ ಸಾಧನೆಗೆ ಇದಿರಿಲ್ಲ ಎಂಬಂತಹ ವಿಶೇಷ ಸ್ಥಾನಮಾನ ಗಳಿಸಿದ ಖ್ಯಾತ ಸಾಮಾಜಿಕ ಧುರೀಣ ಶ್ರೀ ಹರಿಕೃಷ್ಣ ಬಂಟ್ವಾಳ್, ಶಶಿಕಲಾ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್‌ರವರನ್ನು ಯುವ ಸಾಧನಾ ಪುರಸ್ಕಾರಕ್ಕೆ ಆಯ್ಕೆ ಮಾಡಲು ಯುವವಾಹಿನಿ ಸಂಸ್ಥೆ ಅತ್ಯಂತ ಹೆಮ್ಮೆ ಪಡುತ್ತದೆ. ಓರ್ವ ಹವ್ಯಾಸಿ ವಿಶೇಷ ಛಾಯಾಗ್ರಹಣ ಕ್ಷೇತ್ರದಲ್ಲಿ […]

Read More

ಮನಿಷಾ ಬಿ. ಪೂಜಾರಿ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಬಿಲ್ಲವ ಸಮಾಜದ ಶೈಕ್ಷಣಿಕ ಪ್ರಗತಿಗೆ ಯುವವಾಹಿನಿಯು ಶ್ರಮಿಸುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿದ್ದ ಪ್ರತಿಭೆಯೊಂದು ಕಿರಿ ವಯಸ್ಸಿನಲ್ಲಿ ಹಿರಿಯರು ಮಾಡಲಾಗದ ಸಾಧನೆಗೈದಿದ್ದಾರೆ. ಸಮಾಜ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅವರು ಬೇರಾರೂ ಅಲ್ಲ. ಪಿ.ಬಾಲಕೃಷ್ಣ ಪೂಜಾರಿ-ಮಲ್ಲಿಕಾ ಬಿ. ಪೂಜಾರಿ ದಂಪತಿಗಳ ಸುಪುತ್ರಿ ಮನಿಷಾ ಬಿ. ಪೂಜಾರಿ. ಕಾಲೇಜು ವಿದ್ಯಾಭ್ಯಾಸ ಹಂತದಿಂದ ಕಲಿಕೆಯ ಮುಂಚೂಣಿಯಲ್ಲಿದ್ದು ಪಿ.ಯು.ಸಿ ಪರೀಕ್ಷೆಯಲ್ಲಿ ಕಾಲೇಜಿಗೆ ದ್ವಿತೀಯ ಶ್ರೇಷ್ಠರಾಗಿ ಸಾಧನೆಗೈದ ಇವರು ತನ್ನ ಕಲಿಕೆಯಾದ್ಯಂತ ಅತ್ಯುನ್ನತ ಶ್ರೇಣಿಯ ಗಳಿಕೆ ಸಾಧಿಸಿರುವುದು ಉಲ್ಲೇಖನೀಯ. ಬಿ.ಕಾಂ ಪದವಿಯಲ್ಲಿ MGM College ಉಡುಪಿಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!