Yuvavahini

ಘಟಕಗಳು

ಅನ್ನಪೂರ್ಣೇಶ್ವರಿ ದೇವಳಕ್ಕೆ ಹೊರೆಕಾಣಿಕೆ

ಬಂಟ್ವಾಳ : ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು ನಡೆದ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಹೊರೆಕಾಣಿಕೆ ನೀಡಿ, ಘಟಕದ ಸದಸ್ಯರು ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ಇವರು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ ಇವರನ್ನು ದೇವಳದ ವತಿಯಿಂದ ಗೌರವಿಸಲಾಯಿತು.

Read More

ದೇವಸ್ಥಾನದಲ್ಲಿ ಸ್ವಯಂಸೇವೆ

ಮೂಡಬಿದಿರೆ: ಶ್ರೀ ಕ್ಷೇತ್ರ ಕಲ್ಲಬೆಟ್ಟು , ಶ್ರೀ ಮಹಮ್ಮಾಯಿ ದೇವಸ್ಥಾನ ಮೂಡಬಿದಿರೆ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 15-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕ ದ ಸುಮಾರು 15 ಸದಸ್ಯರು, ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.

Read More

ಉರ್ವ ಮಾರಿಗುಡಿ ಕ್ಷೇತ್ರದಲ್ಲಿ ಸ್ವಯಂ ಸೇವೆ

ಮಂಗಳೂರು :ಉರ್ವ ಮಾರಿಗುಡಿ ಕ್ಷೇತ್ರ ಇದರ ಪುನರ್ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ ಸಂದರ್ಭ ದಿನಾಂಕ 14/02/2024 ಬುಧವಾರದಂದು ಮಧ್ಯಾಹ್ನ 12.00 ರಿಂದ 3.00 ಗಂಟೆಯವರೆಗೆ ಯುವವಾಹಿನಿ (ರಿ.) ಕೂಳೂರು ಘಟಕದ ಸದಸ್ಯರು ಅನ್ನದಾನ ಸೇವೆಯಲ್ಲಿ ಭಾಗಿಯಾದರು. ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ್ ಪೂಜಾರಿ, ಮಾಜಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ದೀಕ್ಷಿತ್ ಸಿ ಎಸ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಪದಾಧಿಕಾರಿಗಳು ಮತ್ತು ಸುಮಾರು 30 ಸದಸ್ಯರು ಅನ್ನ […]

Read More

ಸಂಘಟನಾತ್ಮಕವಾಗಿ ದಿನೇ ದಿನೇ ಬಲಿಷ್ಠವಾಗುತ್ತಿರುವ ಕೊಲ್ಯ ಘಟಕ : ಹರೀಶ್ ಕೆ. ಪೂಜಾರಿ

ಕೊಲ್ಯ: ಶಿಸ್ತಿಗೆ ಹೆಸರಾದ ಕೊಲ್ಯ ಘಟಕವು ಹೊಸ ಸದಸ್ಯರ ಸೇರ್ಪಡೆಯೊಂದಿಗೆ ಇನ್ನಷ್ಟು ಬಲಿಷ್ಠವಾಗುತ್ತಿದೆ. ಕೊಲ್ಯ ಘಟಕವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು ವಿದ್ಯೆ, ಉದ್ಯೋಗ, ಸಂಪರ್ಕ ನಿಟ್ಟಿನಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳು ಜನರಿಗೆ ತಲುಪುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ‌. ಪೂಜಾರಿ ತಿಳಿಸಿದರು. ಫೆಬ್ರವರಿ 25 ರಂದು ನಡೆಯುವ ಉಳ್ಳಾಲ ವಲಯದ ಬಿಲ್ಲವ ಸಮಾವೇಶದ ಸಿದ್ಧತೆಯಲ್ಲಿ ಕೊಲ್ಯ ಯುವವಾಹಿನಿ ಸದಸ್ಯರು ತಮ್ಮನ್ನು ತೊಡಗಿಸಿದುರ ಬಗ್ಗೆ ಮಾಹಿತಿ ಪಡೆದು ಸಮ್ಮೇಳನದ ಯಶಸ್ವಿಗೆ ಶುಭ ಹಾರೈಸಿದರು. […]

Read More

ಮುನ್ನುಡಿ : ಮುಂದಿನ ಪಯಣಕ್ಕಾಗಿ

ಬೆಳ್ತಂಗಡಿ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ 13/02/2024 ಮಂಗಳವಾರದಂದು ಯುವವಾಹಿನಿಯ ಪದಾಧಿಕಾರಿಗಳಿಗೆ ಹಾಗೂ ಸಂಘಟನೆ ಕಾರ್ಯದರ್ಶಿಗಳಿಗೆ ಮುನ್ನುಡಿ ಮುಂದಿನ ಪಯಣಕ್ಕಾಗಿ ಎಂಬ ಶೀರ್ಷಿಕೆಯಡಿಯ ಕಾರ್ಯಕ್ರಮವು ಬೆಳ್ತಂಗಡಿಯ ಗುರು ನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು. ತರಬೇತಿಯನ್ನು ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್. ಕೆ, ನಿಕಟ ಪೂರ್ವ ಅಧ್ಯಕ್ಷರಾದ ಅಶ್ವತ್ ಕುಮಾರ್ ಇವರು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸದಾಶಿವ ಇವರು ವಹಿಸಿದ್ದರು. ತರಬೇತಿಯಲ್ಲಿ ಮಾಜಿ ಅಧ್ಯಕ್ಷರು, ಸಲಹೆಗಾರರು, ನಿರ್ದೇಶಕರು, […]

Read More

ಉದ್ಯಮಶೀಲತಾ ಅಭಿವೃದ್ಧಿ ಉಚಿತ ತರಬೇತಿ ಕಾರ್ಯಾಗಾರ

ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಸಹಯೋಗದಲ್ಲಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಉಚಿತ ತರಬೇತಿ ಕಾರ್ಯಾಗಾರವು 13/2/2024 ರಿಂದ 22/2/2024 ರವರೆಗೆ ಜರುಗಿತು. ಉದ್ಯಮಶೀಲತಾ ತರಬೇತಿಯ ಕಾರ್ಯಾಗಾರವನ್ನು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಡಿ’ಸೋಜ ಉದ್ಘಾಟಿಸಿದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕ ಅಧ್ಯಕ್ಷರು […]

Read More

ಯುವವಾಹಿನಿ ಪುತ್ತೂರು ಘಟಕದಿಂದ ಅಂಗನವಾಡಿ ಕೇಂದ್ರಕ್ಕೆ ಡಿಜಿಟಲ್ ಸ್ಕೇಲ್ ವಿತರಣೆ

ಪುತ್ತೂರು: ಯುವವಾಹಿನಿ(ರಿ.) ಪುತ್ತೂರು ಘಟಕದ ಆಶ್ರಯದಲ್ಲಿ ನೈತಾಡಿ ಅಂಗನವಾಡಿ ಕೇಂದ್ರಕ್ಕೆ ಮತ್ತು ಪರ್ಪುoಜ ಅಂಗನವಾಡಿ ಕೇಂದ್ರಕ್ಕೆ ಡಿಜಿಟಲ್ ಸ್ಕೇಲನ್ನು ದಿನಾಂಕ 13/02/2024 ರಂದು ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷರಾದ ಜಯರಾಮ್ ಬಿ ಏನ್, ಕಾರ್ಯದರ್ಶಿ ಸಮಿತ್ ಪಿ ಹಾಗೂ ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ದೀಕ್ಷಿತ್, ನೈತಾಡಿ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ರೇಷ್ಮಾ, ಸಹಾಯಕಿ ಶೃತಿ ಹಾಗೂ ಪರ್ಪುoಜ ಅಂಗನವಾಡಿ ಕಾರ್ಯಕರ್ತೆ ಯಮುನಾ ಮತ್ತು ಸಹಾಯಕಿ ರೇಖಾ ಹಾಗೂ ಅಂಗನವಾಡಿ ಮಕ್ಕಳು […]

Read More

ಬಿ.ಸಿ.ರೋಡ್ ಅನ್ನಪೂರ್ಣೇಶ್ವರಿ ದೇವಳದಲ್ಲಿ ಶ್ರಮದಾನ

ಬಂಟ್ವಾಳ: ಬ್ರಹ್ಮಕಲಶೋತ್ಸವದ ಸುಸಂದರ್ಭದಲ್ಲಿ ಬಿ.ಸಿ.ರೋಡ್ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದಿನಾಂಕ 11.02.2024 ರಂದು ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಕಾರ್ಯದರ್ಶಿ ನಿಕೇಶ್ ಕೋಟ್ಯಾನ್, ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Read More

ದೇವಸ್ಥಾನದಲ್ಲಿ ಸ್ವಯಂ ಸೇವೆ

ಮೂಡಬಿದಿರೆ:  ಶ್ರೀ ಆದಿಶಕ್ತಿ ದುರ್ಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಕಂದಿರು ಶಿರ್ತಾಡಿ ಇದರ ವಾರ್ಷಿಕ ಪೂಜಾ ಮಹೋತ್ಸವದ ಪ್ರಯುಕ್ತ ದಿನಾಂಕ 12-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಸುಮಾರು 10 ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ(ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.

Read More

ಯುವವಾಹಿನಿ (ರಿ.) ಕೂಳೂರು ಘಟಕ ಸ್ನೇಹ ಸಮ್ಮಿಲನ 2024

ಯುವವಾಹಿನಿ (ರಿ.) ಕೂಳೂರು ಘಟಕದ ಮೂರು ಧ್ಯೇಯಗಳಲ್ಲಿ ಒಂದಾದ ಸಂಪರ್ಕ ಇದರ ನೆಲೆಯಲ್ಲಿ ಯುವವಾಹಿನಿ ಸದಸ್ಯರ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ದಿನಾಂಕ 11-02-2024 ಆದಿತ್ಯವಾರದಂದು ಸ್ನೇಹ ಸಮ್ಮಿಲನ 2024 ಕಾರ್ಯಕ್ರಮವನ್ನು Relax leisure park ಬ್ರಹ್ಮಾವರದಲ್ಲಿ ಆಯೋಜಿಸಲಾಗಿತ್ತು. ಬೆಳಿಗ್ಗೆ 7.45 ಗಂಟೆಗೆ ಸರಿಯಾಗಿ ನಮ್ಮ ಬಸ್ಸಿನ ಸಾರಥಿ ನಮ್ಮನ್ನೆಲ್ಲ ಕೂರಿಸಿಕೊಂಡು ಕೂಳೂರಿನಿಂದ ಹೊರಟು 9.30 ಗೆ ರೆಸಾರ್ಟ್ ತಲುಪಿದೆವು. ಅಲ್ಲಿ ಬೆಳಗ್ಗಿನ ಉಪಹಾರ ಮುಗಿಸಿ ಅಲ್ಲಿಂದ ಬೋಟ್ ಮೂಲಕ island ತಲುಪಿದೆವು. ಬೋಟ್ ನಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!