08-10-2024, 10:02 AM
ಉಪ್ಪಿನಂಗಡಿ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತ ಕುದ್ರೋಳಿ ಗೋಕರ್ಣನಾಥ- ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವದ ಸುಸಂದರ್ಭದಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆ ಪ್ರಯುಕ್ತ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಎಂಡೋ ಪೀಡಿತ, ಅಶಕ್ತ ಮಕ್ಕಳ ಮನೆಗಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಗ್ರೀಷ್ಮ ಬೆದ್ರೋಡಿ, ಪ್ರಜ್ಞಾ ವಳಾಲು, ರೂಪೇಶ್ ಮಣ್ಣಂಗಳ- ವಳಾಲು, ಸುರೇಶ್ ಕಾಂಚನ ಕ್ರಾಸ್ ಬಳಿ ಮತ್ತು ಪ್ರತೀಕ್ ಶಿವಾರು […]
Read More
06-10-2024, 4:59 PM
ಬೆಂಗಳೂರು : ಘಟಕದ ಒಂದು ದಿನದ ಪ್ರವಾಸ ಕಾರ್ಯ ಯೋಜನೆಯು ದಿನಾಂಕ ಅಕ್ಟೋಬರ್ 6 ಆದಿತ್ಯವಾರದಂದು ಯಶಸ್ವಿಯಾಗಿ ನಡೆಯಿತು. ಈ ಪ್ರವಾಸದಲ್ಲಿ ಘಟಕದ ಸದಸ್ಯರು ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿ, ಮಠಾಧೀಶರಾದ ರಾಮನಗರ ಜಿಲ್ಲೆಯ ಸೋಲೂರು ಮಠ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನ ಮತ್ತು ಎಡಿಯೂರು ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಗಳಿಗೆ ಭೇಟಿಕೊಟ್ಟು ಶ್ರೀದೇವರ ದರ್ಶನವನ್ನು ಮಾಡಿದರು. ಬೆಳಿಗ್ಗೆ 9:00ಗೆ ಬೆಂಗಳೂರಿನ ಜೆಪಿ ನಗರದಿಂದ ಬಸ್ ಮೂಲಕ ಬಾಂಧವ್ಯದ ಪಯಣ ಆರಂಭಗೊಂಡಿತು. ಸದಸ್ಯರು, ಪದಾಧಿಕಾರಿಗಳು ಸೇರಿ ಒಟ್ಟು […]
Read More
04-10-2024, 2:28 PM
ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ವತಿಯಿಂದ ದಿನಾಂಕ 04-10-2024 ಶುಕ್ರವಾರದಂದು ಕೋಶಾಧಿಕಾರಿ ನಿರ್ಮಲರವರ ಮನೆಯಲ್ಲಿ ದುರ್ಗಾ ಪೂಜೆ ಪ್ರಯುಕ್ತ ಭಜನಾ ಸೇವೆ ಯುವವಾಹಿನಿ ಸದಸ್ಯರಿಂದ ಜರುಗಿತು. ಭಕ್ತಿ ಪ್ರಧಾನವಾದ ಈ ಕಾರ್ಯಕ್ರಮದಲ್ಲಿ ದುರ್ಗಾಪೂಜೆ, ಭಜನಾ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ಜರಗಿತ್ತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು, ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Read More
04-10-2024, 9:58 AM
ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ವತಿಯಿಂದ ದಿನಾಂಕ 04-10-2024 ಶುಕ್ರವಾರದಂದು ಕೋಶಾಧಿಕಾರಿ ನಿರ್ಮಲರವರ ಮನೆಯಲ್ಲಿ ದುರ್ಗಾ ಪೂಜೆ ಪ್ರಯುಕ್ತ ಭಜನಾ ಸೇವೆ ಯುವವಾಹಿನಿ ಸದಸ್ಯರಿಂದ ಜರುಗಿತು. ಭಜನಾ ಸೇವೆಯಲ್ಲಿ ಘಟಕದ ಸದಸ್ಯರು, ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಪಾಲ್ಗೊಂಡರು. ಭಜನೆಯ ನಂತರ ಊಟದ ವ್ಯವಸ್ಥೆ ಮಾಡಲಾಗಿತ್ತು.
Read More
02-10-2024, 5:21 PM
ಕುಳಾಯಿ : ಮಹಿಳಾ ಮಂಡಲ (ರಿ) ಕುಳಾಯಿ ಮತ್ತು ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗ ಇದರ ಸಹಯೋಗದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಡಾಕ್ ಚೌಪಾಲ್-ಅಂಚೆ ಜನ ಸಂಪರ್ಕ ಅಭಿಯಾನ ಮೂಲಕ ಆಧಾರ್ ನೋಂದಣಿ ಹಾಗೂ ತಿದ್ದುಪಡಿ, ಪಾನ್ ಕಾರ್ಡ್, ಪಾಸ್ ಪೋರ್ಟ್, ಅಪಘಾತ ವಿಮಾ ಹಾಗೂ ಅಂಚೆ ಉಳಿತಾಯ ಯೋಜನೆಯ ಶಿಬಿರವು ಮಹಿಳಾ ಮಂಡಲ ಕುಳಾಯಿ ಸಭಾಂಗಣದಲ್ಲಿ 02-10-2024ರಂದು ಬುಧವಾರ ಜರಗಿತು. […]
Read More
02-10-2024, 3:01 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ 28ನೇ ಸ್ವಚ್ಛತಾ ಅಭಿಯಾನವು ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪರಪಾದೆ ಆಕಾಶಭವನ ಇಲ್ಲಿ ದಿನಾಂಕ 02-10-2024 ಬುಧವಾರದಂದು ಬೆಳಿಗ್ಗೆ 8.30ಕ್ಕೆ ಸರಿಯಾಗಿ ಪ್ರಾರಂಭಗೊಂಡಿತು. ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ದೀಕ್ಷಿತ್ ಸಿ ಎಸ್, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ್ ಪೂಜಾರಿ, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಪ್ರಥಮ ಉಪಾಧ್ಯಕ್ಷರಾದ ಲತೀಶ್ ಪೂಜಾರಿ, ಕಾರ್ಯದರ್ಶಿ […]
Read More
30-09-2024, 2:43 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಕಾನೂನು, ರಾಜಕೀಯ, ಮನಶಾಸ್ತ್ರ, ವಿಚಾರವಾದ ಕುರಿತಾದ ಯುವ ಮನಸುಗಳ ಸಂವಾದ ಕಾರ್ಯಕ್ರಮ ದಿನಾಂಕ 30-09-2024 ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಜಿಲ್ಲಾಧಿಕಾರಿ ಶ್ರೀ ಮುಲೈ ಮುಹಿಲನ್ ಎಂ.ಪಿ ನೆರವೇರಿಸಿ, ವಿದ್ಯಾರ್ಥಿಗಳು ಇತಿಹಾಸವನ್ನು ಅರಿತುಕೊಳ್ಳಬೇಕು ಮತ್ತು ಇತಿಹಾಸ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ಸತ್ಯ ಮತ್ತು ಸುಳ್ಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ನುಡಿದರು. ರಾಜಕೀಯ ಮನೆಯಿಂದಲೇ ಆರಂಭವಾಗುತ್ತದೆ. ಪ್ರತಿಯೊಂದು ಅವಕಾಶವು ರಾಜಕೀಯ, ವಿಚಾರವಾದ, […]
Read More
29-09-2024, 5:08 PM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಸಭಾಂಗಣದಲ್ಲಿ ಘಟಕದ ಅಧ್ಯಕ್ಷರು ಶ್ರೀಮತಿ ಅಮಿತಾಂಜಲಿ ಕಿರಣ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ 29-09-2024 ರಂದು ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕರು ಶ್ರೀಮತಿ ಸುಲೋಚನಾ ಪಚ್ಚಿನಡ್ಕ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ಮುಂದಿನ ದಿನಗಳಲ್ಲಿ ಸಂಘಟನೆಗಳೊಂದಿಗೆ ಬೆರೆತು ಸಮಾಜಮುಖಿ ಕೆಲಸ ಮಾಡುವಂತೆ ಸಲಹೆ ನೀಡಿದರು. ಹನ್ನೊಂದು […]
Read More
28-09-2024, 8:15 AM
ಕೂಳೂರು : ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದತೀರ್ಥ ಸ್ವಾಮೀಜಿ ಶಿವಗಿರಿ ಮಠ ಕೇರಳ ಇವರ ಮಾರ್ಗದರ್ಶನದೊಂದಿಗೆ ಹರೀಶ್ ಪೂಜಾರಿ ಮಂಗಳೂರು ಇವರ ಸಹಕಾರದಿಂದ ಶಿವಗಿರಿ ತೀರ್ಥ ಯಾತ್ರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದ ಹಾಗೂ ಗುರುಹಿರಿಯರ ಆಶೀವಾ೯ದ ದೊಂದಿಗೆ 50 ಮಂದಿ ಸದಸ್ಯರು, ಬಂಧುಮಿತ್ರರು ಒಟ್ಟಾಗಿ ದಿನಾಂಕ 28-9-2024 ನೇ ಶನಿವಾರ ಸಂಜೆ 5.30ಕ್ಕೆ ಮಾವೇಲಿ ಎಕ್ಸ್ಪ್ರೆಸ್ ನಲ್ಲಿ ಪ್ರಯಾಣ ಆರಂಭವಾಯಿತು. ರಾತ್ರಿ ರೈಲಿನಲ್ಲಿ ರುಚಿಯಾದ ಊಟವನ್ನು ಮಾಡಿ, ಮಾರನೇ ದಿನ ಬೆಳಿಗ್ಗೆ 29-09-2024 […]
Read More
27-09-2024, 3:30 PM
ಬಂಟ್ವಾಳ : ತ್ರಿಭಾಷಾ ಸೂತ್ರದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ ಎಂದು ಪ್ರತಿಪಾದಿಸಿ, ಮಹಿಳೆಯರಿಗೆ ಕರಕುಶಲ ಸ್ವಾವಲಂಬಿ ಬದುಕು ಕಟ್ಟುವಲ್ಲಿ ಉತ್ತೇಜನ ನೀಡಿದ ನಾರಾಯಣ ಗುರುಗಳು ಜಗದ ಪರಿವರ್ತನೆಯ ಹರಿಕಾರರು ಎಂದು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರಾ ಗುರುಸಂದೇಶ ನೀಡಿದರು. ಅವರು ದಿ. 27-09-2024 ರಂದು ರಾಕೇಶ್ ಜತ್ತನ್ ರಾಯಿ ಇವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13 ನೇ ಮಾಲಿಕೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ […]
Read More