16-05-2026, 9:00 PM
ಬಜಪೆ : ಶನೀಶ್ವರ ಜಯಂತಿ ಪ್ರಯುಕ್ತ ದಿನಾಂಕ 16.05.2026 ರಂದು ಶ್ರೀ ಶನೀಶ್ವರ ದೇವಸ್ಥಾನದಲ್ಲಿ ವಿಶೇಷ ಭಜನಾ ಸಂಕೀರ್ತನೆ ಹಾಗೂ ಸ್ವಯಂಸೇವಾ ಕಾರ್ಯಕ್ರಮಗಳು ಅತ್ಯಂತ ಭಕ್ತಿ-ಭಾವದಿಂದ ಜರಗಿದವು. ಬೆಳಿಗ್ಗೆ 6.30 ರಿಂದ 8.00 ಗಂಟೆಯವರೆಗೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಹಾಗೂ ಯುವವಾಹಿನಿ ಬಜಪೆ ಘಟಕದ ಸದಸ್ಯರ ಜಂಟಿ ಆಶ್ರಯದಲ್ಲಿ ಸುಶ್ರಾವ್ಯ ಭಜನಾ ಸಂಕೀರ್ತನೆ ಭಕ್ತಿಪೂರ್ವಕವಾಗಿ ನೆರವೇರಿತು. ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡ ಸದಸ್ಯರು ಕ್ಷೇತ್ರದಲ್ಲಿ ಮುಂಜಾನೆಯಿಂದ ಸಂಜೆಯವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಹಾಗೂ ವಿಶೇಷ ಪೂಜಾ […]
Read More
16-05-2026, 7:00 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ: 14-05-2026 ರಿಂದ 16-05-2026 ರವರೆಗೆ ಆಯೋಜಿಸಲಾಗಿದ್ದ ಮೂರು ದಿನಗಳ ‘ಶಿವಗಿರಿ ಯಾತ್ರೆ’ಯು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಆಧ್ಯಾತ್ಮಿಕ ಅನುಭೂತಿ ನೀಡಿದ ಯಾತ್ರೆ : ಘಟಕದ ಪ್ರವಾಸ ಸಂಚಾಲಕರಾದ ಸದಾನಂದ ಪೂಜಾರಿ ಕುಳಾಯಿ ಅವರು ಯಾತ್ರಾರ್ಥಿಗಳಿಗೆ ಶಿವಗಿರಿ ಕ್ಷೇತ್ರದ ಇತಿಹಾಸ, ಮಹಿಮೆ ಮತ್ತು ಮಹತ್ವವನ್ನು ಮನವರಿಕೆ ಮಾಡಿಕೊಡುತ್ತಾ ಸುಸೂತ್ರವಾಗಿ ಕ್ಷೇತ್ರ ದರ್ಶನ ಮಾಡಿಸಿದರು. ಈ ಆಧ್ಯಾತ್ಮಿಕ ಪ್ರವಾಸದಲ್ಲಿ ಒಟ್ಟು 53 ಹಿರಿಯರು ಹಾಗೂ 7 ಮಕ್ಕಳು ಸೇರಿದಂತೆ […]
Read More
15-05-2026, 9:00 PM
ಕೂಳೂರು, ಮೇ 15: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮವು 15-05-2026 ರಂದು ಘಟಕದ ಮಾರ್ಗದರ್ಶಕರಾದ ಜಯಾನಂದ ಅಮೀನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನೆರವೇರಿತು.ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಕ್ತಿಗೀತೆಗಳ ಮೂಲಕ ಆಧ್ಯಾತ್ಮಿಕ ವಾತಾವರಣ ನಿರ್ಮಿಸಿದರು. ಈ ಸಂದರ್ಭದಲ್ಲಿ ಆತಿಥ್ಯ ವಹಿಸಿದ್ದ ಜಯಾನಂದ ಅಮೀನ್ ದಂಪತಿಗಳನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ ಅವರು ಶಾಲು ಹೊದಿಸಿ, […]
Read More
15-05-2026, 10:00 AM
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಯುವವಾಹಿನಿ ಸಂಸ್ಥೆಯ ನಿಯೋಗ ಇತ್ತೀಚೆಗೆ ಭೇಟಿಯಾಗಿ, ಸಂಸ್ಥೆಯ ವತಿಯಿಂದ ಗೌರವಪೂರ್ವಕ ಕೃತಜ್ಞತಾ ಪತ್ರವನ್ನು ಹಸ್ತಾಂತರಿಸಿದರು. ಯುವವಾಹಿನಿ ಸಂಸ್ಥೆಯು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದ ‘ಡೆನ್ನಾನ ಡೆನ್ನನ’ ಸಾಂಸ್ಕೃತಿಕ ಹಬ್ಬದಲ್ಲಿ ಸಂಸದರು ಸಕ್ರಿಯವಾಗಿ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಆರ್ಥಿಕ ಸಹಕಾರವನ್ನು ನೀಡಿದ್ದರು. ಅವರ ಈ ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಈ ಭೇಟಿಯನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಹೆಮ್ಮೆಯ ನಡೆ […]
Read More
14-05-2026, 9:00 PM
ಕೋಟೆಕಾರ್: ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ದಿನಾಂಕ 14-05-2026 ನೇ ಗುರುವಾರ ಸಾಯಂಕಾಲ 7 ಗಂಟೆಗೆ, ನೆತ್ತಿಲ ಕೋಟೆಕಾರಿನಲ್ಲಿರುವ ಘಟಕದ ಕಾರ್ಯದರ್ಶಿ ಸೌಮ್ಯ ಯೋಗೀಶ್ ರವರ ಗೃಹದಲ್ಲಿ ಗುರು ಸ್ಮರಣೆ-ಗುರು ಭಜನೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಯೋಗೀಶ್ ಕೋಟೆಕಾರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಭಕ್ತಿಪೂರ್ವಕ ಚಾಲನೆ ನೀಡಿದರು. ಘಟಕದ ಸದಸ್ಯರಿಂದ ಸುಮಧುರ ಗುರು ಭಜನಾ ಸಂಕೀರ್ತನೆ ನೆರವೇರಿತು.ಭಜನೆಯ ಬಳಿಕ ಗುರುಗಳಿಗೆ ಮಹಾಪೂಜೆ ನಡೆದು, ಕಾಫಿ ತೀರ್ಥ ಪ್ರಸಾದ ವಿತರಿಸಲಾಯಿತು. ಘಟಕದ ಮಾಜಿ […]
Read More
14-05-2026, 8:00 PM
ಉಡುಪಿ: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ‘ಗುರು ಸತ್ಸಂಗ’ ಕಾರ್ಯಕ್ರಮವು ಬಲಯಿಪಾದೆಯ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಪ್ರೀತ್ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಜರುಗಿತು. ದೀಪ ಪ್ರಜ್ವಲನೆ ಮತ್ತು ಗುರು ಸಂದೇಶ:ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ವಿನೋದ್ ಮಂಚಿ ಅವರು ಜಂಟಿಯಾಗಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಭಕ್ತಿಪೂರ್ವಕ ‘ಗುರು ಸತ್ಸಂಗ […]
Read More
12-05-2026, 9:00 PM
ವಿಟ್ಲ : ದಿನಾಂಕ 12/05/2026 ಮಂಗಳವಾರದಂದು ಯುವವಾಹಿನಿ ಘಟಕದ ವತಿಯಿಂದ ಹೊನ್ನಾವರದಲ್ಲಿರುವ ಜಾಲಿ ಆಂಡ್ ಜಾಲಿ ವಾಟರ್ ಪಾರ್ಕ್ಗೆ ಮನರಂಜನಾ ಪ್ರವಾಸವನ್ನು ಆಯೋಜಿಸಲಾಯಿತು. ಈ ಪ್ರವಾಸದಲ್ಲಿ ಘಟಕದ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಸೇರಿದಂತೆ ಒಟ್ಟು 41 ಮಂದಿ ಭಾಗವಹಿಸಿದ್ದರು. ಬೆಳಗ್ಗಿನಿಂದಲೇ ಉತ್ಸಾಹಭರಿತವಾಗಿ ಆರಂಭವಾದ ಈ ಪ್ರವಾಸದಲ್ಲಿ ಸದಸ್ಯರು ವಿವಿಧ ಜಲಕ್ರೀಡೆಗಳು ಹಾಗೂ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತೋಷವನ್ನು ಹಂಚಿಕೊಂಡರು. ಪ್ರವಾಸದ ಅವಧಿಯು ಸ್ನೇಹ, ಸಹಕಾರ ಮತ್ತು ಸಂಘಟನಾ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಂತಾಗಿತ್ತು. ಎಲ್ಲಾ ಸದಸ್ಯರು ಸಂತೋಷ ಹಾಗೂ […]
Read More
12-05-2026, 1:00 PM
ಮೂಡಬಿದಿರೆ : ಯುವವಾಹಿನಿ (ರಿ.) ಮೂಡಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (BVT) ಮಣಿಪಾಲ ಹಾಗೂ ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ, ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಸಹಕಾರದೊಂದಿಗೆ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾದ 15 ದಿನಗಳ ‘ಉಚಿತ ಫ್ಯಾಷನ್ ಡಿಸೈನ್ ತರಬೇತಿ’ ಕಾರ್ಯಕ್ರಮವು ದಿನಾಂಕ 12.05.2026 ರ ಮಂಗಳವಾರದಂದು ಇಲ್ಲಿನ ಸಮಾಜ ಮಂದಿರದಲ್ಲಿ ದೀಪ ಪ್ರಜ್ವಲನೆಗಳೊಂದಿಗೆ ಸಡಗರದಿಂದ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ (ರಿ.) ಮೂಡಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು, “ಇಂದಿನ ದಿನಗಳಲ್ಲಿ ಮಹಿಳೆಯರು […]
Read More
11-05-2026, 9:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 11-05-2026 ರಂದು ಸಂಜೆ 5.30 ಗಂಟೆಗೆ ಶ್ರೀ ತ್ರಯಂಬಕ ಭಜನಾ ಮಂಡಳಿ ಸುರತ್ಕಲ್ ಇವರ ಸಹಯೋಗದೊಂದಿಗೆ ನಡೆಯಿತು. ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
10-05-2026, 7:00 PM
ಕುಪ್ಪೆಪದವು : “ನಾರಾಯಣ ಗುರುಗಳ ತತ್ವದಂತೆ ‘ವಿದ್ಯೆ–ಉದ್ಯೋಗ–ಸಂಪರ್ಕ’ ಎಂಬ ಧ್ಯೇಯೋದ್ದೇಶದೊಂದಿಗೆ ರಾಜ್ಯವ್ಯಾಪಿ ಬೆಳೆಯುತ್ತಿರುವ ಯುವವಾಹಿನಿ ಸಂಸ್ಥೆಯು, ಯುವಶಕ್ತಿಯನ್ನು ಸಮಾಜಸೇವೆಯತ್ತ ಕೊಂಡೊಯ್ಯುತ್ತಿರುವುದು ಹೆಮ್ಮೆಯ ವಿಚಾರ,” ಎಂದು ಶಾಸಕರಾದ ವೈ ಭರತ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ವಿದ್ಯಾನಿಧಿ ಸಹಾಯಾರ್ಥವಾಗಿ ಕಿಲೆಂಜಾರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಘಟಕವು ಯುವಜನರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಅವರು ಶ್ಲಾಘಿಸಿದರು. ಪಂದ್ಯಕೂಟವನ್ನು ಕಿಲೆಂಜಾರು ಅರಮನೆ […]
Read More