03-05-2026, 5:00 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಅಧ್ಯಕ್ಷರಾದ ನಿತಿನ್ ಕರ್ಕೇರ ಇವರ ನೇತೃತ್ವದಲ್ಲಿ , ಕೇಂದ್ರ ಸಮಿತಿಯ ಮಾಜಿ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರು ಹಾಗೂ ಘಟಕದ ಮಾಜಿ ಅಧ್ಯಕ್ಷರೂ ಆಗಿರುವ ಮೋಹನ್ ಮಾಡೂರ್ ಇವರ ಮಾರ್ಗದರ್ಶನದಡಿಯಲ್ಲಿ ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕಿ ಅಶ್ವಿತಾ ಹರೀಶ್ ಕುಂಪಲ ಅವರ ಸಂಘಟನೆಯೊಂದಿಗೆ ಒಟ್ಟು 54 ಯಾತ್ರಾರ್ಥಿಗಳ ತಂಡ ದಿನಾಂಕ 30.04.2026ನೇ ಗುರುವಾರ ಸಂಜೆ 5.20ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಶಿವಗಿರಿ ಕ್ಷೇತ್ರಕ್ಕೆ ಪ್ರಯಾಣ ಆರಂಭಿಸಿತು. […]
Read More
29-04-2026, 1:30 PM
ಬಜಪೆ : ದಿನಾಂಕ 29.04.2026 ರಂದು ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಬಜಪೆ ಇಲ್ಲಿ ನಡೆದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ, ಉರಿಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಈ ಸಮಯದಲ್ಲಿ ದೇವಿಯ ದರ್ಶನಕ್ಕಾಗಿ ಆಗಮಿಸಿದ ಭಕ್ತರಿಗೆ ತಂಪಾದ ಪಾನಕವನ್ನು ವಿತರಿಸುವ ಸೇವೆಯನ್ನು ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ನೆರವೇರಿಸಲಾಯಿತು. ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಹಾಗೂ ಜ್ಯೋತಿ ನಾರಾಯಣ ಪೂಜಾರಿ ಅವರು ಪಾನಕ ಸೇವೆಗೆ ಚಾಲನೆ ನೀಡಿದರು. ಯುವವಾಹಿನಿ ಬಜಪೆ ಘಟಕವು […]
Read More
28-04-2026, 8:00 PM
ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಸುಂಕದಕಟ್ಟೆ, ಬಜಪೆ ಇಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಭಜನಾ ಸಂಕೀರ್ತನೆ ಕಾರ್ಯಕ್ರಮವು ಭಕ್ತಿ ಭಾವದಿಂದ ನೆರವೇರಿತು. ದಿನಾಂಕ 28-04-2026, ಮಂಗಳವಾರ ಸಂಜೆ 5.00ರಿಂದ 8.00 ಗಂಟೆಯವರೆಗೆ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ, ಭಜನಾ ಸಂಚಾಲಕರಾದ ದಿವ್ಯ ಸುನಿಲ್, ಸಹ ಸಂಚಾಲಕರಾದ ವಿನೋದ ಪೂಜಾರಿ, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದು […]
Read More
27-04-2026, 9:00 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 27-04-2026 ರಂದು ಸಂಜೆ 5.30 ಗಂಟೆಗೆ ಯುವವಾಹಿನಿ (ರಿ.) ಸುರತ್ಕಲ್ ಘಟಕ ಇವರ ಸಹಯೋಗದೊಂದಿಗೆ ನಡೆಯಿತು. ಮಂಗಳೂರು ಹಾಗೂ ಸುರತ್ಕಲ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Read More
26-04-2026, 1:00 PM
ಬಜಪೆ: ಯುವವಾಹಿನಿ ಬಜಪೆ ಘಟಕವು ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವುದರ ಜೊತೆಗೆ ಪ್ರತಿ ವರ್ಷವೂ ಹಿಂದೂ ಸಂಪ್ರದಾಯದ ಬಿಸು ಹಬ್ಬವನ್ನು ಆಚರಿಸುತ್ತ ಬರುತ್ತಿರುವುದು ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ತಿಳಿಸುವಲ್ಲಿ ಉತ್ತೇಜನ ನೀಡುವಂತಾಗಿದೆ. ಬಿಸು ಪರ್ಬದಂತಹ ಹಬ್ಬಗಳು ನಮ್ಮ ಪರಂಪರೆಯನ್ನು ಜೀವಂತವಾಗಿರಿಸುತ್ತವೆ ಎಂದು ಬಜಪೆ ಶನೀಶ್ವರ ದೇವಸ್ಥಾನದ ಅರ್ಚಕರಾದ ಅಭಿಜಿತ್ ಆನಂದ್ ಅವರು ಹೇಳಿದರು. ಅವರು ಏಪ್ರಿಲ್ 26, 2026 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆ ಇಲ್ಲಿ ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ […]
Read More
25-04-2026, 10:00 PM
ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಶಿವಗಿರಿ ಹಾಗೂ ಇತರ ಪುಣ್ಯಕ್ಷೇತ್ರಗಳಿಗೆ ಎರಡು ದಿನಗಳ ಯಾತ್ರೆ ಆಯೋಜಿಸಲಾಯಿತು. ಯಾತ್ರೆಯ ಮೊದಲ ದಿನ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಪೀಠ, ತಪೋಭೂಮಿ ಸಮಾಧಿ ಸ್ಥಳ, ಗುರುಗಳು ಜನಿಸಿದ ಚೆಂಬಳಂತಿ, ಕುನ್ನುಂಪಾರೆ ಬಾಲಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಗುರುಗಳು ಪ್ರಥಮವಾಗಿ ಪ್ರತಿಷ್ಠಾಪಿಸಿದ ಅರಿವಿಪುರ ಶಿವ ದೇವಸ್ಥಾನಗಳಿಗೆ ಭೇಟಿ ನೀಡಲಾಯಿತು. ಬಳಿಕ ಕನ್ಯಾಕುಮಾರಿ ದೇವಸ್ಥಾನಕ್ಕೂ ಭೇಟಿ ನೀಡಲಾಯಿತು. ಮುಂದುವರಿದಂತೆ, ಗುರುಗಳು ಸುಮಾರು ಆರು ವರ್ಷ ತಪಸ್ಸು ಮಾಡಿ ಸಿದ್ಧಿ […]
Read More
25-04-2026, 4:00 PM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆರ್ಗ್ಯಾನಿಕ್ ಕೋನ್ ತಯಾರಿಕಾ ತರಬೇತಿ ಕಾರ್ಯಗಾರವು ದಿನಾಂಕ 25-04-2026 ರಂದು ಸಂಜೆ 4 ಗಂಟೆಗೆ ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಮೆಹೆಂದಿ ಕೋನ್ ತಯಾರಿಸುವ ಸರಿಯಾದ ವಿಧಾನಗಳ ಕುರಿತು ತರಬೇತುದಾರರಾಗಿ ಆಗಮಿಸಿದ ಪ್ರಾರ್ಥನಾ ಅವರು ಸಮಗ್ರ ಮಾಹಿತಿ ನೀಡಿದರು. ಬಳಿಕ ಕೋನ್ ತಯಾರಿಸುವ ವಿಧಾನ ಹಾಗೂ ಕೋನ್ ಫಿಲ್ಲಿಂಗ್ ಮಾಡುವ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ತೋರಿಸಿ ಮಾರ್ಗದರ್ಶನ ನೀಡಿದರು. ಉತ್ತಮ ಹಾಗೂ ಉಪಯುಕ್ತ ತರಬೇತಿ ನೀಡಿದ ಪ್ರಾರ್ಥನಾ […]
Read More
24-04-2026, 10:00 PM
ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಕಾರ್ಯಕ್ರಮ “ಯುವಬಾಂಧವ್ಯ..2026” ದಿನಾಂಕ 25-04-2026 ನೇ ಶನಿವಾರದಂದು ಬಿಳಿಯೂರು ಗ್ರಾಮದ ಪೂಜಾರಿಪಾಲು ಹೊಸಮನೆಯಲ್ಲಿ ಸಂಜೆ 6.30ಕ್ಕೆ ನಡೆಯಿತು.ಗುರುಸ್ತುತಿಯೊಂದಿಗೆ ಪ್ರಾರಂಭವಾದ ಯುವ ಬಾಂಧವ್ಯದ ಸಭಾಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷರಾದ ಮನೋಜ್ ಸಾಲ್ಯಾನ್ ಸ್ವಾಗತಿಸಿದರು, ಘಟಕದ ಕಾರ್ಯಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಆತಿಥ್ಯ ವಹಿಸಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯರೂ , ಸಮಾಜಸೇವಕರಾದ ತನಿಯಪ್ಪ ಪೂಜಾರಿಯವರು ಯುವಬಾಂಧವ್ಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಮ್ಮ ಸಮಾಜದ ಸಂಘಟನೆಗಳು ಯಾವುದೇ ಇದ್ದರೂ ಸೇವಾ […]
Read More
23-04-2026, 1:00 PM
ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದ ಸಹಯೋಗದಲ್ಲಿ ಮಕ್ಕಳಿಗಾಗಿ ಆಯೋಜಿಸಲಾದ ಒಂದು ವಾರದ ಉಚಿತ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಏಪ್ರಿಲ್ 23ರಂದು ಮೂಡುಬಿದಿರೆಯ ಸಮಾಜ ಮಂದಿರದ ಸ್ವರ್ಣ ಮಂದಿರದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಯುವವಾಹಿನಿ ಸಂಸ್ಥೆಯ ಸೇವಾ ಮನೋಭಾವ ಮತ್ತು ಕಾರ್ಯವೈಖರಿಯನ್ನು ಕೊಂಡಾಡಿದರು. ಸಂಸ್ಥೆ ಬಲಿಷ್ಠವಾಗಿ ಬೆಳೆದಿದ್ದು, ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು. ಇಂತಹ […]
Read More
22-04-2026, 9:00 PM
ದಿನಾಂಕ 22/04/2026 ರಂದು ಕುಲಶೇಖರ ಪದವುದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ, ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಒಂದು ದಿನದ ಸೇವೆಯನ್ನು ಸಲ್ಲಿಸಲಾಯಿತು.ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಭಾಗವಹಿಸಿ, ಭಕ್ತರಿಗೆ ವಿವಿಧ ರೀತಿಯ ಸಹಾಯ ಸಹಕಾರ ನೀಡಿದರು.
Read More