Yuvavahini

ಘಟಕಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಭೇಟಿ ಮತ್ತು ಪ್ರಸಾದ ಸ್ವೀಕಾರ

ಮಂಗಳೂರು: ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ (ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ) ಇಲ್ಲಿ ನಡೆದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ, ದಿನಾಂಕ 28-02-2026 ರಂದು ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕ್ಷೇತ್ರದ ದರ್ಶನ ಮತ್ತು ಪ್ರಸಾದ ಸ್ವೀಕಾರ ಕಾರ್ಯಕ್ರಮ ನಡೆಯಿತು. ಜಾತ್ರಾ ಮಹೋತ್ಸವದ ಪುಣ್ಯ ಕಾಲದಲ್ಲಿ ಘಟಕದ ಸದಸ್ಯರೆಲ್ಲರೂ ಒಟ್ಟಾಗಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ನೀಡಲಾಗುವ ಬ್ರಹ್ಮ ಬೈದರ್ಕುಲು ಹಾಗೂ […]

Read More

ಯುವವಾಹಿನಿಯಿಂದ ಸೃಜನಶೀಲತೆಯ ಸದ್ವಿನಿಯೋಗವಾಗುತ್ತಿದೆ -ಮುದ್ರಾಡಿ ಮಂಜುನಾಥ ಪೂಜಾರಿ

ಉಡುಪಿ : ಸಮುದಾಯದ ಉನ್ನತಿಗೆ ಭೌದ್ದಿಕ ವಿಕಸನದೊಂದಿಗೆ ಸಾಂಸ್ಕೃತಿಕ ವಿಚಾರಧಾರೆಗಳು ಅವಶ್ಯಕ. ಈ ನಿಟ್ಟಿನಲ್ಲಿ ಯುವವಾಹಿನಿಯು ಯುವ ಮನಸ್ಸುಗಳಿಗೆ ಸೂಕ್ತ ಪ್ರೋತ್ಸಾಹ ನೀಡಿ ಸೃಜನಶೀಲತೆಯನ್ನು ಸದ್ವಿನಿಯೋಗಪಡಿಸುತ್ತಿದೆ ಎಂದು ನಾರಾಯಣಗುರು ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀ ಮುದ್ರಾಡಿ ಮಂಜುನಾಥ ಪೂಜಾರಿ ಅಭಿಪ್ರಾಯಪಟ್ಟರು. ಸಾಂಸ್ಕೃತಿಕ ಪ್ರಜ್ಞೆಗಳು ವ್ಯಕ್ತಿಗಳಲ್ಲಿ ಸೃಜನಶೀಲತೆಯನ್ನು ಸೃಷ್ಟಿಸುತ್ತಿದ್ದು, ಉತ್ತಮ ವಿಚಾರಧಾರೆಗಳು, ನೈಜ್ಯ ಇತಿಹಾಸಗಳ ಸಂದೇಶವನ್ನು ಬಿತ್ತರಿಸುವಲ್ಲಿ ನಿರಂತರ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಯುವವಾಹಿನಿಯ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀಯತರು ದಿನಾಂಕ 28-02-2062,ಶನಿವಾರ ,ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ […]

Read More

ಸಾಂಸ್ಕೃತಿಕ ಅಭಿರುಚಿಯಿಂದ ಸಂಘಟನೆಗೆ ಶಕ್ತಿ: ಬನ್ನಂಜೆ ಬಾಬು ಅಮೀನ್.

ಉಡುಪಿ : ಸದಭಿರುಚಿಯ ಚಟುವಟಿಕೆಗಳು ಪ್ರತಿಭಾ ಪರಿಶೋಧದ ಜೊತೆಗೆ ಸ್ನೇಹ,ಸೌಹಾರ್ದ ಸಂಬಂಧವನ್ನೂ ಸಾಧ್ಯವಾಗಿಸುತ್ತದೆ. ಸಂಸ್ಕೃತಿ,ಸಂಸ್ಕಾರಗಳನ್ನು ಪ್ರಸ್ತುತಪಡಿಸುವುದರಿಂದ ಸಮುದಾಯದ ಸಂವರ್ಧನೆಗೂ ಕಾರಣವಾಗುತ್ತದೆ. ವಿವಿಧ ಆಸಕ್ತಿಗಳ ಜೊತೆಗೆ ಸಜ್ಜುಗೊಳ್ಳುವ ಸಾಂಸ್ಕೃತಿಕ ಪ್ರಕಾರಗಳು ಅನ್ಯೋನ್ಯತೆಯ ಪ್ರತೀಕವಾಗಿ ಸಂಘಟನೆಗೆ ಶಕ್ತಿ ತುಂಬುತ್ತದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು. ಶ್ರೀಯುತರು ದಿನಾಂಕ 28-02-2026,ಶನಿವಾರದಂದು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ಜರಗಿದ ಉಡುಪಿ ಘಟಕದ ರಜತ ಸಂಭ್ರಮ ಪ್ರಯುಕ್ತ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಸಂಘಗಳಿಗೆ ಆಯೋಜಿಸಲಾದ ಸಾಂಸ್ಕೃತಿಕ ಸ್ಪರ್ಧಾ […]

Read More

ಗೆಜ್ಜೆಗಿರಿ ಜಾತ್ರಾ ಮಹೋತ್ಸವ: ಯುವವಾಹಿನಿ ಕಂಕನಾಡಿ ಘಟಕದಿಂದ ಸ್ವಯಂ ಸೇವೆ ಮತ್ತು ಅನ್ನದಾನ ದೇಣಿಗೆ

ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಇತ್ತೀಚೆಗೆ ಜರುಗಿದ ಜಾತ್ರಾ ಮಹೋತ್ಸವದ ಪುಣ್ಯ ಸಂದರ್ಭದಲ್ಲಿ, ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ವಿಶೇಷ ಸ್ವಯಂ ಸೇವೆ ಹಾಗೂ ಅನ್ನದಾನ ಸೇವೆಗಳನ್ನು ಸಲ್ಲಿಸಲಾಯಿತು. ​ದಿನಾಂಕ 28-02-2026ರ ಮಡಿಲು ಸೇವೆಯ ಪವಿತ್ರ ದಿನದಂದು ಕಂಕನಾಡಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದಲ್ಲಿ ಉಪಸ್ಥಿತರಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು. ಕ್ಷೇತ್ರದ ಶಿಸ್ತು ಮತ್ತು ವ್ಯವಸ್ಥಿತ ನಿರ್ವಹಣೆಯಲ್ಲಿ ಪಾಲ್ಗೊಂಡು ಸೇವೆಯನ್ನು ಅರ್ಪಿಸಿದರು.​ಅನ್ನದಾನಕ್ಕೆ ಧನಸಹಾಯ:ಯುವವಾಹಿನಿಯ ಸಾಮಾಜಿಕ ಬದ್ಧತೆಯ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ […]

Read More

ದೇವೆರ್ ಬರೆತಿನ ಅಣೆಬರಹ’ ನಾಟಕ ಪ್ರದರ್ಶನ

ಕೊಣಾಜೆ: ಪಾನೇಲದ ಓಂ ಶ್ರೀ ಗಣೇಶ ಯುವಕ ಮಂಡಲ (ರಿ.) ಮಂಡಲಿ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಶುಭ ಉದ್ಘಾಟನಾ ಸಮಾರಂಭವು ಫೆಬ್ರವರಿ 27, 2026ರ ಶುಕ್ರವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿತು.​ಈ ಕಾರ್ಯಕ್ರಮದ ಸಾಂಸ್ಕೃತಿಕ ವೈವಿಧ್ಯದ ಭಾಗವಾಗಿ, ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಸದಸ್ಯರಿಂದ “ದೇವೆರ್ ಬರೆತಿನ ಅಣೆಬರಹ” ಎಂಬ ತುಳು ಸಾಮಾಜಿಕ ಹಾಸ್ಯಮಯ ನಾಟಕವು ಪ್ರದರ್ಶನಗೊಂಡಿತು. ಗ್ರಾಮ ಚಾವಡಿ ಕೊಣಾಜೆ ಘಟಕದ ಕಲಾವಿದರ ಚಾಕಚಕ್ಯತೆ ಮತ್ತು ಹಾಸ್ಯಮಯ ಅಭಿನಯವು ನೆರೆದಿದ್ದ ಪ್ರೇಕ್ಷಕರ […]

Read More

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಯುವವಾಹಿನಿ ಶಕ್ತಿನಗರ ಘಟಕದಿಂದ ಸ್ವಯಂಸೇವಕ ಸೇವೆ ಮತ್ತು ದೇಣಿಗೆ ಸಮರ್ಪಣೆ

ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 27-02-2026 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ನಡೆದ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಲಾಯಿತು.​ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆದ ಭವ್ಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಘಟಕದ ಸದಸ್ಯರು ಶಿಸ್ತಿನಿಂದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಕ್ಷೇತ್ರದ ಅನ್ನದಾನ ಸೇವೆಗೆ ಶಕ್ತಿನಗರ ಘಟಕದ ವತಿಯಿಂದ ಆರ್ಥಿಕ ದೇಣಿಗೆಯನ್ನು ಹಸ್ತಾಂತರಿಸಲಾಯಿತು. ಈ […]

Read More

ಗೆಜ್ಜೆಗಿರಿ ಜಾತ್ರೋತ್ಸವದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಸದಸ್ಯರಿಂದ ಗಂಧ ಪ್ರಸಾದ ಸ್ವೀಕಾರ

ಸುರತ್ಕಲ್: ಸತ್ಯಧರ್ಮದ ತವರೂರು, ದೇಯಿ ಬೈದ್ಯೆತಿ ಹಾಗೂ ಕೋಟಿ-ಚೆನ್ನಯರ ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿನಾಂಕ 27-02-2026ರಂದು ನಡೆದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಸುರತ್ಕಲ್ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು. ಈ ಪುಣ್ಯ ಸಂದರ್ಭದಲ್ಲಿ ಸುರತ್ಕಲ್ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಘಟಕದ ಸದಸ್ಯರು ಒಟ್ಟಾಗಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೈವ-ದೇವರುಗಳ ದರ್ಶನ ಪಡೆದರು. ಕ್ಷೇತ್ರದ ವತಿಯಿಂದ ನೀಡಲಾದ ಬ್ರಹ್ಮ ಬೈದರುಗಳ ಗಂಧ ಪ್ರಸಾದವನ್ನು ಸ್ವೀಕರಿಸಿ ಧನ್ಯತೆ ಮೆರೆದರು. ವಾರ್ಷಿಕ ಜಾತ್ರೆಯ […]

Read More

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಸ್ವಯಂ ಸೇವೆ ಹಾಗೂ ಅನ್ನದಾನ ದೇಣಿಗೆ

ಮಂಗಳೂರು/ಗೆಜ್ಜೆಗಿರಿ: ಪರಮಪೂಜ್ಯ ದೇಯಿ ಬೈದ್ಯೆತಿ ಹಾಗೂ ಕೋಟಿ-ಚೆನ್ನಯರ ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಇತ್ತೀಚೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶೇಷ ಸ್ವಯಂ ಸೇವೆ ಮತ್ತು ಅನ್ನದಾನ ಸೇವಾ ಕಾರ್ಯಕ್ರಮ ಜರುಗಿತು. ​ಫೆಬ್ರವರಿ 27ರಂದು ನಡೆದ ಈ ಸಂಭ್ರಮದ ಜಾತ್ರಾ ಮಹೋತ್ಸವದಲ್ಲಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು ಹಾಗೂ ಘಟಕದ ಸಕ್ರಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದರು.​ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳ […]

Read More

ಶ್ರೀಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದಲ್ಲಿ ಯುವವಾಹಿನಿ ಸುಳ್ಯ ಘಟಕದಿಂದ ಸೇವೆ

ಸುಳ್ಯ: ಶ್ರೀಕ್ಷೇತ್ರ ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ದಿನಾಂಕ 27-02-2026 ಹಾಗೂ 28-02-2026 ರಂದು ಎರಡು ದಿನಗಳ ಕಾಲ ಹಗಲು–ರಾತ್ರಿ ನಿರಂತರವಾಗಿ ವಿವಿಧ ಸೇವಾ ಕಾರ್ಯಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶ್ರೀಕ್ಷೇತ್ರಕ್ಕೆ ಅನ್ನದಾನದ ಸಲುವಾಗಿ ರೂ. 5,500/- ದೇಣಿಗೆಯನ್ನು ಸಮರ್ಪಿಸಲಾಯಿತು.ಈ ಪುಣ್ಯ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಪೂರ್ವಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

Read More

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದರ್ಶನ ಸಮಾನತೆಯ ಸಮಾಜಕ್ಕೆ ಮುನ್ನುಡಿ: ಮಧುಸೂದನ್ ಸುವರ್ಣ

ವಿವೇಕಪುರ (ನರಿಕೊಂಬು): “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಮಂತ್ರದೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಮಾನವ ಕುಲದ ಸಂಘಟನೆಯೇ ಬಲಿಷ್ಠ ಸಮಾಜದ ಅಡಿಪಾಯವೆಂದು ಸಾರಿದರು ಎಂದು ಶಿಕ್ಷಕ ಮಧುಸೂದನ್ ಸುವರ್ಣ ತಿಳಿಸಿದರು. ​ಫೆಬ್ರವರಿ 26ರಂದು ನರಿಕೊಂಬು ಮೊಗರ್ನಾಡು ವಿವೇಕಪುರದ ರಂಜಿತ್ ಪೂಜಾರಿ ಅವರ ‘ಬೃಂದಾವನ’ ನಿವಾಸದಲ್ಲಿ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ-68’ ಕಾರ್ಯಕ್ರಮದಲ್ಲಿ ಅವರು ಗುರುಸಂದೇಶ ನೀಡಿದರು. ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಸಮಾನತೆ ಮತ್ತು ಶೈಕ್ಷಣಿಕ ಪ್ರಗತಿಯ ಮೂಲಕ ಸಮಾಜದಲ್ಲಿ ಮಹತ್ತರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!