18-03-2026, 9:00 PM
ಬಜಪೆ: ಸಂಸ್ಕೃತಿಗಳು ನಿಧಾನವಾಗಿ ನಶಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ, ಯುವಜನತೆಗೆ ಮಾದರಿಯಾಗುವ ಕಾರ್ಯವನ್ನು ಯುವವಾಹಿನಿ (ರಿ) ಬಜಪೆ ಘಟಕ ಕೈಗೊಂಡಿದೆ. ಪ್ರತಿ ವರ್ಷ ಹಿರಿಯರನ್ನು ಗೌರವಿಸುವ ಮೂಲಕ ಸಂಸ್ಕೃತಿ ಮತ್ತು ಸಂಸ್ಕಾರಗಳ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿರುವ ಘಟಕವು, ಈ ವರ್ಷವೂ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿತು. ದಿನಾಂಕ 18-03-2026 ರಂದು ಬಜಪೆಯ ಅಂಬಿಕಾ ನಗರದಲ್ಲಿರುವ “ಶ್ರೀ ವೈಭವ ಲಕ್ಷ್ಮಿ” ನಿವಾಸಕ್ಕೆ ಭೇಟಿ ನೀಡಿದ ಘಟಕದ ಸದಸ್ಯರು, 82 ವರ್ಷ ಪ್ರಾಯದ ಹಿರಿಯರಾದ ಸುಮತಿ […]
Read More
18-03-2026, 8:00 PM
ಕುಳೂರು : ಮಹಿಳೆಯರು ಕೇವಲ ಸಾಂಸಾರಿಕ ಜೀವನದಲ್ಲಿ ಮಾತ್ರ ಸೀಮಿತವಾಗದೆ ಅಸೀಮಿತ ವಲಯದಲ್ಲಿ ಸಾಧನೆಗೆ ಹುಮ್ಮಸ್ಸು ತೋರಬೇಕು ,ಕನಸು ಕಟ್ಟಿ ಧೈರ್ಯದಿಂದ ನಿಮ್ಮ ಕ್ಷೇತ್ರದಲ್ಲಿ ಮುನ್ನುಗ್ಗಿದ್ದರೆ ಸಮಾಜ ತಾನಾಗೇ ಗುರುತಿಸಲಿದೆ ಎಂದು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಉಪ ಪರಿಶೋಧಕರಾದ ಶ್ರೀಕಲಾ ಕೆ.ಟಿ ತಿಳಿಸಿದರು. ಅವರು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಮಾರ್ಚ್ 18 ರಂದು ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಬಹಳ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು. […]
Read More
17-03-2026, 9:00 PM
ಹೆಜಮಾಡಿ: ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ “ಸ್ತ್ರೀ ಸ್ಪೂರ್ತಿ–2026” ಕಾರ್ಯಕ್ರಮವು ಮಾರ್ಚ್ 17 ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ವೇತ ಪಳ್ಳಿ ಮಾತನಾಡಿ, “ಮಹಿಳೆಯರು ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳಬೇಕು. ಅದಕ್ಕಾಗಿ ದೃಢ ಮನೋಬಲ ಅತ್ಯಂತ ಅಗತ್ಯ” ಎಂದು ಅಭಿಪ್ರಾಯಪಟ್ಟರು. “ನನ್ನ ಸಾಧನೆಗೆ ಯುವವಾಹಿನಿಯೇ ಸ್ಪೂರ್ತಿ. ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಬೇಕು” ಎಂದೂ ಅವರು ತಿಳಿಸಿದರು. ಕಾರ್ಯಕ್ರಮವು ಹೆಜಮಾಡಿ […]
Read More
17-03-2026, 8:00 PM
ಸುರತ್ಕಲ್: ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 17-03-2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಹುಲ್ ಎ. ಅಮೀನ್ ಹಾಗೂ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್ ಉಪಸ್ಥಿತರಿದ್ದರು.ಮಹಿಳಾ ದಿನಾಚರಣೆಯ ಅಂಗವಾಗಿ ನಾಟಿನೈದ್ಯರಾದ ಸೇಸಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಮಹಿಳೆಯರಿಗಾಗಿ ವಿಶೇಷ ಆಟಗಳನ್ನು ಆಯೋಜಿಸಲಾಗಿದ್ದು, ಭಾಗವಹಿಸಿದವರು ಉತ್ಸಾಹದಿಂದ ಪಾಲ್ಗೊಂಡರು.ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಎಲ್ಲಾ […]
Read More
17-03-2026, 8:00 PM
ಕೊಣಾಜೆ: ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಆಶ್ರಯದಲ್ಲಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಇದರ ಸಹಯೋಗದಲ್ಲಿ ದಿನಾಂಕ 17-03-2026 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಬಾಬು ಬಂಗೇರ ವಹಿಸಿಕೊಂಡಿದ್ದು, ಕೊಣಾಜೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷರಾದ ವಿಜೇತ್ ಪಜೀರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಘಟಕದ […]
Read More
15-03-2026, 4:00 PM
ಮೂಡುಬಿದಿರೆ : ಯುವವಾಹಿನಿ ಮೂಡುಬಿದಿರೆ ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಸಂಪತ್ ಪೂಜಾರಿ ನೆತ್ತೋಡಿದ್ವಿತೀಯ ಉಪಾಧ್ಯಕ್ಷರು: ಜೀವಿತಾ ಶಂಕರ್ಕಾರ್ಯದರ್ಶಿ : ಅಶ್ವಿನ್ ಪೂಜಾರಿಕೋಶಾಧಿಕಾರಿ : ಜಯಶೀಲಾ ಎಸ್ ಪೂಜಾರಿಜೊತೆ ಕಾರ್ಯದರ್ಶಿ : ಅಕ್ಷತಾ ಆರ್ ಮಾರೂರುಜೊತೆ ಕಾರ್ಯದರ್ಶಿ: ಮೇಘನಾ ಅರೋಗ್ಯನಿರ್ದೇಶಕರು : ಶುಭಕರ್ ಅಂಚನ್ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶುಭಲಕ್ಷ್ಮಿ ತೋಡಾರ್ಮಹಿಳಾ ಸಂಘಟನೆ: ಪಾವನ ಸಂತೋಷ್ ಮತ್ತು ಸುಮಿತ್ರಾ ವಿಶ್ವನಾಥ್ಕ್ರೀಡಾ ನಿರ್ದೇಶಕರು : ಹರೀಶ್ […]
Read More
15-03-2026, 2:00 PM
ಮೂಡುಬಿದಿರೆ, ಮಾ.15: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ 2026-27ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮೂಡುಬಿದಿರೆಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಮೃತ ಸಭಾಭವನದಲ್ಲಿ ಭಾನುವಾರ ಜರುಗಿತು.ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಡಿಮೈಲಿಗೆ ವಿರೋಧಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಯುವವಾಹಿನಿ ಸಂಘಟನೆ ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು ಹಾಗೂ ಹಿರಿಯರ ಮಾರ್ಗದರ್ಶನದಲ್ಲಿ ಬಲವಾಗಿ ಬೇರೂರಬೇಕು […]
Read More
15-03-2026, 11:00 AM
ಮಂಗಳೂರು :ಯುವವಾಹಿನಿ (ರಿ.) ಬಜಪೆ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬಜಪೆ ಪಟ್ಟಣ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಆಳ್ವಾಸ್ ಆಸ್ಪತ್ರೆ, ಮೂಡಬಿದ್ರೆ ಇವರ ಸಹಯೋಗದೊಂದಿಗೆ ಮಾರ್ಚ್ 15, 2026 ರಂದು ಬಜಪೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ-ಕರಂಬಾರು ಅಧ್ಯಕ್ಷ ಶಿವರಾಮ್ ಪೂಜಾರಿ ದೀಪ ಪ್ರಜ್ವಲನೆ ಮಾಡುವ ಮೂಲಕ ಶಿಬಿರ […]
Read More