Yuvavahini

ಘಟಕಗಳು

ಸಮಾಜ ಸೇವೆಯೊಂದಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಭಿವೃದ್ಧಿಯನ್ನು ಹೊಂದಬೇಕು – ಹರೀಶ್ ಕೆ. ಪೂಜಾರಿ

ಮಂಗಳೂರು:- ಸ್ವಾತಂತ್ರ್ಯ ಅಮೃತ ಮಹೋತ್ಸವ 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮಂಗಳೂರು ಘಟಕವು, ಘಟಕದ ಸದಸ್ಯರಿಗೆ, ಮಕ್ಕಳಿಗೆ ಮತ್ತು ಮಹಿಳೆಯರಿಗೆ ದಿನಾಂಕ 06 ನವೆಂಬರ್ 2022ರ ಭಾನುವಾರದಂದು ಯುವವಾಹಿನಿ ಸಭಾಂಗಣದಲ್ಲಿ ಸಂಗೀತ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸಂಗೀತ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ. ಪೂಜಾರಿಯವರು ಮಾತನಾಡುತ್ತಾ ಸದಸ್ಯರಲ್ಲಿರುವ ಸೂಕ್ತ ಪ್ರತಿಭೆಗಳ ಅನಾವರಣಕ್ಕೆ ಇಂಥ ಕಾರ್ಯಕ್ರಮಗಳು ಮಾದರಿ ಎಂದು ಅಭಿಪ್ರಾಯಪಟ್ಟರು. ಸಂಗೀತ ಸ್ಪರ್ಧೆಯಲ್ಲಿ 9 […]

Read More

ಪದಗ್ರಹಣ ಸಮಾರಂಭ – 2022

ಮಾಣಿ :- ಯುವವಾಹಿನಿ(ರಿ.) ಮಾಣಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 06ನವೆಂಬರ್ 2022 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನ,ಮಾಣಿ ಇಲ್ಲಿ ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ ರವರು ಉದ್ಘಾಟಿಸಿದರು. ತದನಂತರ ಅವರು ನೂತನ ತಂಡಕ್ಕೆ ಶುಭ ಹಾರೈಸಿದರು. ಕಾರ್ಯದರ್ಶಿ ರೇಣುಕಾ ಕಣಿಯೂರುರವರು ವಾರ್ಷಿಕ ವರದಿಯನ್ನು ದೃಶ್ಯ – ಶ್ರವ್ಯ ಪರದೆಯ ಮೂಲಕ […]

Read More

ಪದಗ್ರಹಣ ಸಮಾರಂಭ 2022

ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 06 ನವೆಂಬರ್ 2022ರಂದು ಉರ್ವಾ ಸ್ಟೋರಿನ ಯುವವಾಹಿನಿ ಸಭಾಂಗಣದಲ್ಲಿ ಜರಗಿತು. ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಕರಾಗಿ ಪ್ರವೀಣ್ ಕುಮಾರ್ ಕೆಡೆಂಜಿ ಆಡಳಿತ ನಿದೇ೯ಶಕರು ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪನಿ, ಕಡಬ ಇವರು ಭಾಗವಹಿಸಿ ಶುಭ ಹಾರೈಸಿದರು. ಹಾಗೂ ಮುಖ್ಯ ಅತಿಥಿಗಳಾದ ಸುಖಲಾಕ್ಷಿ ವೈ .ಸುವರ್ಣ ಪ್ರಧಾನ ಕಾರ್ಯದಶಿ೯ ಅಖಿಲ ಭಾರತ ಬಿಲ್ಲವ ಮಹಿಳಾ ಸಂಘ, ಪುಷ್ಪಾವತಿ ಕೆ.ಎ. ಅಧ್ಯಕ್ಷರು ಪ್ರಗತಿ ಮಹಿಳಾ ಮಂಡಲ […]

Read More

ತುಳುನಾಡ ತುಳಸಿ ಪರ್ಬ

ಹೆಜಮಾಡಿ :- ಹೆಜಮಾಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಗುರು ಮಂದಿರದಲ್ಲಿ ತುಳುನಾಡ ತುಳಸಿ ಪರ್ಭ ಆಚರಣೆಯು ದಿನಾಂಕ 05 ನವೆಂಬರ್ 2022ರಂದು ನಡೆಯಿತು. ಗುರು ಮಂದಿರದ ಪ್ರಧಾನ ಅರ್ಚಕ ಹರೀಶ್ ಶಾಂತಿ ಮುಂಬಯಿ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಯುವವಾಹಿನಿ ಹೆಜಮಾಡಿ ಘಟಕ ದ ಅಧ್ಯಕ್ಷ ಧನಂಜಯ ಕಾರ್ಯದರ್ಶಿ ಜಯಶ್ರೀ ಸದಾಶಿವ, ಯುವವಾಹಿನಿ ಕೇಂದ್ರ ಸಮಿತಿಯ […]

Read More

ಹಣತೆ ಬೆಳಗಿದ ಅಂದದ ತುಳಸಿಕಟ್ಟೆ

ಕೊಲ್ಯ :- ತುಳಸಿ ಹಬ್ಬದ ಪ್ರಯುಕ್ತ ಘಟಕದ ಸದಸ್ಯರಿಗೆ ದಿನಾಂಕ 05 ನವೆಂಬರ್ 2022ರಂದು ಸಾಂಪ್ರದಾಯಿಕ ಹಣತೆ ಬೆಳಗಿದ ಅಂದದ ತುಳಸಿ ಕಟ್ಟೆ ಫೋಟೋ ಸ್ಪರ್ಧೆಯನ್ನು ಘಟಕದ ಸದಸ್ಯರಿಗೆ ಏರ್ಪಡಿಸಿದ್ದು, ಒಟ್ಟು 31 ಸದಸ್ಯರು ಭಾಗವಹಿಸಿದ್ದರು. ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಕು. ಅನ್ವಿತಾ. ಎ, ಮತ್ತು ವಿದ್ಯಾರ್ಥಿ ಸಂಘಟನೆ ನಿರ್ದೇಶಕರದ ಕು. ಸಚೇತ ಸಾಲ್ಯಾನ್ ಅವರು ಈ ಸ್ಪರ್ಧೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮಶಿಕ್ಷಣ ತರಗತಿ ಇದರ ಗುರುಗಳಾದ ಡಾ. […]

Read More

ಪ್ರವಾಸ ಕಾರ್ಯಕ್ರಮ

ಶಕ್ತಿನಗರ:- ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ಯುವವಾಹಿನಿಯ ಮುಖ್ಯ ಧ್ಯೇಯಗಳಲ್ಲಿ ಒಂದಾದ “ಸಂಪರ್ಕ” ಎಂಬ ಪದಕ್ಕೆ ಅರ್ಥ ಬರುವಂತೆ ಘಟಕದ ಸದಸ್ಯರು ಸೇರಿ ಒಂದು ದಿನದ ಕಿರು ಪ್ರವಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸುಮಾರು 24 ಸದಸ್ಯರ ತಂಡವು ತಾರೀಕು 05 ನವೆಂಬರ್ 2022ರಂದು ಸಂಜೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ ಕೋಯoಬುತ್ತೂರು ತಲುಪಿ ಆಲ್ಲಿಂದ ಮಾರುತಮಲೈ ಷಣ್ಮುಗ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಾಯಿತು. ನಂತರ ಸುಮಾರು 2000 ವರ್ಷಗಳ ಹಿಂದಿನ […]

Read More

ಮುಸ್ಸಂಜೆಯಲ್ಲಿ ಕಣ್ಮಣ ಸೆಳೆದ ಕನ್ನಡ ರಾಜ್ಯೋತ್ಸವ ಭಾವಲಹರಿ-ಕವಿ-ಕಾವ್ಯ-ಗಾಯನದ ರಸದೌತಣ

ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಹಾಗೂ ಚುಟುಕು ಸಾಹಿತ್ಯ ಪರಿಷತ್ ಉಳ್ಳಾಲ ಘಟಕ ಇದರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವಸಂಜೆ- ಭಾವಲಹರಿ, ಕವಿ ಕಾವ್ಯ ಗಾಯನವು ದಿನಾಂಕ 01 ನವೆಂಬರ್ 2022 ರಂದು ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ ಕೊಲ್ಯದಲ್ಲಿ ಜರುಗಿತು. ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ […]

Read More

ಗೌರವ ಅಭಿನಂದನೆ

ಬಂಟ್ವಾಳ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷರು, ಸಮಾಜ ಸೇವಕರಾದ ಪಚ್ಚಿನಡ್ಕ ಸೇಸಪ್ಪ ಕೊಟ್ಯಾನ್ ಇವರನ್ನು ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರರುಗಳು, ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.

Read More

ಶ್ರೀ ಕ್ಷೇತ್ರ ಪೊಳಲಿಗೆ ಪಾದಯಾತ್ರೆ

ಬಂಟ್ವಾಳ :- ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ನೇತ್ರತ್ವದಲ್ಲಿ ದಿನಾಂಕ 30 ಅಕ್ಟೋಬರ್ 2022 ರಂದು ಲೋಕಕಲ್ಯಾಣಾರ್ಥವಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಬಿ.ಸಿ ರೋಡ್ ನಿಂದ ಪೋಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ‌ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಹಾಗೂ ಘಟಕದ ಮಾಜಿ ಅಧ್ಯಕ್ಷರು, ಘಟಕದ ಅಧ್ಯಕ್ಷರು ,ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 200 ಮಂದಿ ಭಕ್ತಾದಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Read More

25ರ ಸಂಭ್ರಮ – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮದ 15 ನೇ ಕಾರ್ಯಕ್ರಮವನ್ನು ದಿನಾಂಕ 29 ಅಕ್ಟೋಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2017-2018ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅಶೋಕ್ ಕುಮಾರ್ ಪಡ್ಪು ಇವರ “ಸಾನಿಧ್ಯ” ಮನೆಯಲ್ಲಿ ನಡೆಯಿತು.ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!