Yuvavahini

ಘಟಕಗಳು

ವಿಶೇಷ ತರಭೇತಿ ಶಿಬಿರ

ಪಡುಬಿದ್ರಿ :- ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿ ಶಿಬಿರವು ದಿನಾಂಕ 03 ಜುಲೈ 2022 ನೇ ರವಿವಾರ ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಿತ್ರಾಕ್ಷಿ ಕೆ ಕೋಟ್ಯಾನ್ ರವರ ಮನೆಯಲ್ಲಿ ಜರುಗಿತು. ಘಟಕದ ಮಾಜಿ ಅಧ್ಯಕ್ಷರುಗಳಾದ ರವಿರಾಜ್ ಎನ್ ಕೋಟ್ಯಾನ್, ಯೋಗೀಶ್ ಪೂಜಾರಿ, ಪ್ರಸಾದ್ ವೈ ಕೋಟ್ಯಾನ್, ಸುಜಿತ್ ಕುಮಾರ್ ಹಾಗೂ ಸಂತೋಷ್ ಪೂಜಾರಿ ಯುವವಾಹಿನಿಯ ಧ್ಯೇಯೋದ್ದೇಶ ಹಾಗೂ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸವಿಸ್ತಾರವಾಗಿ […]

Read More

ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ.

ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ […]

Read More

ಕೃಷಿಯಲ್ಲಿ ನಮ್ಮ ಭವಿಷ್ಯ

ಮೂಲ್ಕಿ :- ಮರೆಯಾಗುತ್ತಿರುವ ಮಣ್ಣಿನ ಸಂಬಂಧಕ್ಕೆ ಮರುಜೀವ ನೀಡುವ ಸಂಕಲ್ಪ ಯುವವಾಹಿನಿ ಕೇಂದ್ರ ಸಮಿತಿಯ ಆಯೋಜನೆಯಂತೆ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣದ ಕೃಷಿಯಲ್ಲಿ ನಮ್ಮ ಭವಿಷ್ಯ ಎನ್ನುವ ಧ್ಯೇಯದಡಿಯಲ್ಲಿ ಮೂಲ್ಕಿ ಘಟಕದ ನೂತನ ಅಧ್ಯಕ್ಷರಾದ ಭಾರತಿ ಭಾಸ್ಕರ್ ಇವರ ಪ್ರಥಮ ಕಾರ್ಯಕ್ರಮ ಹಸಿರೇ ಉಸಿರು ಎಂಬ ನುಡಿಯಲ್ಲಿ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಕೀಲಾ ಹರಿಂದ್ರ ಸುವರ್ಣ ಹಾಗೂ ಕೆಂದ್ರಸಮೀತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರ ಉಪಸ್ಥಿತಿಯಲ್ಲಿ 03 ಜುಲೈ 2022 ಆದಿತ್ಯವಾರದಂದು […]

Read More

ಗೆಜ್ಜೆಗಿರಿಯಲ್ಲಿ ಭಜನಾ ಕಾರ್ಯಕ್ರಮ

ಗೆಜ್ಜೆಗಿರಿ :- ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ 01 ಜುಲೈ 2022 ಶುಕ್ರವಾರದಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸೇವೆಯನ್ನು ನೀಡ ಲಾಯಿತು. ಈ ಸೇವಾ ಕಾರ್ಯವು ಘಟಕದ ಅಧ್ಯಕ್ಷರಾದ ರವಿ ಅಮೀನ್ ರವರ ನೇತೃತ್ವದಲ್ಲಿ ಘಟಕದ ಭಜನಾ ತಂಡದೊಂದಿಗೆ, ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಹಾಗೂ ಒಟ್ಟು 59 ಸದಸ್ಯರುಗಳು ಪಾಲ್ಗೊಂಡರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್, ಕ್ಷೇತ್ರದ ಯಜಮಾನರಾದ ಶ್ರೀಧರ್ ಪೂಜಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ […]

Read More

ದೇವಸ್ಥಾನಲ್ಲಿ ಕರಸೇವೆ

ವೇಣೂರು :- ಯುವವಾಹಿನಿ (ರಿ.) ವೇಣೂರು ಘಟಕ ಮತ್ತು ಬ್ರಹ್ಮ ಶ್ರೀಗುರು ನಾರಾಯಣ ಸೇವಾ ಸಂಘ (ರಿ) ವೇಣೂರು ಇದರ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು ಇಲ್ಲಿ ದೇವಾಲಯದ ಜೀರ್ಣೋದ್ಧಾರ ಕೆಲಸ ಕಾರ್ಯಗಳ ನಿಮಿತ್ತ ದಿನಾಂಕ 29 ಜೂನ್ 2022ನೇ ಬುಧವಾರ ಸಂಜೆ ಗಂಟೆ 6 ರಿಂದ ಕರ ಸೇವೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ವೇಣೂರು ಘಟಕದ ಅಧ್ಯಕ್ಷರಾದ ಯೋಗೀಶ್ ಬಿಕ್ರೋಟ್ಟು, ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಇದರ ಕ್ರೀಡಾ ಮತ್ತು ಅರೋಗ್ಯ ನಿರ್ದೇಶಕರಾದ […]

Read More

ಸಮಾಜಮುಖಿ ಚಿಂತನೆ ಮೈಗೂಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ : ಮಟ್ಟು

ಕಂಕನಾಡಿ :- ನಮ್ಮ ಸಮಾಜದ ಯುವ ಸಮುದಾಯ ಮುಖ್ಯವಾಹಿನಿಯ ಜೊತೆಗೂಡಿ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ಭಾನುವಾರ ಕಂಕನಾಡಿಯ ಉಜ್ಜೋಡಿ ಮಾರುತಿ ಕಾಂಪ್ಲೆಕ್ಸ್ ನ ಮಹಡಿಯಲ್ಲಿ ಶುಭಾರಂಭಗೊಂಡ ಯುವವಾಹಿನಿ (ರಿ.) ಕಂಕನಾಡಿ ಘಟಕದ ನೂತನ ಕಛೇರಿಯನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ನೂತನ ಕಛೇರಿಯ […]

Read More

ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮತೋಲನಕ್ಕೆ ಯೋಗ ಸಹಕಾರಿ – ಶಾಂಭವಿ ಅಂಚನ್

ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 23 ಜೂನ್ 2022 ರಂದು ಘಟಕದ ನೂತನ ಕಚೇರಿಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಶಾಂಭವಿ ಅಂಚನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ , ಯೋಗದಿಂದ ನಮ್ಮ ಜೀವನಶೈಲಿಯಲ್ಲಿ ಆಗುವ ಬದಲಾವಣೆಯನ್ನು ಉದಾಹರಣೆ ಸಹಿತ ವಿವರಿಸಿ ದಿನ ನಿತ್ಯ ನಾವು ಒಂದು ಗಂಟೆಯಾದರೂ ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ತಿಳಿಸಿ, ಕೆಲವು ಆಸನಗಳನ್ನು ಸದಸ್ಯರಿಂದ ಮಾಡಿಸಿದರು. […]

Read More

ಶಾಲಾ ಕೈ ತೋಟ ನಿರ್ಮಾಣ

ಯಡ್ತಾಡಿ :- ಯುವವಾಹಿನಿ (ರಿ.) ಯಡ್ತಾಡಿ ಘಟಕ ಹಾಗೂ ಸ. ಹಿ. ಪ್ರಾ. ಶಾಲೆ ಯಡ್ತಾಡಿ ಜಂಟಿಯಾಗಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ತರಕಾರಿಗಳನ್ನು ಶಾಲಾ ವಠಾರದಲ್ಲಿ ಬೆಳೆಯುವ ವಿನೂತನ ಕಾರ್ಯಕ್ರಮವನ್ನು ದಿನಾಂಕ 19 ಜೂನ್ 2022ರ ರವಿವಾರದಂದು ಸ. ಹಿ. ಪ್ರಾ. ಶಾಲೆ ಯಡ್ತಾಡಿಯಲ್ಲಿ ನಡೆಸಲಾಯಿತು.ಘಟಕದ ಅಧ್ಯಕ್ಷರಾದ ಸೋಮಪ್ಪ ಪೂಜಾರಿಯವರು ಹಾಗೂ ಕಾರ್ಯದರ್ಶಿ ಸುಶಾಂತ್ ಪೂಜಾರಿಯವರು ತರಕಾರಿ ಬೀಜಗಳನ್ನು ಮಣ್ಣಿನ ದಿಬ್ಬಗಳಲ್ಲಿ ಬಿತ್ತುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯುವವಾಹಿನಿ(ರಿ.) ಯಡ್ತಾಡಿ ಘಟಕದ ಸದಸ್ಯರು ಹಾಗೂ ಶಾಲಾ […]

Read More

ಮುಗ್ದ ಮನಸ್ಸಿನ ಸಮ್ಮಿಲನ

ಕೂಳೂರು:- ದಿನಾಂಕ 19 ಜೂನ್ 2022 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ “ಮುಗ್ದ ಮನಸ್ಸಿನ ಸಮ್ಮಿಲನ” ಕಾರ್ಯಕ್ರಮವು ಸರಕಾರಿ ಬಾಲಕರ ಬಾಲ ಮಂದಿರ ಬೊಂದೆಲ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ್ ಮಕ್ಕಳ ಮನಸ್ಸು ಆವೆ ಮಣ್ಣಿನ ತರಹ ಅದಕ್ಕೆ ನಾವು ಯಾವ ರೀತಿ ಆಕಾರ ನೀಡುತ್ತೆವೋ ಅದೇ ರೂಪ ಪಡೆಯುತ್ತದೆ,ಮುಗ್ದ ಮನಸ್ಸಿನ ಮಕ್ಕಳ ಜೊತೆ ಒಂದು ದಿನ […]

Read More

ಒಂದು ದಿನದ ಕರ ಸೇವೆ

ಸುರತ್ಕಲ್ :- ದಿನಾಂಕ 19 ಜೂನ್ 2022 ರಂದು ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ತೋಕೂರು ಸುಬ್ರಮಣ್ಯ ದೇವಸ್ಥಾನದ ಜೀರ್ಣೋದ್ದಾರದ ಪ್ರಯುಕ್ತ ಒಂದು ದಿನದ ಕರ ಸೇವೆಯನ್ನು ನೆರವೇರಿಸಲಾಯಿತು. ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಸೇರಿ ಒಟ್ಟು 18 ಮಂದಿ ಈ ಸೇವೆಯಲ್ಲಿ ಪಾಲ್ಗೊಂಡು ಸೇವೆಯನ್ನು ಸಲ್ಲಿಸಲಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!