Yuvavahini

ಘಟಕಗಳು

ಸಹಾಯಧನ ಹಸ್ತಾಂತರ

ಹೆಜಮಾಡಿ, ಜೂನ್ 21 : ಹಿರಿಯ ಸಾಹಿತಿ, ನಾಟಕಕಾರ, ಗೀತಾ ಸಾಹಿತ್ಯ ರಚನಾಕಾರ ಹಾಗೂ ಪತ್ರಕರ್ತರಾದ ಪರಮಾನಂದ ವಿ. ಸಾಲ್ಯಾನ್ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಯುವವಾಹಿನಿ (ರಿ.) ಹೆಜಮಾಡಿ ಘಟಕವು ಮಾನವೀಯ ಕಾಳಜಿಯಿಂದ ನೆರವಿನ ಹಸ್ತ ಚಾಚಿದೆ. ಮೂಲತಃ ಹೆಜಮಾಡಿ ಗ್ರಾಮದವರಾದ ಪರಮಾನಂದ ವಿ. ಸಾಲ್ಯಾನ್ ಅವರು ಹೆಜಮಾಡಿ ಬಿಲ್ಲವರ ಸಂಘ ಹಾಗೂ ಯುವವಾಹಿನಿಯ ವಿವಿಧ ಚಟುವಟಿಕೆಗಳಿಗೆ ಹಲವು ವರ್ಷಗಳಿಂದ ಅಮೂಲ್ಯ […]

Read More

ಯುವವಾಹಿನಿ (ರಿ.) ಸುಳ್ಯ ಘಟಕದಿಂದ 5ನೇ ಗುರು ಸ್ಪೂರ್ತಿ ಕಾರ್ಯಕ್ರಮ

ಸುಳ್ಯ, ಜೂನ್ 21 : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ 5ನೇ ಗುರು ಸ್ಪೂರ್ತಿ ಕಾರ್ಯಕ್ರಮವು ಸುಳ್ಯದ ಅಶ್ವಿನಿ ಲೋಕೇಶ್ ಅವರ ನಿವಾಸದಲ್ಲಿ ಭಕ್ತಿಪೂರ್ವಕವಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಯುವವಾಹಿನಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಆಯೋಜಿಸಲಾಯಿತು. ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಸ್ಮರಿಸುತ್ತಾ ನಡೆದ ಭಜನಾ ಕಾರ್ಯಕ್ರಮದಲ್ಲಿ ಸದಸ್ಯರು ಭಕ್ತಿಭಾವದಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ, ನಾರಾಯಣಗುರು ತತ್ವ ನಿರ್ದೇಶಕ ರೋಹಿತ್ ರೆಂಜಾಳ, ಸುಳ್ಯ ಘಟಕದ ಸ್ಥಾಪಕ […]

Read More

ಹಸಿರು ಪ್ರಕೃತಿ – ಯೋಗ ಸಂಸ್ಕೃತಿ

ಕಾಪು, ಜೂನ್ 21: ನಮ್ಮ ಶಾರೀರಿಕ ಆರೋಗ್ಯವನ್ನು ವೃದ್ಧಿಸುವ ಅಂತರಾಷ್ಟ್ರೀಯ ಯೋಗ ದಿನ ಹಾಗೂ ಭೂಮಿಯ ಆರೋಗ್ಯವನ್ನು ರಕ್ಷಿಸುವ ವಿಶ್ವ ಪರಿಸರ ದಿನದ ಅಂಗವಾಗಿ ಯುವವಾಹಿನಿ (ರಿ.) ಕಾಪು ಘಟಕ ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕಾಪು ಘಟಕದ ಸಹಯೋಗದಲ್ಲಿ “ಹಸಿರು ಪ್ರಕೃತಿ – ಯೋಗ ಸಂಸ್ಕೃತಿ” ಕಾರ್ಯಕ್ರಮವು ಜೂನ್ 21ರಂದು ಸಂಜೆ 5 ಗಂಟೆಗೆ ಕಾಪು ಬಿಲ್ಲವ ಸಹಾಯಕ ಸಂಘದ ಸಭಾಭವನದಲ್ಲಿ ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಶ್ರೀ ಪತಂಜಲಿ ಯೋಗ […]

Read More

ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕೂಳೂರು, ಜೂನ್ 21 : ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಬೆಳಿಗ್ಗೆ 6 ಗಂಟೆಗೆ ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ನಾರಾಯಣಗುರು ದೇವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಪತಂಜಲಿ ಯೋಗ ಪ್ರತಿಷ್ಠಾನದ ಖ್ಯಾತ ಯೋಗ ಶಿಕ್ಷಕರಾದ ವಿಶು ಕುಮಾರ್ ಹಾಗೂ ರೇಖಾ ಸಂದೀಪ್ ಅವರು ಘಟಕದ ಸದಸ್ಯರಿಗೆ ಯೋಗಾಸನ ಮತ್ತು ಪ್ರಾಣಾಯಾಮದ ತರಬೇತಿಯನ್ನು ನೀಡಿದರು. ಯೋಗಾಭ್ಯಾಸದ ಮಹತ್ವ, ದೈಹಿಕ ಮತ್ತು […]

Read More

ಪರಿಸರ ಸಂರಕ್ಷಣೆಯಿಂದ ಮನುಕುಲ ಹಾಗೂ ಪ್ರಾಣಿ-ಪಕ್ಷಿಗಳು ಆರೋಗ್ಯವಾಗಿ ಉಸಿರಾಡಲು ಸಾಧ್ಯ: ಸುಕುಮಾರ್ ಸಾಲ್ಯಾನ್

ಬಜಪೆ, ಜೂನ್ 21 : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಜೂನ್ 21ರಂದು ಸ್ವಾಮಿಲಪದವಿನ “ದೇಜಮ್ಮ” ನಿವಾಸದಲ್ಲಿ ಆಯೋಜಿಸಲಾಯಿತು. ಯುವವಾಹಿನಿ ಬಜಪೆ ಘಟಕದ ಮಾರ್ಗದರ್ಶಕರಾಗಿರುವ ಹಿರಿಯ ಸಮಾಜಸೇವಕ ಹಾಗೂ ಪರಿಸರ ಪ್ರೇಮಿಯಾದ ಸುಕುಮಾರ್ ಸಾಲ್ಯಾನ್ ಅವರ ನಿವಾಸದ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸುಕುಮಾರ್ ಸಾಲ್ಯಾನ್ ಅವರು, […]

Read More

ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಅನುಕರಣೀಯ : ಭುವನೇಶ್ ಪಚ್ಚಿನಡ್ಕ

ಬಂಟ್ವಾಳ : ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿಜಕ್ಕೂ ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು. ಅವರು ಜೂನ್ 21 ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 38 ವರ್ಷಗಳಿಂದ ಯುವವಾಹಿನಿ ಯುವಜನರನ್ನು ಒಗ್ಗೂಡಿಸಿ ಶಿಕ್ಷಣ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ […]

Read More

ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬಜಪೆ, ಜೂನ್ 21 : ಯುವವಾಹಿನಿ (ರಿ.) ಬಜಪೆ ಘಟಕ ಹಾಗೂ ಲೈಟ್ ಹೌಸ್ ರಾಜಯೋಗ ಮೆಡಿಟೇಶನ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಜೂನ್ 21ರಂದು ದುರ್ಗಾ ಬಜಪೆ,ರೆಸಿಡೆನ್ಸಿಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಯುವವಾಹಿನಿ (ರಿ.) ಬಜಪೆ ಘಟಕದ ಅಧ್ಯಕ್ಷ ರೋಹಿತ್ ಪೂಜಾರಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯೋಗ ಸಮಿತಿಯ ಸಂಚಾಲಕಿ ರೇವತಿ ಸನಿಲ್ ಅವರು, ಇಂದಿನ ಒತ್ತಡದ ಜೀವನಶೈಲಿಯಿಂದ ದೂರ […]

Read More

ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು, ಜೂನ್ 20 : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 20ರಂದು ಸಂಜೆ 4 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು ಯೋಗ ತರಬೇತಿ ನೀಡಲು ಆಗಮಿಸಿದ ಯೋಗಗುರು ಶೈಲಜಾ ನವೀನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶೈಲಜಾ ನವೀನ್ ಅವರು, ಯೋಗವು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೇ ಪ್ರತಿದಿನದ ಜೀವನದ ಅವಿಭಾಜ್ಯ […]

Read More

ಭೂಸೇನೆಗೆ ಆಯ್ಕೆಯಾದ ವೀರನಿಗೆ ಅಭಿನಂದನಾ ಸಮಾರಂಭ

ಶಕ್ತಿನಗರ : ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ” ಎಂದರೆ ಹೆತ್ತ ತಾಯಿ ಮತ್ತು ಹುಟ್ಟಿದ ನಾಡು ಸ್ವರ್ಗಕ್ಕಿಂತಲೂ ಮಿಗಿಲಾದುದು. ಇಂತಹ ಪವಿತ್ರವಾದ ಮಾತ್ರಭೂಮಿಯ ಸೇವೆಯನ್ನು ಮಾಡಲು ಸಿದ್ಧರಾದ ಶರತ್ ಶಕ್ತಿನಗರ ಇವರಿಗೆ, ನಿನ್ನೆ ಸಂಜೆ ದಿನಾಂಕ 18/06/2026 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಇಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹ ಪ್ರಸಾದವನ್ನು ನೀಡಿ ನಮ್ಮ ಘಟಕದ ವತಿಯಿಂದ ಅಧ್ಯಕ್ಷರ, ಮಾಜಿ ಅಧ್ಯಕ್ಷರುಗಳ ,ಹಾಗೂ ಎಲ್ಲಾ ಸದಸ್ಯರ ಶುಭಾಶೀರ್ವದದೊಂದಿಗೆ ಗೌರವಿಸಿ ಅಭಿನಂದಿಸಲಾಯಿತು. ಅಧ್ಯಕ್ಷರಾದ ತೇಜಸ್ ವಿ […]

Read More

ಯುವಸಿಂಚನ ಜೂನ್ ಸಂಚಿಕೆಯ ಅಂಚೆ ರವಾನೆ ಕಾರ್ಯ

ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯ ಅಂಚೆ ರವಾನೆ ಪೂರ್ವ ಸಿದ್ಧತಾ ಕಾರ್ಯವು ಇಂದು ಯಶಸ್ವಿಯಾಗಿ ನಡೆಯಿತು. ಚಂದಾದಾರರು ಹಾಗೂ ಹಿತೈಷಿಗಳಿಗೆ ಯುವಸಿಂಚನ ಪತ್ರಿಕೆಯನ್ನು ತಲುಪಿಸುವ ಉದ್ದೇಶದಿಂದ ಸುಮಾರು 4,000 ಪತ್ರಿಕೆಗಳಿಗೆ ವಿಳಾಸ ಅಂಟಿಸುವ ಕಾರ್ಯವನ್ನು ಕೈಗೊಳ್ಳಲಾಯಿತು. ಈ ಕಾರ್ಯದಲ್ಲಿ ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಂಗಳೂರು ಮಹಿಳಾ ಘಟಕ ಹಾಗೂ ಯುವಸಿಂಚನ ಸಂಪಾದಕೀಯ ಮಂಡಳಿಯ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಸಹಕಾರ ನೀಡಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!